Homeಮುಖಪುಟಜಮ್ಮು-ಕಾಶ್ಮೀರದಲ್ಲಿನ ಕ್ಷೇತ್ರ ಮರುವಿಂಗಡಣೆ ಪ್ರಶ್ನಿಸಿ ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿ ವಜಾ

ಜಮ್ಮು-ಕಾಶ್ಮೀರದಲ್ಲಿನ ಕ್ಷೇತ್ರ ಮರುವಿಂಗಡಣೆ ಪ್ರಶ್ನಿಸಿ ಸುಪ್ರೀಂಗೆ ಸಲ್ಲಿಸಿದ್ದ ಅರ್ಜಿ ವಜಾ

- Advertisement -
- Advertisement -

ಜಮ್ಮು ಮತ್ತು ಕಾಶ್ಮೀರದಲ್ಲಿ ವಿಧಾನಸಭೆ, ಸಂಸದೀಯ ಕ್ಷೇತ್ರಗಳ ಮರು ವಿಂಗಡಣೆಯನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಯನ್ನು ಸುಪ್ರೀಂ ಕೋರ್ಟ್ ಸೋಮವಾರ ವಜಾಗೊಳಿಸಿದೆ ಎಂದು ‘ಬಾರ್‌ ಅಂಡ್ ಬೆಂಚ್‌’ ವರದಿ ಮಾಡಿದೆ.

ಕಾಶ್ಮೀರ ನಿವಾಸಿಗಳಾದ ಅಬ್ದುಲ್ ಗನಿ ಖಾನ್, ಮುಹಮ್ಮದ್ ಅಯೂಬ್ ಮಟ್ಟೋ ಅವರು ಸಲ್ಲಿಸಿದ ಅರ್ಜಿಯನ್ನು ನ್ಯಾಯಮೂರ್ತಿಗಳಾದ ಸಂಜಯ್ ಕಿಶನ್ ಕೌಲ್ ಮತ್ತು ಎ.ಎಸ್.ಓಕಾ ಅವರನ್ನೊಳಗೊಂಡ ಪೀಠವು ವಜಾ ಮಾಡಿದೆ.

“ಜಮ್ಮು ಮತ್ತು ಕಾಶ್ಮೀರ ಪುನರ್‌ ರಚನೆ (Re-  Re-organisation) ಕಾಯಿದೆ, 2019ರ ಸಿಂಧುತ್ವದ ಬಗ್ಗೆ ಇನ್ನೂ ತೀರ್ಪು ನೀಡಲಾಗಿಲ್ಲ” ಎಂದು ಪೀಠವು ಹೇಳಿದೆ. ಕಾಶ್ಮೀರದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿರುವುದನ್ನು ಪ್ರಶ್ನಿಸಿ ಸಲ್ಲಿಸಲಾಗಿರುವ ಅರ್ಜಿಗಳು ಸುಪ್ರೀಂ ಕೋರ್ಟ್‌ನಲ್ಲಿ ಬಾಕಿ ಉಳಿದಿವೆ.

ಕಾಲಕಾಲಕ್ಕೆ ಆದ ಜನಸಂಖ್ಯೆಯಲ್ಲಿನ ಬದಲಾವಣೆಗಳನ್ನು ಒಳಗೊಂಡು ಅಸೆಂಬ್ಲಿ ಅಥವಾ ಲೋಕಸಭೆ ಕ್ಷೇತ್ರಗಳ ಗಡಿಗಳನ್ನು ಮರು ವಿಂಗಡಣೆ ಮಾಡಲಾಗುತ್ತದೆ. ಕೇಂದ್ರ ಸರ್ಕಾರ ರಚಿಸಿದ ಕ್ಷೇತ್ರ ಮರುವಿಂಗಡಣೆ ಆಯೋಗವು ಜಮ್ಮು ಮತ್ತು ಕಾಶ್ಮೀರದಲ್ಲಿನ ಕ್ಷೇತ್ರಗಳ ಮರು ವಿಂಗಡಣೆಗೆ ಸಂಬಂಧಿಸಿದಂತೆ ತನ್ನ ಅಂತಿಮ ವರದಿಯನ್ನು ಕಳೆದ ವರ್ಷ ಮೇನಲ್ಲಿ ಸಲ್ಲಿಸಿತು. ಇದು ಏಳು ಹೆಚ್ಚುವರಿ ಕ್ಷೇತ್ರಗಳನ್ನು (ಆರು ಜಮ್ಮುವಿನಲ್ಲಿ ಒಂದು ಕಾಶ್ಮೀರದಲ್ಲಿ) ರಚಿಸಲು ವರದಿ ಶಿಫಾರಸು ಮಾಡಿದೆ. ಈ ಕೇಂದ್ರಾಡಳಿತ ಪ್ರದೇಶದಲ್ಲಿ ಈವರೆಗೆ ಇದ್ದ 83 ಕ್ಷೇತ್ರಗಳನ್ನು 90ಕ್ಕೆ ಏರಿಕೆ ಮಾಡಲಾಗಿದೆ.

ಆಯೋಗದ ರಚನೆಯನ್ನು ಪ್ರಶ್ನಿಸುವ ಅರ್ಜಿಯ ಮೇಲಿನ ತೀರ್ಪನ್ನು ಡಿಸೆಂಬರ್‌ನಲ್ಲಿ ಸುಪ್ರೀಂ ಕೋರ್ಟ್ ಕಾಯ್ದಿರಿಸಿತ್ತು. 2019ರ ಕಾಯಿದೆಯಡಿ ಚುನಾವಣಾ ಆಯೋಗಕ್ಕೆ ಮಾತ್ರ ಮರು ವಿಂಗಡಣೆಯ ಕಾರ್ಯವನ್ನು ನಡೆಸಲು ಅಧಿಕಾರವಿದೆ ಎಂದು ಅರ್ಜಿದಾರರು ವಾದಿಸಿದ್ದರು. ಆದರೆ ಜಮ್ಮು ಮತ್ತು ಕಾಶ್ಮೀರದ ಮರು ರಚನಾ ಕಾಯಿದೆಯು ಕ್ಷೇತ್ರಗಳ ಮರುವಿಂಗಡಣೆಗೆ ಆಯೋಗವನ್ನು ಕಡ್ಡಾಯಗೊಳಿಸಿದೆ ಎಂದು ಕೇಂದ್ರ ಸರ್ಕಾರ ವಾದಿಸಿದೆ.

ಸರ್ಕಾರ ನಡೆಸುತ್ತಿರುವ ಮರು ವಿಂಗಡಣೆ ಕಾರ್ಯವನ್ನು ಪ್ರತಿಪಕ್ಷಗಳು ಟೀಕಿಸಿವೆ. ಈ ಕ್ರಮವು ಜಮ್ಮು ಮತ್ತು ಕಾಶ್ಮೀರದ ಜನರನ್ನು ‘ಮತ್ತಷ್ಟು ದೂರವಿಡುತ್ತದೆ’ ಎಂದು ನ್ಯಾಷನಲ್ ಕಾನ್ಫರೆನ್ಸ್ ಅಧ್ಯಕ್ಷ ಫಾರೂಕ್ ಅಬ್ದುಲ್ಲಾ ಹೇಳಿದ್ದಾರೆ.

ಮುಸ್ಲಿಮರ ಪ್ರಾಬಲ್ಯ ಕುಗ್ಗಿಸುವ ತಂತ್ರ

ಉದಾಹರಣೆಗೆ ಕಾಶ್ಮೀರ ಕಣಿವೆಯಲ್ಲಿ ಮುಸ್ಲಿಂ ಜನಸಂಖ್ಯೆ 95 ಶೇಕಡಾ ಇದ್ದು, ಅಲ್ಲಿ ಕ್ಷೇತ್ರಗಳ ಸಂಖ್ಯೆಯನ್ನು ಕಡಿಮೆ ಮಾಡಲಾಗುತ್ತಿದೆ. ತೀರಾ ಸರಳವಾಗಿ ಹೇಳುವುದಾದರೆ, ಹಿಂದೂಗಳು ಹೆಚ್ಚಿರುವಲ್ಲಿ ಕಡಿಮೆ ಮತದಾರರಿರುವ ಹೆಚ್ಚು ಕ್ಷೇತ್ರಗಳನ್ನು ರಚಿಸಿ, ಮುಸ್ಲಿಮರು ಹೆಚ್ಚಿರುವ ಪ್ರದೇಶಗಳಲ್ಲಿ ಹೆಚ್ಚು ಮತದಾರರಿರುವ ಕಡಿಮೆ ಕ್ಷೇತ್ರಗಳನ್ನು ರಚಿಸಲಾಗುತ್ತಿದೆ ಎಂಬ ಆರೋಪಗಳು ಬಂದಿವೆ.

ಕ್ಷೇತ್ರ ಮರುವಿಂಗಡಣೆಯ ಹಿಂದಿರುವ ಮೂಲ ಆಶಯವೇ ಮತದಾರರು ಮತ್ತು ಅವರ ಪ್ರತಿನಿಧಿಗಳ ನಡುವೆ ಸಂಪರ್ಕವನ್ನು ಸುಲಭಗೊಳಿಸುವುದು. ಉದಾಹರಣೆಗೆ ಒಂದು ಕ್ಷೇತ್ರದ ಕೇಂದ್ರದಿಂದ ಬಹಳ ದೂರದಲ್ಲಿ ಅಥವಾ ಕ್ರಮಿಸಲು ಕಷ್ಟವಾಗುವ ಪ್ರದೇಶದ ಮತದಾರರನ್ನು ಸಂಪರ್ಕ ಸುಲಭವಾಗುವ ಹತ್ತಿರದ ಇನ್ನೊಂದು ಕ್ಷೇತ್ರಕ್ಕೆ ಸೇರಿಸುವುದು. ಪರ್ವತ, ನದಿ, ರಸ್ತೆ ಸಂಪರ್ಕ ಇತ್ಯಾದಿ ಭೌಗೋಳಿಕ ನೆಲೆಗಳು ಮತ್ತು ಆಡಳಿತ ಕೇಂದ್ರಕ್ಕೆ ಹೆಚ್ಚು ಹತ್ತಿರವಾಗಿರುವ ನೆಲೆಯಲ್ಲಿ ಇದನ್ನು ಮಾಡಲಾಗುತ್ತದೆ. ಇನ್ನೊಂದು ಮಹತ್ವದ ನೆಲೆಯೆಂದರೆ, ಜನಸಂಖ್ಯೆಗೆ ಅನುಗುಣವಾಗಿ ಸೂಕ್ತ ಪ್ರಾತಿನಿಧ್ಯ ಒದಗಿಸುವುದು. ಮತದಾರರ ಸಂಖ್ಯೆ ಹೆಚ್ಚಿರುವ ಕ್ಷೇತ್ರಗಳಿಂದ ಮತದಾರರನ್ನು ಮೇಲಿನ ನೆಲೆಗಳನ್ನು ಪರಿಗಣಿಸಿ, ಮತದಾರರು ಕಡಿಮೆ ಇರುವ ಕ್ಷೇತ್ರಗಳಿಗೆ ಸೇರಿಸುವುದು. ಅಥವಾ ಇದೇ ನೆಲೆಯಲ್ಲಿ ಬೇರೆಬೇರೆ ಕ್ಷೇತ್ರಗಳ ಹೆಚ್ಚುವರಿ ಮತದಾರರನ್ನು ಸೇರಿಸಿ ಹೊಸ ಕ್ಷೇತ್ರವನ್ನು ರಚಿಸುವುದು.

ಆದರೆ, ಇದನ್ನು ಸಂಪೂರ್ಣವಾಗಿ ಕಡೆಗಣಿಸಲಾಗಿದೆ ಎಂಬುದು ಪ್ರಸ್ತುತ ಮರುವಿಂಗಡನೆ ಪ್ರಸ್ತಾಪದಲ್ಲಿ ಮೇಲ್ನೋಟಕ್ಕೇ ಕಂಡುಬರುತ್ತದೆ ಎಂದು ದೂರಲಾಗಿದೆ. ಸದ್ಯಕ್ಕೆ ಜಮ್ಮು ಮತ್ತು ಕಾಶ್ಮೀರದಲ್ಲಿ ಆರು ಲೋಕಸಭಾ ಸ್ಥಾನಗಳಿದ್ದು, ಹಿಂದೂಗಳು ಹೆಚ್ಚಿರುವ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆದ್ದಿದೆ. ಮುಸ್ಲಿಮರು ಹೆಚ್ಚಾಗಿರುವ ಮೂರರಲ್ಲಿ ನ್ಯಾಷನಲ್ ಕಾನ್ಫರೆನ್ಸ್ ಗೆದ್ದಿದೆ. ಲೋಕಸಭಾ ಸ್ಥಾನಗಳಲ್ಲಿ ಕೂಡಾ ಯದ್ವಾತದ್ವಾ ಕೈಯಾಡಿಸಿ, ಮುಸ್ಲಿಮರ ಪ್ರಾಬಲ್ಯವನ್ನು ಕಡಿಮೆ ಮಾಡುವ ಪ್ರಯತ್ನ ನಡೆದಿದೆ. ಒಟ್ಟು ವಿಧಾನಸಭಾ ಸ್ಥಾನಗಳ ಸಂಖ್ಯೆಯನ್ನು ಏಳರಷ್ಟು ಹೆಚ್ಚಿಸಿ, ಹಿಂದೂಗಳು ಹೆಚ್ಚಾಗಿರುವ ಜಮ್ಮು ಪ್ರಾಂತ್ಯಕ್ಕೆ ಆರು ಹೆಚ್ಚುವರಿ ಮತ್ತು ಮುಸ್ಲಿಮರು ಹೆಚ್ಚಾಗಿರುವ ಕಾಶ್ಮೀರಕ್ಕೆ ಕೇವಲ ಒಂದು ಹೆಚ್ಚುವರಿ ವಿಧಾನಸಭಾ ಸ್ಥಾನ ನೀಡುವ ಪ್ರಸ್ತಾಪ ಇದೆ. ಇಲ್ಲಿ ಜನಸಂಖ್ಯೆಗೆ ಅನುಗುಣವಾಗಿ ಪ್ರಾತಿನಿಧ್ಯದ ನಿಯಮವನ್ನೇ ಕಸದ ಬುಟ್ಟಿಗೆ ಎಸೆದಂತಾಗುತ್ತದೆ. ಇದು ಜಮ್ಮು ಮತ್ತು ಕಾಶ್ಮೀರದ ರಾಜಕೀಯ ಚಿತ್ರಣವನ್ನೇ ಸಂಪೂರ್ಣವಾಗಿ ಮತ್ತು  ಕೃತಕವಾಗಿ ಬದಲಿಸಲಿದೆ ಎಂಬುದು ಮರುವಿಂಗಡಣೆಯನ್ನು ಪ್ರಶ್ನಿಸುತ್ತಿರುವವರ ವಾದವಾಗಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...

ಗುಜರಾತ್| ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಹಲ್ಲೆ

ಗುಜರಾತ್‌ನ ಮೆಹ್ಸಾನಾ ಜಿಲ್ಲೆಯ ಮಡಿ ಗ್ರಾಮದಲ್ಲಿ ಮದುವೆ ಮೆರವಣಿಗೆಯಲ್ಲಿ ಕುದುರೆ ಸವಾರಿ ಮಾಡುತ್ತಿದ್ದ ದಲಿತ ವರನ ಮೇಲೆ ಮೇಲ್ಜಾತಿಯ ಪುರುಷರ ಗುಂಪೊಂದು ಜಾತಿ ನಿಂದನೆ ಮಾಡಿ ನಿಂದಿಸಿದ್ದಾರೆ ಎಂದು ಆರೋಪಿಸಲಾಗಿದೆ. ಮೇ 10 ರಂದು...

ಆತಂಕಕಾರಿಯಾದ ಆನೆ ದಾಳಿ

ಆನೆ ದಾಳಿ ಹಿಂದೆಂದಿಗಿಂತಲೂ ದುಪ್ಪಟ್ಟಾಗಿದೆ. ಅರಣ್ಯಮಂತ್ರಿ ಈಶ್ವರ್ ಖಂಡ್ರೆಯವರ ಪ್ರಕಾರ ಆನೆಗಳ ಸಂಖ್ಯೆ ದುಪ್ಪಟ್ಟಾಗಿದೆ. ಕಾಡಿನ ಪ್ರಮಾಣ ಅಷ್ಟೆ ಇದೆ. ಅಂದರೆ ಕಾಡಿನ ಪ್ರಮಾಣ ಹೆಚ್ಚು ಮಾಡಬೇಕೆಂದರೆ ಮನುಷ್ಯರ ಆವಾಸ ಇಲ್ಲದೆ ಆನೆಗಳಿಗಾಗಿ...

ವೈದ್ಯಕೀಯ ಸೀಟುಗಳ ಹಂಚಿಕೆ ಕೇಂದ್ರೀಕರಣಕ್ಕೆ ದಕ್ಷಿಣದ ವಿರೋಧ; ನೀಟ್ ಪರೀಕ್ಷೆಯನ್ನೇ ರದ್ದುಗೊಳಿಸಲು ಇದು ಸಕಾಲ

ರಾಜ್ಯಪಟ್ಟಿಯಲ್ಲಿದ್ದ ಶಿಕ್ಷಣದ ಹಕ್ಕನ್ನು ನೀಟ್‌ ಹೆಸರಿನಲ್ಲಿ ಕೇಂದ್ರದ ಜಂಟಿ ಪಟ್ಟಿಗೆ ಸೇರಿಸುವ ಒಕ್ಕೂಟ ಸರ್ಕಾರದ ನಿರ್ಧಾರದಿಂದ ದಕ್ಷಿಣದ ರಾಜ್ಯಗಳು ಭಾರಿ ನಷ್ಟ ಅನುಭವಿಸುತ್ತಿವೆ. ಜೊತೆಗೆ, ನೀಟ್ ಪಾಸ್‌ ಮಾಡುವ ಒತ್ತಡ ತಾಳಲಾರದೆ ದೇಶದಾದ್ಯಂತ...

‘ಮತ’ ವ್ಯರ್ಥ ಮಾಡದ ಮತದಾರ: 2026ರಲ್ಲಿ ಕುಸಿಯಿತು ‘ನೋಟಾ’ ಅಬ್ಬರ

2026ರ ವಿಧಾನಸಭಾ ಚುನಾವಣೆಯಲ್ಲಿ ಅಸ್ಸಾಂ, ಕೇರಳ, ಪುದುಚೇರಿ, ತಮಿಳುನಾಡು ಮತ್ತು ಪಶ್ಚಿಮ ಬಂಗಾಳದಾದ್ಯಂತ ಸುಮಾರು 10.9 ಲಕ್ಷ ಮತಗಳು 'ನೋಟಾ' (ಯಾರಿಗೂ ಮತವಿಲ್ಲ) ಪಾಲಾಗಿವೆ. ಆದರೆ, 2016 ಮತ್ತು 2021ರ ಚುನಾವಣೆಗಳಿಗೆ ಹೋಲಿಸಿದರೆ...

ಕೇರಳದ 13ನೇ ಮುಖ್ಯಮಂತ್ರಿ ವಿ.ಡಿ. ಸತೀಶನ್: ವಿದ್ಯಾರ್ಥಿ ನಾಯಕನಿಂದ ಸಿಎಂ ಸ್ಥಾನದವರೆಗೆ ಸತೀಶನ್ ಪಯಣ

ತಿರುವನಂತಪುರಂ: ಕೇರಳಂನ ನೂತನ ಮುಖ್ಯಮಂತ್ರಿಯಾಗಿ ವಿ.ಡಿ. ಸತೀಶನ್ ಅವರನ್ನು ಕಾಂಗ್ರೆಸ್ ಹೈಕಮಾಂಡ್ ಆಯ್ಕೆ ಮಾಡಿದೆ. ಆ ಮೂಲಕ ಹಲವು ದಿನಗಳಿಂದ ಈ ಬಗ್ಗೆ ನಡೆಯುತ್ತಿದ್ದ ಕುತೂಹಲ ಮತ್ತು ಚರ್ಚೆಗಳಿಗೆ ತೆರೆ ಬಿದ್ದಿದೆ.  ಅಖಿಲ ಭಾರತ...

ದಲಿತರ ನ್ಯಾಯಕ್ಕೆ ಹೊಸ ಅಡ್ಡಿಯಾಗಲಿದೆಯೇ ‘ಸಾರ್ವಜನಿಕ ವೀಕ್ಷಣೆ’ ನಿಯಮ? ಪರಿಶಿಷ್ಟರನ್ನು ಆತಂಕಕ್ಕೆ ತಳ್ಳಿದ ಸುಪ್ರೀಂ ತೀರ್ಪು

ಸಾರ್ವಜನಿಕರು ನೋಡದ ಜಾಗದಲ್ಲಿ, ಅಂದರೆ ಯಾರೂ ನೋಡದ ಜಾಗದಲ್ಲಿ ಜಾತಿ ನಿಂದನೆ ಅಥವಾ ಅವಮಾನ ನಡೆದರೆ, ಅದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆ 1989ರ ಅಡಿಯಲ್ಲಿ ಅಪರಾಧ...

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...