Homeಮುಖಪುಟಭಯೋತ್ಪಾದಕ ‘ಗೋಡ್ಸೆ’ ಕುರಿತ ಸಿನಿಮಾ ಬಿಡುಗಡೆ ತಡೆಗಾಗಿ ಸುಪ್ರೀಂಗೆ ಅರ್ಜಿ

ಭಯೋತ್ಪಾದಕ ‘ಗೋಡ್ಸೆ’ ಕುರಿತ ಸಿನಿಮಾ ಬಿಡುಗಡೆ ತಡೆಗಾಗಿ ಸುಪ್ರೀಂಗೆ ಅರ್ಜಿ

- Advertisement -
- Advertisement -

ಸ್ವಾತಂತ್ರ್ಯ ಭಾರತದ ಮೊದಲ ಭಯೋತ್ಪಾದಕ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹಂತಕ ‘ನಾಥೂರಾಮ್ ಗೋಡ್ಸೆ’ಯನ್ನು ವೈಭವೀಕರಿಸಲು ಉದ್ದೇಶಿಸಿರುವ ‘ವೈ ಐ ಕಿಲ್ಲಲ್ಡ್‌ ಗಾಂಧಿ’ (ನಾನೇಕೆ ಗಾಂಧಿಯನು ಕೊಂದೆ) ಸಿನಿಮಾ ಬಿಡುಗಡೆ ಮಾಡದಂತೆ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ನಾಥೂರಾಮ್‌ ಗೋಡ್ಸೆ ಕುರಿತ ಸಿನಿಮಾವನ್ನು ಒಟಿಟಿಗಳಲ್ಲಿ ಬಿಡುಗಡೆ ಮಾಡಲು ಮುಂದಾಗಿದ್ದು, ಅದಕ್ಕೆ ತಡೆ ನೀಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಅಶೋಕ್ ತ್ಯಾಗಿ ನಿರ್ದೇಶನದ, ಕಲ್ಯಾಣಿ ಸಿಂಗ್ ಅವರು 2017ರಲ್ಲಿ ನಿರ್ಮಿಸಿದ ಈ ಚಿತ್ರವನ್ನು ಸೆನ್ಸಾರ್ ಮಂಡಳಿಯು ತೆರವುಗೊಳಿಸದ ಕಾರಣ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿಲ್ಲ. ಈಗ ಅದನ್ನು OTT ವೇದಿಕೆಗಳಲ್ಲಿ ಬಿಡುಗಡೆ ಮಾಡಲು ಮುಂದಾಗಿದ್ದಾರೆ. ಜನವರಿ 30ರಂದು (ಗಾಂಧೀಜಿಯನ್ನು ಹತ್ಯೆ ಮಾಡಿದ ದಿನ) ಸಿನಿಮಾ ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ.

ಎನ್‌ಸಿಪಿ ನಾಯಕ ಮತ್ತು ಶಿರೂರು ಲೋಕಸಭಾ ಕ್ಷೇತ್ರದ ಸಂಸದ ಅಮೋಲ್ ಕೋಲ್ಹೆ ಚಿತ್ರದಲ್ಲಿ ಗೋಡ್ಸೆ ಪಾತ್ರವನ್ನು ಮಾಡಿದ್ದಾರೆ. ತಾವು ಗಾಂಧಿ ಚಿಂತನೆಗಳಲ್ಲಿ ದೃಢ ನಂಬಿಕೆ ಹೊಂದಿದ್ದು, ನಟನಾಗಿ ಸವಾಲು ಹಾಕುವ ಸಲುವಾಗಿಯೇ ವಿವಾದಾತ್ಮಕ ಪಾತ್ರವನ್ನು ಕೈಗೆತ್ತಿಕೊಂಡಿರುವುದಾಗಿ ಅವರು ಇತ್ತೀಚೆಗೆ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ‘ನಾನೇಕೆ ಗಾಂಧಿಯನ್ನು ಕೊಂದೆ’ ಸಿನಿಮಾ ಬಿಡುಗಡೆ ಬೇಡ: ಸೇವಾದಳ ಯಂಗ್ ಬ್ರಿಗೇಡ್ ಆಗ್ರಹ

ಚಿತ್ರವು ನಾಥೂರಾಂ ಗೋಡ್ಸೆಯನ್ನು ವೈಭವೀಕರಿಸಿದೆ, ಮಹಾತ್ಮ ಗಾಂಧಿಯನ್ನು ಕೊಂದ ಕೃತ್ಯವನ್ನು ಸಂಭ್ರಮಿಸಲಾಗಿದೆ ಎಂದು ಅರ್ಜಿದಾರ ಸಿಕಂದರ್ ಬೆಹ್ಲ್ ಆರೋಪಿಸಿದ್ದಾರೆ. ಈ ಚಿತ್ರವು ರಾಷ್ಟ್ರಪಿತ ಗಾಂಧೀಜಿಯವರ ವ್ಯಕ್ತಿತ್ವಕ್ಕೆ ಕಳಂಕ ತರುವ ಉದ್ದೇಶವನ್ನು ಹೊಂದಿದೆ. ಕೋಮು ಸೌಹಾರ್ದತೆ, ದ್ವೇಷವನ್ನು ಹರಡುವುದು ಮತ್ತು ಶಾಂತಿ ಕದಡುವುದು ಈ ಸಿನಿಮಾದ ಗುರಿಯಾಗಿದೆ ಎಂದು ಅರ್ಜಿದಾರರು ಆತಂಕ ವ್ಯಕ್ತಪಡಿಸಿದ್ದಾರೆ.

ಸೆನ್ಸಾರ್ ಮಂಡಳಿಯ ಅಧಿಕಾರ ವ್ಯಾಪ್ತಿಯನ್ನು ಮೀರಿದ OTT ಪ್ಲಾಟ್‌ಫಾರ್ಮ್‌ಗಳ ನಿಯಂತ್ರಣಕ್ಕಾಗಿ ಉನ್ನತ ನ್ಯಾಯಾಲಯವು ನಿರ್ದೇಶನಗಳನ್ನು ನೀಡಬೇಕೆಂದು ಬೆಹ್ಲ್ ಆಶಿಸಿದ್ದಾರೆ. ಒಟಿಟಿಗಳಿಗೆ ಸರಿಯಾದ ನಿರ್ಬಂಧ ಇರದ ಕಾರಣ ಸೆನ್ಸಾರ್ ಮಾಡದ ವಿಷಯವನ್ನು ಪ್ರಸಾರ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ವಕೀಲ ಅನುಜ್ ಭಂಡಾರಿ ಅವರ ಮೂಲಕ ಸಿಕಂದರ್ ಬೆಹ್ಲ್ ಅವರು ಅರ್ಜಿ ಸಲ್ಲಿಸಿದ್ದು, ಎಲ್ಲಾ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಿಂದ ವಿವಾದಾತ್ಮಕ ಚಿತ್ರದ ಎಲ್ಲಾ ವಿಷಯಗಳನ್ನು ತೆಗೆದು ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಚಿತ್ರದ ಎರಡು ನಿಮಿಷಗಳ ಇಪ್ಪತ್ತು ಸೆಕೆಂಡುಗಳ ಟ್ರೇಲರ್‌ನಲ್ಲಿ, ಭಾರತದ ವಿಭಜನೆ ಮತ್ತು ಪಾಕಿಸ್ತಾನದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಮಹಾತ್ಮ ಗಾಂಧಿಯನ್ನು ದೂರುವ ಪ್ರಯತ್ನವನ್ನು ಮಾಡಲಾಗಿದೆ. ಆ ಮೂಲಕ ಮಹಾತ್ಮ ಗಾಂಧೀಜಿಯವರ ಹತ್ಯೆಯನ್ನು ಸಮರ್ಥಿಸಲಾಗಿದೆ ಎಂದು ಆಕ್ಷೇಪ ಎತ್ತಿದ್ದಾರೆ.

ಈ ಚಿತ್ರ ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ಅಖಿಲ ಭಾರತ ಸಿನಿ ಕಾರ್ಮಿಕರ ಸಂಘವು (AICWA) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಗಾಂಧೀಜಿ ಹಂತಕ ನಾಥೂರಾಂ ಗೋಡ್ಸೆಯನ್ನು ವೈಭವೀಕರಿಸಲು ಉದ್ದೇಶಿಸಿರುವ ಚಿತ್ರವನ್ನು ಸಂಪೂರ್ಣ ನಿಷೇಧಿಸಬೇಕು ಎಂದು ಆಗ್ರಹಿಸಿದೆ.

ಈ ಚಿತ್ರದಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಸಂಸದ ಅಮೋಲ್ ಕೋಲ್ಹೆ ಗೋಡ್ಸೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕಳೆದ ಕೆಲವು ದಿನಗಳಿಂದ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ ಮಿತ್ರಪಕ್ಷಗಳಾದ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ನಡುವೆ ಘರ್ಷಣೆಯನ್ನು ಹುಟ್ಟುಹಾಕಿದೆ.

ಗಾಂಧೀಜಿ ಹತ್ಯೆ ಮಾಡಲು ಗೋಡ್ಸೆ ಹೇಗೆ ಪ್ರೇರೇಪಿತನಾದ, ಆರ್‌ಎಸ್‌ಎಸ್‌ ಸಿದ್ಧಾಂತಗಳಿಂದ, ಆರ್‌ಎಸ್‌ಎಸ್‌ ನಾಯಕರಿಂದ ಗೋಡ್ಸೆ ಹೇಗೆ ಪ್ರಭಾವಿತನಾದ ಎಂಬುದನ್ನು ಇತ್ತೀಚೆಗೆ ಬಿಡುಗಡೆಯಾಗಿರುವ ‘ಗಾಂಧೀಸ್‌ ಅಸಾಸಿನ್‌’ (ಲೇಖಕರು: ಧೀರೇಂದ್ರ ಝಾ) ಅವರ ಕೃತಿ ಅತ್ಯಂತ ಪರಿಣಾಮಕಾರಿಯಾಗಿ ಚರ್ಚೆಸಿದೆ.

ಇನ್ನೊಂದೆಡೆ ಗಾಂಧೀಜಿಯವರನ್ನು ಅವ್ಯಾಚ ಪದಗಳಿಂದ ನಿಂದಿಸಿ ಗೋಡ್ಸೆಯನ್ನು ವೈಭವೀಕರಿಸಿದ ಹಿನ್ನೆಲೆಯಲ್ಲಿ ಕಾಳಿ ಚರಣ್ ಎಂಬ ಹಿಂದುತ್ವ ಸ್ವಾಮೀಜಿ ಹಾಗೂ ಮುಸ್ಲಿಮರ ನರಹತ್ಯೆಗೆ ಕರೆ ನೀಡಿದ ಯತಿ ನರಸಿಂಗಾನಂದ ಎಂಬವರ ಮೇಲೆ ಪ್ರಕರಣ ದಾಖಲಾಗಿದೆ. ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕೋಮು ಕೇಂದ್ರಿತ ರಾಜಕಾರಣಕ್ಕೆ ಬಲಪಂಥೀಯ ರಾಜಕಾರಣಿಗಳು ಯತ್ನಿಸುತ್ತಿರುವ ಬೆಳವಣಿಗೆಗಳ ನಡುವೆ ಭಯೋತ್ಪಾದಕ ಗೋಡ್ಸೆ ಕುರಿತ ಸಿನಿಮಾ ಬಿಡುಗಡೆಯ ಚರ್ಚೆ ಮುನ್ನೆಲೆಗೆ ಬಂದಿದೆ.


ಇದನ್ನೂ ಓದಿರಿ: ಪ್ರಧಾನಿ, ಯೋಗಿ ಆದಿತ್ಯನಾಥ್ ಪರ ಘೋಷಣೆ ಕೂಗುವಂತೆ ಮಕ್ಕಳಿಗೆ ಸೂಚನೆ : ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಗೋಡ್ಸೆ ಬಗ್ಗೆ ಸಂಪೂರ್ಣ ತಿಳಿಯದ ಅಯೋಗ್ಯ ಕಮ್ಯೂನಿಸ್ಟ್ ,ನಗರ ನಕ್ಸಲ್ ರು ಈ ದೇಶಕ್ಕೆ ಮಾರಕ

  2. ಗೋಡ್ಸೆ ಓರ್ವ ವಿಕೃತ ಮನಸ್ಸಿನ ಮತಾಂಧ ಭಯೋತ್ಪಾದಕ. ಪ್ರಪಂಚದ ಅತಿ ದೊಡ್ಡ ಭಯೋತ್ಪಾದಕ ಸಂಘಟನೆ ಆರೆಸ್ಸೆಸಿನ ಸದಸ್ಯ. ಆರೆಸ್ಸೆಸ್ ಈ ದೇಶಕ್ಕೆ ಅಪಾಯಕಾರಿ ಕ್ಯಾನ್ಸರ್. ಹಿಂಸೆ ಹೊರತುಪಡಿಸಿದರೆ ನಕ್ಸಲ್
    ಚಳವಳಿ ಜನಪರವಾದದ್ದೇ. ಹಿಟ್ಲರ್, ಮುಸೋಲಿನಿ ಆರಾಧಕರಾದ ಸಂಘಿಗಳು ಸ್ವಾತಂತ್ರ್ಯಕ್ಕಾಗಿ ನಯಾಪೈಸೆ ಹೋರಾಟ ಮಾಡಿಲ್ಲದ ಕಾರಣ ಈಗ ಧರ್ಮ ದ್ವೇಷ ಹಚ್ಚಿ ದೇಶ ವಿಭಜನೆಗೆ ಹೊರಟಿದ್ದಾರೆ

LEAVE A REPLY

Please enter your comment!
Please enter your name here

- Advertisment -

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...