Homeಮುಖಪುಟಭಯೋತ್ಪಾದಕ ‘ಗೋಡ್ಸೆ’ ಕುರಿತ ಸಿನಿಮಾ ಬಿಡುಗಡೆ ತಡೆಗಾಗಿ ಸುಪ್ರೀಂಗೆ ಅರ್ಜಿ

ಭಯೋತ್ಪಾದಕ ‘ಗೋಡ್ಸೆ’ ಕುರಿತ ಸಿನಿಮಾ ಬಿಡುಗಡೆ ತಡೆಗಾಗಿ ಸುಪ್ರೀಂಗೆ ಅರ್ಜಿ

- Advertisement -
- Advertisement -

ಸ್ವಾತಂತ್ರ್ಯ ಭಾರತದ ಮೊದಲ ಭಯೋತ್ಪಾದಕ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹಂತಕ ‘ನಾಥೂರಾಮ್ ಗೋಡ್ಸೆ’ಯನ್ನು ವೈಭವೀಕರಿಸಲು ಉದ್ದೇಶಿಸಿರುವ ‘ವೈ ಐ ಕಿಲ್ಲಲ್ಡ್‌ ಗಾಂಧಿ’ (ನಾನೇಕೆ ಗಾಂಧಿಯನು ಕೊಂದೆ) ಸಿನಿಮಾ ಬಿಡುಗಡೆ ಮಾಡದಂತೆ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ನಾಥೂರಾಮ್‌ ಗೋಡ್ಸೆ ಕುರಿತ ಸಿನಿಮಾವನ್ನು ಒಟಿಟಿಗಳಲ್ಲಿ ಬಿಡುಗಡೆ ಮಾಡಲು ಮುಂದಾಗಿದ್ದು, ಅದಕ್ಕೆ ತಡೆ ನೀಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಅಶೋಕ್ ತ್ಯಾಗಿ ನಿರ್ದೇಶನದ, ಕಲ್ಯಾಣಿ ಸಿಂಗ್ ಅವರು 2017ರಲ್ಲಿ ನಿರ್ಮಿಸಿದ ಈ ಚಿತ್ರವನ್ನು ಸೆನ್ಸಾರ್ ಮಂಡಳಿಯು ತೆರವುಗೊಳಿಸದ ಕಾರಣ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿಲ್ಲ. ಈಗ ಅದನ್ನು OTT ವೇದಿಕೆಗಳಲ್ಲಿ ಬಿಡುಗಡೆ ಮಾಡಲು ಮುಂದಾಗಿದ್ದಾರೆ. ಜನವರಿ 30ರಂದು (ಗಾಂಧೀಜಿಯನ್ನು ಹತ್ಯೆ ಮಾಡಿದ ದಿನ) ಸಿನಿಮಾ ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ.

ಎನ್‌ಸಿಪಿ ನಾಯಕ ಮತ್ತು ಶಿರೂರು ಲೋಕಸಭಾ ಕ್ಷೇತ್ರದ ಸಂಸದ ಅಮೋಲ್ ಕೋಲ್ಹೆ ಚಿತ್ರದಲ್ಲಿ ಗೋಡ್ಸೆ ಪಾತ್ರವನ್ನು ಮಾಡಿದ್ದಾರೆ. ತಾವು ಗಾಂಧಿ ಚಿಂತನೆಗಳಲ್ಲಿ ದೃಢ ನಂಬಿಕೆ ಹೊಂದಿದ್ದು, ನಟನಾಗಿ ಸವಾಲು ಹಾಕುವ ಸಲುವಾಗಿಯೇ ವಿವಾದಾತ್ಮಕ ಪಾತ್ರವನ್ನು ಕೈಗೆತ್ತಿಕೊಂಡಿರುವುದಾಗಿ ಅವರು ಇತ್ತೀಚೆಗೆ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ‘ನಾನೇಕೆ ಗಾಂಧಿಯನ್ನು ಕೊಂದೆ’ ಸಿನಿಮಾ ಬಿಡುಗಡೆ ಬೇಡ: ಸೇವಾದಳ ಯಂಗ್ ಬ್ರಿಗೇಡ್ ಆಗ್ರಹ

ಚಿತ್ರವು ನಾಥೂರಾಂ ಗೋಡ್ಸೆಯನ್ನು ವೈಭವೀಕರಿಸಿದೆ, ಮಹಾತ್ಮ ಗಾಂಧಿಯನ್ನು ಕೊಂದ ಕೃತ್ಯವನ್ನು ಸಂಭ್ರಮಿಸಲಾಗಿದೆ ಎಂದು ಅರ್ಜಿದಾರ ಸಿಕಂದರ್ ಬೆಹ್ಲ್ ಆರೋಪಿಸಿದ್ದಾರೆ. ಈ ಚಿತ್ರವು ರಾಷ್ಟ್ರಪಿತ ಗಾಂಧೀಜಿಯವರ ವ್ಯಕ್ತಿತ್ವಕ್ಕೆ ಕಳಂಕ ತರುವ ಉದ್ದೇಶವನ್ನು ಹೊಂದಿದೆ. ಕೋಮು ಸೌಹಾರ್ದತೆ, ದ್ವೇಷವನ್ನು ಹರಡುವುದು ಮತ್ತು ಶಾಂತಿ ಕದಡುವುದು ಈ ಸಿನಿಮಾದ ಗುರಿಯಾಗಿದೆ ಎಂದು ಅರ್ಜಿದಾರರು ಆತಂಕ ವ್ಯಕ್ತಪಡಿಸಿದ್ದಾರೆ.

ಸೆನ್ಸಾರ್ ಮಂಡಳಿಯ ಅಧಿಕಾರ ವ್ಯಾಪ್ತಿಯನ್ನು ಮೀರಿದ OTT ಪ್ಲಾಟ್‌ಫಾರ್ಮ್‌ಗಳ ನಿಯಂತ್ರಣಕ್ಕಾಗಿ ಉನ್ನತ ನ್ಯಾಯಾಲಯವು ನಿರ್ದೇಶನಗಳನ್ನು ನೀಡಬೇಕೆಂದು ಬೆಹ್ಲ್ ಆಶಿಸಿದ್ದಾರೆ. ಒಟಿಟಿಗಳಿಗೆ ಸರಿಯಾದ ನಿರ್ಬಂಧ ಇರದ ಕಾರಣ ಸೆನ್ಸಾರ್ ಮಾಡದ ವಿಷಯವನ್ನು ಪ್ರಸಾರ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ವಕೀಲ ಅನುಜ್ ಭಂಡಾರಿ ಅವರ ಮೂಲಕ ಸಿಕಂದರ್ ಬೆಹ್ಲ್ ಅವರು ಅರ್ಜಿ ಸಲ್ಲಿಸಿದ್ದು, ಎಲ್ಲಾ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಿಂದ ವಿವಾದಾತ್ಮಕ ಚಿತ್ರದ ಎಲ್ಲಾ ವಿಷಯಗಳನ್ನು ತೆಗೆದು ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಚಿತ್ರದ ಎರಡು ನಿಮಿಷಗಳ ಇಪ್ಪತ್ತು ಸೆಕೆಂಡುಗಳ ಟ್ರೇಲರ್‌ನಲ್ಲಿ, ಭಾರತದ ವಿಭಜನೆ ಮತ್ತು ಪಾಕಿಸ್ತಾನದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಮಹಾತ್ಮ ಗಾಂಧಿಯನ್ನು ದೂರುವ ಪ್ರಯತ್ನವನ್ನು ಮಾಡಲಾಗಿದೆ. ಆ ಮೂಲಕ ಮಹಾತ್ಮ ಗಾಂಧೀಜಿಯವರ ಹತ್ಯೆಯನ್ನು ಸಮರ್ಥಿಸಲಾಗಿದೆ ಎಂದು ಆಕ್ಷೇಪ ಎತ್ತಿದ್ದಾರೆ.

ಈ ಚಿತ್ರ ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ಅಖಿಲ ಭಾರತ ಸಿನಿ ಕಾರ್ಮಿಕರ ಸಂಘವು (AICWA) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಗಾಂಧೀಜಿ ಹಂತಕ ನಾಥೂರಾಂ ಗೋಡ್ಸೆಯನ್ನು ವೈಭವೀಕರಿಸಲು ಉದ್ದೇಶಿಸಿರುವ ಚಿತ್ರವನ್ನು ಸಂಪೂರ್ಣ ನಿಷೇಧಿಸಬೇಕು ಎಂದು ಆಗ್ರಹಿಸಿದೆ.

ಈ ಚಿತ್ರದಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಸಂಸದ ಅಮೋಲ್ ಕೋಲ್ಹೆ ಗೋಡ್ಸೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕಳೆದ ಕೆಲವು ದಿನಗಳಿಂದ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ ಮಿತ್ರಪಕ್ಷಗಳಾದ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ನಡುವೆ ಘರ್ಷಣೆಯನ್ನು ಹುಟ್ಟುಹಾಕಿದೆ.

ಗಾಂಧೀಜಿ ಹತ್ಯೆ ಮಾಡಲು ಗೋಡ್ಸೆ ಹೇಗೆ ಪ್ರೇರೇಪಿತನಾದ, ಆರ್‌ಎಸ್‌ಎಸ್‌ ಸಿದ್ಧಾಂತಗಳಿಂದ, ಆರ್‌ಎಸ್‌ಎಸ್‌ ನಾಯಕರಿಂದ ಗೋಡ್ಸೆ ಹೇಗೆ ಪ್ರಭಾವಿತನಾದ ಎಂಬುದನ್ನು ಇತ್ತೀಚೆಗೆ ಬಿಡುಗಡೆಯಾಗಿರುವ ‘ಗಾಂಧೀಸ್‌ ಅಸಾಸಿನ್‌’ (ಲೇಖಕರು: ಧೀರೇಂದ್ರ ಝಾ) ಅವರ ಕೃತಿ ಅತ್ಯಂತ ಪರಿಣಾಮಕಾರಿಯಾಗಿ ಚರ್ಚೆಸಿದೆ.

ಇನ್ನೊಂದೆಡೆ ಗಾಂಧೀಜಿಯವರನ್ನು ಅವ್ಯಾಚ ಪದಗಳಿಂದ ನಿಂದಿಸಿ ಗೋಡ್ಸೆಯನ್ನು ವೈಭವೀಕರಿಸಿದ ಹಿನ್ನೆಲೆಯಲ್ಲಿ ಕಾಳಿ ಚರಣ್ ಎಂಬ ಹಿಂದುತ್ವ ಸ್ವಾಮೀಜಿ ಹಾಗೂ ಮುಸ್ಲಿಮರ ನರಹತ್ಯೆಗೆ ಕರೆ ನೀಡಿದ ಯತಿ ನರಸಿಂಗಾನಂದ ಎಂಬವರ ಮೇಲೆ ಪ್ರಕರಣ ದಾಖಲಾಗಿದೆ. ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕೋಮು ಕೇಂದ್ರಿತ ರಾಜಕಾರಣಕ್ಕೆ ಬಲಪಂಥೀಯ ರಾಜಕಾರಣಿಗಳು ಯತ್ನಿಸುತ್ತಿರುವ ಬೆಳವಣಿಗೆಗಳ ನಡುವೆ ಭಯೋತ್ಪಾದಕ ಗೋಡ್ಸೆ ಕುರಿತ ಸಿನಿಮಾ ಬಿಡುಗಡೆಯ ಚರ್ಚೆ ಮುನ್ನೆಲೆಗೆ ಬಂದಿದೆ.


ಇದನ್ನೂ ಓದಿರಿ: ಪ್ರಧಾನಿ, ಯೋಗಿ ಆದಿತ್ಯನಾಥ್ ಪರ ಘೋಷಣೆ ಕೂಗುವಂತೆ ಮಕ್ಕಳಿಗೆ ಸೂಚನೆ : ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಗೋಡ್ಸೆ ಬಗ್ಗೆ ಸಂಪೂರ್ಣ ತಿಳಿಯದ ಅಯೋಗ್ಯ ಕಮ್ಯೂನಿಸ್ಟ್ ,ನಗರ ನಕ್ಸಲ್ ರು ಈ ದೇಶಕ್ಕೆ ಮಾರಕ

  2. ಗೋಡ್ಸೆ ಓರ್ವ ವಿಕೃತ ಮನಸ್ಸಿನ ಮತಾಂಧ ಭಯೋತ್ಪಾದಕ. ಪ್ರಪಂಚದ ಅತಿ ದೊಡ್ಡ ಭಯೋತ್ಪಾದಕ ಸಂಘಟನೆ ಆರೆಸ್ಸೆಸಿನ ಸದಸ್ಯ. ಆರೆಸ್ಸೆಸ್ ಈ ದೇಶಕ್ಕೆ ಅಪಾಯಕಾರಿ ಕ್ಯಾನ್ಸರ್. ಹಿಂಸೆ ಹೊರತುಪಡಿಸಿದರೆ ನಕ್ಸಲ್
    ಚಳವಳಿ ಜನಪರವಾದದ್ದೇ. ಹಿಟ್ಲರ್, ಮುಸೋಲಿನಿ ಆರಾಧಕರಾದ ಸಂಘಿಗಳು ಸ್ವಾತಂತ್ರ್ಯಕ್ಕಾಗಿ ನಯಾಪೈಸೆ ಹೋರಾಟ ಮಾಡಿಲ್ಲದ ಕಾರಣ ಈಗ ಧರ್ಮ ದ್ವೇಷ ಹಚ್ಚಿ ದೇಶ ವಿಭಜನೆಗೆ ಹೊರಟಿದ್ದಾರೆ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....