Homeಮುಖಪುಟಭಯೋತ್ಪಾದಕ ‘ಗೋಡ್ಸೆ’ ಕುರಿತ ಸಿನಿಮಾ ಬಿಡುಗಡೆ ತಡೆಗಾಗಿ ಸುಪ್ರೀಂಗೆ ಅರ್ಜಿ

ಭಯೋತ್ಪಾದಕ ‘ಗೋಡ್ಸೆ’ ಕುರಿತ ಸಿನಿಮಾ ಬಿಡುಗಡೆ ತಡೆಗಾಗಿ ಸುಪ್ರೀಂಗೆ ಅರ್ಜಿ

- Advertisement -
- Advertisement -

ಸ್ವಾತಂತ್ರ್ಯ ಭಾರತದ ಮೊದಲ ಭಯೋತ್ಪಾದಕ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹಂತಕ ‘ನಾಥೂರಾಮ್ ಗೋಡ್ಸೆ’ಯನ್ನು ವೈಭವೀಕರಿಸಲು ಉದ್ದೇಶಿಸಿರುವ ‘ವೈ ಐ ಕಿಲ್ಲಲ್ಡ್‌ ಗಾಂಧಿ’ (ನಾನೇಕೆ ಗಾಂಧಿಯನು ಕೊಂದೆ) ಸಿನಿಮಾ ಬಿಡುಗಡೆ ಮಾಡದಂತೆ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ನಾಥೂರಾಮ್‌ ಗೋಡ್ಸೆ ಕುರಿತ ಸಿನಿಮಾವನ್ನು ಒಟಿಟಿಗಳಲ್ಲಿ ಬಿಡುಗಡೆ ಮಾಡಲು ಮುಂದಾಗಿದ್ದು, ಅದಕ್ಕೆ ತಡೆ ನೀಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಅಶೋಕ್ ತ್ಯಾಗಿ ನಿರ್ದೇಶನದ, ಕಲ್ಯಾಣಿ ಸಿಂಗ್ ಅವರು 2017ರಲ್ಲಿ ನಿರ್ಮಿಸಿದ ಈ ಚಿತ್ರವನ್ನು ಸೆನ್ಸಾರ್ ಮಂಡಳಿಯು ತೆರವುಗೊಳಿಸದ ಕಾರಣ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿಲ್ಲ. ಈಗ ಅದನ್ನು OTT ವೇದಿಕೆಗಳಲ್ಲಿ ಬಿಡುಗಡೆ ಮಾಡಲು ಮುಂದಾಗಿದ್ದಾರೆ. ಜನವರಿ 30ರಂದು (ಗಾಂಧೀಜಿಯನ್ನು ಹತ್ಯೆ ಮಾಡಿದ ದಿನ) ಸಿನಿಮಾ ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ.

ಎನ್‌ಸಿಪಿ ನಾಯಕ ಮತ್ತು ಶಿರೂರು ಲೋಕಸಭಾ ಕ್ಷೇತ್ರದ ಸಂಸದ ಅಮೋಲ್ ಕೋಲ್ಹೆ ಚಿತ್ರದಲ್ಲಿ ಗೋಡ್ಸೆ ಪಾತ್ರವನ್ನು ಮಾಡಿದ್ದಾರೆ. ತಾವು ಗಾಂಧಿ ಚಿಂತನೆಗಳಲ್ಲಿ ದೃಢ ನಂಬಿಕೆ ಹೊಂದಿದ್ದು, ನಟನಾಗಿ ಸವಾಲು ಹಾಕುವ ಸಲುವಾಗಿಯೇ ವಿವಾದಾತ್ಮಕ ಪಾತ್ರವನ್ನು ಕೈಗೆತ್ತಿಕೊಂಡಿರುವುದಾಗಿ ಅವರು ಇತ್ತೀಚೆಗೆ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ‘ನಾನೇಕೆ ಗಾಂಧಿಯನ್ನು ಕೊಂದೆ’ ಸಿನಿಮಾ ಬಿಡುಗಡೆ ಬೇಡ: ಸೇವಾದಳ ಯಂಗ್ ಬ್ರಿಗೇಡ್ ಆಗ್ರಹ

ಚಿತ್ರವು ನಾಥೂರಾಂ ಗೋಡ್ಸೆಯನ್ನು ವೈಭವೀಕರಿಸಿದೆ, ಮಹಾತ್ಮ ಗಾಂಧಿಯನ್ನು ಕೊಂದ ಕೃತ್ಯವನ್ನು ಸಂಭ್ರಮಿಸಲಾಗಿದೆ ಎಂದು ಅರ್ಜಿದಾರ ಸಿಕಂದರ್ ಬೆಹ್ಲ್ ಆರೋಪಿಸಿದ್ದಾರೆ. ಈ ಚಿತ್ರವು ರಾಷ್ಟ್ರಪಿತ ಗಾಂಧೀಜಿಯವರ ವ್ಯಕ್ತಿತ್ವಕ್ಕೆ ಕಳಂಕ ತರುವ ಉದ್ದೇಶವನ್ನು ಹೊಂದಿದೆ. ಕೋಮು ಸೌಹಾರ್ದತೆ, ದ್ವೇಷವನ್ನು ಹರಡುವುದು ಮತ್ತು ಶಾಂತಿ ಕದಡುವುದು ಈ ಸಿನಿಮಾದ ಗುರಿಯಾಗಿದೆ ಎಂದು ಅರ್ಜಿದಾರರು ಆತಂಕ ವ್ಯಕ್ತಪಡಿಸಿದ್ದಾರೆ.

ಸೆನ್ಸಾರ್ ಮಂಡಳಿಯ ಅಧಿಕಾರ ವ್ಯಾಪ್ತಿಯನ್ನು ಮೀರಿದ OTT ಪ್ಲಾಟ್‌ಫಾರ್ಮ್‌ಗಳ ನಿಯಂತ್ರಣಕ್ಕಾಗಿ ಉನ್ನತ ನ್ಯಾಯಾಲಯವು ನಿರ್ದೇಶನಗಳನ್ನು ನೀಡಬೇಕೆಂದು ಬೆಹ್ಲ್ ಆಶಿಸಿದ್ದಾರೆ. ಒಟಿಟಿಗಳಿಗೆ ಸರಿಯಾದ ನಿರ್ಬಂಧ ಇರದ ಕಾರಣ ಸೆನ್ಸಾರ್ ಮಾಡದ ವಿಷಯವನ್ನು ಪ್ರಸಾರ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ವಕೀಲ ಅನುಜ್ ಭಂಡಾರಿ ಅವರ ಮೂಲಕ ಸಿಕಂದರ್ ಬೆಹ್ಲ್ ಅವರು ಅರ್ಜಿ ಸಲ್ಲಿಸಿದ್ದು, ಎಲ್ಲಾ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಿಂದ ವಿವಾದಾತ್ಮಕ ಚಿತ್ರದ ಎಲ್ಲಾ ವಿಷಯಗಳನ್ನು ತೆಗೆದು ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಚಿತ್ರದ ಎರಡು ನಿಮಿಷಗಳ ಇಪ್ಪತ್ತು ಸೆಕೆಂಡುಗಳ ಟ್ರೇಲರ್‌ನಲ್ಲಿ, ಭಾರತದ ವಿಭಜನೆ ಮತ್ತು ಪಾಕಿಸ್ತಾನದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಮಹಾತ್ಮ ಗಾಂಧಿಯನ್ನು ದೂರುವ ಪ್ರಯತ್ನವನ್ನು ಮಾಡಲಾಗಿದೆ. ಆ ಮೂಲಕ ಮಹಾತ್ಮ ಗಾಂಧೀಜಿಯವರ ಹತ್ಯೆಯನ್ನು ಸಮರ್ಥಿಸಲಾಗಿದೆ ಎಂದು ಆಕ್ಷೇಪ ಎತ್ತಿದ್ದಾರೆ.

ಈ ಚಿತ್ರ ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ಅಖಿಲ ಭಾರತ ಸಿನಿ ಕಾರ್ಮಿಕರ ಸಂಘವು (AICWA) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಗಾಂಧೀಜಿ ಹಂತಕ ನಾಥೂರಾಂ ಗೋಡ್ಸೆಯನ್ನು ವೈಭವೀಕರಿಸಲು ಉದ್ದೇಶಿಸಿರುವ ಚಿತ್ರವನ್ನು ಸಂಪೂರ್ಣ ನಿಷೇಧಿಸಬೇಕು ಎಂದು ಆಗ್ರಹಿಸಿದೆ.

ಈ ಚಿತ್ರದಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಸಂಸದ ಅಮೋಲ್ ಕೋಲ್ಹೆ ಗೋಡ್ಸೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕಳೆದ ಕೆಲವು ದಿನಗಳಿಂದ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ ಮಿತ್ರಪಕ್ಷಗಳಾದ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ನಡುವೆ ಘರ್ಷಣೆಯನ್ನು ಹುಟ್ಟುಹಾಕಿದೆ.

ಗಾಂಧೀಜಿ ಹತ್ಯೆ ಮಾಡಲು ಗೋಡ್ಸೆ ಹೇಗೆ ಪ್ರೇರೇಪಿತನಾದ, ಆರ್‌ಎಸ್‌ಎಸ್‌ ಸಿದ್ಧಾಂತಗಳಿಂದ, ಆರ್‌ಎಸ್‌ಎಸ್‌ ನಾಯಕರಿಂದ ಗೋಡ್ಸೆ ಹೇಗೆ ಪ್ರಭಾವಿತನಾದ ಎಂಬುದನ್ನು ಇತ್ತೀಚೆಗೆ ಬಿಡುಗಡೆಯಾಗಿರುವ ‘ಗಾಂಧೀಸ್‌ ಅಸಾಸಿನ್‌’ (ಲೇಖಕರು: ಧೀರೇಂದ್ರ ಝಾ) ಅವರ ಕೃತಿ ಅತ್ಯಂತ ಪರಿಣಾಮಕಾರಿಯಾಗಿ ಚರ್ಚೆಸಿದೆ.

ಇನ್ನೊಂದೆಡೆ ಗಾಂಧೀಜಿಯವರನ್ನು ಅವ್ಯಾಚ ಪದಗಳಿಂದ ನಿಂದಿಸಿ ಗೋಡ್ಸೆಯನ್ನು ವೈಭವೀಕರಿಸಿದ ಹಿನ್ನೆಲೆಯಲ್ಲಿ ಕಾಳಿ ಚರಣ್ ಎಂಬ ಹಿಂದುತ್ವ ಸ್ವಾಮೀಜಿ ಹಾಗೂ ಮುಸ್ಲಿಮರ ನರಹತ್ಯೆಗೆ ಕರೆ ನೀಡಿದ ಯತಿ ನರಸಿಂಗಾನಂದ ಎಂಬವರ ಮೇಲೆ ಪ್ರಕರಣ ದಾಖಲಾಗಿದೆ. ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕೋಮು ಕೇಂದ್ರಿತ ರಾಜಕಾರಣಕ್ಕೆ ಬಲಪಂಥೀಯ ರಾಜಕಾರಣಿಗಳು ಯತ್ನಿಸುತ್ತಿರುವ ಬೆಳವಣಿಗೆಗಳ ನಡುವೆ ಭಯೋತ್ಪಾದಕ ಗೋಡ್ಸೆ ಕುರಿತ ಸಿನಿಮಾ ಬಿಡುಗಡೆಯ ಚರ್ಚೆ ಮುನ್ನೆಲೆಗೆ ಬಂದಿದೆ.


ಇದನ್ನೂ ಓದಿರಿ: ಪ್ರಧಾನಿ, ಯೋಗಿ ಆದಿತ್ಯನಾಥ್ ಪರ ಘೋಷಣೆ ಕೂಗುವಂತೆ ಮಕ್ಕಳಿಗೆ ಸೂಚನೆ : ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಗೋಡ್ಸೆ ಬಗ್ಗೆ ಸಂಪೂರ್ಣ ತಿಳಿಯದ ಅಯೋಗ್ಯ ಕಮ್ಯೂನಿಸ್ಟ್ ,ನಗರ ನಕ್ಸಲ್ ರು ಈ ದೇಶಕ್ಕೆ ಮಾರಕ

  2. ಗೋಡ್ಸೆ ಓರ್ವ ವಿಕೃತ ಮನಸ್ಸಿನ ಮತಾಂಧ ಭಯೋತ್ಪಾದಕ. ಪ್ರಪಂಚದ ಅತಿ ದೊಡ್ಡ ಭಯೋತ್ಪಾದಕ ಸಂಘಟನೆ ಆರೆಸ್ಸೆಸಿನ ಸದಸ್ಯ. ಆರೆಸ್ಸೆಸ್ ಈ ದೇಶಕ್ಕೆ ಅಪಾಯಕಾರಿ ಕ್ಯಾನ್ಸರ್. ಹಿಂಸೆ ಹೊರತುಪಡಿಸಿದರೆ ನಕ್ಸಲ್
    ಚಳವಳಿ ಜನಪರವಾದದ್ದೇ. ಹಿಟ್ಲರ್, ಮುಸೋಲಿನಿ ಆರಾಧಕರಾದ ಸಂಘಿಗಳು ಸ್ವಾತಂತ್ರ್ಯಕ್ಕಾಗಿ ನಯಾಪೈಸೆ ಹೋರಾಟ ಮಾಡಿಲ್ಲದ ಕಾರಣ ಈಗ ಧರ್ಮ ದ್ವೇಷ ಹಚ್ಚಿ ದೇಶ ವಿಭಜನೆಗೆ ಹೊರಟಿದ್ದಾರೆ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...