Homeಮುಖಪುಟಭಯೋತ್ಪಾದಕ ‘ಗೋಡ್ಸೆ’ ಕುರಿತ ಸಿನಿಮಾ ಬಿಡುಗಡೆ ತಡೆಗಾಗಿ ಸುಪ್ರೀಂಗೆ ಅರ್ಜಿ

ಭಯೋತ್ಪಾದಕ ‘ಗೋಡ್ಸೆ’ ಕುರಿತ ಸಿನಿಮಾ ಬಿಡುಗಡೆ ತಡೆಗಾಗಿ ಸುಪ್ರೀಂಗೆ ಅರ್ಜಿ

- Advertisement -
- Advertisement -

ಸ್ವಾತಂತ್ರ್ಯ ಭಾರತದ ಮೊದಲ ಭಯೋತ್ಪಾದಕ, ರಾಷ್ಟ್ರಪಿತ ಮಹಾತ್ಮ ಗಾಂಧೀಜಿಯವರ ಹಂತಕ ‘ನಾಥೂರಾಮ್ ಗೋಡ್ಸೆ’ಯನ್ನು ವೈಭವೀಕರಿಸಲು ಉದ್ದೇಶಿಸಿರುವ ‘ವೈ ಐ ಕಿಲ್ಲಲ್ಡ್‌ ಗಾಂಧಿ’ (ನಾನೇಕೆ ಗಾಂಧಿಯನು ಕೊಂದೆ) ಸಿನಿಮಾ ಬಿಡುಗಡೆ ಮಾಡದಂತೆ ಸುಪ್ರೀಂ ಕೋರ್ಟ್‌ಗೆ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ನಾಥೂರಾಮ್‌ ಗೋಡ್ಸೆ ಕುರಿತ ಸಿನಿಮಾವನ್ನು ಒಟಿಟಿಗಳಲ್ಲಿ ಬಿಡುಗಡೆ ಮಾಡಲು ಮುಂದಾಗಿದ್ದು, ಅದಕ್ಕೆ ತಡೆ ನೀಡಬೇಕೆಂದು ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಲಾಗಿದೆ.

ಅಶೋಕ್ ತ್ಯಾಗಿ ನಿರ್ದೇಶನದ, ಕಲ್ಯಾಣಿ ಸಿಂಗ್ ಅವರು 2017ರಲ್ಲಿ ನಿರ್ಮಿಸಿದ ಈ ಚಿತ್ರವನ್ನು ಸೆನ್ಸಾರ್ ಮಂಡಳಿಯು ತೆರವುಗೊಳಿಸದ ಕಾರಣ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿಲ್ಲ. ಈಗ ಅದನ್ನು OTT ವೇದಿಕೆಗಳಲ್ಲಿ ಬಿಡುಗಡೆ ಮಾಡಲು ಮುಂದಾಗಿದ್ದಾರೆ. ಜನವರಿ 30ರಂದು (ಗಾಂಧೀಜಿಯನ್ನು ಹತ್ಯೆ ಮಾಡಿದ ದಿನ) ಸಿನಿಮಾ ಬಿಡುಗಡೆ ಮಾಡಲು ಉದ್ದೇಶಿಸಲಾಗಿದೆ.

ಎನ್‌ಸಿಪಿ ನಾಯಕ ಮತ್ತು ಶಿರೂರು ಲೋಕಸಭಾ ಕ್ಷೇತ್ರದ ಸಂಸದ ಅಮೋಲ್ ಕೋಲ್ಹೆ ಚಿತ್ರದಲ್ಲಿ ಗೋಡ್ಸೆ ಪಾತ್ರವನ್ನು ಮಾಡಿದ್ದಾರೆ. ತಾವು ಗಾಂಧಿ ಚಿಂತನೆಗಳಲ್ಲಿ ದೃಢ ನಂಬಿಕೆ ಹೊಂದಿದ್ದು, ನಟನಾಗಿ ಸವಾಲು ಹಾಕುವ ಸಲುವಾಗಿಯೇ ವಿವಾದಾತ್ಮಕ ಪಾತ್ರವನ್ನು ಕೈಗೆತ್ತಿಕೊಂಡಿರುವುದಾಗಿ ಅವರು ಇತ್ತೀಚೆಗೆ ಸ್ಪಷ್ಟಪಡಿಸಿದ್ದಾರೆ.

ಇದನ್ನೂ ಓದಿರಿ: ‘ನಾನೇಕೆ ಗಾಂಧಿಯನ್ನು ಕೊಂದೆ’ ಸಿನಿಮಾ ಬಿಡುಗಡೆ ಬೇಡ: ಸೇವಾದಳ ಯಂಗ್ ಬ್ರಿಗೇಡ್ ಆಗ್ರಹ

ಚಿತ್ರವು ನಾಥೂರಾಂ ಗೋಡ್ಸೆಯನ್ನು ವೈಭವೀಕರಿಸಿದೆ, ಮಹಾತ್ಮ ಗಾಂಧಿಯನ್ನು ಕೊಂದ ಕೃತ್ಯವನ್ನು ಸಂಭ್ರಮಿಸಲಾಗಿದೆ ಎಂದು ಅರ್ಜಿದಾರ ಸಿಕಂದರ್ ಬೆಹ್ಲ್ ಆರೋಪಿಸಿದ್ದಾರೆ. ಈ ಚಿತ್ರವು ರಾಷ್ಟ್ರಪಿತ ಗಾಂಧೀಜಿಯವರ ವ್ಯಕ್ತಿತ್ವಕ್ಕೆ ಕಳಂಕ ತರುವ ಉದ್ದೇಶವನ್ನು ಹೊಂದಿದೆ. ಕೋಮು ಸೌಹಾರ್ದತೆ, ದ್ವೇಷವನ್ನು ಹರಡುವುದು ಮತ್ತು ಶಾಂತಿ ಕದಡುವುದು ಈ ಸಿನಿಮಾದ ಗುರಿಯಾಗಿದೆ ಎಂದು ಅರ್ಜಿದಾರರು ಆತಂಕ ವ್ಯಕ್ತಪಡಿಸಿದ್ದಾರೆ.

ಸೆನ್ಸಾರ್ ಮಂಡಳಿಯ ಅಧಿಕಾರ ವ್ಯಾಪ್ತಿಯನ್ನು ಮೀರಿದ OTT ಪ್ಲಾಟ್‌ಫಾರ್ಮ್‌ಗಳ ನಿಯಂತ್ರಣಕ್ಕಾಗಿ ಉನ್ನತ ನ್ಯಾಯಾಲಯವು ನಿರ್ದೇಶನಗಳನ್ನು ನೀಡಬೇಕೆಂದು ಬೆಹ್ಲ್ ಆಶಿಸಿದ್ದಾರೆ. ಒಟಿಟಿಗಳಿಗೆ ಸರಿಯಾದ ನಿರ್ಬಂಧ ಇರದ ಕಾರಣ ಸೆನ್ಸಾರ್ ಮಾಡದ ವಿಷಯವನ್ನು ಪ್ರಸಾರ ಮಾಡಲಾಗುತ್ತಿದೆ ಎಂದು ಆರೋಪಿಸಿದ್ದಾರೆ.

ವಕೀಲ ಅನುಜ್ ಭಂಡಾರಿ ಅವರ ಮೂಲಕ ಸಿಕಂದರ್ ಬೆಹ್ಲ್ ಅವರು ಅರ್ಜಿ ಸಲ್ಲಿಸಿದ್ದು, ಎಲ್ಲಾ ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಿಂದ ವಿವಾದಾತ್ಮಕ ಚಿತ್ರದ ಎಲ್ಲಾ ವಿಷಯಗಳನ್ನು ತೆಗೆದು ಹಾಕಬೇಕು ಎಂದು ಒತ್ತಾಯಿಸಿದ್ದಾರೆ.

ಚಿತ್ರದ ಎರಡು ನಿಮಿಷಗಳ ಇಪ್ಪತ್ತು ಸೆಕೆಂಡುಗಳ ಟ್ರೇಲರ್‌ನಲ್ಲಿ, ಭಾರತದ ವಿಭಜನೆ ಮತ್ತು ಪಾಕಿಸ್ತಾನದಲ್ಲಿ ಹಿಂದೂಗಳ ಮೇಲಿನ ದೌರ್ಜನ್ಯಕ್ಕೆ ಮಹಾತ್ಮ ಗಾಂಧಿಯನ್ನು ದೂರುವ ಪ್ರಯತ್ನವನ್ನು ಮಾಡಲಾಗಿದೆ. ಆ ಮೂಲಕ ಮಹಾತ್ಮ ಗಾಂಧೀಜಿಯವರ ಹತ್ಯೆಯನ್ನು ಸಮರ್ಥಿಸಲಾಗಿದೆ ಎಂದು ಆಕ್ಷೇಪ ಎತ್ತಿದ್ದಾರೆ.

ಈ ಚಿತ್ರ ಭಾರೀ ವಿವಾದಕ್ಕೆ ಎಡೆಮಾಡಿಕೊಟ್ಟಿರುವ ಹಿನ್ನೆಲೆಯಲ್ಲಿ ಅಖಿಲ ಭಾರತ ಸಿನಿ ಕಾರ್ಮಿಕರ ಸಂಘವು (AICWA) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಗಾಂಧೀಜಿ ಹಂತಕ ನಾಥೂರಾಂ ಗೋಡ್ಸೆಯನ್ನು ವೈಭವೀಕರಿಸಲು ಉದ್ದೇಶಿಸಿರುವ ಚಿತ್ರವನ್ನು ಸಂಪೂರ್ಣ ನಿಷೇಧಿಸಬೇಕು ಎಂದು ಆಗ್ರಹಿಸಿದೆ.

ಈ ಚಿತ್ರದಲ್ಲಿ ನ್ಯಾಶನಲಿಸ್ಟ್ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ಸಂಸದ ಅಮೋಲ್ ಕೋಲ್ಹೆ ಗೋಡ್ಸೆ ಪಾತ್ರದಲ್ಲಿ ಕಾಣಿಸಿಕೊಂಡಿದ್ದು, ಕಳೆದ ಕೆಲವು ದಿನಗಳಿಂದ ಆಡಳಿತಾರೂಢ ಮಹಾ ವಿಕಾಸ್ ಅಘಾಡಿ ಮಿತ್ರಪಕ್ಷಗಳಾದ ಶಿವಸೇನೆ, ಎನ್‌ಸಿಪಿ ಮತ್ತು ಕಾಂಗ್ರೆಸ್ ನಡುವೆ ಘರ್ಷಣೆಯನ್ನು ಹುಟ್ಟುಹಾಕಿದೆ.

ಗಾಂಧೀಜಿ ಹತ್ಯೆ ಮಾಡಲು ಗೋಡ್ಸೆ ಹೇಗೆ ಪ್ರೇರೇಪಿತನಾದ, ಆರ್‌ಎಸ್‌ಎಸ್‌ ಸಿದ್ಧಾಂತಗಳಿಂದ, ಆರ್‌ಎಸ್‌ಎಸ್‌ ನಾಯಕರಿಂದ ಗೋಡ್ಸೆ ಹೇಗೆ ಪ್ರಭಾವಿತನಾದ ಎಂಬುದನ್ನು ಇತ್ತೀಚೆಗೆ ಬಿಡುಗಡೆಯಾಗಿರುವ ‘ಗಾಂಧೀಸ್‌ ಅಸಾಸಿನ್‌’ (ಲೇಖಕರು: ಧೀರೇಂದ್ರ ಝಾ) ಅವರ ಕೃತಿ ಅತ್ಯಂತ ಪರಿಣಾಮಕಾರಿಯಾಗಿ ಚರ್ಚೆಸಿದೆ.

ಇನ್ನೊಂದೆಡೆ ಗಾಂಧೀಜಿಯವರನ್ನು ಅವ್ಯಾಚ ಪದಗಳಿಂದ ನಿಂದಿಸಿ ಗೋಡ್ಸೆಯನ್ನು ವೈಭವೀಕರಿಸಿದ ಹಿನ್ನೆಲೆಯಲ್ಲಿ ಕಾಳಿ ಚರಣ್ ಎಂಬ ಹಿಂದುತ್ವ ಸ್ವಾಮೀಜಿ ಹಾಗೂ ಮುಸ್ಲಿಮರ ನರಹತ್ಯೆಗೆ ಕರೆ ನೀಡಿದ ಯತಿ ನರಸಿಂಗಾನಂದ ಎಂಬವರ ಮೇಲೆ ಪ್ರಕರಣ ದಾಖಲಾಗಿದೆ. ಉತ್ತರ ಪ್ರದೇಶ ಸೇರಿದಂತೆ ಐದು ರಾಜ್ಯಗಳ ಚುನಾವಣೆ ಘೋಷಣೆಯಾಗಿರುವ ಹಿನ್ನೆಲೆಯಲ್ಲಿ ಕೋಮು ಕೇಂದ್ರಿತ ರಾಜಕಾರಣಕ್ಕೆ ಬಲಪಂಥೀಯ ರಾಜಕಾರಣಿಗಳು ಯತ್ನಿಸುತ್ತಿರುವ ಬೆಳವಣಿಗೆಗಳ ನಡುವೆ ಭಯೋತ್ಪಾದಕ ಗೋಡ್ಸೆ ಕುರಿತ ಸಿನಿಮಾ ಬಿಡುಗಡೆಯ ಚರ್ಚೆ ಮುನ್ನೆಲೆಗೆ ಬಂದಿದೆ.


ಇದನ್ನೂ ಓದಿರಿ: ಪ್ರಧಾನಿ, ಯೋಗಿ ಆದಿತ್ಯನಾಥ್ ಪರ ಘೋಷಣೆ ಕೂಗುವಂತೆ ಮಕ್ಕಳಿಗೆ ಸೂಚನೆ : ತನಿಖೆಗೆ ಆದೇಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ಗೋಡ್ಸೆ ಬಗ್ಗೆ ಸಂಪೂರ್ಣ ತಿಳಿಯದ ಅಯೋಗ್ಯ ಕಮ್ಯೂನಿಸ್ಟ್ ,ನಗರ ನಕ್ಸಲ್ ರು ಈ ದೇಶಕ್ಕೆ ಮಾರಕ

  2. ಗೋಡ್ಸೆ ಓರ್ವ ವಿಕೃತ ಮನಸ್ಸಿನ ಮತಾಂಧ ಭಯೋತ್ಪಾದಕ. ಪ್ರಪಂಚದ ಅತಿ ದೊಡ್ಡ ಭಯೋತ್ಪಾದಕ ಸಂಘಟನೆ ಆರೆಸ್ಸೆಸಿನ ಸದಸ್ಯ. ಆರೆಸ್ಸೆಸ್ ಈ ದೇಶಕ್ಕೆ ಅಪಾಯಕಾರಿ ಕ್ಯಾನ್ಸರ್. ಹಿಂಸೆ ಹೊರತುಪಡಿಸಿದರೆ ನಕ್ಸಲ್
    ಚಳವಳಿ ಜನಪರವಾದದ್ದೇ. ಹಿಟ್ಲರ್, ಮುಸೋಲಿನಿ ಆರಾಧಕರಾದ ಸಂಘಿಗಳು ಸ್ವಾತಂತ್ರ್ಯಕ್ಕಾಗಿ ನಯಾಪೈಸೆ ಹೋರಾಟ ಮಾಡಿಲ್ಲದ ಕಾರಣ ಈಗ ಧರ್ಮ ದ್ವೇಷ ಹಚ್ಚಿ ದೇಶ ವಿಭಜನೆಗೆ ಹೊರಟಿದ್ದಾರೆ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...