Homeಕರೋನಾ ತಲ್ಲಣ18 ವರ್ಷಕ್ಕಿಂತ ಮೇಲಿನ ಎಲ್ಲರಿಗೂ ಲಸಿಕೆ ನೀಡುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ

18 ವರ್ಷಕ್ಕಿಂತ ಮೇಲಿನ ಎಲ್ಲರಿಗೂ ಲಸಿಕೆ ನೀಡುವಂತೆ ಕೋರಿ ಸುಪ್ರೀಂಕೋರ್ಟ್‌ಗೆ ಅರ್ಜಿ

- Advertisement -
- Advertisement -

ದೇಶಾದ್ಯಂತದ ಕೊರೊನಾ ವೈರಸ್ ಪ್ರಕರಣವು ಹಠಾತ್ ಏರಿಕೆಯಾಗುತ್ತಿರುವುದರಿಂದ 18 ವರ್ಷಕ್ಕಿಂತ ಮೇಲ್ಪಟ್ಟ ಎಲ್ಲರಿಗೂ ಕೊರೊನಾ ಲಸಿಕೆ ನೀಡುವಂತೆ ಕೋರಿ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆ (ಪಿಐಎಲ್) ಅರ್ಜಿಯನ್ನು ಶುಕ್ರವಾರ ಸುಪ್ರೀಂ ಕೋರ್ಟ್‌ನಲ್ಲಿ ದಾಖಲಿಸಲಾಗಿದೆ.

ಎರಡನೇ ಅಲೆಯಲ್ಲಿ ಕೊರೊನಾ ವೈರಸನ್ನು ತಡೆಯಲು ಎಲ್ಲಾ ಯುವ ಮತ್ತು ದುಡಿಯುವ ಜನರಿಗೆ ವ್ಯಾಪಕವಾಗಿ ಲಸಿಕೆ ಅಗತ್ಯ ಎಂದು ವಕೀಲೆ ರಶ್ಮಿ ಸಿಂಗ್ ಸುಪ್ರೀಂಕೋರ್ಟ್‌ಗೆ ಸಲ್ಲಿಸಿರುವ ಅರ್ಜಿಯಲ್ಲಿ ತಿಳಿಸಿದ್ದಾರೆ.

ಇದನ್ನೂ ಓದಿ: ಕೊರೊನಾ ರೋಗಿಗಳ ಅಂತ್ಯಸಂಸ್ಕಾರ ಕಾಣಿಸದಂತೆ ಸ್ಮಶಾನಕ್ಕೆ ಶೀಟ್ ಗೋಡೆ ಹಾಕಿಸಿದ ಉತ್ತರ ಪ್ರದೇಶ ಸರ್ಕಾರ!

ಲಸಿಕೆಯ ಎರಡು ಡೋಸೇಜ್‌ಗಳನ್ನು ನೀಡಲು ಸರ್ಕಾರವು ಆರರಿಂದ ಎಂಟು ವಾರಗಳವರೆಗೆ ತೆಗೆದುಕೊಳ್ಳುತ್ತದೆ, ಆದ್ದರಿಂದ ಪ್ರಸ್ತುತ ದೇಶದಲ್ಲಿ ಪ್ರಾರಂಭವಾಗಿರುವ ಲಸಿಕೆ ನೀಡುವ ಪ್ರಕ್ರಿಯೆಯು 18 ವರ್ಷ ಮತ್ತು ಅದಕ್ಕಿಂತ ಹೆಚ್ಚಿನ ವಯಸ್ಸಿನವರನ್ನು ತಲುಪುವ ಹೊತ್ತಿಗೆ ಕೊರೊನಾ ವೇಗವಾಗಿ ಹರಡುವ ಸಾಧ್ಯತೆಯಿದೆ ಎಂದು ಅವರು ಅರ್ಜಿಯಲ್ಲಿ ಆತಂಕ ವ್ಯಕ್ತಪಡಿಸಿದ್ದಾರೆ.

18 ರಿಂದ 45 ವರ್ಷ ವಯಸ್ಸಿನವರಿಗೆ ಲಸಿಕೆಗಳನ್ನು ನಿರಾಕರಿಸುವುದು ಅಸಮಂಜಸವಾಗಿದ್ದು, ಇದು ತಾರತಮ್ಯ ಮತ್ತು ಅವಿವೇಕದ ನಿಯಮವಾಗಿದೆ ಎಂದು ಮನವಿಯಲ್ಲಿ ತಿಳಿಸಲಾಗಿದೆ. ಇಂತಹ ನಿರಾಕರಣೆಯು ಆರೋಗ್ಯದ ಹಕ್ಕನ್ನು ಮತ್ತು ಜೀವಿಸುವ ಹಕ್ಕನ್ನು ಉಲ್ಲಂಘಿಸುತ್ತದೆ ಎಂದು ಅವರು ತಿಳಿಸಿದ್ದಾರೆ.

ಭಾರತೀಯ ವೈದ್ಯಕೀಯ ಸಂಘ (ಐಎಂಎ) ಸೇರಿದಂತೆ ಹಲವಾರು ತಜ್ಞರು ಕೊರೊನಾ ವ್ಯಾಕ್ಸಿನೇಷನ್ ಅನ್ನು ಹೆಚ್ಚಿಸಲು ಒತ್ತಾಯಿಸಿದ್ದಾರೆ. ಪರಿಸ್ಥಿತಿಯನ್ನು ನಿಭಾಯಿಸಲು ಭಾರತವು ಪ್ರತಿದಿನ ಕನಿಷ್ಠ ಒಂದು ಕೋಟಿ ಡೋಸ್‌ಗಳನ್ನು ನೀಡುವ ಅಗತ್ಯವಿದೆ ಎಂದು ಕೆಲವು ತಜ್ಞರು ಸಲಹೆ ನೀಡಿದ್ದಾರೆ ಎಂದು ಅರ್ಜಿಯಲ್ಲಿ ಉಲ್ಲೇಖಿಸಿದ್ದಾರೆ.

ಪ್ರಸ್ತುತ ಕೇಂದ್ರ ಸರ್ಕಾರವು ಲಸಿಕೆಯನ್ನು 45 ವರ್ಷಕ್ಕಿಂತ ಮೇಲ್ಪಟ್ಟವರಿಗೆ ಮಾತ್ರ ನೀಡುವಂತೆ ನಿಯಮವನ್ನು ರೂಪಿಸಿದೆ.

ಇದನ್ನೂ ಓದಿ: ಬಂಗಾಳ: ಸೀತಾಲ್ಕುಚ್ಚಿ ಗೋಲಿಬಾರ್‌ ವಿಡಿಯೋ ವೈರಲ್, ಕೇಂದ್ರ ಪಡೆಗಳ ಮೇಲೆ ಸಂಶಯದ ಹುತ್ತ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ’..ಚುನಾವಣೆ ಗೆಲ್ಲಲು ಧರ್ಮ ಮುಂದಿಟ್ಟ ಗುರುವಾಯೂರು ಬಿಜೆಪಿ ಅಭ್ಯರ್ಥಿ

ಕೇರಳದ ಗುರುವಾಯೂರು ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ. ಗೋಪಾಲಕೃಷ್ಣನ್ ಚುನಾವಣೆ ಗೆಲ್ಲಲು ಧರ್ಮವನ್ನೇ ಮುಖ್ಯ ಅಸ್ತ್ರವನ್ನಾಗಿ ಬಳಸಿಕೊಂಡಿದ್ದು, ಕಳೆದ 50 ವರ್ಷಗಳಲ್ಲಿ ಕೇವಲ ಮುಸ್ಲಿಮರೇ ಶಾಸಕರಾಗಿದ್ದಾರೆ ಎಂಬುವುದನ್ನು ಪುನರುಚ್ಚರಿಸಿದ್ದಾರೆ. ಚುನಾವಣಾ ಪ್ರಚಾರದ ಭಾಗವಾಗಿ...

ಹೊಸ ಹಿಂದೂ ದೇವಾಲಯಕ್ಕೆ ಭೂಮಿ ಮಂಜೂರು ಮಾಡಿದ ಸಿಂಗಾಪುರ ಆಡಳಿತ

ಸಿಂಗಪುರದಲ್ಲಿ ಹೆಚ್ಚುತ್ತಿರುವ ಹಿಂದೂ ಸಮುದಾಯದ ಅಗತ್ಯಗಳನ್ನು ಪೂರೈಸಲು ಸಿಂಗಾಪುರ ಸರ್ಕಾರವು ನಗರ-ರಾಜ್ಯದ ಯಿಶುನ್ ಅವೆನ್ಯೂ 3 ರಲ್ಲಿ ಹೊಸ ಹಿಂದೂ ದೇವಾಲಯವನ್ನು ನಿರ್ಮಿಸಲು ಭೂಮಿ ಮಂಜೂರು ಮಾಡಿದೆ. ಏಪ್ರಿಲ್ 1 ರ ಬುಧವಾರದ ಮಾಧ್ಯಮ...

ಕೇರಳ ಚುನಾವಣೆಗೆ ಮುನ್ನ ಕಾಂಗ್ರೆಸ್ ನೇತೃತ್ವದ ಯುಡಿಎಫ್ ಗೆ ಬೆಂಬಲ ಘೋಷಿಸಿದ ‘ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ’

ಎಡ ಸರ್ಕಾರ ಕೈಗೊಂಡ ಅಭಿವೃದ್ಧಿ ಉಪಕ್ರಮಗಳು ಆದಿವಾಸಿ, ದಲಿತ ಮತ್ತು ಇತರ ಅಂಚಿನಲ್ಲಿರುವ ಸಮುದಾಯಗಳನ್ನು ಬದಿಗಿಟ್ಟಿವೆ ಎಂದು ಆರೋಪಿಸಿ, ಅಂಬೇಡ್ಕರ್‌ವಾದಿ ಪ್ರಜಾಸತ್ತಾತ್ಮಕ ರಂಗ (ಎಡಿಎಫ್) ಬುಧವಾರ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಪ್ರಜಾಸತ್ತಾತ್ಮಕ ರಂಗ...

ಐಎಎಸ್‌ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಪೂರ್ವಾನುಮತಿ ನೀಡಲು ಹೈಕೋರ್ಟ್ ನಿರ್ದೇಶನ

ಪರಿಸರ ಸ್ನೇಹಿ ಬಟ್ಟೆ ಚೀಲಗಳ ಖರೀದಿಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಿಸಿದಂತೆ, ಐಎಎಸ್ ಅಧಿಕಾರಿ ರೋಹಿಣಿ ಸಿಂಧೂರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಅನುಮತಿಸುವಂತೆ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ ಎಂದು ವರದಿಯಾಗಿದೆ....

ನ್ಯಾಯಾಂಗ ಅಧಿಕಾರಿಗಳನ್ನು ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ: ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಎಸ್‌ಐಆರ್ ಕಾರ್ಯದಲ್ಲಿ ತೊಡಗಿರುವ ನ್ಯಾಯಾಂಗ ಅಧಿಕಾರಿಗಳನ್ನು 'ರಕ್ಷಿಸುವಲ್ಲಿ ಚುನಾವಣಾ ಆಯೋಗ ವಿಫಲವಾಗಿದೆ' ಎಂದು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ದೂಷಿಸಿದ್ದಾರೆ. ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಬುಧವಾರ ಪ್ರತಿಭಟನಾಕಾರರು ಹಲವಾರು...

ಎಎಪಿಯ ರಾಜ್ಯಸಭಾ ಉಪನಾಯಕ ಸ್ಥಾನದಿಂದ ರಾಘವ್ ಚಡ್ಡಾಗೆ ಕೋಕ್, ಅಶೋಕ್ ಮಿತ್ತಲ್ ಗೆ ಅಧಿಕಾರ: ವರದಿ

ಮಹತ್ವದ ಬೆಳವಣಿಗೆಯೊಂದರಲ್ಲಿ, ಆಮ್ ಆದ್ಮಿ ಪಕ್ಷ (ಎಎಪಿ) ರಾಜ್ಯಸಭೆಯಲ್ಲಿ ರಾಘವ್ ಚಡ್ಡಾ ಅವರನ್ನು ಉಪನಾಯಕ ಹುದ್ದೆಯಿಂದ ಬದಲಾಯಿಸಲು ಮುಂದಾಗಿದ್ದು, ಇದು ಪಕ್ಷದೊಳಗಿನ ಆಂತರಿಕ ಬಿರುಕು ಉಂಟಾಗಿರುವ ಲಕ್ಷಣಗಳನ್ನು ಸೂಚಿಸುತ್ತದೆ. ಮೇಲ್ಮನೆಯಲ್ಲಿ ಪಕ್ಷದ ಹೊಸ...

ಜಾರ್ಖಂಡ್| ವಾಮಾಚಾರ ಆಚರಣೆಗೆ ಅಪ್ರಾಪ್ತ ಬಾಲಕಿ ಬಲಿ; ತಾಯಿ ಸೇರಿದಂತೆ ಮೂವರ ಬಂಧನ

ಜಾರ್ಖಂಡ್‌ನ ಹಜಾರಿಬಾಗ್ ಬಳಿಕ ಕುಸುಂಭ ಗ್ರಾಮದಲ್ಲಿ ಬಲಿದಾನದ ಆಚರಣೆಯಲ್ಲಿ ಕತ್ತು ಹಿಸುಕಿ ಕೊಂದ ಹದಿಹರೆಯದ ಹುಡುಗಿಯ 35 ವರ್ಷದ ತಾಯಿಯನ್ನು ಪೊಲೀಸರು ಬುಧವಾರ ಬಂಧಿಸಿದ್ದಾರೆ. ಜೊತೆಗೆ, ಮಾಂತ್ರಿಕ ಮತ್ತು ಓರ್ವ ವ್ಯಕ್ತಿಯನ್ನು ಬಂಧಿಸಿರುವುದಾಗಿ...

ಪ. ಬಂಗಾಳ | ಎಸ್‌ಐಆರ್ ಕರ್ತವ್ಯದಲ್ಲಿದ್ದ ನ್ಯಾಯಾಧೀಶರನ್ನು ಒತ್ತೆಯಾಳಾಗಿಟ್ಟುಕೊಂಡ ಆರೋಪ : ತೀವ್ರ ಕಳವಳ ವ್ಯಕ್ತಪಡಿಸಿದ ಸುಪ್ರೀಂ ಕೋರ್ಟ್, ಕೇಂದ್ರ ಪಡೆಗಳ ನಿಯೋಜನೆಗೆ ನಿರ್ದೇಶನ

ನಿನ್ನೆ (ಏ.1) ಮಧ್ಯಾಹ್ನದಿಂದ ಮಧ್ಯರಾತ್ರಿಯವರೆಗೆ ಪಶ್ಚಿಮ ಬಂಗಾಳದಲ್ಲಿ ನಡೆದ ಪ್ರತಿಭಟನೆಯ ವೇಳೆ, ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಕಾರ್ಯದಲ್ಲಿ ತೊಡಗಿದ್ದ ನ್ಯಾಯಾಂಗ ಅಧಿಕಾರಿಗಳನ್ನು ಪ್ರತಿಭಟನಾಕಾರರು ಒತ್ತೆಯಾಳಾಗಿ ಇರಿಸಿಕೊಂಡಿದ್ದರು ಎಂದು ಆರೋಪಿಸಲಾಗಿದೆ....

ಉತ್ತರ ಪ್ರದೇಶ| ಮುಸ್ಲಿಂ ಯುವಕನನ್ನು ಥಳಿಸಿ ದರೋಡೆ ಮಾಡಿದ ಗುಂಪು; ಹಿಂದೂ ಶ್ಲೋಕ ಪಠಿಸುವಂತೆ ಒತ್ತಾಯ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯಲ್ಲಿ ಹಿಂದುತ್ವವಾದಿ ಗುಂಪೊಂದು ಮುಸ್ಲಿಂ ಯುವಕನನ್ನು ನಿರ್ದಯವಾಗಿ ಥಳಿಸಿ, ಅವಮಾನಿಸಿ, ಹಿಂದುತ್ವ ಶ್ಲೋಕಗಳನ್ನು ಪಠಿಸುವಂತೆ ಒತ್ತಾಯಿಸಿದೆ ಎಂದು ಪೊಲೀಸರನ್ನು ಉಲ್ಲೇಖಿಸಿ 'ಕ್ಲಾರಿಯನ್ ಇಂಡಿಯಾ' ವರದಿ ಮಾಡಿದೆ. ಮಾರ್ಚ್ 28...

‘ಇರಾನ್‌ಗೆ ಅಮೆರಿಕನ್ನರ ವಿರುದ್ಧ ಯಾವುದೇ ದ್ವೇಷವಿಲ್ಲ’: ಅಮೆರಿಕದ ಸಾರ್ವಜನಿಕರಿಗೆ ‘ಮುಕ್ತ ಪತ್ರ’ ಬರೆದ ಇರಾನ್ ಅಧ್ಯಕ್ಷ ಪೆಜೆಶ್ಕಿಯಾನ್

ಪಶ್ಚಿಮ ಏಷ್ಯಾ ಸಂಘರ್ಷ ತೀವ್ರವಾಗುತ್ತಿರುವಾಗಲೇ ಅಮೆರಿಕ ಸಾರ್ವಜನಿಕರನ್ನು ಉದ್ದೇಶಿಸಿ ದೀರ್ಘ ಪತ್ರ ಬರೆದಿರುವ ಇರಾನ್ ಅಧ್ಯಕ್ಷ ಮಸೌದ್ ಪಜೆಶ್ಕಿಯಾನ್, ಅಮೆರಿಕನ್ನರ ವಿರುದ್ಧ ಇರಾನ್ ಯಾವುದೇ ದ್ವೇಷವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಆದರೆ  ಜಾಗತಿಕ ನಿರೂಪಣೆಗಳಲ್ಲಿ...