Homeಕರ್ನಾಟಕಪೆಟ್ರೋಲ್ 100 ನಾಟೌಟ್: ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ 5 ದಿನ ಪ್ರತಿಭಟನೆ

ಪೆಟ್ರೋಲ್ 100 ನಾಟೌಟ್: ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ 5 ದಿನ ಪ್ರತಿಭಟನೆ

ಜೂನ್ 11 ರಿಂದ 15ರ ವರೆಗೆ 5 ದಿನ ಎಲ್ಲಾ ಜಿಲ್ಲಾ, ತಾಲೂಕು, ಪಂಚಾಯಿತಿ ಹಾಗೂ ಹೋಬಳಿ ಕೇಂದ್ರಗಳಲ್ಲಿ 5,000 ಪೆಟ್ರೋಲ್ ಬಂಕ್‌ಗಳ ಮುಂದೆ ಪ್ರತಿಭಟನೆ ನಡೆಯಲಿದೆ ಎಂದು ಕಾಂಗ್ರೆಸ್ ತಿಳಿಸಿದೆ

- Advertisement -
- Advertisement -

ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆಯನ್ನು ನಿತಂತರವಾಗಿ ಹೆಚ್ಚಿಸುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ರಾಜ್ಯಾದ್ಯಂತ ಬೃಹತ್ ಆಂದೋಲನ ನಡೆಸುತ್ತಿದೆ. ಬಿಜೆಪಿ ಆಡಳಿತದಲ್ಲಿ ಪೆಟ್ರೋಲ್ ಬೆಲೆ 100 ರೂಪಾಯಿಗಳ ಗಡಿ ದಾಟಿರುವುದನ್ನು ವಿರೋಧಿಸಿ ’ಪೆಟ್ರೋಲ್ 100 ನಾಟೌಟ್’ ಎಂಬ ಆಂದೋಲನ ನಡೆಸುತ್ತಿದೆ.

ಜೂನ್ 11 ರಿಂದ 15ರ ವರೆಗೆ 5 ದಿನ ಎಲ್ಲಾ ಜಿಲ್ಲಾ, ತಾಲೂಕು, ಪಂಚಾಯಿತಿ ಹಾಗೂ ಹೋಬಳಿ ಕೇಂದ್ರಗಳಲ್ಲಿ 5,000 ಪೆಟ್ರೋಲ್ ಬಂಕ್‌ಗಳ ಮುಂದೆ ಪ್ರತಿಭಟನೆ ನಡೆಯಲಿದೆ ಎಂದು ಕಾಂಗ್ರೆಸ್ ತಿಳಿಸಿದೆ. ವಿಪಕ್ಷ ನಾಯಕ್ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಆಂದೋಲನಕ್ಕೆ ಚಾಲನೆ ನೀಡಲಾಗಿದೆ.

ಶುಕ್ರವಾರ ಬೆಂಗಳೂರಿನ ಶಿವಾನಂದ ವೃತ್ತದ ಬಳಿ ರೆಡ್ಡಿ ಪೆಟ್ರೋಲ್ ಬಂಕ್ ಸಮೀಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ, ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ, ದಿನೇಶ್ ಗುಂಡೂರಾವ್ ಸೇರಿದಂತೆ ಪ್ರದೇಶ ಕಾಂಗ್ರೆಸ್ ಸದಸ್ಯರು ’100 ನಾಟೌಟ್’, ’ಪೆಟ್ರೋಲ್ ಪಿಕ್‌ಪಾಕೆಟ್’ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ಎಚ್ ಎಸ್ ದೊರೆಸ್ವಾಮಿ ಶ್ರದ್ಧಾಂಜಲಿ; ನಮ್ಮ ಕಾಲದ ಪ್ರಾಣವಾಯು: ಪ್ರೊ. ಎಂ ಎಸ್ ಆಶಾದೇವಿ

’ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ಹೋರಾಟ ಮಾಡಬೇಕಿದೆ. ಹಿಂದೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಸಾಕಷ್ಟು ಹೋರಾಟ ನಡೆಸಿದೆ. ಇದೇ ಯಡಿಯೂರಪ್ಪ, ಶೋಭ ಕರಂದ್ಲಾಜೆ ಮತ್ತು ಬಿಜೆಪಿ ಸಚಿವರು ಯುಪಿಎ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಒಂದೆರಡು ರೂಪಾಯಿ ಹೆಚ್ಚಾದಾಗ ಗಲಾಟೆ  ಮಾಡಿದ್ದರು. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಈ ವರ್ಷ ಜನವರಿಯಿಂದ ಇಲ್ಲಿಯವರೆಗೂ 42 ಕ್ಕೂ ಹೆಚ್ಚು ಬಾರಿ ಬೆಲೆ ಏರಿಕೆ ಮಾಡಿದೆ’ ಎಂದು ಸರ್ಕಾರದ ವಿರುದ್ಧ ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ.

’ಚುನಾವಣೆ ಇದ್ದ ಏಪ್ರಿಲ್ ತಿಂಗಳಲ್ಲಿ ಮಾತ್ರ ದರ ಹೆಚ್ಚಾಗಲಿಲ್ಲ. ಅದನ್ನು ಬಿಟ್ಟರೆ ಉಳಿದ ಐದು ತಿಂಗಳೂ ಬೆಲೆ ಹೆಚ್ಚಳ ಮಾಡಿದೆ. ಇಂಧನ ಬೆಲೆ ಹೆಚ್ಚಿಸಿ, 20.60 ಲಕ್ಷ ಕೋಟಿ ತೆರಿಗೆ ಸಂಗ್ರಹಿಸಿದೆ. ಸರ್ಕಾರ ತನ್ನ ಆದಾಯ ಹೆಚ್ಚಿಸಿಕೊಳ್ಳಲು ಎಲ್ಲ ಪದಾರ್ಥಗಳ ಬೆಲೆ ಹೆಚ್ಚಿಸುತ್ತಾ, ಜನರ ಜೇಬಿಗೆ ಕನ್ನ ಹಾಕುತ್ತಿದ್ದು, ಇದೊಂದು ಪಿಕ್ ಪಾಕೆಟ್ ಸರ್ಕಾರ’ ಎಂದು ಶಿವಕುಮಾರ್‌ ಆರೋಪಿಸಿದ್ದಾರೆ.

’ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆ ಇಳಿಸಿ ತೈಲಬೆಲೆಗೆ ಅನುಗುಣವಾಗಿ ದರ ಇಳಿಸಬೇಕು. ಸಾವಿನಲ್ಲಿ, ಔಷಧಿಯಲ್ಲಿ, ಆಸ್ಪತ್ರೆ ಹಾಸಿಗೆಯಲ್ಲಿ ಹಣ ದೋಚಿದ್ದಲ್ಲದೇ, ಈಗ ಪೆಟ್ರೋಲ್ ಮತ್ತು ಡೀಸೆಲ್ ಮೂಲಕ ಜನರನ್ನು ಪಿಕ್ ಪಾಕೆಟ್ ಮಾಡುತ್ತಿದ್ದಾರೆ. ಜನರಿಗೆ ಹಣ ವಾಪಸ್ ನೀಡಬೇಕು, ಜನರಿಂದ ದೋಚುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

’ರಾಜ್ಯದಲ್ಲಿ ಒಟ್ಟು 5 ಸಾವಿರ ಕಡೆಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ. ಈ ಹೋರಾಟ ಐದು ದಿನಗಳ ಕಾಲ ನಡೆಯಲಿದ್ದು, ಇಂದು (ಶುಕ್ರವಾರ) ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಶನಿವಾರ ತಾಲೂಕು ಕೇಂದ್ರ, ಭಾನುವಾರ ಜಿಲ್ಲಾ ಪಂಚಾಯಿತಿ ಮತ್ತು ಹೋಬಳಿ ಕೇಂದ್ರಗಳಲ್ಲಿ 14 ರಂದು, ಗ್ರಾಮಪಂಚಾಯಿತಿ ವ್ಯಾಪ್ತಿಯ ಪೆಟ್ರೋಲ್ ಬಂಕ್ ಬಳಿ ಹಾಗೂ 15 ರಂದು ಇತರ ಕಡೆಗಳಲ್ಲಿ ಪ್ರತಿಭಟನೆ ನಡೆಸಲಿದ್ದೇವೆ’ ಎಂದು ಮಾಹಿತಿ ನೀಡಿದ್ದಾರೆ.

’ಸರ್ಕಾರ ಕೋವಿಡ್ ಇದ್ದರೂ ಚುನಾವಣೆ ನಡೆಸಿದೆ. ಆದರೂ ಅವರ ಮೇಲೆ ಪ್ರಕರಣ ದಾಖಲಾಗಿಲ್ಲ. ಆದರೆ ಅಂತರ ಕಾಯ್ದುಕೊಂಡು ಪ್ರತಿಭಟನೆ ನಡೆಸುತ್ತಿರುವ ನಮ್ಮ ಮೇಲೆ ಪೊಲೀಸ್ ಅಧಿಕಾರಿಗಳು ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ನಿಮ್ಮ ಈ ಬೆದರಿಕೆಗೆ ಕಾಂಗ್ರೆಸಿಗರು ಹೆದರುವುದಿಲ್ಲ. ಈ ದೇಶದ ಸ್ವಾತಂತ್ರ್ಯಕ್ಕೆ ಪ್ರಾಣ ಕೊಟ್ಟವರು ನಾವು. ನಮ್ಮ ಹೋರಾಟ ಇದೇ ರೀತಿ ಮುಂದುವರಿಯಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ದೇಶಾದ್ಯಂತ ಇಂಧನ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಯುತ್ತಿದ್ದರೂ, ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಾಗಿರುವ ಕಾರಣ ಇಂಧನ ಬೆಲೆ ಏರಿಕೆಯಾಗುತ್ತಿದೆ ಎಂದು ಬಿಜೆಪಿ ಸಮರ್ಥನೆ ಮಾಡಿಕೊಳ್ಳುತ್ತಿದೆ.


ಇದನ್ನೂ ಓದಿ: ರಾಜಸ್ಥಾನ: ಅಂಬೇಡ್ಕರ್‌ ಪೋಸ್ಟರ್‌ ತೆರವಿಗೆ ಆಕ್ಷೇಪಿಸಿದ ದಲಿತ ಯುವಕನ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...

‘ಕರೂರು ದುರಂತದಲ್ಲಿ ಪಿತೂರಿ ಇದೆ’ ಈ ಘಟನೆಯಲ್ಲಿ ನನಗೂ ನ್ಯಾಯ ಬೇಕು: ಟಿವಿಕೆ ಮುಖ್ಯಸ್ಥ ನಟ, ರಾಜಕಾರಣಿ ವಿಜಯ್ ಆರೋಪ  

ಕರೂರಿನಲ್ಲಿ ನಡೆದ ದುರಂತ ಕಾಲ್ತುಳಿತ ಮತ್ತು ಅವರ ಕೊನೆಯ ಚಿತ್ರ ಜನನಾಯಗನ್ ಬಿ ಡುಗಡೆಯ ಹಿಂದೆ ಜಂಟಿ ಕುತಂತ್ರ ಮತ್ತು ಪಿತೂರಿ ಇದೆ ಎಂದು ಟಿವಿಕೆ ಮುಖ್ಯಸ್ಥ ವಿಜಯ್ ಗುರುವಾರ ಆರೋಪಿಸಿದ್ದಾರೆ ಮತ್ತು...