Homeಕರ್ನಾಟಕಪೆಟ್ರೋಲ್ 100 ನಾಟೌಟ್: ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ 5 ದಿನ ಪ್ರತಿಭಟನೆ

ಪೆಟ್ರೋಲ್ 100 ನಾಟೌಟ್: ಇಂಧನ ಬೆಲೆ ಏರಿಕೆ ಖಂಡಿಸಿ ಕಾಂಗ್ರೆಸ್‌ನಿಂದ 5 ದಿನ ಪ್ರತಿಭಟನೆ

ಜೂನ್ 11 ರಿಂದ 15ರ ವರೆಗೆ 5 ದಿನ ಎಲ್ಲಾ ಜಿಲ್ಲಾ, ತಾಲೂಕು, ಪಂಚಾಯಿತಿ ಹಾಗೂ ಹೋಬಳಿ ಕೇಂದ್ರಗಳಲ್ಲಿ 5,000 ಪೆಟ್ರೋಲ್ ಬಂಕ್‌ಗಳ ಮುಂದೆ ಪ್ರತಿಭಟನೆ ನಡೆಯಲಿದೆ ಎಂದು ಕಾಂಗ್ರೆಸ್ ತಿಳಿಸಿದೆ

- Advertisement -
- Advertisement -

ಬಿಜೆಪಿ ನೇತೃತ್ವದ ಒಕ್ಕೂಟ ಸರ್ಕಾರ ಪೆಟ್ರೋಲ್, ಡೀಸೆಲ್ ಬೆಲೆಯನ್ನು ನಿತಂತರವಾಗಿ ಹೆಚ್ಚಿಸುತ್ತಿರುವುದನ್ನು ಖಂಡಿಸಿ ಕಾಂಗ್ರೆಸ್ ರಾಜ್ಯಾದ್ಯಂತ ಬೃಹತ್ ಆಂದೋಲನ ನಡೆಸುತ್ತಿದೆ. ಬಿಜೆಪಿ ಆಡಳಿತದಲ್ಲಿ ಪೆಟ್ರೋಲ್ ಬೆಲೆ 100 ರೂಪಾಯಿಗಳ ಗಡಿ ದಾಟಿರುವುದನ್ನು ವಿರೋಧಿಸಿ ’ಪೆಟ್ರೋಲ್ 100 ನಾಟೌಟ್’ ಎಂಬ ಆಂದೋಲನ ನಡೆಸುತ್ತಿದೆ.

ಜೂನ್ 11 ರಿಂದ 15ರ ವರೆಗೆ 5 ದಿನ ಎಲ್ಲಾ ಜಿಲ್ಲಾ, ತಾಲೂಕು, ಪಂಚಾಯಿತಿ ಹಾಗೂ ಹೋಬಳಿ ಕೇಂದ್ರಗಳಲ್ಲಿ 5,000 ಪೆಟ್ರೋಲ್ ಬಂಕ್‌ಗಳ ಮುಂದೆ ಪ್ರತಿಭಟನೆ ನಡೆಯಲಿದೆ ಎಂದು ಕಾಂಗ್ರೆಸ್ ತಿಳಿಸಿದೆ. ವಿಪಕ್ಷ ನಾಯಕ್ ಸಿದ್ದರಾಮಯ್ಯ ಮತ್ತು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ನೇತೃತ್ವದಲ್ಲಿ ಆಂದೋಲನಕ್ಕೆ ಚಾಲನೆ ನೀಡಲಾಗಿದೆ.

ಶುಕ್ರವಾರ ಬೆಂಗಳೂರಿನ ಶಿವಾನಂದ ವೃತ್ತದ ಬಳಿ ರೆಡ್ಡಿ ಪೆಟ್ರೋಲ್ ಬಂಕ್ ಸಮೀಪ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಹಾಗೂ ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ, ಮಾಜಿ ಸಚಿವರಾದ ಆರ್.ವಿ. ದೇಶಪಾಂಡೆ, ದಿನೇಶ್ ಗುಂಡೂರಾವ್ ಸೇರಿದಂತೆ ಪ್ರದೇಶ ಕಾಂಗ್ರೆಸ್ ಸದಸ್ಯರು ’100 ನಾಟೌಟ್’, ’ಪೆಟ್ರೋಲ್ ಪಿಕ್‌ಪಾಕೆಟ್’ ಪ್ರತಿಭಟನೆ ನಡೆಸಿದರು.

ಇದನ್ನೂ ಓದಿ: ಎಚ್ ಎಸ್ ದೊರೆಸ್ವಾಮಿ ಶ್ರದ್ಧಾಂಜಲಿ; ನಮ್ಮ ಕಾಲದ ಪ್ರಾಣವಾಯು: ಪ್ರೊ. ಎಂ ಎಸ್ ಆಶಾದೇವಿ

’ಕೇಂದ್ರ ಸರ್ಕಾರದ ಜನ ವಿರೋಧಿ ನೀತಿ ವಿರುದ್ಧ ಹೋರಾಟ ಮಾಡಬೇಕಿದೆ. ಹಿಂದೆ ಕಾಂಗ್ರೆಸ್ ಸರ್ಕಾರದ ವಿರುದ್ಧ ಬಿಜೆಪಿ ಸಾಕಷ್ಟು ಹೋರಾಟ ನಡೆಸಿದೆ. ಇದೇ ಯಡಿಯೂರಪ್ಪ, ಶೋಭ ಕರಂದ್ಲಾಜೆ ಮತ್ತು ಬಿಜೆಪಿ ಸಚಿವರು ಯುಪಿಎ ಸರ್ಕಾರದ ಅವಧಿಯಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಒಂದೆರಡು ರೂಪಾಯಿ ಹೆಚ್ಚಾದಾಗ ಗಲಾಟೆ  ಮಾಡಿದ್ದರು. ಆದರೆ ಕೇಂದ್ರದ ಬಿಜೆಪಿ ಸರ್ಕಾರ ಈ ವರ್ಷ ಜನವರಿಯಿಂದ ಇಲ್ಲಿಯವರೆಗೂ 42 ಕ್ಕೂ ಹೆಚ್ಚು ಬಾರಿ ಬೆಲೆ ಏರಿಕೆ ಮಾಡಿದೆ’ ಎಂದು ಸರ್ಕಾರದ ವಿರುದ್ಧ ಡಿ.ಕೆ.ಶಿವಕುಮಾರ್‌ ಕಿಡಿಕಾರಿದ್ದಾರೆ.

’ಚುನಾವಣೆ ಇದ್ದ ಏಪ್ರಿಲ್ ತಿಂಗಳಲ್ಲಿ ಮಾತ್ರ ದರ ಹೆಚ್ಚಾಗಲಿಲ್ಲ. ಅದನ್ನು ಬಿಟ್ಟರೆ ಉಳಿದ ಐದು ತಿಂಗಳೂ ಬೆಲೆ ಹೆಚ್ಚಳ ಮಾಡಿದೆ. ಇಂಧನ ಬೆಲೆ ಹೆಚ್ಚಿಸಿ, 20.60 ಲಕ್ಷ ಕೋಟಿ ತೆರಿಗೆ ಸಂಗ್ರಹಿಸಿದೆ. ಸರ್ಕಾರ ತನ್ನ ಆದಾಯ ಹೆಚ್ಚಿಸಿಕೊಳ್ಳಲು ಎಲ್ಲ ಪದಾರ್ಥಗಳ ಬೆಲೆ ಹೆಚ್ಚಿಸುತ್ತಾ, ಜನರ ಜೇಬಿಗೆ ಕನ್ನ ಹಾಕುತ್ತಿದ್ದು, ಇದೊಂದು ಪಿಕ್ ಪಾಕೆಟ್ ಸರ್ಕಾರ’ ಎಂದು ಶಿವಕುಮಾರ್‌ ಆರೋಪಿಸಿದ್ದಾರೆ.

’ಕೇಂದ್ರ ಸರ್ಕಾರ ಪೆಟ್ರೋಲ್ ಹಾಗೂ ಡೀಸೆಲ್ ಮೇಲಿನ ತೆರಿಗೆ ಇಳಿಸಿ ತೈಲಬೆಲೆಗೆ ಅನುಗುಣವಾಗಿ ದರ ಇಳಿಸಬೇಕು. ಸಾವಿನಲ್ಲಿ, ಔಷಧಿಯಲ್ಲಿ, ಆಸ್ಪತ್ರೆ ಹಾಸಿಗೆಯಲ್ಲಿ ಹಣ ದೋಚಿದ್ದಲ್ಲದೇ, ಈಗ ಪೆಟ್ರೋಲ್ ಮತ್ತು ಡೀಸೆಲ್ ಮೂಲಕ ಜನರನ್ನು ಪಿಕ್ ಪಾಕೆಟ್ ಮಾಡುತ್ತಿದ್ದಾರೆ. ಜನರಿಗೆ ಹಣ ವಾಪಸ್ ನೀಡಬೇಕು, ಜನರಿಂದ ದೋಚುವುದನ್ನು ನಿಲ್ಲಿಸಬೇಕು ಎಂದು ಆಗ್ರಹಿಸಿದ್ದಾರೆ.

’ರಾಜ್ಯದಲ್ಲಿ ಒಟ್ಟು 5 ಸಾವಿರ ಕಡೆಗಳಲ್ಲಿ ಪ್ರತಿಭಟನೆ ನಡೆಸುತ್ತಿದ್ದೇವೆ. ಈ ಹೋರಾಟ ಐದು ದಿನಗಳ ಕಾಲ ನಡೆಯಲಿದ್ದು, ಇಂದು (ಶುಕ್ರವಾರ) ಎಲ್ಲ ಜಿಲ್ಲಾ ಕೇಂದ್ರಗಳಲ್ಲಿ ಪ್ರತಿಭಟನೆ ನಡೆಸಲಾಗುತ್ತಿದೆ. ಶನಿವಾರ ತಾಲೂಕು ಕೇಂದ್ರ, ಭಾನುವಾರ ಜಿಲ್ಲಾ ಪಂಚಾಯಿತಿ ಮತ್ತು ಹೋಬಳಿ ಕೇಂದ್ರಗಳಲ್ಲಿ 14 ರಂದು, ಗ್ರಾಮಪಂಚಾಯಿತಿ ವ್ಯಾಪ್ತಿಯ ಪೆಟ್ರೋಲ್ ಬಂಕ್ ಬಳಿ ಹಾಗೂ 15 ರಂದು ಇತರ ಕಡೆಗಳಲ್ಲಿ ಪ್ರತಿಭಟನೆ ನಡೆಸಲಿದ್ದೇವೆ’ ಎಂದು ಮಾಹಿತಿ ನೀಡಿದ್ದಾರೆ.

’ಸರ್ಕಾರ ಕೋವಿಡ್ ಇದ್ದರೂ ಚುನಾವಣೆ ನಡೆಸಿದೆ. ಆದರೂ ಅವರ ಮೇಲೆ ಪ್ರಕರಣ ದಾಖಲಾಗಿಲ್ಲ. ಆದರೆ ಅಂತರ ಕಾಯ್ದುಕೊಂಡು ಪ್ರತಿಭಟನೆ ನಡೆಸುತ್ತಿರುವ ನಮ್ಮ ಮೇಲೆ ಪೊಲೀಸ್ ಅಧಿಕಾರಿಗಳು ಪ್ರಕರಣ ದಾಖಲಿಸುವುದಾಗಿ ಬೆದರಿಕೆ ಹಾಕುತ್ತಿದ್ದಾರೆ. ನಿಮ್ಮ ಈ ಬೆದರಿಕೆಗೆ ಕಾಂಗ್ರೆಸಿಗರು ಹೆದರುವುದಿಲ್ಲ. ಈ ದೇಶದ ಸ್ವಾತಂತ್ರ್ಯಕ್ಕೆ ಪ್ರಾಣ ಕೊಟ್ಟವರು ನಾವು. ನಮ್ಮ ಹೋರಾಟ ಇದೇ ರೀತಿ ಮುಂದುವರಿಯಲಿದೆ’ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್‌ ಹೇಳಿದ್ದಾರೆ.

ದೇಶಾದ್ಯಂತ ಇಂಧನ ಬೆಲೆ ಏರಿಕೆ ಖಂಡಿಸಿ ಪ್ರತಿಭಟನೆ ನಡೆಯುತ್ತಿದ್ದರೂ, ಅಂತರರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲದ ಬೆಲೆ ಹೆಚ್ಚಾಗಿರುವ ಕಾರಣ ಇಂಧನ ಬೆಲೆ ಏರಿಕೆಯಾಗುತ್ತಿದೆ ಎಂದು ಬಿಜೆಪಿ ಸಮರ್ಥನೆ ಮಾಡಿಕೊಳ್ಳುತ್ತಿದೆ.


ಇದನ್ನೂ ಓದಿ: ರಾಜಸ್ಥಾನ: ಅಂಬೇಡ್ಕರ್‌ ಪೋಸ್ಟರ್‌ ತೆರವಿಗೆ ಆಕ್ಷೇಪಿಸಿದ ದಲಿತ ಯುವಕನ ಹತ್ಯೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...

ಬೀದರ್‌ ನಿಂದ ಶುರವಾದ SIR ವಿರೋಧಿ ಜನಜಾಗೃತಿ ಜಾಥಾ

SIR ವಿರೋಧಿ ಕರ್ನಾಟಕ ಹಾಗೂ ಎದ್ದೇಳು ಕರ್ನಾಟಕವು ಕರ್ನಾಟಕದಲ್ಲಿ SIR ಜಾರಿಯನ್ನು ವಿರೋಧಿಸಿ ರಾಜ್ಯದ 5 ಸ್ಥಳಗಳಿಂದ ಜನಜಾಗೃತಿ ಜಾಥಾ ಆಯೋಜಿಸಿದೆ. ಇಂದು ಬೀದರ್‌ ನ ಅಂಬೇಡ್ಕರ್‌ ಸರ್ಕಲ್‌ ನಿಂದ ಆರಂಭವಾದ ಜಾಥಾವು...

ಒಬ್ಬರೇ ಒಬ್ಬ ಅರ್ಹ ಮತದಾರರ ಹೊರಗಿಡುವುದನ್ನು ಒಪ್ಪುವುದಿಲ್ಲ : ಯೂಸುಫ್ ಕನ್ನಿ

ಮತದಾರರ ಪಟ್ಟಿಯ ಪರಿಷ್ಕರಣೆ ಮಾಡಲಿ, ಆದರೆ, ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಬೇಡವೇ ಬೇಡ. ಎಸ್‌ಐಆರ್‌ ಮೂಲಕ ಒಬ್ಬರೇ ಒಬ್ಬರು ಅರ್ಹ ಮತದಾರರನ್ನೂ ಪಟ್ಟಿಯಿಂದ ಹೊರಗಿಡುವುದನ್ನು ನಾವು ಒಪ್ಪುವುದಿಲ್ಲ ಎಂದು ಜಮಾಅತೆ ಇಸ್ಲಾಮಿ...

ಪ್ರಜಾಪ್ರಭುತ್ವದ ರಕ್ಷಣೆಗೆ ಎಸ್‌ಐಆರ್ (SIR) ವಿರುದ್ಧ ಜನಜಾಗೃತಿ ಜಾಥಾಕ್ಕೆ ಶಿವಮೊಗ್ಗದಲ್ಲಿ ಚಾಲನೆ

ಕೇಂದ್ರ ಸರ್ಕಾರದ ಎಸ್‌ಐಆರ್ (SIR) ನೀತಿಯ ವಿರುದ್ಧ ರಾಜ್ಯಾದ್ಯಂತ ಜನವಿರೋಧಿ ಅಲೆ ಎದ್ದಿದೆ. "ಸಂತ-ಶರಣರ ಈ ನಾಡಿನಲ್ಲಿ ಯಾವುದೇ ರೀತಿಯ ದುಷ್ಟ ಆಟ, ಮೋಸ, ವಂಚನೆಗೆ ಅವಕಾಶವಿಲ್ಲ" ಎಂಬ ದೃಢ ಸಂಕಲ್ಪದೊಂದಿಗೆ 'ಎಸ್‌ಐಆರ್...

ಜೂನ್ 13 ರಿಂದ ಕರ್ನಾಟಕದಲ್ಲಿ ‘SIR ವಿರೋಧಿ’ ಜನಜಾಗೃತಿ ಜಾಥ

ರಾಜ್ಯ ಚುನಾವಣಾ ಆಯೋಗವು ಎಸ್‌ಐಆರ್ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ನಾಗರಿಕರ ಆಕ್ಷೇಪಣೆಗಳಿಗೆ ಸ್ಪಂದಿಸದಿರುವ ನಿರ್ಲಕ್ಷ್ಯ ಧೋರಣೆಯನ್ನು ಖಂಡಿಸಿ ‘ಎಸ್‌ಐಆರ್ ವಿರೋಧಿ ಒಕ್ಕೂಟ’ ಹಾಗೂ ‘ಎದ್ದೇಳು ಕರ್ನಾಟಕ’ ಸಂಘಟನೆಯ ವತಿಯಿಂದ ಜೂನ್ 13 ರಿಂದ...

‘ಕಾನೂನು ಪ್ರಕ್ರಿಯೆಯದುರುಪಯೋಗ’: ನ್ಯೂಸ್‌ಕ್ಲಿಕ್ ವಿರುದ್ಧದ ದೆಹಲಿ ಪೊಲೀಸ್, ಇಡಿ ಪ್ರಕರಣಗಳನ್ನು ರದ್ದುಗೊಳಿಸಿದ ಹೈಕೋರ್ಟ್

ವಿದೇಶಿ ನೇರ ಹೂಡಿಕೆ (ಎಫ್‌ಡಿಐ) ನಿಯಮಗಳ ಉಲ್ಲಂಘನೆ ಆರೋಪಕ್ಕೆ ಸಂಬಂಧಿಸಿದಂತೆ ನ್ಯೂಸ್‌ಕ್ಲಿಕ್ ಸುದ್ದಿ ಸಂಸ್ಥೆ ಮತ್ತು ಅದರ ಮುಖ್ಯ ಸಂಪಾದಕ ಪ್ರಬೀರ್ ಪುರಕಾಯಸ್ಥ ವಿರುದ್ಧ ದೆಹಲಿ ಪೊಲೀಸರು ಹಾಗೂ ಜಾರಿ ನಿರ್ದೇಶನಾಲಯ (ಇಡಿ) ದಾಖಲಿಸಿದ್ದ ಪ್ರಕರಣಗಳನ್ನು ದೆಹಲಿ...

ಕಾಂಗ್ರೆಸ್ ಜೊತೆ ವಿಲೀನ? ಅದೆಲ್ಲ ಬರೀ ಸುಳ್ಳು ಎಂದ ಟಿಎಂಸಿ

ಕಾಂಗ್ರೆಸ್ ಪಕ್ಷದೊಂದಿಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ವಿಲೀನವಾಗಬಹುದು ಎಂಬ ವರದಿಗಳನ್ನು ಟಿಎಂಸಿ ಉನ್ನತ ಮೂಲಗಳು ಬುಧವಾರ (ಇಂದು) ಸಂಪೂರ್ಣವಾಗಿ ತಳ್ಳಿಹಾಕಿವೆ. "ನಮ್ಮ ಪಕ್ಷಕ್ಕೆ ಈ ಬಗ್ಗೆ ಯಾವುದೇ ಮಾಹಿತಿ ಇಲ್ಲ ಮತ್ತು ವಿಲೀನಕ್ಕೆ...

ಮೀನಾಕ್ಷಿ ನಟರಾಜನ್ ನಾಮಪತ್ರ ತಿರಸ್ಕಾರ : ಬಿಜೆಪಿಯ ಸೀಟ್ ಚೋರಿ?

ರಾಜ್ಯಸಭಾ ಚುನಾವಣೆಗೆ ಮಧ್ಯಪ್ರದೇಶದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿದ್ದ ಮೀನಾಕ್ಷಿ ನಟರಾಜನ್ ಅವರ ನಾಮಪತ್ರವನ್ನು ಚುನಾವಣಾ ಆಯೋಗ ತಿರಸ್ಕರಿಸಿರುವುದು ದೇಶದಲ್ಲಿ ದೊಡ್ಡ ರಾಜಕೀಯ ಜಟಾಪಟಿಗೆ ಕಾರಣವಾಗಿದೆ. ಕಾಂಗ್ರೆಸ್ ಈ ವಿಚಾರವನ್ನು ಬಹಳ ಗಂಭೀರವಾಗಿ ಪರಿಗಣಿಸಿ ಬುಧವಾರ (ಜೂ. 10)...

ಒಳಮೀಸಲಾತಿ ನಾಡು ಕಂಡ ಸುದೀರ್ಘ ಹೋರಾಟದ ಕಥೆ

ಇದು ಬೆವರು ನಿಟ್ಟುಸಿರುಗಳ ಚಳವಳಿ. ತಮ್ಮ ಅನ್ನದ ಬಟ್ಟಲಿಗಾಗಿ ದಶಕಗಳ ಕಾಲ ಹಸಿವು, ಬಾಯಾರಿಕೆ, ನಿದ್ರೆ ಎಲ್ಲವನ್ನೂ ಬಿಟ್ಟು ನಡೆಸಿದ ಅಭೂತಪೂರ್ವ ಚಳವಳಿ. ರಾಜಕೀಯ ಚಕ್ರವ್ಯೂಹಗಳನ್ನು ಬೇಧಿಸಿ, ಸಾಂವಿಧಾನಿಕ ಹಕ್ಕನ್ನು ತಮ್ಮದಾಗಿಸಿಕೊಂಡ ಚಳವಳಿ....