Homeಕರ್ನಾಟಕಪೆಟ್ರೋಲ್‌: ಸೈಕಲ್‌ನಲ್ಲಿ ಓಡಾಡಿದರೆ ವ್ಯಾಯಾಮ ಆಗುತ್ತದೆ ಎಂದ ದಾವಣಗೆರೆ ಬಿಜೆಪಿ ಸಂಸದ

ಪೆಟ್ರೋಲ್‌: ಸೈಕಲ್‌ನಲ್ಲಿ ಓಡಾಡಿದರೆ ವ್ಯಾಯಾಮ ಆಗುತ್ತದೆ ಎಂದ ದಾವಣಗೆರೆ ಬಿಜೆಪಿ ಸಂಸದ

ಮೂರ್ಖರೆಲ್ಲ ಸೇರಿ ಬಿಜೆಪಿ ಪಕ್ಷವಾಗಿದೆಯೇ ಅಥವಾ ಬಿಜೆಪಿಗೆ ಸೇರಿದ ಮೇಲೆ ಮೂರ್ಖರಾಗುವರೇ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ

- Advertisement -
- Advertisement -

ಈಗಾಗಲೆ ಇಂಧನ ದರಗಳು ದಾಖಲೆ ಮಟ್ಟದಲ್ಲಿ ಹೆಚ್ಚಳವಾಗಿದ್ದು, ಈ ಬೆಲೆ ಏರಿಕೆ ಪದೇ ಪದೇ ನಿರಾತಂಕವಾಗಿ ಏರುತ್ತಲೆ ಇದೆ. ಸಾಮಾನ್ಯ ಜನರು ಒಕ್ಕೂಟ ಸರ್ಕಾರದ ವಿರುದ್ದ ಆಕ್ರೋಶ ಪಡಿಸುತ್ತಿದ್ದರೂ ಆಡಳಿತ ಪಕ್ಷದ ನಾಯಕರು ದರ ಇಳಿಕೆಯ ಬಗ್ಗೆ ಸರಿಯಾದ ಮಾತುಗಳನ್ನು ಆಡದೆ, ಬೇಜವಾಬ್ದಾರಿ ಮೆರೆಯುತ್ತಲೆ ಇದ್ದಾರೆ.

ಈ ಮಧ್ಯೆ ದಾವಣಗೆರೆ ಸಂಸದ ಜಿಎಂ ಸಿದ್ದೇಶ್ವರ ಪೆಟ್ರೋಲ್‌ ಬೆಲೆ ಏರಿಕೆಯ ಬಗ್ಗೆ ಮಾತನಾಡಿ, ‘ಸೈಕಲ್‌ನಲ್ಲಿ ಓಡಾಡಿದರೆ ವ್ಯಾಯಾಮ ಆಗುತ್ತದೆ’ ಎಂದು ಹೇಳಿದ್ದಾರೆ.

ಶನಿವಾರ ದಾವಣಗೆರೆಯಲ್ಲಿ, ಪೆಟ್ರೋಲ್ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು ಸೈಕಲ್‌ನಲ್ಲಿ ಓಡಾಡುವ ಪರಿಸ್ಥಿತಿ ಬಂದಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ, “ಸೈಕಲ್ ಮೇಲೆ ಓಡಾಡಿದರೆ ವ್ಯಾಯಾಮ ಚೆನ್ನಾಗಿ ಆಗುತ್ತದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಹೆಚ್ಚಾಗಿದೆ, ಹೀಗಾಗಿ ದರಗಳು ಹೆಚ್ಚಾಗಿದೆ. ಕೊರೊನಾ ಮುಗಿದ ಬಳಿಕ ಪೆಟ್ರೋಲ್ ರೇಟ್ ಕಡಿಮೆಯಾಗುತ್ತದೆ. ದರ ಕಡಿಮೆಯಾಲು ಪ್ರಧಾನಿ ಮೋದಿ ಸರ್ವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಸಿದ್ದೇಶ್ವರ ಅವರು ಉಡಾಫೆಯಿಂದ ಉತ್ತರಿಸಿದ್ದಾರೆ.

ಇದನ್ನೂ ಓದಿ: ‘ಕಷ್ಟಗಳಿದ್ದರೆ ಸುಖದ ಬೆಲೆ ತಿಳಿಯುತ್ತದೆ’ – ಪೆಟ್ರೋಲ್ ದರ ಏರಿಕೆಗೆ ಬಿಜೆಪಿ ಸಚಿವನ ಸಮರ್ಥನೆ!

ಸಿದ್ದೇಶ್ವರ ಅವರ ಈ ಹೇಳಿಕೆಗೆ ಕಾಂಗ್ರೆಸ್‌ ಸೋಮವಾರ ಪ್ರತಿಕ್ರಿಯಿಸಿದ್ದು, ಮೂರ್ಖರೆಲ್ಲ ಸೇರಿ ಬಿಜೆಪಿ ಪಕ್ಷವಾಗಿದೆಯೇ ಅಥವಾ ಬಿಜೆಪಿಗೆ ಸೇರಿದ ಮೇಲೆ ಮೂರ್ಖರಾಗುವರೇ? ಎಂದು ಆಕ್ರೋಶ ವ್ಯಕ್ತಪಡಿಸಿದೆ.

“ಮೂರ್ಖರೆಲ್ಲ ಸೇರಿ ಬಿಜೆಪಿ ಪಕ್ಷವಾಗಿದೆಯೇ ಅಥವಾ ಬಿಜೆಪಿಗೆ ಸೇರಿದ ಮೇಲೆ ಮೂರ್ಖರಾಗುವರೇ? ಎಂಬುದೇ ಯಕ್ಷಪ್ರಶ್ನೆ! ಇಂಧನ ತೈಲಗಳ ಬೆಲೆ ಏರಿಕೆಗೆ ಸೈಕಲ್ ತುಳಿದರೆ ವ್ಯಾಯಾಮ ಆಗುತ್ತದೆ ಎಂಬುದು ಸಂಸದ ಜಿಎಂ ಸಿದ್ದೇಶ್ವರ್ ಅವರ ಬಾಲಿಶ ಸಮರ್ಥನೆ! ಸಂಸದರೇ ತಾವು ದಾವಣಗೆರೆಯಿಂದ ಬೆಂಗಳೂರಿಗೆ ಸೈಕಲ್ ತುಳಿದು ಪ್ರಯಾಣಿಸಿ ವ್ಯಾಯಾಮ ಮಾಡುವಿರಾ?” ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಇಂಧನ ಬೆಲೆಗಳ ಏರಿಕೆಯ ವಿರುದ್ದ ತೀವ್ರ ಆಕ್ರೋಶಗಳು ಹೆಚ್ಚುತ್ತಿದ್ದರೂ, ಶನಿವಾರ ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಶನಿವಾರ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ 34 ರಿಂದ 43 ಪೈಸೆಯಷ್ಟು ಹಾಗೂ ಡೀಸೆಲ್ ದರ ಪ್ರತಿ ಲೀಟರ್‌ಗೆ 28 ರಿಂದ 36 ಪೈಸೆಯಷ್ಟು ಹೆಚ್ಚಳ ಕಂಡಿದೆ.

ಇದನ್ನೂ ಓದಿ: ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಎರಡು ತಿಂಗಳಲ್ಲಿ ಶೇ.10 ರಷ್ಟು ಹೆಚ್ಚಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...