Homeಕರ್ನಾಟಕಪೆಟ್ರೋಲ್‌: ಸೈಕಲ್‌ನಲ್ಲಿ ಓಡಾಡಿದರೆ ವ್ಯಾಯಾಮ ಆಗುತ್ತದೆ ಎಂದ ದಾವಣಗೆರೆ ಬಿಜೆಪಿ ಸಂಸದ

ಪೆಟ್ರೋಲ್‌: ಸೈಕಲ್‌ನಲ್ಲಿ ಓಡಾಡಿದರೆ ವ್ಯಾಯಾಮ ಆಗುತ್ತದೆ ಎಂದ ದಾವಣಗೆರೆ ಬಿಜೆಪಿ ಸಂಸದ

ಮೂರ್ಖರೆಲ್ಲ ಸೇರಿ ಬಿಜೆಪಿ ಪಕ್ಷವಾಗಿದೆಯೇ ಅಥವಾ ಬಿಜೆಪಿಗೆ ಸೇರಿದ ಮೇಲೆ ಮೂರ್ಖರಾಗುವರೇ ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ

- Advertisement -
- Advertisement -

ಈಗಾಗಲೆ ಇಂಧನ ದರಗಳು ದಾಖಲೆ ಮಟ್ಟದಲ್ಲಿ ಹೆಚ್ಚಳವಾಗಿದ್ದು, ಈ ಬೆಲೆ ಏರಿಕೆ ಪದೇ ಪದೇ ನಿರಾತಂಕವಾಗಿ ಏರುತ್ತಲೆ ಇದೆ. ಸಾಮಾನ್ಯ ಜನರು ಒಕ್ಕೂಟ ಸರ್ಕಾರದ ವಿರುದ್ದ ಆಕ್ರೋಶ ಪಡಿಸುತ್ತಿದ್ದರೂ ಆಡಳಿತ ಪಕ್ಷದ ನಾಯಕರು ದರ ಇಳಿಕೆಯ ಬಗ್ಗೆ ಸರಿಯಾದ ಮಾತುಗಳನ್ನು ಆಡದೆ, ಬೇಜವಾಬ್ದಾರಿ ಮೆರೆಯುತ್ತಲೆ ಇದ್ದಾರೆ.

ಈ ಮಧ್ಯೆ ದಾವಣಗೆರೆ ಸಂಸದ ಜಿಎಂ ಸಿದ್ದೇಶ್ವರ ಪೆಟ್ರೋಲ್‌ ಬೆಲೆ ಏರಿಕೆಯ ಬಗ್ಗೆ ಮಾತನಾಡಿ, ‘ಸೈಕಲ್‌ನಲ್ಲಿ ಓಡಾಡಿದರೆ ವ್ಯಾಯಾಮ ಆಗುತ್ತದೆ’ ಎಂದು ಹೇಳಿದ್ದಾರೆ.

ಶನಿವಾರ ದಾವಣಗೆರೆಯಲ್ಲಿ, ಪೆಟ್ರೋಲ್ ಬೆಲೆ ದಿನದಿಂದ ದಿನಕ್ಕೆ ಹೆಚ್ಚಾಗಿದ್ದು ಸೈಕಲ್‌ನಲ್ಲಿ ಓಡಾಡುವ ಪರಿಸ್ಥಿತಿ ಬಂದಿದೆ ಎಂಬ ಮಾಧ್ಯಮದವರ ಪ್ರಶ್ನೆಗೆ, “ಸೈಕಲ್ ಮೇಲೆ ಓಡಾಡಿದರೆ ವ್ಯಾಯಾಮ ಚೆನ್ನಾಗಿ ಆಗುತ್ತದೆ. ಅಂತರಾಷ್ಟ್ರೀಯ ಮಟ್ಟದಲ್ಲಿ ಕಚ್ಚಾ ತೈಲ ಬೆಲೆ ಹೆಚ್ಚಾಗಿದೆ, ಹೀಗಾಗಿ ದರಗಳು ಹೆಚ್ಚಾಗಿದೆ. ಕೊರೊನಾ ಮುಗಿದ ಬಳಿಕ ಪೆಟ್ರೋಲ್ ರೇಟ್ ಕಡಿಮೆಯಾಗುತ್ತದೆ. ದರ ಕಡಿಮೆಯಾಲು ಪ್ರಧಾನಿ ಮೋದಿ ಸರ್ವ ಪ್ರಯತ್ನ ಮಾಡುತ್ತಿದ್ದಾರೆ” ಎಂದು ಸಿದ್ದೇಶ್ವರ ಅವರು ಉಡಾಫೆಯಿಂದ ಉತ್ತರಿಸಿದ್ದಾರೆ.

ಇದನ್ನೂ ಓದಿ: ‘ಕಷ್ಟಗಳಿದ್ದರೆ ಸುಖದ ಬೆಲೆ ತಿಳಿಯುತ್ತದೆ’ – ಪೆಟ್ರೋಲ್ ದರ ಏರಿಕೆಗೆ ಬಿಜೆಪಿ ಸಚಿವನ ಸಮರ್ಥನೆ!

ಸಿದ್ದೇಶ್ವರ ಅವರ ಈ ಹೇಳಿಕೆಗೆ ಕಾಂಗ್ರೆಸ್‌ ಸೋಮವಾರ ಪ್ರತಿಕ್ರಿಯಿಸಿದ್ದು, ಮೂರ್ಖರೆಲ್ಲ ಸೇರಿ ಬಿಜೆಪಿ ಪಕ್ಷವಾಗಿದೆಯೇ ಅಥವಾ ಬಿಜೆಪಿಗೆ ಸೇರಿದ ಮೇಲೆ ಮೂರ್ಖರಾಗುವರೇ? ಎಂದು ಆಕ್ರೋಶ ವ್ಯಕ್ತಪಡಿಸಿದೆ.

“ಮೂರ್ಖರೆಲ್ಲ ಸೇರಿ ಬಿಜೆಪಿ ಪಕ್ಷವಾಗಿದೆಯೇ ಅಥವಾ ಬಿಜೆಪಿಗೆ ಸೇರಿದ ಮೇಲೆ ಮೂರ್ಖರಾಗುವರೇ? ಎಂಬುದೇ ಯಕ್ಷಪ್ರಶ್ನೆ! ಇಂಧನ ತೈಲಗಳ ಬೆಲೆ ಏರಿಕೆಗೆ ಸೈಕಲ್ ತುಳಿದರೆ ವ್ಯಾಯಾಮ ಆಗುತ್ತದೆ ಎಂಬುದು ಸಂಸದ ಜಿಎಂ ಸಿದ್ದೇಶ್ವರ್ ಅವರ ಬಾಲಿಶ ಸಮರ್ಥನೆ! ಸಂಸದರೇ ತಾವು ದಾವಣಗೆರೆಯಿಂದ ಬೆಂಗಳೂರಿಗೆ ಸೈಕಲ್ ತುಳಿದು ಪ್ರಯಾಣಿಸಿ ವ್ಯಾಯಾಮ ಮಾಡುವಿರಾ?” ಎಂದು ಕಾಂಗ್ರೆಸ್‌ ಪ್ರಶ್ನಿಸಿದೆ.

ಇಂಧನ ಬೆಲೆಗಳ ಏರಿಕೆಯ ವಿರುದ್ದ ತೀವ್ರ ಆಕ್ರೋಶಗಳು ಹೆಚ್ಚುತ್ತಿದ್ದರೂ, ಶನಿವಾರ ಪೆಟ್ರೋಲ್ ಮತ್ತು ಡೀಸೆಲ್‌ ಬೆಲೆಯಲ್ಲಿ ಮತ್ತೆ ಏರಿಕೆಯಾಗಿದೆ. ಶನಿವಾರ ಪೆಟ್ರೋಲ್ ದರ ಪ್ರತಿ ಲೀಟರ್‌ಗೆ 34 ರಿಂದ 43 ಪೈಸೆಯಷ್ಟು ಹಾಗೂ ಡೀಸೆಲ್ ದರ ಪ್ರತಿ ಲೀಟರ್‌ಗೆ 28 ರಿಂದ 36 ಪೈಸೆಯಷ್ಟು ಹೆಚ್ಚಳ ಕಂಡಿದೆ.

ಇದನ್ನೂ ಓದಿ: ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ: ಎರಡು ತಿಂಗಳಲ್ಲಿ ಶೇ.10 ರಷ್ಟು ಹೆಚ್ಚಳ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...