Homeಮುಖಪುಟಚುನಾವಣೆ ಮುಗಿದ ಕೂಡಲೇ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಸಿದ್ದತೆ: ಕಾಂಗ್ರೆಸ್ ವಿರೋಧ

ಚುನಾವಣೆ ಮುಗಿದ ಕೂಡಲೇ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಸಿದ್ದತೆ: ಕಾಂಗ್ರೆಸ್ ವಿರೋಧ

- Advertisement -
- Advertisement -

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ನಡೆಯುವ ಮುನ್ನ ತೆರಿಗೆ ಕಡಿಮೆ ಮಾಡಿ ಸರಕಾರ ತೈಲ ಬೆಲೆ ಕಡಿಮೆ ಮಾಡಿತು. ಉತ್ತರ ಪ್ರದೇಶದ ಏಳನೇ ಹಂತದ ಚುನಾವಣೆ ಇಂದು ಮುಗಿಯಲಿದೆ. ಇದರೊಂದಿಗೆ ತೈಲ ಕಂಪೆನಿಗಳು ಬೆಲೆ ಹೆಚ್ಚಿಸುವ ಸೂಚನೆ ನೀಡಿವೆ.

ಉಕ್ರೇನ್ ಮೇಲೆ ರಷ್ಯಾ ದಾಳಿ ಮಧ್ಯೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಬ್ಯಾರಲ್‌ಗೆ 130 ಡಾಲರ್‌ನಷ್ಟು ಏರಿಕೆಯಾಗಿದೆ. 2008ರ ನಂತರ ಅತ್ಯಂತ ಹೆಚ್ಚು ಬೆಲೆ ಇದಾಗಿದ್ದು, ರಷ್ಯಾದಿಂದ ಇಂಧನ ತರಿಸುವುದನ್ನು ನಿಲ್ಲಿಸಲು ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟಗಳು ನಿರ್ಬಂಧ ಹೇರಿದ್ದರಿಂದ ಈ ಬೆಳವಣಿಗೆ ನಡೆದಿದೆ.

ಇದೇ ವೇಳೆ ಭಾರತದ ಇಂಧನ ದರ ಹೆಚ್ಚಳವಾಗುವ ಸಾಧ್ಯತೆ ಇದೆ. ಪೆಟ್ರೋಲ್ ದರ ಲೀಟರ್‌ಗೆ 22 ರೂಪಾಯಿ ಹೆಚ್ಚಳವಾಗಲಿದೆ ಎಂದು ಅಂದಾಜಿಸಲಾಗಿದ್ದು, ಸದ್ಯ ಭಾರತವು ಖರೀದಿ ಮಾಡುತ್ತಿರುವ ಕಚ್ಚಾ ತೈಲ ಬ್ಯಾರಲ್‌ಗೆ 100 ಡಾಲರ್ ಆಗಿದೆ. ಇಂಧನ ಬೆಲೆ ಹೆಚ್ಚಳವಾಗುವ ಹಿನ್ನೆಲೆಯಲ್ಲಿ ದೇಶದಲ್ಲಾಗುವ ಸಮಸ್ಯೆ ತಡೆಯಲು ಅಬಕಾರಿ ತೆರಿಗೆ ಕಡಿಮೆ ಮಾಡುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ.

ಇಂಧನ ಬೆಲೆ ಏರಿಕೆಗೆ ಕಾಂಗ್ರೆಸ್ ವಿರೋಧ

ಇತ್ತೀಚೆಗಷ್ಟೇ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಚುನಾವಣೆ ಮುಗಿದ ಬಳಿಕ ಸರಕಾರ ತೈಲ ಬೆಲೆ ಹೆಚ್ಚಳ ಮಾಡಲಿದೆ ಎಂದು ಟ್ವಿಟರ್‌ನಲ್ಲಿ ವ್ಯಂಗ್ಯವಾಡಿದ್ದರು. “ಕೂಡಲೇ ಪೆಟ್ರೋಲ್ ಟ್ಯಾಂಕ್ ಪೂರ್ತಿ ತುಂಬಿಸಿಕೊಳ್ಳಿ. ಏಕೆಂದರೆ ಮೋದಿ ಸರ್ಕಾರದ ‘ಚುನಾವಣೆ’ ಆಫರ್ ಮುಗಿಯಲಿದೆ” ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಕಾಂಗ್ರೆಸ್ ಶಾಸಕ ಕೃಷ್ಣಭೈರೇಗೌಡರವರು ಟ್ವೀಟ್ ಮಾಡಿ, “ಚುನಾವಣೆ ಮುಗಿದಿದೆ. ಪೆಟ್ರೋಲ್/ಡೀಸೆಲ್ ಬೆಲೆ ಏರಿಕೆಗೆ ಸಿದ್ಧರಾಗಿ” ಎಂದು ಎಚ್ಚರಿಸಿದ್ದಾರೆ.

ಸರ್ಕಾರದ ನಿಯಂತ್ರಣವಿಲ್ಲ. ಯಾವುದೇ ಹಸ್ತಕ್ಷೇಪವಿಲ್ಲ ಎಂದು ನರೇಂದ್ರ ಮೋದಿಯವರು ಹೇಳುತ್ತಾರೆ. ಆದರೆ ಚುನಾವಣೆ ನಡೆಯುತ್ತಿರುವುದರಿಂದ 3 ತಿಂಗಳಾದರೂ ಬೆಲೆ ಏರಿಕೆಯಾಗಿಲ್ಲ. ಚುನಾವಣೆಗೂ ಬೆಲೆ ಏರಿಕೆಗೂ ಯಾವುದೇ ಸಂಬಂಧವಿಲ್ಲವೇ? ಕೇವಲ ಕಾಕತಾಳೀಯವೇ? ಹಾಗಾದರೆ ಮತದಾನ ಮುಗಿದ ಕೂಡಲೇ ಬೆಲೆ ಏರಿಕೆ ಪ್ರಾರಂಭವಾಗುವುದು ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಕಚ್ಚಾ ತೈಲವು ಬ್ಯಾರೆಲ್‌ಗೆ $110 ಇದ್ದಾಗ, ಯುಪಿಎ ಪೆಟ್ರೋಲ್ ಅನ್ನು ₹60 ಕ್ಕೆ ಮಾರಿತು.

ಕಚ್ಚಾ ತೈಲವು ಬ್ಯಾರೆಲ್‌ಗೆ $74 ಇದ್ದಾಗಲೂ ಮೋದಿ ಸರ್ಕಾರವು ಪೆಟ್ರೋಲ್ ಅನ್ನು ₹95 ಕ್ಕೆ ಮಾರಾಟ ಮಾಡಿತು.

ಈಗ ಕಚ್ಚಾ ತೈಲವು $ 109 ಕ್ಕೆ ಮರಳಿದಾಗ, ಬಿಜೆಪಿ ಯಾವ ಮಟ್ಟಕ್ಕೆ ಬೆಲೆಗಳನ್ನು ಹೆಚ್ಚಿಸಲಿದೆ ಎಂದು ಊಹಿಸಿ?

ಪೆಟ್ರೋಲ್ ಲೀಟರ್‌ಗೆ ₹120-130 ತಲುಪುತ್ತದೆಯೇ? ಎಂದು ಕಾಂಗ್ರೆಸ್ ವಕ್ತಾರ ಗೌರವ್ ಪಾಂಡಿ ಟ್ವೀಟ್ ಮಾಡಿದ್ದಾರೆ.

ಕೆಲ ತಿಂಗಳುಗಳ ಹಿಂದೆ ಕಂಪನಿಗಳು ಖರೀದಿಸಿದ ಕಚ್ಛಾ ತೈಲದ ಆಧಾರದ ಮೇಲೆ ಪೆಟ್ರೋಲ್/ಡೀಸೆಲ್ ಬೆಲೆಗಳು ಈಗ ಇದ್ದಕ್ಕಿದ್ದಂತೆ ಗಗನಕ್ಕೇರಲು ಹೇಗೆ ಸಾಧ್ಯ ಎಂಬುದನ್ನು ಯಾರಾದರೂ ವಿವರಿಸಬಹುದೇ? ಏಕೆಂದರೆ ಕಚ್ಚಾ ತೈಲವನ್ನು ಈ ಒಂದೆರೆಡು ದಿನದ ಹಿಂದೆ ಕೊಳ್ಳಲು ಸಾಧ್ಯವಿಲ್ಲ. ಏಕೆಂದರೆ ಗಲ್ಫ್‌ನಿಂದ ಕಚ್ಚಾ ತೈಲವನ್ನು ಸಾಗಿಸಲು ಹಲವು ವಾರಗಳನ್ನು ತೆಗೆದುಕೊಳ್ಳುತ್ತದೆ. ತೈಲ ಕಂಪನಿಗಳು ಸಾಗಣೆಗಾಗಿ ತಿಂಗಳ ಮುಂಚಿತವಾಗಿ ಕಚ್ಚಾ ತೈಲವನ್ನು ಖರೀದಿಸುತ್ತವೆ ಎಂದು ಜಾನ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಪ್ರಪಂಚದಾದ್ಯಂತ ಪೆಟ್ರೋಲ್ ಮೇಲಿನ ತೆರಿಗೆ:

ಅಮೆರಿಕ: 20%
ಜಪಾನ್: 45%
ಇಂಗ್ಲೆಂಡ್: 62%
ಜರ್ಮನಿ: 65%
ಭಾರತ: 260%

ಇದು ಮುದ್ರಣದೋಷವಲ್ಲ. ಪ್ರತಿ ಲೀಟರ್ ಪೆಟ್ರೋಲ್ ಮೇಲೆ ನಾವು 260% ತೆರಿಗೆಯನ್ನು ಪಾವತಿಸುತ್ತೇವೆ ಎಂದು ಕಾಂಗ್ರೆಸ್ ವಕ್ತಾರ ಸರಳ್ ಪಟೇಲ್ ಆತಂಕ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಪಾಕ್ ಕ್ರಿಕೆಟ್ ನಾಯಕಿಯ ಪುಟ್ಟ ಮಗುವಿನೊಂದಿಗೆ ಭಾರತೀಯ ತಂಡದ ಪ್ರೀತಿಯ ಕ್ಷಣಗಳು: ಎಲ್ಲೆಡೆ ಅಭಿಮಾನದ ಮಹಾಪೂರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ವಕ್ಷೇತ್ರ ತಿರುವನಂತಪುರದಲ್ಲಿ ಬಿಜೆಪಿ ಭರ್ಜರಿ ಗೆಲುವು : ‘ಪ್ರಜಾಪ್ರಭುತ್ವದ ಸೌಂದರ್ಯ’ ಎಂದ ಕಾಂಗ್ರೆಸ್ ಸಂಸದ ಶಶಿ ತರೂರ್

ಕೇರಳದ ಸ್ಥಳೀಯ ಸಂಸ್ಥೆ ಚುನಾವಣೆಯ ಫಲಿತಾಂಶ ಇಂದು (ಡಿ.13) ಪ್ರಕಟಗೊಂಡಿದ್ದು, ತಿರುವನಂತಪುರಂ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ ನೇತೃತ್ವದ ಎನ್‌ಡಿಎ ಭರ್ಜರಿ ಗೆಲುವು ದಾಖಲಿಸಿದೆ. ಈ ಮೂಲಕ 45 ವರ್ಷಗಳ ಸಿಪಿಐ(ಎಂ) ನೇತೃತ್ವದ ಎಲ್‌ಡಿಎಫ್‌...

ಕೇರಳ ಸ್ಥಳೀಯ ಸಂಸ್ಥೆ ಚುನಾವಣೆ : ಯುಡಿಎಫ್‌ ಸ್ಪಷ್ಟ ಮೇಲುಗೈ

ಇಂದು (2025 ಡಿಸೆಂಬರ್ 13, ಶನಿವಾರ) ಪ್ರಕಟಗೊಂಡ ಕೇರಳದ ಸ್ಥಳೀಯ ಸಂಸ್ಥೆಗಳ ಚುನಾವಣಾ ಫಲಿತಾಂಶದಲ್ಲಿ ವಿರೋಧ ಪಕ್ಷಗಳ ಒಕ್ಕೂಟವಾದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್) ಸ್ಪಷ್ಟ ಮೇಲುಗೈ ಸಾಧಿಸಿದೆ. ಈ ಮೂಲಕ ರಾಜ್ಯ...

ಕೋಲ್ಕತ್ತಾ ಮೆಸ್ಸಿ ಕಾರ್ಯಕ್ರಮದಲ್ಲಿ ಗಲಾಟೆ | ಕ್ಷಮೆ ಯಾಚಿಸಿದ ಸಿಎಂ ಮಮತಾ ಬ್ಯಾನರ್ಜಿ, ತನಿಖೆಗೆ ಸಮಿತಿ ರಚನೆ; ಆಯೋಜಕನ ಬಂಧನ

ಫುಟ್ಬಾಲ್ ತಾರೆ ಲಿಯೋನೆಲ್ ಮೆಸ್ಸಿ ಭೇಟಿಯ ವೇಳೆ ಶನಿವಾರ (ಡಿಸೆಂಬರ್ 13) ಕೋಲ್ಕತ್ತಾದ ಸಾಲ್ಟ್ ಲೇಕ್ ಕ್ರೀಡಾಂಗಣದಲ್ಲಿ ಉಂಟಾದ ಗಲಾಟೆಗೆ ಸಂಬಂಧಿಸಿದಂತೆ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಕ್ಷಮೆಯಾಚಿಸಿದ್ದು, ನಿವೃತ್ತ ನ್ಯಾಯಮೂರ್ತಿ...

ಮೆಸ್ಸಿ ನೋಡಲು 25 ಸಾವಿರ ರೂ. ಪಾವತಿಸಿದವರಿಗೆ ನಿರಾಶೆ; ಕೋಪಗೊಂಡ ಅಭಿಮಾನಿಗಳಿಂದ ಕ್ರೀಡಾಂಗಣದಲ್ಲಿ ದಾಂಧಲೆ

ಶನಿವಾರ ನಡೆದ ಲಿಯೋನೆಲ್ ಮೆಸ್ಸಿ ಅವರ ಬಹು ನಿರೀಕ್ಷಿತ "ಗೋಟ್ ಇಂಡಿಯಾ ಟೂರ್" ಕೋಲ್ಕತ್ತಾದಲ್ಲಿ ಅಸ್ತವ್ಯಸ್ತವಾಯಿತು. ಯುವ ಭಾರತಿ ಕ್ರಿರಂಗನ್‌ನಲ್ಲಿ ರೊಚ್ಚಿಗೆದ್ದ ಅಭಿಮಾನಿಗಳ ದಾಂಧಲೆಯಿಂದ ಕ್ರೀಡಾಂಗಣ ಅವ್ಯವಸ್ಥೆಗೆ ಒಳಗಾಯಿತು. ಸಾವಿರಾರು ಅಭಿಮಾನಿಗಳು ಅರ್ಜೆಂಟೀನಾದ...

ಡ್ರಗ್‌ ಪೆಡ್ಲರ್‌ಗಳ ಮನೆ ಒಡೆದು ಹಾಕುವ ಹೇಳಿಕೆ : ಪರಮೇಶ್ವರ್ ಮಾತಿಗೆ ಆತಂಕ ವ್ಯಕ್ತಪಡಿಸಿದ ಕಾಂಗ್ರೆಸ್ ಹಿರಿಯ ನಾಯಕ ಚಿದಂಬರಂ

"ಡ್ರಗ್‌ ಪೆಡ್ಲರ್‌ಗಳ ಬಾಡಿಗೆ ಮನೆಗಳನ್ನು ಒಡೆದು ಹಾಕುವ ಹಂತಕ್ಕೆ ಹೋಗಿದ್ದೇವೆ" ಎಂಬ ಗೃಹ ಸಚಿವ ಜಿ.ಪರಮೇಶ್ವರ್ ಹೇಳಿಕೆಗೆ ಕಾಂಗ್ರೆಸ್ ಹಿರಿಯ ನಾಯಕ, ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಆತಂಕ ವ್ಯಕ್ತಪಡಿಸಿದ್ದಾರೆ. ಸಾಮಾಜಿಕ...

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆ: ಶಶಿ ತರೂರ್ ಕ್ಷೇತ್ರ ತಿರುವನಂತಪುರಂನಲ್ಲಿ ಬಿಜೆಪಿ ಮುನ್ನಡೆ

ಕೇರಳ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ, ವಿಶೇಷವಾಗಿ ತಿರುವನಂತಪುರಂನಲ್ಲಿ ಭಾರತೀಯ ಜನತಾ ಪಕ್ಷದ ಸಾಧನೆಯನ್ನು ಹಿರಿಯ ಕಾಂಗ್ರೆಸ್ ನಾಯಕ ಶಶಿ ತರೂರ್ ಶನಿವಾರ ಅಭಿನಂದಿಸಿದ್ದಾರೆ. ಜನರ ತೀರ್ಪನ್ನು ಗೌರವಿಸಬೇಕು ಎಂದು ಹೇಳಿದ್ದಾರೆ. ಎಕ್ಸ್‌ನಲ್ಲಿ ದೀರ್ಘ...

ಆಳಂದ ಮತಗಳ್ಳತನ | ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್ ಸೇರಿ 7 ಮಂದಿ ವಿರುದ್ಧ ಎಸ್‌ಐಟಿ ಚಾರ್ಜ್‌ಶೀಟ್‌

ಕಲಬುರಗಿಯ ಆಳಂದ ವಿಧಾನಸಭಾ ಕ್ಷೇತ್ರದಲ್ಲಿ ನಡೆದ ಮತಗಳ್ಳತನ (ಚುನಾವಣಾ ಆಕ್ರಮ) ಪ್ರಕರಣದ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ) ನ್ಯಾಯಾಲಯಕ್ಕೆ ಆರೋಪಪಟ್ಟಿ ಸಲ್ಲಿಸಿದ್ದು, ಆಳಂದದ ಬಿಜೆಪಿ ಮಾಜಿ ಶಾಸಕ ಸುಭಾಷ್ ಗುತ್ತೇದಾರ್...

ಉತ್ತರ ಪ್ರದೇಶ| ಗಸ್ತು ವಾಹನ ಹಳ್ಳಕ್ಕೆ ಉರುಳಿಸಿದ ಪಾನಮತ್ತ ಪೊಲೀಸರು; ಕ್ರೇನ್ ಚಾಲಕನ ಮೇಲೆ ಹಲ್ಲೆ

ಶುಕ್ರವಾರ (ಡಿಸೆಂಬರ್ 12) ರಾತ್ರಿ ಪೊಲೀಸರೊಬ್ಬರು ಕಾರಿನ ನಿಯಂತ್ರಣ ಕಳೆದುಕೊಂಡ ಬಳಿಕ '112' ಪೊಲೀಸ್ ಪ್ರತಿಕ್ರಿಯೆ ವಾಹನ (ಪಿಆರ್‌ವಿ) ಹಳ್ಳಕ್ಕೆ ಉರುಳಿದೆ. ವರದಿಗಳ ಪ್ರಕಾರ, ಘಟನೆಯ ಸಮಯದಲ್ಲಿ ಪೊಲೀಸರು ಪಾನಮತ್ತರಾಗಿದ್ದರು. ಕಾರ್ ಕಂದಕಕ್ಕೆ...

ಲಿಯೋನೆಲ್ ಮೆಸ್ಸಿ ಇಂಡಿಯಾ ಪ್ರವಾಸ; ಅಭೂತಪೂರ್ವ ಸ್ವಾಗತ ಕೋರಿದ ಕೋಲ್ಕತ್ತಾ ಅಭಿಮಾನಿಗಳು

ಇಂಡಿಯಾ ಪ್ರವಾಸ ಪ್ರಾರಂಭಿಸಿರುವ ಅರ್ಜೆಂಟೀನಾದ ಪುಟ್‌ಬಾಲ್‌ ತಾರೆ ಲಿಯೋನೆಲ್ ಮೆಸ್ಸಿ ಕೋಲ್ಕತ್ತಾಗೆ ಬಂದಿಳಿದಿದ್ದಾರೆ. ಶನಿವಾರ ಬೆಳಗಿನ ಜಾವ ವಿಮಾನ ನಿಲ್ದಾಣದಲ್ಲಿ ನೆರೆದಿದ್ದ ಸಾವಿರಾರು ಅಭಿಮಾನಿಗಳಿಂದ ಅವರಿಗೆ ಅಭೂತಪೂರ್ವ ಸ್ವಾಗತ ಕೋರಿದರು. ಅರ್ಜೆಂಟೀನಾದ ಸೂಪರ್‌ಸ್ಟಾರ್ ದುಬೈ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ಆರು ಅಪರಾಧಿಗಳಿಗೆ 20 ವರ್ಷ ಕಠಿಣ ಜೈಲು ಶಿಕ್ಷೆ

ಮಲಯಾಳಂ ಮೂಲದ ಬಹುಭಾಷಾ ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದ (2017ರ ಪ್ರಕರಣ) ಆರು ಅಪರಾಧಿಗಳಿಗೆ ಇಪ್ಪತ್ತು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿ ಶುಕ್ರವಾರ (ಡಿಸೆಂಬರ್ 12) ಕೇರಳ ನ್ಯಾಯಾಲಯ ಆದೇಶಿಸಿದೆ. ಡಿಸೆಂಬರ್...