Homeಮುಖಪುಟಚುನಾವಣೆ ಮುಗಿದ ಕೂಡಲೇ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಸಿದ್ದತೆ: ಕಾಂಗ್ರೆಸ್ ವಿರೋಧ

ಚುನಾವಣೆ ಮುಗಿದ ಕೂಡಲೇ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಸಿದ್ದತೆ: ಕಾಂಗ್ರೆಸ್ ವಿರೋಧ

- Advertisement -
- Advertisement -

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ನಡೆಯುವ ಮುನ್ನ ತೆರಿಗೆ ಕಡಿಮೆ ಮಾಡಿ ಸರಕಾರ ತೈಲ ಬೆಲೆ ಕಡಿಮೆ ಮಾಡಿತು. ಉತ್ತರ ಪ್ರದೇಶದ ಏಳನೇ ಹಂತದ ಚುನಾವಣೆ ಇಂದು ಮುಗಿಯಲಿದೆ. ಇದರೊಂದಿಗೆ ತೈಲ ಕಂಪೆನಿಗಳು ಬೆಲೆ ಹೆಚ್ಚಿಸುವ ಸೂಚನೆ ನೀಡಿವೆ.

ಉಕ್ರೇನ್ ಮೇಲೆ ರಷ್ಯಾ ದಾಳಿ ಮಧ್ಯೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಬ್ಯಾರಲ್‌ಗೆ 130 ಡಾಲರ್‌ನಷ್ಟು ಏರಿಕೆಯಾಗಿದೆ. 2008ರ ನಂತರ ಅತ್ಯಂತ ಹೆಚ್ಚು ಬೆಲೆ ಇದಾಗಿದ್ದು, ರಷ್ಯಾದಿಂದ ಇಂಧನ ತರಿಸುವುದನ್ನು ನಿಲ್ಲಿಸಲು ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟಗಳು ನಿರ್ಬಂಧ ಹೇರಿದ್ದರಿಂದ ಈ ಬೆಳವಣಿಗೆ ನಡೆದಿದೆ.

ಇದೇ ವೇಳೆ ಭಾರತದ ಇಂಧನ ದರ ಹೆಚ್ಚಳವಾಗುವ ಸಾಧ್ಯತೆ ಇದೆ. ಪೆಟ್ರೋಲ್ ದರ ಲೀಟರ್‌ಗೆ 22 ರೂಪಾಯಿ ಹೆಚ್ಚಳವಾಗಲಿದೆ ಎಂದು ಅಂದಾಜಿಸಲಾಗಿದ್ದು, ಸದ್ಯ ಭಾರತವು ಖರೀದಿ ಮಾಡುತ್ತಿರುವ ಕಚ್ಚಾ ತೈಲ ಬ್ಯಾರಲ್‌ಗೆ 100 ಡಾಲರ್ ಆಗಿದೆ. ಇಂಧನ ಬೆಲೆ ಹೆಚ್ಚಳವಾಗುವ ಹಿನ್ನೆಲೆಯಲ್ಲಿ ದೇಶದಲ್ಲಾಗುವ ಸಮಸ್ಯೆ ತಡೆಯಲು ಅಬಕಾರಿ ತೆರಿಗೆ ಕಡಿಮೆ ಮಾಡುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ.

ಇಂಧನ ಬೆಲೆ ಏರಿಕೆಗೆ ಕಾಂಗ್ರೆಸ್ ವಿರೋಧ

ಇತ್ತೀಚೆಗಷ್ಟೇ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಚುನಾವಣೆ ಮುಗಿದ ಬಳಿಕ ಸರಕಾರ ತೈಲ ಬೆಲೆ ಹೆಚ್ಚಳ ಮಾಡಲಿದೆ ಎಂದು ಟ್ವಿಟರ್‌ನಲ್ಲಿ ವ್ಯಂಗ್ಯವಾಡಿದ್ದರು. “ಕೂಡಲೇ ಪೆಟ್ರೋಲ್ ಟ್ಯಾಂಕ್ ಪೂರ್ತಿ ತುಂಬಿಸಿಕೊಳ್ಳಿ. ಏಕೆಂದರೆ ಮೋದಿ ಸರ್ಕಾರದ ‘ಚುನಾವಣೆ’ ಆಫರ್ ಮುಗಿಯಲಿದೆ” ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಕಾಂಗ್ರೆಸ್ ಶಾಸಕ ಕೃಷ್ಣಭೈರೇಗೌಡರವರು ಟ್ವೀಟ್ ಮಾಡಿ, “ಚುನಾವಣೆ ಮುಗಿದಿದೆ. ಪೆಟ್ರೋಲ್/ಡೀಸೆಲ್ ಬೆಲೆ ಏರಿಕೆಗೆ ಸಿದ್ಧರಾಗಿ” ಎಂದು ಎಚ್ಚರಿಸಿದ್ದಾರೆ.

ಸರ್ಕಾರದ ನಿಯಂತ್ರಣವಿಲ್ಲ. ಯಾವುದೇ ಹಸ್ತಕ್ಷೇಪವಿಲ್ಲ ಎಂದು ನರೇಂದ್ರ ಮೋದಿಯವರು ಹೇಳುತ್ತಾರೆ. ಆದರೆ ಚುನಾವಣೆ ನಡೆಯುತ್ತಿರುವುದರಿಂದ 3 ತಿಂಗಳಾದರೂ ಬೆಲೆ ಏರಿಕೆಯಾಗಿಲ್ಲ. ಚುನಾವಣೆಗೂ ಬೆಲೆ ಏರಿಕೆಗೂ ಯಾವುದೇ ಸಂಬಂಧವಿಲ್ಲವೇ? ಕೇವಲ ಕಾಕತಾಳೀಯವೇ? ಹಾಗಾದರೆ ಮತದಾನ ಮುಗಿದ ಕೂಡಲೇ ಬೆಲೆ ಏರಿಕೆ ಪ್ರಾರಂಭವಾಗುವುದು ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಕಚ್ಚಾ ತೈಲವು ಬ್ಯಾರೆಲ್‌ಗೆ $110 ಇದ್ದಾಗ, ಯುಪಿಎ ಪೆಟ್ರೋಲ್ ಅನ್ನು ₹60 ಕ್ಕೆ ಮಾರಿತು.

ಕಚ್ಚಾ ತೈಲವು ಬ್ಯಾರೆಲ್‌ಗೆ $74 ಇದ್ದಾಗಲೂ ಮೋದಿ ಸರ್ಕಾರವು ಪೆಟ್ರೋಲ್ ಅನ್ನು ₹95 ಕ್ಕೆ ಮಾರಾಟ ಮಾಡಿತು.

ಈಗ ಕಚ್ಚಾ ತೈಲವು $ 109 ಕ್ಕೆ ಮರಳಿದಾಗ, ಬಿಜೆಪಿ ಯಾವ ಮಟ್ಟಕ್ಕೆ ಬೆಲೆಗಳನ್ನು ಹೆಚ್ಚಿಸಲಿದೆ ಎಂದು ಊಹಿಸಿ?

ಪೆಟ್ರೋಲ್ ಲೀಟರ್‌ಗೆ ₹120-130 ತಲುಪುತ್ತದೆಯೇ? ಎಂದು ಕಾಂಗ್ರೆಸ್ ವಕ್ತಾರ ಗೌರವ್ ಪಾಂಡಿ ಟ್ವೀಟ್ ಮಾಡಿದ್ದಾರೆ.

ಕೆಲ ತಿಂಗಳುಗಳ ಹಿಂದೆ ಕಂಪನಿಗಳು ಖರೀದಿಸಿದ ಕಚ್ಛಾ ತೈಲದ ಆಧಾರದ ಮೇಲೆ ಪೆಟ್ರೋಲ್/ಡೀಸೆಲ್ ಬೆಲೆಗಳು ಈಗ ಇದ್ದಕ್ಕಿದ್ದಂತೆ ಗಗನಕ್ಕೇರಲು ಹೇಗೆ ಸಾಧ್ಯ ಎಂಬುದನ್ನು ಯಾರಾದರೂ ವಿವರಿಸಬಹುದೇ? ಏಕೆಂದರೆ ಕಚ್ಚಾ ತೈಲವನ್ನು ಈ ಒಂದೆರೆಡು ದಿನದ ಹಿಂದೆ ಕೊಳ್ಳಲು ಸಾಧ್ಯವಿಲ್ಲ. ಏಕೆಂದರೆ ಗಲ್ಫ್‌ನಿಂದ ಕಚ್ಚಾ ತೈಲವನ್ನು ಸಾಗಿಸಲು ಹಲವು ವಾರಗಳನ್ನು ತೆಗೆದುಕೊಳ್ಳುತ್ತದೆ. ತೈಲ ಕಂಪನಿಗಳು ಸಾಗಣೆಗಾಗಿ ತಿಂಗಳ ಮುಂಚಿತವಾಗಿ ಕಚ್ಚಾ ತೈಲವನ್ನು ಖರೀದಿಸುತ್ತವೆ ಎಂದು ಜಾನ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಪ್ರಪಂಚದಾದ್ಯಂತ ಪೆಟ್ರೋಲ್ ಮೇಲಿನ ತೆರಿಗೆ:

ಅಮೆರಿಕ: 20%
ಜಪಾನ್: 45%
ಇಂಗ್ಲೆಂಡ್: 62%
ಜರ್ಮನಿ: 65%
ಭಾರತ: 260%

ಇದು ಮುದ್ರಣದೋಷವಲ್ಲ. ಪ್ರತಿ ಲೀಟರ್ ಪೆಟ್ರೋಲ್ ಮೇಲೆ ನಾವು 260% ತೆರಿಗೆಯನ್ನು ಪಾವತಿಸುತ್ತೇವೆ ಎಂದು ಕಾಂಗ್ರೆಸ್ ವಕ್ತಾರ ಸರಳ್ ಪಟೇಲ್ ಆತಂಕ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಪಾಕ್ ಕ್ರಿಕೆಟ್ ನಾಯಕಿಯ ಪುಟ್ಟ ಮಗುವಿನೊಂದಿಗೆ ಭಾರತೀಯ ತಂಡದ ಪ್ರೀತಿಯ ಕ್ಷಣಗಳು: ಎಲ್ಲೆಡೆ ಅಭಿಮಾನದ ಮಹಾಪೂರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ : ದಂಪತಿಗೆ ಮರಣದಂಡನೆ

ಸುಮಾರು 10 ವರ್ಷಗಳಲ್ಲಿ 33 ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಪ್ರಕರಣದಲ್ಲಿ ದಂಪತಿಗೆ ಮರಣದಂಡನೆ ವಿಧಿಸಿ ಉತ್ತರ ಪ್ರದೇಶದ ಬಂಡಾ ವಿಶೇಷ ಪೋಕ್ಸೋ ನ್ಯಾಯಾಲಯ ಶುಕ್ರವಾರ (ಫೆ.20) ಆದೇಶಿಸಿದೆ. ಉತ್ತರ ಪ್ರದೇಶದ...

ರಾಜ್ಯಸಭೆ ಚುನಾವಣೆ : ಬಿಹಾರದಲ್ಲಿ ಕಿಂಗ್ ಮೇಕರ್ ಆದ ಓವೈಸಿ ಪಕ್ಷ

ಮಾರ್ಚ್ 16ರಂದು ನಡೆಯಲಿರುವ ಬಿಹಾರದ ಐದು ರಾಜ್ಯಸಭಾ ಸ್ಥಾನಗಳ ಚುನಾವಣೆಯಲ್ಲಿ ಹೈದರಾಬಾದ್ ಸಂಸದ ಅಸಾದುದ್ದೀನ್ ಓವೈಸಿ ಅವರ ಎಐಎಂಐಎಂ ಪಕ್ಷವು 'ಕಿಂಗ್ ಮೇಕರ್' ಆಗಿ ಹೊರಹೊಮ್ಮಿದೆ. ಬಿಹಾರದಲ್ಲಿ ಒಂದು ರಾಜ್ಯಸಭಾ ಸ್ಥಾನ ಗೆಲ್ಲಲು ಕನಿಷ್ಠ...

ದೆಹಲಿ : ಪ್ರಧಾನಿ ಮನೆ ಬಳಿಯ ಕೊಳಗೇರಿಗಳ 717 ಕುಟುಂಬಗಳಿಗೆ ಮನೆ ಖಾಲಿ ಮಾಡುವಂತೆ ನೋಟಿಸ್

ನವದೆಹಲಿಯ ಪ್ರಧಾನಿ ನಿವಾಸದ ಬಳಿಯ ಮೂರು ಕೊಳಗೇರಿಗಳಲ್ಲಿ ವಾಸಿಸುತ್ತಿರುವ ಏಳುನೂರ ಹದಿನೇಳು ಕುಟುಂಬಗಳು ಮಾರ್ಚ್ 6ರೊಳಗೆ ತಮ್ಮ ಮನೆಗಳನ್ನು ಖಾಲಿ ಮಾಡುವಂತೆ ಸೂಚಿಸಲಾಗಿದೆ. ಇಲ್ಲದಿದ್ದರೆ ಕಾನೂನು ಕ್ರಮ ಎದುರಿಸಲು ಸಿದ್ದರಾಗುವಂತೆ ಎಚ್ಚರಿಕೆ ನೀಡಲಾಗಿದೆ...

ಹೊಸ ಅಸ್ತ್ರ ಪ್ರಯೋಗಿಸಿದ ಟ್ರಂಪ್ : ಎಲ್ಲಾ ರಾಷ್ಟ್ರಗಳ ಆಮದು ಮೇಲೆ ಶೇ.10ರಷ್ಟು ಜಾಗತಿಕ ಸುಂಕ ಘೋಷಣೆ

ಎಲ್ಲಾ ದೇಶಗಳ ಆಮದುಗಳ ಮೇಲೆ ಹೊಸದಾಗಿ ಶೇಕಡ 10 ಸುಂಕ ವಿಧಿಸುವ ಕಾರ್ಯನಿರ್ವಾಹಕ ಆದೇಶಕ್ಕೆ ಸಹಿ ಹಾಕಿರುವುದಾಗಿ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ಘೋಷಿಸಿದ್ದಾರೆ. ಇದಕ್ಕೂ ಕೆಲ ಗಂಟೆಗಳ ಮೊದಲು,...

ಭಾರತದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಇಲ್ಲ: ಸುಪ್ರೀಂ ಕೋರ್ಟ್ ತೀರ್ಪಿನ ಬಳಿಕ ಟ್ರಂಪ್ ಹೇಳಿಕೆ

ಅಮೆರಿಕ ಸುಪ್ರೀಂ ಕೋರ್ಟ್ ಪ್ರತಿ ಸುಂಕ (Reciprocal tariffs) ನೀತಿಯನ್ನು ರದ್ದುಗೊಳಿಸಿದರೂ, ಭಾರತ-ಅಮೆರಿಕ ನಡುವಿನ ವ್ಯಾಪಾರ ಒಪ್ಪಂದದಲ್ಲಿ ಯಾವುದೇ ಬದಲಾವಣೆ ಆಗುವುದಿಲ್ಲ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಶುಕ್ರವಾರ (ಫೆ.20) ತಿಳಿಸಿದ್ದಾರೆ. ಶ್ವೇತಭವನದಲ್ಲಿ...

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...