Homeಮುಖಪುಟಚುನಾವಣೆ ಮುಗಿದ ಕೂಡಲೇ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಸಿದ್ದತೆ: ಕಾಂಗ್ರೆಸ್ ವಿರೋಧ

ಚುನಾವಣೆ ಮುಗಿದ ಕೂಡಲೇ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಸಿದ್ದತೆ: ಕಾಂಗ್ರೆಸ್ ವಿರೋಧ

- Advertisement -
- Advertisement -

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ನಡೆಯುವ ಮುನ್ನ ತೆರಿಗೆ ಕಡಿಮೆ ಮಾಡಿ ಸರಕಾರ ತೈಲ ಬೆಲೆ ಕಡಿಮೆ ಮಾಡಿತು. ಉತ್ತರ ಪ್ರದೇಶದ ಏಳನೇ ಹಂತದ ಚುನಾವಣೆ ಇಂದು ಮುಗಿಯಲಿದೆ. ಇದರೊಂದಿಗೆ ತೈಲ ಕಂಪೆನಿಗಳು ಬೆಲೆ ಹೆಚ್ಚಿಸುವ ಸೂಚನೆ ನೀಡಿವೆ.

ಉಕ್ರೇನ್ ಮೇಲೆ ರಷ್ಯಾ ದಾಳಿ ಮಧ್ಯೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಬ್ಯಾರಲ್‌ಗೆ 130 ಡಾಲರ್‌ನಷ್ಟು ಏರಿಕೆಯಾಗಿದೆ. 2008ರ ನಂತರ ಅತ್ಯಂತ ಹೆಚ್ಚು ಬೆಲೆ ಇದಾಗಿದ್ದು, ರಷ್ಯಾದಿಂದ ಇಂಧನ ತರಿಸುವುದನ್ನು ನಿಲ್ಲಿಸಲು ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟಗಳು ನಿರ್ಬಂಧ ಹೇರಿದ್ದರಿಂದ ಈ ಬೆಳವಣಿಗೆ ನಡೆದಿದೆ.

ಇದೇ ವೇಳೆ ಭಾರತದ ಇಂಧನ ದರ ಹೆಚ್ಚಳವಾಗುವ ಸಾಧ್ಯತೆ ಇದೆ. ಪೆಟ್ರೋಲ್ ದರ ಲೀಟರ್‌ಗೆ 22 ರೂಪಾಯಿ ಹೆಚ್ಚಳವಾಗಲಿದೆ ಎಂದು ಅಂದಾಜಿಸಲಾಗಿದ್ದು, ಸದ್ಯ ಭಾರತವು ಖರೀದಿ ಮಾಡುತ್ತಿರುವ ಕಚ್ಚಾ ತೈಲ ಬ್ಯಾರಲ್‌ಗೆ 100 ಡಾಲರ್ ಆಗಿದೆ. ಇಂಧನ ಬೆಲೆ ಹೆಚ್ಚಳವಾಗುವ ಹಿನ್ನೆಲೆಯಲ್ಲಿ ದೇಶದಲ್ಲಾಗುವ ಸಮಸ್ಯೆ ತಡೆಯಲು ಅಬಕಾರಿ ತೆರಿಗೆ ಕಡಿಮೆ ಮಾಡುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ.

ಇಂಧನ ಬೆಲೆ ಏರಿಕೆಗೆ ಕಾಂಗ್ರೆಸ್ ವಿರೋಧ

ಇತ್ತೀಚೆಗಷ್ಟೇ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಚುನಾವಣೆ ಮುಗಿದ ಬಳಿಕ ಸರಕಾರ ತೈಲ ಬೆಲೆ ಹೆಚ್ಚಳ ಮಾಡಲಿದೆ ಎಂದು ಟ್ವಿಟರ್‌ನಲ್ಲಿ ವ್ಯಂಗ್ಯವಾಡಿದ್ದರು. “ಕೂಡಲೇ ಪೆಟ್ರೋಲ್ ಟ್ಯಾಂಕ್ ಪೂರ್ತಿ ತುಂಬಿಸಿಕೊಳ್ಳಿ. ಏಕೆಂದರೆ ಮೋದಿ ಸರ್ಕಾರದ ‘ಚುನಾವಣೆ’ ಆಫರ್ ಮುಗಿಯಲಿದೆ” ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಕಾಂಗ್ರೆಸ್ ಶಾಸಕ ಕೃಷ್ಣಭೈರೇಗೌಡರವರು ಟ್ವೀಟ್ ಮಾಡಿ, “ಚುನಾವಣೆ ಮುಗಿದಿದೆ. ಪೆಟ್ರೋಲ್/ಡೀಸೆಲ್ ಬೆಲೆ ಏರಿಕೆಗೆ ಸಿದ್ಧರಾಗಿ” ಎಂದು ಎಚ್ಚರಿಸಿದ್ದಾರೆ.

ಸರ್ಕಾರದ ನಿಯಂತ್ರಣವಿಲ್ಲ. ಯಾವುದೇ ಹಸ್ತಕ್ಷೇಪವಿಲ್ಲ ಎಂದು ನರೇಂದ್ರ ಮೋದಿಯವರು ಹೇಳುತ್ತಾರೆ. ಆದರೆ ಚುನಾವಣೆ ನಡೆಯುತ್ತಿರುವುದರಿಂದ 3 ತಿಂಗಳಾದರೂ ಬೆಲೆ ಏರಿಕೆಯಾಗಿಲ್ಲ. ಚುನಾವಣೆಗೂ ಬೆಲೆ ಏರಿಕೆಗೂ ಯಾವುದೇ ಸಂಬಂಧವಿಲ್ಲವೇ? ಕೇವಲ ಕಾಕತಾಳೀಯವೇ? ಹಾಗಾದರೆ ಮತದಾನ ಮುಗಿದ ಕೂಡಲೇ ಬೆಲೆ ಏರಿಕೆ ಪ್ರಾರಂಭವಾಗುವುದು ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಕಚ್ಚಾ ತೈಲವು ಬ್ಯಾರೆಲ್‌ಗೆ $110 ಇದ್ದಾಗ, ಯುಪಿಎ ಪೆಟ್ರೋಲ್ ಅನ್ನು ₹60 ಕ್ಕೆ ಮಾರಿತು.

ಕಚ್ಚಾ ತೈಲವು ಬ್ಯಾರೆಲ್‌ಗೆ $74 ಇದ್ದಾಗಲೂ ಮೋದಿ ಸರ್ಕಾರವು ಪೆಟ್ರೋಲ್ ಅನ್ನು ₹95 ಕ್ಕೆ ಮಾರಾಟ ಮಾಡಿತು.

ಈಗ ಕಚ್ಚಾ ತೈಲವು $ 109 ಕ್ಕೆ ಮರಳಿದಾಗ, ಬಿಜೆಪಿ ಯಾವ ಮಟ್ಟಕ್ಕೆ ಬೆಲೆಗಳನ್ನು ಹೆಚ್ಚಿಸಲಿದೆ ಎಂದು ಊಹಿಸಿ?

ಪೆಟ್ರೋಲ್ ಲೀಟರ್‌ಗೆ ₹120-130 ತಲುಪುತ್ತದೆಯೇ? ಎಂದು ಕಾಂಗ್ರೆಸ್ ವಕ್ತಾರ ಗೌರವ್ ಪಾಂಡಿ ಟ್ವೀಟ್ ಮಾಡಿದ್ದಾರೆ.

ಕೆಲ ತಿಂಗಳುಗಳ ಹಿಂದೆ ಕಂಪನಿಗಳು ಖರೀದಿಸಿದ ಕಚ್ಛಾ ತೈಲದ ಆಧಾರದ ಮೇಲೆ ಪೆಟ್ರೋಲ್/ಡೀಸೆಲ್ ಬೆಲೆಗಳು ಈಗ ಇದ್ದಕ್ಕಿದ್ದಂತೆ ಗಗನಕ್ಕೇರಲು ಹೇಗೆ ಸಾಧ್ಯ ಎಂಬುದನ್ನು ಯಾರಾದರೂ ವಿವರಿಸಬಹುದೇ? ಏಕೆಂದರೆ ಕಚ್ಚಾ ತೈಲವನ್ನು ಈ ಒಂದೆರೆಡು ದಿನದ ಹಿಂದೆ ಕೊಳ್ಳಲು ಸಾಧ್ಯವಿಲ್ಲ. ಏಕೆಂದರೆ ಗಲ್ಫ್‌ನಿಂದ ಕಚ್ಚಾ ತೈಲವನ್ನು ಸಾಗಿಸಲು ಹಲವು ವಾರಗಳನ್ನು ತೆಗೆದುಕೊಳ್ಳುತ್ತದೆ. ತೈಲ ಕಂಪನಿಗಳು ಸಾಗಣೆಗಾಗಿ ತಿಂಗಳ ಮುಂಚಿತವಾಗಿ ಕಚ್ಚಾ ತೈಲವನ್ನು ಖರೀದಿಸುತ್ತವೆ ಎಂದು ಜಾನ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಪ್ರಪಂಚದಾದ್ಯಂತ ಪೆಟ್ರೋಲ್ ಮೇಲಿನ ತೆರಿಗೆ:

ಅಮೆರಿಕ: 20%
ಜಪಾನ್: 45%
ಇಂಗ್ಲೆಂಡ್: 62%
ಜರ್ಮನಿ: 65%
ಭಾರತ: 260%

ಇದು ಮುದ್ರಣದೋಷವಲ್ಲ. ಪ್ರತಿ ಲೀಟರ್ ಪೆಟ್ರೋಲ್ ಮೇಲೆ ನಾವು 260% ತೆರಿಗೆಯನ್ನು ಪಾವತಿಸುತ್ತೇವೆ ಎಂದು ಕಾಂಗ್ರೆಸ್ ವಕ್ತಾರ ಸರಳ್ ಪಟೇಲ್ ಆತಂಕ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಪಾಕ್ ಕ್ರಿಕೆಟ್ ನಾಯಕಿಯ ಪುಟ್ಟ ಮಗುವಿನೊಂದಿಗೆ ಭಾರತೀಯ ತಂಡದ ಪ್ರೀತಿಯ ಕ್ಷಣಗಳು: ಎಲ್ಲೆಡೆ ಅಭಿಮಾನದ ಮಹಾಪೂರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...

SIR ಮೋಸ: ಅಗತ್ಯಬಿದ್ದರೆ ಕಾಂಗ್ರೆಸ್‌ನಿಂದ ಕಾನೂನು ಹೋರಾಟ ಬಿ.ಕೆ. ಹರಿಪ್ರಸಾದ್ ಎಚ್ಚರಿಕೆ

ಕರ್ನಾಟಕದಲ್ಲಿ ಪ್ರಸ್ತುತ ನಡೆಯುತ್ತಿರುವ 2026ರ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಭಾರಿ ಪ್ರಮಾಣದ ತಾಂತ್ರಿಕ ಲೋಪಗಳು, ಅಂಕಿಅಂಶಗಳ ವ್ಯತ್ಯಾಸ ಹಾಗೂ ಮತದಾರರ ಪಟ್ಟಿಗೆ ಸಂಬಂಧಿಸಿದಂತೆ ಸ್ಪಷ್ಟತೆಯ ಕೊರತೆ ಎದ್ದುಕಾಣುತ್ತಿದೆ ಎಂದು...

ವಿಚಾರಣೆಯಿಲ್ಲದೆ ಆರು ವರ್ಷ ಜೈಲುವಾಸ: ಉಮರ್ ಖಾಲಿದ್ ಹೋರಾಟದ ಹಾದಿ

ಸೆಪ್ಟೆಂಬರ್ 13, 2020 ರಂದು, ಮಾನವ ಹಕ್ಕುಗಳ ಯುವ ಕಾರ್ಯಕರ್ತ ಉಮರ್ ಖಾಲಿದ್ ಅವರನ್ನು ದೇಶದ ರಾಜಧಾನಿಯಲ್ಲಿ ಗುರಿಯಾಗಿಸಿಕೊಳ್ಳಲಾಯಿತು. ವಿಚಾರಣೆಯೇ ಇಲ್ಲದೆ ಅವರು ಜೈಲಿನಲ್ಲಿ ಆರು ವರ್ಷಗಳನ್ನು ಪೂರೈಸಿದ್ದಾರೆ. ಸರ್ಕಾರದ ವಿರುದ್ಧದ ರಾಜಕೀಯ...

ಕನ್ವರ್ ಯಾತ್ರೆ ವೇಳೆ 18 ದ್ವೇಷ ಘಟನೆಗಳು: ಮುಸ್ಲಿಮರು, ಅವರ ವ್ಯಾಪಾರಗಳನ್ನು ಗುರಿಯಾಗಿಸಿಕೊಂಡ ಪ್ರಕರಣಗಳೇ ಹೆಚ್ಚು; APCR ವರದಿ

ನವದೆಹಲಿ: 2026ರ ಕನ್ವರ್ ಯಾತ್ರೆಯ 13 ದಿನಗಳ ಅವಧಿಯಲ್ಲಿ ಹಿಂಸಾಚಾರ, ಬಲವಂತ, ತಾರತಮ್ಯ, ಆರ್ಥಿಕ ಬಹಿಷ್ಕಾರ ಹಾಗೂ ಸಾರ್ವಜನಿಕ ಅಶ್ಲೀಲ ವರ್ತನೆಗೆ ಸಂಬಂಧಿಸಿದ ಕನಿಷ್ಠ 18 ಘಟನೆಗಳು ವರದಿಯಾಗಿವೆ ಎಂದು ನಾಗರಿಕ ಹಕ್ಕುಗಳ...

ಸಿಐಟಿಯು ಕಾನೂನು ಹೋರಾಟಕ್ಕೆ ಮೊದಲ ಜಯ: ಕನಿಷ್ಠ ವೇತನ ತಡೆಹಿಡಿದಿದ್ದ ಸರ್ಕಾರದ ಮೂರು ಸುತ್ತೋಲೆಗಳಿಗೆ ಹೈಕೋರ್ಟ್ ತಡೆ

ಸರ್ಕಾರಿ ಇಲಾಖೆಗಳು ಮತ್ತು ಸ್ಥಳೀಯ ಸಂಸ್ಥೆಗಳಲ್ಲಿ ಕೆಲಸ ಮಾಡುವ ಲಕ್ಷಾಂತರ ಕಾರ್ಮಿಕರ ಹೊಸ ಕನಿಷ್ಠ ವೇತನವನ್ನು ತಡೆಹಿಡಿದಿದ್ದ ಸರ್ಕಾರದ ನಿರ್ಧಾರಕ್ಕೆ ಹೈಕೋರ್ಟ್ ಬ್ರೇಕ್ ಹಾಕಿದೆ. ಹೊಸ ವೇತನ ನೀಡುವುದನ್ನು ಅಮಾನತಿನಲ್ಲಿಟ್ಟಿದ್ದ ಸರ್ಕಾರದ ಮೂರು...

ಟಿಎಂಸಿ ಹೆಸರು, ಚಿಹ್ನೆ ಫ್ರೀಜ್: ಮಮತಾ ಬ್ಯಾನರ್ಜಿಗೆ ‘ಫುಟ್‌ಬಾಲ್ ಪ್ಲೇಯರ್’, ಬಂಡಾಯ ಬಣಕ್ಕೆ ‘ಲಕೋಟೆ’ ಚಿಹ್ನೆ ನೀಡಿದ ಚುನಾವಣಾ ಆಯೋಗ

ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂಲ ಹೆಸರು ಮತ್ತು ಸಾಂಪ್ರದಾಯಿಕ 'ಹೂವು-ಹುಲ್ಲು' ಚಿಹ್ನೆಯನ್ನು ಮುಟ್ಟುಗೋಲು (ಫ್ರೀಜ್) ಹಾಕಿದ ನಂತರ, ಭಾರತೀಯ ಚುನಾವಣಾ ಆಯೋಗವು ಶುಕ್ರವಾರ ಎರಡೂ ಎದುರಾಳಿ ಬಣಗಳಿಗೆ ಪ್ರತ್ಯೇಕ ಮಧ್ಯಂತರ ಹೆಸರು...

‘ರೋಹಿತ್ ವೇಮುಲಾ ಸ್ಥಿತಿ ನನಗೆ ಬಾರದಿರಲಿ..’; ವಿದೇಶದಲ್ಲಿ ಕಷ್ಟಕ್ಕೆ ಸಿಲುಕಿದ ತಮಿಳುನಾಡಿನ ದಲಿತ ಸಂಶೋಧಕ

ಮಲೇಷ್ಯಾದಲ್ಲಿ ಪಿಎಚ್‌ಡಿ ವ್ಯಾಸಂಗ ಮಾಡುತ್ತಿರುವ ತಮಿಳುನಾಡಿನ ದಲಿತ ಸಂಶೋಧನಾ ವಿದ್ಯಾರ್ಥಿ ಭಾರತಿ ದಾಸನ್ ರಾಮನ್, ತಮಿಳುನಾಡು ಸರ್ಕಾರದ ಸಾಮಾಜಿಕ ನ್ಯಾಯ ಇಲಾಖೆಯು ನನ್ನನ್ನು ಗುರಿಯಾಗಿಸಿಕೊಂಡಿದೆ ಎಂದು ಆರೋಪಿಸಿದ್ದಾರೆ ಎಂದು 'ದಿ ನ್ಯೂಸ್‌ ಮಿನಿಟ್'...

DUSU ಚುನಾವಣೆ: ಮತದಾನ ಆರಂಭ; ವಿಜಯೋತ್ಸವ ಮೆರವಣಿಗೆಗೆ ದೆಹಲಿ ಹೈಕೋರ್ಟ್ ತಡೆ

ದೆಹಲಿ ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘದ (DUSU) 2026-27ನೇ ಸಾಲಿನ ಚುನಾವಣೆಗೆ ಶುಕ್ರವಾರ (ಸೆ.18) ಮತದಾನ ಆರಂಭವಾಗಿದೆ. ಬೆಳಗಿನ ಅವಧಿಯ ಕಾಲೇಜುಗಳ ವಿದ್ಯಾರ್ಥಿಗಳಿಗೆ ಬೆಳಿಗ್ಗೆ 8:30ರಿಂದ ಮಧ್ಯಾಹ್ನ 1ರವರೆಗೆ ಹಾಗೂ ಸಂಜೆ ಕಾಲೇಜುಗಳ ವಿದ್ಯಾರ್ಥಿಗಳಿಗೆ...

ಕರಾವಳಿ ಇತಿಹಾಸದಲ್ಲೇ ಪ್ರಥಮ: ಮಂಗಳೂರಿನಲ್ಲಿ ಸಿಎಂ ‘ಡಿ.ಕೆ ಶಿವಕುಮಾರ್’ ನೇತೃತ್ವದಲ್ಲಿ ರಾಜ್ಯ ಸಚಿವ ಸಂಪುಟ ಸಭೆ

ಕರಾವಳಿ ಕರ್ನಾಟಕದ ಇತಿಹಾಸದಲ್ಲೇ ಇದೇ ಮೊದಲ ಬಾರಿಗೆ ರಾಜ್ಯ ಸಚಿವ ಸಂಪುಟ (Cabinet) ಸಭೆಯು ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರಿನ ಪಡೀಲ್‌ನಲ್ಲಿರುವ ನೂತನ 'ಪ್ರಜಾ ಸೌಧ'ದಲ್ಲಿ (ಜಿಲ್ಲಾಡಳಿತ ಸೌಧ) ಶುಕ್ರವಾರ ವಿಜೃಂಭಣೆಯಿಂದ ಆರಂಭವಾಗಿದೆ....

ಟಿಎಂಸಿ ಹೆಸರು, ಚಿಹ್ನೆ ಬಳಕೆಗೆ ತಡೆ: ಚುನಾವಣಾ ಆಯೋಗದ ಆದೇಶ ‘ಕಾನೂನಿಗೆ ವಿರುದ್ಧ’ ಎಂದ ಮಮತಾ ಬಣ, ಆದೇಶ ಸ್ವಾಗತಿಸಿದ ಬಂಡಾಯ ಪಾಳಯ 

ಕೊಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತ ರಾಜಕಾರಣದಲ್ಲಿ ಪ್ರಮುಖ ಶಕ್ತಿಯಾಗಿರುವ ತೃಣಮೂಲ ಕಾಂಗ್ರೆಸ್‌ (ಟಿಎಂಸಿ)ಯ ಆಂತರಿಕ ಬಿಕ್ಕಟ್ಟು ಇದೀಗ ಪಕ್ಷದ ಹೆಸರು ಮತ್ತು ಚುನಾವಣಾ ಚಿಹ್ನೆಯ ಮೇಲಿನ ಹಕ್ಕಿನ ಸಂಘರ್ಷವಾಗಿ ತೀವ್ರಗೊಂಡಿದೆ. ಟಿಎಂಸಿಯ ಎರಡು...