Homeಮುಖಪುಟಚುನಾವಣೆ ಮುಗಿದ ಕೂಡಲೇ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಸಿದ್ದತೆ: ಕಾಂಗ್ರೆಸ್ ವಿರೋಧ

ಚುನಾವಣೆ ಮುಗಿದ ಕೂಡಲೇ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಸಿದ್ದತೆ: ಕಾಂಗ್ರೆಸ್ ವಿರೋಧ

- Advertisement -
- Advertisement -

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ನಡೆಯುವ ಮುನ್ನ ತೆರಿಗೆ ಕಡಿಮೆ ಮಾಡಿ ಸರಕಾರ ತೈಲ ಬೆಲೆ ಕಡಿಮೆ ಮಾಡಿತು. ಉತ್ತರ ಪ್ರದೇಶದ ಏಳನೇ ಹಂತದ ಚುನಾವಣೆ ಇಂದು ಮುಗಿಯಲಿದೆ. ಇದರೊಂದಿಗೆ ತೈಲ ಕಂಪೆನಿಗಳು ಬೆಲೆ ಹೆಚ್ಚಿಸುವ ಸೂಚನೆ ನೀಡಿವೆ.

ಉಕ್ರೇನ್ ಮೇಲೆ ರಷ್ಯಾ ದಾಳಿ ಮಧ್ಯೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಬ್ಯಾರಲ್‌ಗೆ 130 ಡಾಲರ್‌ನಷ್ಟು ಏರಿಕೆಯಾಗಿದೆ. 2008ರ ನಂತರ ಅತ್ಯಂತ ಹೆಚ್ಚು ಬೆಲೆ ಇದಾಗಿದ್ದು, ರಷ್ಯಾದಿಂದ ಇಂಧನ ತರಿಸುವುದನ್ನು ನಿಲ್ಲಿಸಲು ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟಗಳು ನಿರ್ಬಂಧ ಹೇರಿದ್ದರಿಂದ ಈ ಬೆಳವಣಿಗೆ ನಡೆದಿದೆ.

ಇದೇ ವೇಳೆ ಭಾರತದ ಇಂಧನ ದರ ಹೆಚ್ಚಳವಾಗುವ ಸಾಧ್ಯತೆ ಇದೆ. ಪೆಟ್ರೋಲ್ ದರ ಲೀಟರ್‌ಗೆ 22 ರೂಪಾಯಿ ಹೆಚ್ಚಳವಾಗಲಿದೆ ಎಂದು ಅಂದಾಜಿಸಲಾಗಿದ್ದು, ಸದ್ಯ ಭಾರತವು ಖರೀದಿ ಮಾಡುತ್ತಿರುವ ಕಚ್ಚಾ ತೈಲ ಬ್ಯಾರಲ್‌ಗೆ 100 ಡಾಲರ್ ಆಗಿದೆ. ಇಂಧನ ಬೆಲೆ ಹೆಚ್ಚಳವಾಗುವ ಹಿನ್ನೆಲೆಯಲ್ಲಿ ದೇಶದಲ್ಲಾಗುವ ಸಮಸ್ಯೆ ತಡೆಯಲು ಅಬಕಾರಿ ತೆರಿಗೆ ಕಡಿಮೆ ಮಾಡುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ.

ಇಂಧನ ಬೆಲೆ ಏರಿಕೆಗೆ ಕಾಂಗ್ರೆಸ್ ವಿರೋಧ

ಇತ್ತೀಚೆಗಷ್ಟೇ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಚುನಾವಣೆ ಮುಗಿದ ಬಳಿಕ ಸರಕಾರ ತೈಲ ಬೆಲೆ ಹೆಚ್ಚಳ ಮಾಡಲಿದೆ ಎಂದು ಟ್ವಿಟರ್‌ನಲ್ಲಿ ವ್ಯಂಗ್ಯವಾಡಿದ್ದರು. “ಕೂಡಲೇ ಪೆಟ್ರೋಲ್ ಟ್ಯಾಂಕ್ ಪೂರ್ತಿ ತುಂಬಿಸಿಕೊಳ್ಳಿ. ಏಕೆಂದರೆ ಮೋದಿ ಸರ್ಕಾರದ ‘ಚುನಾವಣೆ’ ಆಫರ್ ಮುಗಿಯಲಿದೆ” ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಕಾಂಗ್ರೆಸ್ ಶಾಸಕ ಕೃಷ್ಣಭೈರೇಗೌಡರವರು ಟ್ವೀಟ್ ಮಾಡಿ, “ಚುನಾವಣೆ ಮುಗಿದಿದೆ. ಪೆಟ್ರೋಲ್/ಡೀಸೆಲ್ ಬೆಲೆ ಏರಿಕೆಗೆ ಸಿದ್ಧರಾಗಿ” ಎಂದು ಎಚ್ಚರಿಸಿದ್ದಾರೆ.

ಸರ್ಕಾರದ ನಿಯಂತ್ರಣವಿಲ್ಲ. ಯಾವುದೇ ಹಸ್ತಕ್ಷೇಪವಿಲ್ಲ ಎಂದು ನರೇಂದ್ರ ಮೋದಿಯವರು ಹೇಳುತ್ತಾರೆ. ಆದರೆ ಚುನಾವಣೆ ನಡೆಯುತ್ತಿರುವುದರಿಂದ 3 ತಿಂಗಳಾದರೂ ಬೆಲೆ ಏರಿಕೆಯಾಗಿಲ್ಲ. ಚುನಾವಣೆಗೂ ಬೆಲೆ ಏರಿಕೆಗೂ ಯಾವುದೇ ಸಂಬಂಧವಿಲ್ಲವೇ? ಕೇವಲ ಕಾಕತಾಳೀಯವೇ? ಹಾಗಾದರೆ ಮತದಾನ ಮುಗಿದ ಕೂಡಲೇ ಬೆಲೆ ಏರಿಕೆ ಪ್ರಾರಂಭವಾಗುವುದು ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಕಚ್ಚಾ ತೈಲವು ಬ್ಯಾರೆಲ್‌ಗೆ $110 ಇದ್ದಾಗ, ಯುಪಿಎ ಪೆಟ್ರೋಲ್ ಅನ್ನು ₹60 ಕ್ಕೆ ಮಾರಿತು.

ಕಚ್ಚಾ ತೈಲವು ಬ್ಯಾರೆಲ್‌ಗೆ $74 ಇದ್ದಾಗಲೂ ಮೋದಿ ಸರ್ಕಾರವು ಪೆಟ್ರೋಲ್ ಅನ್ನು ₹95 ಕ್ಕೆ ಮಾರಾಟ ಮಾಡಿತು.

ಈಗ ಕಚ್ಚಾ ತೈಲವು $ 109 ಕ್ಕೆ ಮರಳಿದಾಗ, ಬಿಜೆಪಿ ಯಾವ ಮಟ್ಟಕ್ಕೆ ಬೆಲೆಗಳನ್ನು ಹೆಚ್ಚಿಸಲಿದೆ ಎಂದು ಊಹಿಸಿ?

ಪೆಟ್ರೋಲ್ ಲೀಟರ್‌ಗೆ ₹120-130 ತಲುಪುತ್ತದೆಯೇ? ಎಂದು ಕಾಂಗ್ರೆಸ್ ವಕ್ತಾರ ಗೌರವ್ ಪಾಂಡಿ ಟ್ವೀಟ್ ಮಾಡಿದ್ದಾರೆ.

ಕೆಲ ತಿಂಗಳುಗಳ ಹಿಂದೆ ಕಂಪನಿಗಳು ಖರೀದಿಸಿದ ಕಚ್ಛಾ ತೈಲದ ಆಧಾರದ ಮೇಲೆ ಪೆಟ್ರೋಲ್/ಡೀಸೆಲ್ ಬೆಲೆಗಳು ಈಗ ಇದ್ದಕ್ಕಿದ್ದಂತೆ ಗಗನಕ್ಕೇರಲು ಹೇಗೆ ಸಾಧ್ಯ ಎಂಬುದನ್ನು ಯಾರಾದರೂ ವಿವರಿಸಬಹುದೇ? ಏಕೆಂದರೆ ಕಚ್ಚಾ ತೈಲವನ್ನು ಈ ಒಂದೆರೆಡು ದಿನದ ಹಿಂದೆ ಕೊಳ್ಳಲು ಸಾಧ್ಯವಿಲ್ಲ. ಏಕೆಂದರೆ ಗಲ್ಫ್‌ನಿಂದ ಕಚ್ಚಾ ತೈಲವನ್ನು ಸಾಗಿಸಲು ಹಲವು ವಾರಗಳನ್ನು ತೆಗೆದುಕೊಳ್ಳುತ್ತದೆ. ತೈಲ ಕಂಪನಿಗಳು ಸಾಗಣೆಗಾಗಿ ತಿಂಗಳ ಮುಂಚಿತವಾಗಿ ಕಚ್ಚಾ ತೈಲವನ್ನು ಖರೀದಿಸುತ್ತವೆ ಎಂದು ಜಾನ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಪ್ರಪಂಚದಾದ್ಯಂತ ಪೆಟ್ರೋಲ್ ಮೇಲಿನ ತೆರಿಗೆ:

ಅಮೆರಿಕ: 20%
ಜಪಾನ್: 45%
ಇಂಗ್ಲೆಂಡ್: 62%
ಜರ್ಮನಿ: 65%
ಭಾರತ: 260%

ಇದು ಮುದ್ರಣದೋಷವಲ್ಲ. ಪ್ರತಿ ಲೀಟರ್ ಪೆಟ್ರೋಲ್ ಮೇಲೆ ನಾವು 260% ತೆರಿಗೆಯನ್ನು ಪಾವತಿಸುತ್ತೇವೆ ಎಂದು ಕಾಂಗ್ರೆಸ್ ವಕ್ತಾರ ಸರಳ್ ಪಟೇಲ್ ಆತಂಕ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಪಾಕ್ ಕ್ರಿಕೆಟ್ ನಾಯಕಿಯ ಪುಟ್ಟ ಮಗುವಿನೊಂದಿಗೆ ಭಾರತೀಯ ತಂಡದ ಪ್ರೀತಿಯ ಕ್ಷಣಗಳು: ಎಲ್ಲೆಡೆ ಅಭಿಮಾನದ ಮಹಾಪೂರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ: “ಇದು ಬುಲ್ಡೋಜರ್ ರಾಜ್ಯವಲ್ಲ”: ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮತ್ತು ತೃಣಮೂಲ ಕಾಂಗ್ರೆಸ್ ಮುಖ್ಯಸ್ಥೆ ಮಮತಾ ಬ್ಯಾನರ್ಜಿ ಚುನಾವಣೋತ್ತರ ಹಿಂಸಾಚಾರದ ವಿರುದ್ಧ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಗುರುವಾರ ವಕೀಲರ ನಿಲುವಂಗಿಯನ್ನು ಧರಿಸಿ ಕಲ್ಕತ್ತಾ ಹೈಕೋರ್ಟ್‌ಗೆ ಬಂದ ಅವರು ವಿಧಾನಸಭಾ...

ದಾವಣಗೆರೆ ಉಪ ಚುನಾವಣೆ ಅಡ್ಡ ಪರಿಣಾಮ: ಮುಸ್ಲಿಮ್ ಮುಖಂಡರ ಮೇಲೆ ಖರ್ಗೆ-ಡಿಕೆಶಿ ಶಿಸ್ತು ಪ್ರಹಾರ ಕಾಂಗ್ರೆಸ್‌ನ ಆತ್ಮಹತ್ಯಾತ್ಮಕ ರಾಜಕಾರಣ!!

ದಾವಣಗೆರೆ ದಕ್ಷಿಣ ಉಪ ಚುನಾವಣೆ ರಾಜ್ಯದ ಆಡಳಿತಾರೂಢ ಕಾಂಗ್ರೆಸ್‌ನ ಗದ್ದುಗೆ ಗುದ್ದಾಟಕ್ಕೆ ರೋಚಕ ಆಯಾಮ ನೀಡಿಬಿಟ್ಟಿದೆ. ಅಹಿಂದ ಸಮುದಾಯವೇ ಬಹುಜನರಾಗಿರುವ ದಾವಣಗೆರೆ ದಕ್ಷಿಣ ಅಸೆಂಬ್ಲಿ ಕ್ಷೇತ್ರದಲ್ಲಿ ಕಾಂಗ್ರೆಸ್ ನ್ಯಾಯವಾಗಿ ಆ ವರ್ಗದ ಅರ್ಹರೊಬ್ಬರಿಗೆ...

ನೀಟ್ ವಿವಾದ: ಪ್ರಶ್ನೆ ಪತ್ರಿಕೆ ಸೋರಿಕೆ ಜೊತೆಗೆ ಹೆಚ್ಚುತ್ತಿರುವ ವಿದ್ಯಾರ್ಥಿಗಳ ಆತ್ಮಹತ್ಯೆ

ರಾಜಸ್ಥಾನದಲ್ಲಿ ನಡೆದ ನೀಟ್-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ (ಸಿಬಿಐ) ತನಿಖೆ ವೇಗ ಪಡೆದುಕೊಂಡಿದೆ. ದೇಶದಾದ್ಯಂತ ಹಲವು ವಿದ್ಯಾರ್ಥಿ ಸಂಘಟನೆಗಳು ಪ್ರತಿಭಟನೆ ನಡೆಸುತ್ತಿವೆ. ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ...

ಎಸ್‌ಐಆರ್‌ನಲ್ಲಿ ಮತದಾನದ ಹಕ್ಕು ಹೋಯ್ತು..ಈಗ ಸರ್ಕಾರಿ ಸೌಲಭ್ಯದ ಸರದಿ..ಮುಂದೆ ನಾಗರಿಕತ್ವ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುವುದು ಚುನಾವಣಾ ಆಯೋಗ ಭಾರತದ ಕೋಟ್ಯಾಂತರ ನಾಗರಿಕ ಅಮೂಲ್ಯವಾದ ಮತದಾನದ ಹಕ್ಕನ್ನು ಕಿತ್ತುಕೊಂಡ ಒಂದು ವ್ಯವಸ್ಥಿತ ಸಂಚು ಎನ್ನಬಹುದು. ಬಿಹಾರ, ಪಶ್ಚಿಮ ಬಂಗಾಳ, ತಮಿಳುನಾಡು,...

ಜೋಸೆಫ್ ವಿಜಯ್‌ ಅವರ ಐತಿಹಾಸಿಕ ಗೆಲುವು: ರಾಜ್ಯಪಾಲರ ಸೋಲು ಮತ್ತು ದ್ರಾವಿಡ ನೆಲದ ರಾಜಕೀಯ: ಒಂದು ವಿಶ್ಲೇಷಣೆ

ತಮಿಳಗ ವೆಟ್ರಿ ಕಝಗಂ (TVK) ಪಕ್ಷವು ತಮಿಳುನಾಡು ವಿಧಾನಸಭೆಯಲ್ಲಿ ಬಹುಮತ ಸಾಬೀತುಪಡಿಸಿ ಸರ್ಕಾರ ರಚಿಸುವ ಜವಾಬ್ದಾರಿ ತೆಗೆದುಕೊಂಡಿದೆ. ಮೇ 13, 2026ರ ಬುಧವಾರ ನಡೆದ ನಾಟಕೀಯ ವಿಶ್ವಾಸ ಮತಯಾಚನೆಯಲ್ಲಿ 144 ಮತಗಳ ಬೆಂಬಲ...

FACT CHECK: ಟಿವಿಕೆ ಪಕ್ಷ ಅಧಿಕಾರಕ್ಕೆ ಬರುತ್ತಿದಂತೆ ಹಿಂದಿ ಹೇರಿಕೆ ವಿರುದ್ದ ಪ್ರತಿಭಟನೆ ಎಂದು ಹಳೆಯ ವಿಡಿಯೋ ಹಂಚಿಕೆ

ಹಿಂದಿ ಹೇರಿಕೆ ವಿರುದ್ದದ ಹೋರಾಟವು ತಮಿಳುನಾಡಿಗೆ ಹೊಸದೇನು ಅಲ್ಲ. ಆದರೆ ಚೆನ್ನೈನ ಜವಾಹರಲಾಲ್ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ ವಿಜಯ್ ನೇತೃತ್ವದ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಪಕ್ಷ ಅಧಿಕಾರ ವಹಿಸಿಕೊಂಡ ನಂತರ ...

ನೀಟ್: ಪ್ರಶ್ನೆಪತ್ರಿಕೆ ಸೋರಿಕೆಯ ಆತಂಕ ಮತ್ತು ಪ್ರಾದೇಶಿಕ ಹಿತಾಸಕ್ತಿಗಳ ಬಲಿ

ಪ್ರಶ್ನೆ ಪತ್ರಿಕೆ ಸೋರಿಕೆಯಾಗಿರುವ ಆರೋಪದ ಮೇಲೆ ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ...

ಕೇಂದ್ರ ಸಚಿವ ಬಂಡಿ ಸಂಜಯ್ ಮಗನ ವಿರುದ್ಧ ಪೋಕ್ಸೋ ಕೇಸ್ : ಕ್ರಮ ಕೈಗೊಳ್ಳದೆ ಕಥೆ ಹೇಳುತ್ತಿರುವ ಪೊಲೀಸರು, ಅಂತರ ಕಾಯ್ದುಕೊಂಡ ಬಿಜೆಪಿ

ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ, ತೆಲಂಗಾಣದ ಪ್ರಮುಖ ಬಿಜೆಪಿ ನಾಯಕ ಬಂಡಿ ಸಂಜಯ್ ಕುಮಾರ್ ಅವರ ಮಗ ಬಂಡಿ ಸಾಯಿ ಭಗೀರತ್ ವಿರುದ್ಧ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಪೋಕ್ಸೋ...

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...