Homeಮುಖಪುಟಚುನಾವಣೆ ಮುಗಿದ ಕೂಡಲೇ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಸಿದ್ದತೆ: ಕಾಂಗ್ರೆಸ್ ವಿರೋಧ

ಚುನಾವಣೆ ಮುಗಿದ ಕೂಡಲೇ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಸಿದ್ದತೆ: ಕಾಂಗ್ರೆಸ್ ವಿರೋಧ

- Advertisement -
- Advertisement -

ಐದು ರಾಜ್ಯಗಳ ವಿಧಾನಸಭಾ ಚುನಾವಣೆ ನಡೆಯುವ ಮುನ್ನ ತೆರಿಗೆ ಕಡಿಮೆ ಮಾಡಿ ಸರಕಾರ ತೈಲ ಬೆಲೆ ಕಡಿಮೆ ಮಾಡಿತು. ಉತ್ತರ ಪ್ರದೇಶದ ಏಳನೇ ಹಂತದ ಚುನಾವಣೆ ಇಂದು ಮುಗಿಯಲಿದೆ. ಇದರೊಂದಿಗೆ ತೈಲ ಕಂಪೆನಿಗಳು ಬೆಲೆ ಹೆಚ್ಚಿಸುವ ಸೂಚನೆ ನೀಡಿವೆ.

ಉಕ್ರೇನ್ ಮೇಲೆ ರಷ್ಯಾ ದಾಳಿ ಮಧ್ಯೆ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲ ದರ ಬ್ಯಾರಲ್‌ಗೆ 130 ಡಾಲರ್‌ನಷ್ಟು ಏರಿಕೆಯಾಗಿದೆ. 2008ರ ನಂತರ ಅತ್ಯಂತ ಹೆಚ್ಚು ಬೆಲೆ ಇದಾಗಿದ್ದು, ರಷ್ಯಾದಿಂದ ಇಂಧನ ತರಿಸುವುದನ್ನು ನಿಲ್ಲಿಸಲು ಅಮೆರಿಕ ಮತ್ತು ಯುರೋಪಿಯನ್ ಒಕ್ಕೂಟಗಳು ನಿರ್ಬಂಧ ಹೇರಿದ್ದರಿಂದ ಈ ಬೆಳವಣಿಗೆ ನಡೆದಿದೆ.

ಇದೇ ವೇಳೆ ಭಾರತದ ಇಂಧನ ದರ ಹೆಚ್ಚಳವಾಗುವ ಸಾಧ್ಯತೆ ಇದೆ. ಪೆಟ್ರೋಲ್ ದರ ಲೀಟರ್‌ಗೆ 22 ರೂಪಾಯಿ ಹೆಚ್ಚಳವಾಗಲಿದೆ ಎಂದು ಅಂದಾಜಿಸಲಾಗಿದ್ದು, ಸದ್ಯ ಭಾರತವು ಖರೀದಿ ಮಾಡುತ್ತಿರುವ ಕಚ್ಚಾ ತೈಲ ಬ್ಯಾರಲ್‌ಗೆ 100 ಡಾಲರ್ ಆಗಿದೆ. ಇಂಧನ ಬೆಲೆ ಹೆಚ್ಚಳವಾಗುವ ಹಿನ್ನೆಲೆಯಲ್ಲಿ ದೇಶದಲ್ಲಾಗುವ ಸಮಸ್ಯೆ ತಡೆಯಲು ಅಬಕಾರಿ ತೆರಿಗೆ ಕಡಿಮೆ ಮಾಡುವಂತೆ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಲಾಗುತ್ತಿದೆ.

ಇಂಧನ ಬೆಲೆ ಏರಿಕೆಗೆ ಕಾಂಗ್ರೆಸ್ ವಿರೋಧ

ಇತ್ತೀಚೆಗಷ್ಟೇ ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿಯವರು ಚುನಾವಣೆ ಮುಗಿದ ಬಳಿಕ ಸರಕಾರ ತೈಲ ಬೆಲೆ ಹೆಚ್ಚಳ ಮಾಡಲಿದೆ ಎಂದು ಟ್ವಿಟರ್‌ನಲ್ಲಿ ವ್ಯಂಗ್ಯವಾಡಿದ್ದರು. “ಕೂಡಲೇ ಪೆಟ್ರೋಲ್ ಟ್ಯಾಂಕ್ ಪೂರ್ತಿ ತುಂಬಿಸಿಕೊಳ್ಳಿ. ಏಕೆಂದರೆ ಮೋದಿ ಸರ್ಕಾರದ ‘ಚುನಾವಣೆ’ ಆಫರ್ ಮುಗಿಯಲಿದೆ” ಎಂದು ರಾಹುಲ್ ಟ್ವೀಟ್ ಮಾಡಿದ್ದಾರೆ.

ಕರ್ನಾಟಕದ ಕಾಂಗ್ರೆಸ್ ಶಾಸಕ ಕೃಷ್ಣಭೈರೇಗೌಡರವರು ಟ್ವೀಟ್ ಮಾಡಿ, “ಚುನಾವಣೆ ಮುಗಿದಿದೆ. ಪೆಟ್ರೋಲ್/ಡೀಸೆಲ್ ಬೆಲೆ ಏರಿಕೆಗೆ ಸಿದ್ಧರಾಗಿ” ಎಂದು ಎಚ್ಚರಿಸಿದ್ದಾರೆ.

ಸರ್ಕಾರದ ನಿಯಂತ್ರಣವಿಲ್ಲ. ಯಾವುದೇ ಹಸ್ತಕ್ಷೇಪವಿಲ್ಲ ಎಂದು ನರೇಂದ್ರ ಮೋದಿಯವರು ಹೇಳುತ್ತಾರೆ. ಆದರೆ ಚುನಾವಣೆ ನಡೆಯುತ್ತಿರುವುದರಿಂದ 3 ತಿಂಗಳಾದರೂ ಬೆಲೆ ಏರಿಕೆಯಾಗಿಲ್ಲ. ಚುನಾವಣೆಗೂ ಬೆಲೆ ಏರಿಕೆಗೂ ಯಾವುದೇ ಸಂಬಂಧವಿಲ್ಲವೇ? ಕೇವಲ ಕಾಕತಾಳೀಯವೇ? ಹಾಗಾದರೆ ಮತದಾನ ಮುಗಿದ ಕೂಡಲೇ ಬೆಲೆ ಏರಿಕೆ ಪ್ರಾರಂಭವಾಗುವುದು ಏಕೆ ಎಂದು ಅವರು ಪ್ರಶ್ನಿಸಿದ್ದಾರೆ.

ಕಚ್ಚಾ ತೈಲವು ಬ್ಯಾರೆಲ್‌ಗೆ $110 ಇದ್ದಾಗ, ಯುಪಿಎ ಪೆಟ್ರೋಲ್ ಅನ್ನು ₹60 ಕ್ಕೆ ಮಾರಿತು.

ಕಚ್ಚಾ ತೈಲವು ಬ್ಯಾರೆಲ್‌ಗೆ $74 ಇದ್ದಾಗಲೂ ಮೋದಿ ಸರ್ಕಾರವು ಪೆಟ್ರೋಲ್ ಅನ್ನು ₹95 ಕ್ಕೆ ಮಾರಾಟ ಮಾಡಿತು.

ಈಗ ಕಚ್ಚಾ ತೈಲವು $ 109 ಕ್ಕೆ ಮರಳಿದಾಗ, ಬಿಜೆಪಿ ಯಾವ ಮಟ್ಟಕ್ಕೆ ಬೆಲೆಗಳನ್ನು ಹೆಚ್ಚಿಸಲಿದೆ ಎಂದು ಊಹಿಸಿ?

ಪೆಟ್ರೋಲ್ ಲೀಟರ್‌ಗೆ ₹120-130 ತಲುಪುತ್ತದೆಯೇ? ಎಂದು ಕಾಂಗ್ರೆಸ್ ವಕ್ತಾರ ಗೌರವ್ ಪಾಂಡಿ ಟ್ವೀಟ್ ಮಾಡಿದ್ದಾರೆ.

ಕೆಲ ತಿಂಗಳುಗಳ ಹಿಂದೆ ಕಂಪನಿಗಳು ಖರೀದಿಸಿದ ಕಚ್ಛಾ ತೈಲದ ಆಧಾರದ ಮೇಲೆ ಪೆಟ್ರೋಲ್/ಡೀಸೆಲ್ ಬೆಲೆಗಳು ಈಗ ಇದ್ದಕ್ಕಿದ್ದಂತೆ ಗಗನಕ್ಕೇರಲು ಹೇಗೆ ಸಾಧ್ಯ ಎಂಬುದನ್ನು ಯಾರಾದರೂ ವಿವರಿಸಬಹುದೇ? ಏಕೆಂದರೆ ಕಚ್ಚಾ ತೈಲವನ್ನು ಈ ಒಂದೆರೆಡು ದಿನದ ಹಿಂದೆ ಕೊಳ್ಳಲು ಸಾಧ್ಯವಿಲ್ಲ. ಏಕೆಂದರೆ ಗಲ್ಫ್‌ನಿಂದ ಕಚ್ಚಾ ತೈಲವನ್ನು ಸಾಗಿಸಲು ಹಲವು ವಾರಗಳನ್ನು ತೆಗೆದುಕೊಳ್ಳುತ್ತದೆ. ತೈಲ ಕಂಪನಿಗಳು ಸಾಗಣೆಗಾಗಿ ತಿಂಗಳ ಮುಂಚಿತವಾಗಿ ಕಚ್ಚಾ ತೈಲವನ್ನು ಖರೀದಿಸುತ್ತವೆ ಎಂದು ಜಾನ್ ಎಂಬುವವರು ಟ್ವೀಟ್ ಮಾಡಿದ್ದಾರೆ.

ಪ್ರಪಂಚದಾದ್ಯಂತ ಪೆಟ್ರೋಲ್ ಮೇಲಿನ ತೆರಿಗೆ:

ಅಮೆರಿಕ: 20%
ಜಪಾನ್: 45%
ಇಂಗ್ಲೆಂಡ್: 62%
ಜರ್ಮನಿ: 65%
ಭಾರತ: 260%

ಇದು ಮುದ್ರಣದೋಷವಲ್ಲ. ಪ್ರತಿ ಲೀಟರ್ ಪೆಟ್ರೋಲ್ ಮೇಲೆ ನಾವು 260% ತೆರಿಗೆಯನ್ನು ಪಾವತಿಸುತ್ತೇವೆ ಎಂದು ಕಾಂಗ್ರೆಸ್ ವಕ್ತಾರ ಸರಳ್ ಪಟೇಲ್ ಆತಂಕ ವ್ಯಕ್ತಪಡಿಸಿದ್ದಾರೆ.


ಇದನ್ನೂ ಓದಿ: ಪಾಕ್ ಕ್ರಿಕೆಟ್ ನಾಯಕಿಯ ಪುಟ್ಟ ಮಗುವಿನೊಂದಿಗೆ ಭಾರತೀಯ ತಂಡದ ಪ್ರೀತಿಯ ಕ್ಷಣಗಳು: ಎಲ್ಲೆಡೆ ಅಭಿಮಾನದ ಮಹಾಪೂರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...

ಕಾವೇರಿ ಪ್ರತಿಭಟನೆ ವೇಳೆ ಆಕ್ಷೇಪಾರ್ಹ ಹೇಳಿಕೆ : ತಮಿಳುನಾಡಿನ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಬಂಧನ

ಸೋಮವಾರ (ಆ.3) ತಂಜಾವೂರಿನಲ್ಲಿ ನಡೆದ ಕಾವೇರಿ ಪ್ರತಿಭಟನೆ ಸಂದರ್ಭದಲ್ಲಿ ವಿವಾದಾತ್ಮಕ ಹೇಳಿಕೆ ನೀಡಿದ ಆರೋಪದ ಮೇಲೆ ತಮಿಳುನಾಡಿನ ವಿರೋಧ ಪಕ್ಷದ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಉದಯನಿಧಿ ಬಂಧನಕ್ಕೂ...

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...