Homeಮುಖಪುಟದಾಖಲೆ ಬರೆದ ಪೆಟ್ರೋಲ್, ಡೀಸೆಲ್ ಬೆಲೆಗಳು: ಮುಂಬೈನಲ್ಲಿ ಸೆಂಚುರಿ ಬಾರಿಸಿದ ಪೆಟ್ರೋಲ್

ದಾಖಲೆ ಬರೆದ ಪೆಟ್ರೋಲ್, ಡೀಸೆಲ್ ಬೆಲೆಗಳು: ಮುಂಬೈನಲ್ಲಿ ಸೆಂಚುರಿ ಬಾರಿಸಿದ ಪೆಟ್ರೋಲ್

- Advertisement -
- Advertisement -

ಇವತ್ತು ಆರ್ಥಿಕ ರಾಜಧಾನಿ ಮುಂಬೈನಲ್ಲಿ ಪೆಟ್ರೋಲ್ ದರ 100 ರೂ. ದಾಟುವುದರೊಂದಿಗೆ ಸಾರ್ವಕಾಲಿಕ ದಾಖಲೆ ಬರೆದಿದೆ. ಮೇ 2ರಿಂದ ಇಲ್ಲಿವರೆಗೆ 15 ನೇ ಬಾರಿಗೆ ದರ ಹೆಚ್ಚಿಸಲಾಗಿದ್ದು, ದೇಶದಲ್ಲಿ ಪೆಟ್ರೋಲ್ ಮತ್ತು ಡಿಸೇಲ್ ದರಗಳು ಗರಿಷ್ಠ ಮಟ್ಟಕ್ಕೆ ತಲುಪಿವೆ.

ಮೇ 29 ರ ಶನಿವಾರದಂದು ನಾಲ್ಕು ಮಹಾನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಪೆಟ್ರೋಲ್ ಬೆಲೆಯನ್ನು 26 ಪೈಸೆ ಲೀಟರ್‌ಗೆ ಅಂದರೆ, 93.68 ರೂ.ನಿಂದ 93.94 ಕ್ಕೆ ಏರಿಸಿದರೆ, ಡೀಸೆಲ್ ಬೆಲೆಯನ್ನು 84.61 ರಿಂದ 28 ಪೈಸೆ ಹೆಚ್ಚಿಸಲಾಗಿದೆ. ಇಂಡಿಯನ್ ಆಯಿಲ್ ಕಾರ್ಪೊರೇಶನ್‌ನ ಪ್ರಕಾರ ಪ್ರತಿ ಲೀಟರ್‌ಗೆ ಈಗ ಡಿಸೇಲ್ ದರ 84.89 ರೂ.ಗೆ ತಲುಪಿದೆ.

ಪಶ್ಚಿಮ ಬಂಗಾಳ, ತಮಿಳುನಾಡು ಸೇರಿ ಐದು ರಾಜ್ಯಗಳಲ್ಲಿ ವಿಧಾನಸಭಾ ಚುನಾವಣೆಯ ಸಂದರ್ಭದಲ್ಲಿ ದರ ಪರಿಷ್ಕರಣೆಯಲ್ಲಿ 18 ದಿನಗಳ ವಿರಾಮವನ್ನು ನೀಡಿದ್ದ ಕಂಪನಿಗಳು, ಮೇ 2ರಂದು ಫಲಿತಾಂಶಗಳು ಹೊರಬಿದ್ದ ದಿನದಿಂದ ಇಲ್ಲಿವರೆಗೆ 15 ಸಲ ದರ ಏರಿಕೆ ಮಾಡಿವೆ.

ಪೆಟ್ರೋಲ್ ಮುಂಬಯಿಯಲ್ಲಿ 100 ರೂ. ಗಡಿ ದಾಟಿದ್ದು ಅದು ಈಗ 100.19 ರೂ ಆಗಿದೆ. ಮುಂಬೈನಲ್ಲಿ ಡೀಸೆಲ್ ದರ 92.17 ರೂ.ಗೆ ಏರಿದೆ. ಇದಲ್ಲದೆ, ಮಧ್ಯಪ್ರದೇಶ ಮತ್ತು ರಾಜಸ್ಥಾನದ ಹಲವಾರು ನಗರಗಳಲ್ಲಿ ಪೆಟ್ರೋಲ್ ದರವು ಈಗಾಗಲೇ 100 ರೂ ದಾಟಿದೆ. ಮೌಲ್ಯವರ್ಧಿತ ತೆರಿಗೆ ಅಥವಾ ವ್ಯಾಟ್‌ನಿಂದಾಗಿ ದೇಶದ ರಾಜ್ಯಗಳಲ್ಲಿ ಇಂಧನ ದರಗಳು ಬದಲಾಗುತ್ತವೆ.

ಇಂಡಿಯನ್ ಆಯಿಲ್ ಕಾರ್ಪೊರೇಷನ್ (ಐಒಸಿ), ಭಾರತ್ ಪೆಟ್ರೋಲಿಯಂ, ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂ ಸೇರಿದಂತೆ ಸರ್ಕಾರಿ ತೈಲ ಮಾರುಕಟ್ಟೆ ಕಂಪನಿಗಳು ವಿದೇಶಿ ವಿನಿಮಯ ದರಗಳಲ್ಲಿನ ಯಾವುದೇ ಬದಲಾವಣೆಗಳನ್ನು ಗಣನೆಗೆ ತೆಗೆದುಕೊಂಡು ದೇಶೀಯ ಇಂಧನದ ದರವನ್ನು ಜಾಗತಿಕ ಕಚ್ಚಾ ತೈಲ ಬೆಲೆಗಳೊಂದಿಗೆ ಹೊಂದಿಸುತ್ತವೆ. ಇಂಧನ ಬೆಲೆಯಲ್ಲಿನ ಯಾವುದೇ ಬದಲಾವಣೆಗಳನ್ನು ಪ್ರತಿದಿನ ಬೆಳಿಗ್ಗೆ 6 ಗಂಟೆಯಿಂದ ಜಾರಿಗೆ ತರಲಾಗುತ್ತದೆ.

ಪೆಟ್ರೋಲ್, ಡೀಸೆಲ್ ಬೆಲೆಗಳು ರೆಕಾರ್ಡ್ ಹೈನಲ್ಲಿ, ಪೆಟ್ರೋಲ್ ಮುಂಬೈನಲ್ಲಿ 100 ರೂ ಆದರೆ
ದೆಹಲಿ, ಬೆಂಗಳೂರು, ಚೆನ್ನೈ ಮುಂಬೈನಲ್ಲಿ ಇಂದು ಪೆಟ್ರೋಲ್ ಮತ್ತು ಡೀಸೆಲ್ ದರ ಹೆಚ್ಚಾಗಿದೆ.

ಈ ನಡುವೆ, ಮೇ 28 ರ ಶುಕ್ರವಾರ, ಜಾಗತಿಕ ತೈಲ ಮಾನದಂಡವಾದ ಬ್ರೆಂಟ್ ಕಚ್ಚಾ ತೈಲದ ದರವು ಪ್ರತಿ ಬ್ಯಾರೆಲ್‌ಗೆ ಶೇ 0.30 ರಷ್ಟು ಏರಿಕೆ ಕಂಡು 69.67 ಡಾಲರ್‌ಗೆ ತಲುಪಿದೆ.


ಇದನ್ನೂ ಓದಿ: 99.94 ರೂ ತಲುಪಿದ ಪೆಟ್ರೋಲ್ ದರ: ಬ್ಯಾಟಿಂಗ್ ದೈತ್ಯ ಡಾನ್ ಬ್ರಾಡಮನ್‌ಗೆ ಮುಂಬೈ ಶ್ರದ್ದಾಂಜಲಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....