Homeಮುಖಪುಟ12 ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಅಲ್ಪ ಇಳಿಕೆ: ಯಾರ್ಯಾರು, ಎಷ್ಟೆಷ್ಟು?

12 ರಾಜ್ಯಗಳಲ್ಲಿ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಅಲ್ಪ ಇಳಿಕೆ: ಯಾರ್ಯಾರು, ಎಷ್ಟೆಷ್ಟು?

ತಮಿಳುನಾಡು ಸರ್ಕಾರವು ಆಗಸ್ಟ್ 6 ರಂದೇ ಲೀಟರ್‌ ಪೆಟ್ರೋಲ್ ಮೇಲೆ ತಲಾ 3 ರೂ ತೆರಿಗೆ ಕಡಿತ ಘೋಷಿಸಿತ್ತು. 

- Advertisement -
- Advertisement -

ಕಳೆದೊಂದು ವರ್ಷದಿಂದ ಹೆಚ್ಚಳವಾಗಿದ್ದ ಪೆಟ್ರೋಲ್, ಡೀಸೆಲ್ ಬೆಲೆಯಲ್ಲಿ ಕೊಂಚ ಇಳಿಕೆ ಕಂಡಿದೆ. ಒಕ್ಕೂಟ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಶುಂಕವನ್ನು ಪ್ರತಿ ಲೀಟರ್ ಮೇಲೆ 5 ರೂ ಮತ್ತು ಡೀಸೆಲ್ ಮೇಲೆ 10 ರೂ ಕಡಿತಗೊಳಿಸಿದೆ. ಇದರ ಬೆನ್ನಲ್ಲೆ ಬಿಜೆಪಿ ಆಡಳಿತದ 10 ರಾಜ್ಯಗಳು ಮತ್ತು ಇತರ ಎರಡು ರಾಜ್ಯಗಳು ಸಹ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಕಡಿತ ಮಾಡಿವೆ.

ಕರ್ನಾಟಕ, ಹಿಮಾಚಲ ಪ್ರದೇಶ, ತ್ರಿಪುರ, ಮಣಿಪುರ, ಅಸ್ಸಾಂ, ಗೋವಾ, ಉತ್ತರ ಪ್ರದೇಶ, ಗುಜರಾತ್, ಹರಿಯಾಣ ಉತ್ತರಖಂಡ, ಬಿಹಾರ ಮತ್ತು ಓರಿಸ್ಸಾ ರಾಜ್ಯಗಳು ತಮ್ಮ ವ್ಯಾಟ್ ಕಡಿತ ಮಾಡಿವೆ. ಕರ್ನಾಟಕ, ತ್ರಿಪುರ, ಮಣಿಪುರ, ಅಸ್ಸಾಂ, ಹರಿಯಾಣ, ಗೋವಾ ರಾಜ್ಯಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಲೀಟರ್‌ಗೆ ತಲಾ 7 ರೂ ಕಡಿತಗೊಳಿಸಿವೆ. ಉಳಿದ ರಾಜ್ಯಗಳು ತಲಾ 2 ರೂನಷ್ಟು ಕಡಿತಗೊಳಿಸಿವೆ.

ಒಕ್ಕೂಟ ಸರ್ಕಾರದ ಬೆಲೆ ಕಡಿತವು ಗುರುವಾರ ಮುಂಜಾನೆಯಿಂದಲೇ ಜಾರಿಗೆ ಬಂದಿದ್ದರೆ ರಾಜ್ಯಗಳು ಘೋಷಿಸಿರುವ ಬೆಲೆ ಕಡಿತವು ಗುರುವಾರ ಸಂಜೆ ನಂತರ ಜಾರಿಗೆ ಬರಲಿದೆ ಎನ್ನಲಾಗಿದೆ.

ಇಂದು ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 107.64 ರೂ ಇದ್ದರೆ, ಡೀಸೆಲ್ ಬೆಲೆ 92.03 ರೂ ಆಗಿದೆ.

ಬಿಹಾರ

ಬಿಹಾರದಲ್ಲಿ ಜೆಡಿಯು ಮತ್ತು ಬಿಜೆಪಿ ಮೈತ್ರಿಕೂಟ ಅಧಿಕಾರದಲ್ಲಿದೆ. ಅಲ್ಲಿನ ಮುಖ್ಯಮಂತ್ರಿ ನಿತೀಶ್ ಕುಮಾರ್‌ರವರು ಲೀಟರ್ ಪೆಟ್ರೋಲ್ ಮೇಲೆ 3.20 ರೂ ಮತ್ತು ಡೀಸೆಲ್ ಮೇಲೆ 3.90ರೂ ವ್ಯಾಟ್ ಕಡಿತ ಮಾಡಿದ್ದಾರೆ.

ಓರಿಸ್ಸಾ

ಓರಿಸ್ಸಾ ಮುಖ್ಯಮಂತ್ರಿ ನವೀನ್ ಪಟ್ನಾಯಕ್‌ರವರು ಲೀಟರ್ ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ತಲಾ 3 ರೂ ಕಡಿತಗೊಳಿಸುವುದಾಗಿ ತಿಳಿಸಿದ್ದಾರೆ. ಈ ಆದೇಶವು ನವೆಂಬರ್ 05ರ ಮಧ್ಯರಾತ್ರಿಯಿಂದ ಜಾರಿಗೆ ಬರಲಿದೆ ಎಂದಿದ್ದಾರೆ.

ತಮಿಳುನಾಡು ಸರ್ಕಾರವು ಆಗಸ್ಟ್ 6 ರಂದೇ ಲೀಟರ್‌ ಪೆಟ್ರೋಲ್ ಮೇಲೆ ತಲಾ 3 ರೂ ತೆರಿಗೆ ಕಡಿತ ಘೋಷಿಸಿತ್ತು.

ಈ ಬೆಲೆ ಇಳಿಕೆಯಿಂದ ದೊಡ್ಡ ಮಟ್ಟದ ಪ್ರಯೋಜನವಿಲ್ಲ. ಕಳೆದ ಒಂದು ವರ್ಷದಿಂದ ಪ್ರತಿ ಲೀಟರ್ ಮೇಲೆ ನಿರಂತರವಾಗಿ 35 – 40 ರೂಗಳಷ್ಟು ಬೆಲೆ ಏರಿಕೆ ಮಾಡಲಾಗಿದೆ. ಅಲ್ಲದೇ ಅಂತರಾಷ್ಟ್ರೀಯ ಕಚ್ಛಾ ತೈಲದ ಬೆಲೆಯೂ ಇಳಿಕೆಯಾಗಿದೆ. ಹಾಗಾಗಿ ಸಣ್ಣ ಮಟ್ಟದ ಬೆಲೆ ಇಳಿಕೆಗಿಂತ ದೊಡ್ಡ ಮಟ್ಟದ ಬೆಲೆ ಇಳಿಕೆಯಾಗಬೇಕೆಂದು ಹಲವಾರು ಜನರು ಆಗ್ರಹಿಸಿದ್ದಾರೆ.


ಇದನ್ನೂ ಓದಿ: ಉಪಚುನಾವಣೆ ಸೋಲಿನಿಂದಾಗಿ ಕೇಂದ್ರವು ಪೆಟ್ರೋಲ್, ಡೀಸೆಲ್ ತೆರಿಗೆ ಕಡಿತಗೊಳಿಸಿದೆ: ಪಿ ಚಿದಂಬರಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...