Homeಮುಖಪುಟಸಣ್ಣ ಮಟ್ಟದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ: ಮಿಶ್ರ ಪ್ರತಿಕ್ರಿಯೆ

ಸಣ್ಣ ಮಟ್ಟದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ: ಮಿಶ್ರ ಪ್ರತಿಕ್ರಿಯೆ

- Advertisement -
- Advertisement -

ಕಳೆದೊಂದು ವರ್ಷದಿಂದ ಸತತ ಏರುಗತಿಯಲ್ಲಿದ್ದ ಇಂಧನದ ಬೆಲೆಯಲ್ಲಿ ಸಣ್ಣ ಮಟ್ಟದ ಇಳಿಕೆಯಾಗಿದೆ. ಒಕ್ಕೂಟ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಶುಂಕವನ್ನು ಪ್ರತಿ ಲೀಟರ್ ಮೇಲೆ 5 ರೂ ಮತ್ತು ಡೀಸೆಲ್ ಮೇಲೆ 10 ರೂ ಕಡಿತಗೊಳಿಸಿದೆ. ಇದರ ಬೆನ್ನಲ್ಲೆ ಬಿಜೆಪಿ ಆಡಳಿತದ 9 ರಾಜ್ಯಗಳು ಸಹ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಕಡಿತ ಮಾಡಿವೆ. ಈ ಕ್ರಮಕ್ಕೆ ಜನರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರನ್ನು ಅನುಸರಿಸಿ ಕರ್ನಾಟಕ, ಹಿಮಾಚಲ ಪ್ರದೇಶ, ತ್ರಿಪುರ, ಮಣಿಪುರ, ಅಸ್ಸಾಂ, ಗೋವಾ, ಉತ್ತರ ಪ್ರದೇಶ, ಗುಜರಾತ್ ಮತ್ತು ಉತ್ತರಖಂಡ ರಾಜ್ಯಗಳು ತಮ್ಮ ವ್ಯಾಟ್ ಕಡಿತ ಮಾಡಿವೆ. ಕರ್ನಾಟಕ, ತ್ರಿಪುರ, ಮಣಿಪುರ, ಅಸ್ಸಾಂ, ಗೋವಾ ರಾಜ್ಯಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಲೀಟರ್‌ಗೆ ತಲಾ 7 ರೂ ಕಡಿತಗೊಳಿಸಿವೆ. ಉಳಿದ ರಾಜ್ಯಗಳು ತಲಾ 2 ರೂನಷ್ಟು ಕಡಿತಗೊಳಿಸಿವೆ.

ಒಕ್ಕೂಟ ಸರ್ಕಾರದ ಬೆಲೆ ಕಡಿತವು ಗುರುವಾರ ಮುಂಜಾನೆಯಿಂದಲೇ ಜಾರಿಗೆ ಬಂದಿದ್ದರೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಘೋಷಿಸಿರುವ ಬೆಲೆ ಕಡಿತವು ಗುರುವಾರ ಸಂಜೆಯಿಂದ ಜಾರಿಗೆ ಬರಲಿದೆ ಎನ್ನಲಾಗಿದೆ.

ಇಂದು ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 107.64 ರೂ ಇದ್ದರೆ, ಡೀಸೆಲ್ ಬೆಲೆ 92.03 ರೂ ಆಗಿದೆ.

“ಕರ್ನಾಟಕ ರಾಜ್ಯ ಸರಕಾರವು ಡೀಸೆಲ್‌ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ದರಿಸಿದೆ. ಈ ನಮ್ಮ ನಿರ್ಧಾರದಿಂದ ರಾಜ್ಯ ಸರಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ‌” ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿದ್ದಾರೆ.

5 ರೂ ಕಡಿತಗೊಳಿಸಿದ ನಿಮ್ಮ ನಾಟಕ ನಿಲ್ಲಿಸಿ – ಲಾಲುಪ್ರಸಾದ್ ಯಾದವ್

ಮೋದಿ ಸರ್ಕಾರ ಘೋಷಿಸಿದ ಬೆಲೆ ಇಳಿಕೆ ಯಾವುದಕ್ಕೂ ಸಾಲುವುದಿಲ್ಲ. 5 ರೂ ಕಡಿತಗೊಳಿಸಿದ ನಿಮ್ಮ ನಾಟಕ ನಿಲ್ಲಿಸಿ. ಉತ್ತರ ಪ್ರದೇಶ ಚುನಾವಣೆ ಬಳಿಕೆ ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಗಳು ಹೆಚ್ಚಾಗಲಿವೆ. 50 ರೂ ಕಡಿತಗೊಳಿಸಿದ್ದರೆ ಮಾತ್ರ ಜನರಿಗೆ ಉಪಯೋಗವಾಗಲಿದೆ ಎಂದು ಆರ್‌ಜೆಡಿ ವರಷ್ಟರಾದ ಲಾಲುಪ್ರಸಾದ್ ಯಾದವ್ ಪ್ರತಿಕ್ರಿಯಿಸಿದ್ದಾರೆ.

ಈ ಒಂದು ವರ್ಷದಲ್ಲಿ ಪೆಟ್ರೋಲ್ ಬೆಲೆ ಹೆಚ್ಚಿಸಿದ್ದು : ₹36, ಕಡಿತಗೊಳಿಸಿದ್ದು : ₹5

ಡೀಸೆಲ್ ಬೆಲೆ ; ಹೆಚ್ಚಿಸಿದ್ದು : ₹27 ಕಡಿತಗೊಳಿಸಿದ್ದು : ₹10

ಮೋದಿ ಸರ್ಕಾರ ಮಾಡಬೇಕಿದಿದ್ದು: ತೆರಿಗೆ ಭಯೋತ್ಪಾದನೆ ನಿಲ್ಲಿಸಲಿ.
ಇಂತಹ ಕಣ್ಣೊರೆಸುವ ತಂತ್ರಗಳಿಂದ ಜನರನ್ನು ಮೂರ್ಖರನ್ನಾಗಿಸುವುದು ನಿಲ್ಲಿಸಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕಿಸಲಾಗಿದೆ.

ಉಪಚುನಾವಣೆ ಸೋಲಿನಿಂದ ಬೆಲೆ ಇಳಿಕೆ?

ಅಕ್ಟೋಬರ್ 30 ರಂದು ನಡೆದ 30 ವಿಧಾನಸಭಾ ಕ್ಷೇತ್ರಗಳು ಮತ್ತು 3 ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲುಂಟಾಗಿದೆ. ಇದರಲ್ಲಿ ಬಿಜೆಪಿ ಕೇವಲ 7 ವಿಧಾನಸಭೆ ಮತ್ತು ಒಂದು ಲೋಕಸಭಾ ಚುನಾವಣೆಯಲ್ಲಿ ಮಾತ್ರ ಗೆದ್ದಿತ್ತು. ಬಿಜೆಪಿ ಅಧಿಕಾರದಲ್ಲಿರುವ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಮೂರು ವಿಧಾನಸಭೆ ಮತ್ತು ಒಂದು ಲೋಕಸಭಾ ಕ್ಷೇತ್ರದಲ್ಲಿ ಹೀನಾಯ ಸೋಲುಂಡಿತ್ತು.

ಅದೇ ರೀತಿ ಕರ್ನಾಟಕ, ರಾಜಸ್ಥಾನ, ಮಹಾರಾಷ್ಟ್ರದಲ್ಲಿ ಬಿಜೆಪಿ ಸೋತಿತ್ತು. ಇದು ಮುಂಬರುವ ರಾಜ್ಯಗಳ ವಿಧಾನಸಭಾ ಚುನಾವಣೆಯ ದಿಕ್ಸೂಚಿ ಎಂಬ ಮಾತುಗಳು ಕೇಳಿಬಂದಿದ್ದವು. 2022ರ ಆರಂಭದಲ್ಲಿ ಗೋವಾ, ಉತ್ತರ ಪ್ರದೇಶ ಸೇರಿ ಹಲವು ರಾಜ್ಯಗಳಲ್ಲಿ ಚುನಾವಣೆ ಇರುವುದರಿಂದ ಈ ಸಣ್ಣ ಮಟ್ಟದ ಬೆಲೆ ಇಳಿಕೆ ಮಾಡಲಾಗಿದೆ ಎಂದು ಹಲವರು ದೂರಿದ್ದಾರೆ.


ಇದನ್ನೂ ಓದಿ: ಪೆಟ್ರೋಲ್ ದರ ಹೆಚ್ಚಳಕ್ಕೆ ಆಯಿಲ್ ಬಾಂಡ್ ಕಾರಣ? – BJP ನಾಯಕರ ಹೇಳಿಕೆಯ ನಿಜಾಂಶವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...