Homeಮುಖಪುಟಸಣ್ಣ ಮಟ್ಟದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ: ಮಿಶ್ರ ಪ್ರತಿಕ್ರಿಯೆ

ಸಣ್ಣ ಮಟ್ಟದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ: ಮಿಶ್ರ ಪ್ರತಿಕ್ರಿಯೆ

- Advertisement -
- Advertisement -

ಕಳೆದೊಂದು ವರ್ಷದಿಂದ ಸತತ ಏರುಗತಿಯಲ್ಲಿದ್ದ ಇಂಧನದ ಬೆಲೆಯಲ್ಲಿ ಸಣ್ಣ ಮಟ್ಟದ ಇಳಿಕೆಯಾಗಿದೆ. ಒಕ್ಕೂಟ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಶುಂಕವನ್ನು ಪ್ರತಿ ಲೀಟರ್ ಮೇಲೆ 5 ರೂ ಮತ್ತು ಡೀಸೆಲ್ ಮೇಲೆ 10 ರೂ ಕಡಿತಗೊಳಿಸಿದೆ. ಇದರ ಬೆನ್ನಲ್ಲೆ ಬಿಜೆಪಿ ಆಡಳಿತದ 9 ರಾಜ್ಯಗಳು ಸಹ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಕಡಿತ ಮಾಡಿವೆ. ಈ ಕ್ರಮಕ್ಕೆ ಜನರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರನ್ನು ಅನುಸರಿಸಿ ಕರ್ನಾಟಕ, ಹಿಮಾಚಲ ಪ್ರದೇಶ, ತ್ರಿಪುರ, ಮಣಿಪುರ, ಅಸ್ಸಾಂ, ಗೋವಾ, ಉತ್ತರ ಪ್ರದೇಶ, ಗುಜರಾತ್ ಮತ್ತು ಉತ್ತರಖಂಡ ರಾಜ್ಯಗಳು ತಮ್ಮ ವ್ಯಾಟ್ ಕಡಿತ ಮಾಡಿವೆ. ಕರ್ನಾಟಕ, ತ್ರಿಪುರ, ಮಣಿಪುರ, ಅಸ್ಸಾಂ, ಗೋವಾ ರಾಜ್ಯಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಲೀಟರ್‌ಗೆ ತಲಾ 7 ರೂ ಕಡಿತಗೊಳಿಸಿವೆ. ಉಳಿದ ರಾಜ್ಯಗಳು ತಲಾ 2 ರೂನಷ್ಟು ಕಡಿತಗೊಳಿಸಿವೆ.

ಒಕ್ಕೂಟ ಸರ್ಕಾರದ ಬೆಲೆ ಕಡಿತವು ಗುರುವಾರ ಮುಂಜಾನೆಯಿಂದಲೇ ಜಾರಿಗೆ ಬಂದಿದ್ದರೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಘೋಷಿಸಿರುವ ಬೆಲೆ ಕಡಿತವು ಗುರುವಾರ ಸಂಜೆಯಿಂದ ಜಾರಿಗೆ ಬರಲಿದೆ ಎನ್ನಲಾಗಿದೆ.

ಇಂದು ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 107.64 ರೂ ಇದ್ದರೆ, ಡೀಸೆಲ್ ಬೆಲೆ 92.03 ರೂ ಆಗಿದೆ.

“ಕರ್ನಾಟಕ ರಾಜ್ಯ ಸರಕಾರವು ಡೀಸೆಲ್‌ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ದರಿಸಿದೆ. ಈ ನಮ್ಮ ನಿರ್ಧಾರದಿಂದ ರಾಜ್ಯ ಸರಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ‌” ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿದ್ದಾರೆ.

5 ರೂ ಕಡಿತಗೊಳಿಸಿದ ನಿಮ್ಮ ನಾಟಕ ನಿಲ್ಲಿಸಿ – ಲಾಲುಪ್ರಸಾದ್ ಯಾದವ್

ಮೋದಿ ಸರ್ಕಾರ ಘೋಷಿಸಿದ ಬೆಲೆ ಇಳಿಕೆ ಯಾವುದಕ್ಕೂ ಸಾಲುವುದಿಲ್ಲ. 5 ರೂ ಕಡಿತಗೊಳಿಸಿದ ನಿಮ್ಮ ನಾಟಕ ನಿಲ್ಲಿಸಿ. ಉತ್ತರ ಪ್ರದೇಶ ಚುನಾವಣೆ ಬಳಿಕೆ ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಗಳು ಹೆಚ್ಚಾಗಲಿವೆ. 50 ರೂ ಕಡಿತಗೊಳಿಸಿದ್ದರೆ ಮಾತ್ರ ಜನರಿಗೆ ಉಪಯೋಗವಾಗಲಿದೆ ಎಂದು ಆರ್‌ಜೆಡಿ ವರಷ್ಟರಾದ ಲಾಲುಪ್ರಸಾದ್ ಯಾದವ್ ಪ್ರತಿಕ್ರಿಯಿಸಿದ್ದಾರೆ.

ಈ ಒಂದು ವರ್ಷದಲ್ಲಿ ಪೆಟ್ರೋಲ್ ಬೆಲೆ ಹೆಚ್ಚಿಸಿದ್ದು : ₹36, ಕಡಿತಗೊಳಿಸಿದ್ದು : ₹5

ಡೀಸೆಲ್ ಬೆಲೆ ; ಹೆಚ್ಚಿಸಿದ್ದು : ₹27 ಕಡಿತಗೊಳಿಸಿದ್ದು : ₹10

ಮೋದಿ ಸರ್ಕಾರ ಮಾಡಬೇಕಿದಿದ್ದು: ತೆರಿಗೆ ಭಯೋತ್ಪಾದನೆ ನಿಲ್ಲಿಸಲಿ.
ಇಂತಹ ಕಣ್ಣೊರೆಸುವ ತಂತ್ರಗಳಿಂದ ಜನರನ್ನು ಮೂರ್ಖರನ್ನಾಗಿಸುವುದು ನಿಲ್ಲಿಸಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕಿಸಲಾಗಿದೆ.

ಉಪಚುನಾವಣೆ ಸೋಲಿನಿಂದ ಬೆಲೆ ಇಳಿಕೆ?

ಅಕ್ಟೋಬರ್ 30 ರಂದು ನಡೆದ 30 ವಿಧಾನಸಭಾ ಕ್ಷೇತ್ರಗಳು ಮತ್ತು 3 ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲುಂಟಾಗಿದೆ. ಇದರಲ್ಲಿ ಬಿಜೆಪಿ ಕೇವಲ 7 ವಿಧಾನಸಭೆ ಮತ್ತು ಒಂದು ಲೋಕಸಭಾ ಚುನಾವಣೆಯಲ್ಲಿ ಮಾತ್ರ ಗೆದ್ದಿತ್ತು. ಬಿಜೆಪಿ ಅಧಿಕಾರದಲ್ಲಿರುವ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಮೂರು ವಿಧಾನಸಭೆ ಮತ್ತು ಒಂದು ಲೋಕಸಭಾ ಕ್ಷೇತ್ರದಲ್ಲಿ ಹೀನಾಯ ಸೋಲುಂಡಿತ್ತು.

ಅದೇ ರೀತಿ ಕರ್ನಾಟಕ, ರಾಜಸ್ಥಾನ, ಮಹಾರಾಷ್ಟ್ರದಲ್ಲಿ ಬಿಜೆಪಿ ಸೋತಿತ್ತು. ಇದು ಮುಂಬರುವ ರಾಜ್ಯಗಳ ವಿಧಾನಸಭಾ ಚುನಾವಣೆಯ ದಿಕ್ಸೂಚಿ ಎಂಬ ಮಾತುಗಳು ಕೇಳಿಬಂದಿದ್ದವು. 2022ರ ಆರಂಭದಲ್ಲಿ ಗೋವಾ, ಉತ್ತರ ಪ್ರದೇಶ ಸೇರಿ ಹಲವು ರಾಜ್ಯಗಳಲ್ಲಿ ಚುನಾವಣೆ ಇರುವುದರಿಂದ ಈ ಸಣ್ಣ ಮಟ್ಟದ ಬೆಲೆ ಇಳಿಕೆ ಮಾಡಲಾಗಿದೆ ಎಂದು ಹಲವರು ದೂರಿದ್ದಾರೆ.


ಇದನ್ನೂ ಓದಿ: ಪೆಟ್ರೋಲ್ ದರ ಹೆಚ್ಚಳಕ್ಕೆ ಆಯಿಲ್ ಬಾಂಡ್ ಕಾರಣ? – BJP ನಾಯಕರ ಹೇಳಿಕೆಯ ನಿಜಾಂಶವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅದಾನಿ–ಲಿಯೊನಾರ್ಡೊ ಒಪ್ಪಂದ| ಹೊಸ ರೂಪದಲ್ಲಿ ಭಾರತಕ್ಕೆ ಮರಳಿದ ಕಪ್ಪುಪಟ್ಟಿಗೆ ಸೇರಿದ್ದ ಅಗಸ್ಟಾ ವೆಸ್ಟ್‌ಲ್ಯಾಂಡ್!

ಅದಾನಿ ಡಿಫೆನ್ಸ್ ಆಂಡ್ ಏರೋಸ್ಪೇಸ್ ಮತ್ತು ಇಟಲಿಯ ಲಿಯೊನಾರ್ಡೊ ಕಂಪನಿಗಳು ಮಂಗಳವಾರ (ಫೆ.3) ಕಾರ್ಯತಂತ್ರದ ಒಪ್ಪಂದವೊಂದಕ್ಕೆ ಸಹಿ ಹಾಕಿದ್ದು, ಭಾರತದ ಹೆಲಿಕಾಪ್ಟರ್ ಉತ್ಪಾದನಾ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅಭಿವೃದ್ಧಿಪಡಿಸಲು ಈ ಒಪ್ಪಂದ ಮಾಡಿಕೊಳ್ಳಲಾಗಿದೆ...

ಮಧ್ಯಪ್ರದೇಶದಲ್ಲಿ ದಲಿತ ವ್ಯಕ್ತಿಯ ಮೇಲೆ ಹಲ್ಲೆ; ವೀಡಿಯೊ ವೈರಲ್ ಬಳಿಕ ಆರೋಪಿ ಬಂಧನ

ಏಳು ತಿಂಗಳ ಹಿಂದಿನ ಘಟನೆಯ ಎರಡು ವೀಡಿಯೊಗಳು ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ನಂತರ ಮಧ್ಯಪ್ರದೇಶದ ಮೊರೆನಾ ಜಿಲ್ಲೆಯಲ್ಲಿ 20 ವರ್ಷದ ದಲಿತ ವ್ಯಕ್ತಿಯ ಮೇಲೆ ಹಲ್ಲೆ ಮತ್ತು ಅವಮಾನ ಮಾಡಿದ ಆರೋಪದ...

ಮಣಿಪುರದಲ್ಲಿ ಹೊಸ ಸರ್ಕಾರ : ಮೈತೇಯಿ ಸಮುದಾಯದ ವೈ. ಖೇಮ್ಚಂದ್‌ ನೂತನ ಸಿಎಂ, ಕುಕಿ-ನಾಗಾ ಸಮುದಾಯಗಳಿಗೆ ಡಿಸಿಎಂ ಹುದ್ದೆ

ಸುಮಾರು ಒಂದು ವರ್ಷದಿಂದ ರಾಷ್ಟ್ರಪತಿ ಆಳ್ವಿಕೆಯಲ್ಲಿರುವ ಮಣಿಪುರದಲ್ಲಿ ಹೊಸ ಸರ್ಕಾರ ರಚನೆಗೆ ಬಿಜೆಪಿ ಸಿದ್ದತೆ ನಡೆಸಿದೆ. ಶಾಸಕಾಂಗ ಪಕ್ಷದ ನಾಯಕರಾಗಿ ಮಾಜಿ ಸಚಿವ ಯುಮ್ನಮ್ ಖೇಮ್ಚಂದ್ ಸಿಂಗ್ ಅವರನ್ನು ಮಂಗಳವಾರ (ಜ.3) ಆಯ್ಕೆ...

ಸುಪ್ರೀಂ ಕೋರ್ಟ್ ನಿರ್ದೇಶನದ ಹೊರತಾಗಿಯೂ ಮುಂದುವರೆದ ಬುಲ್ಡೋಝರ್ ಅ’ನ್ಯಾಯ’ : ಯುಪಿ ಸರ್ಕಾರಕ್ಕೆ ಅಲಾಹಾಬಾದ್‌ ಹೈಕೋರ್ಟ್‌ ಛೀಮಾರಿ

ಉತ್ತರ ಪ್ರದೇಶದ ಸರ್ಕಾರದ "ಬುಲ್ಡೋಝರ್ ಅನ್ಯಾಯ" ವಿರುದ್ಧ ಸುಪ್ರೀಂ ಕೋರ್ಟ್ 2024ರ ನವೆಂಬರ್‌ನಲ್ಲಿ ಕಟ್ಟುನಿಟ್ಟಾದ ತೀರ್ಪು ನೀಡಿದ್ದರೂ, ದಂಡನಾತ್ಮಕ ಕ್ರಮವಾಗಿ ಕಟ್ಟಡಗಳನ್ನು ಉರುಳಿಸುವ ಪ್ರಕ್ರಿಯೆ ಇನ್ನೂ ಮುಂದುವರಿಯುತ್ತಿರುವುದರ ಬಗ್ಗೆ ಅಲಹಾಬಾದ್ ಹೈಕೋರ್ಟ್ ತೀವ್ರ...

‘ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರ ಪ್ರೋತ್ಸಾಹಿಸುತ್ತಿದೆ’: ಮೆಹಬೂಬಾ ಮುಫ್ತಿ ಆರೋಪ

ಶ್ರೀನಗರ: ಕೇಂದ್ರಾಡಳಿತ ಪ್ರದೇಶದ ಹೊರಗೆ ಕಾಶ್ಮೀರಿಗಳ ವಿರುದ್ಧ ಗುಂಪು ಹಿಂಸಾಚಾರಕ್ಕೆ ರಾಜ್ಯ ಸರ್ಕಾರಗಳು ಪ್ರೋತ್ಸಾಹ ನೀಡುತ್ತಿರುವಂತೆ ಕಾಣುತ್ತಿದೆ, ಕಾನೂನಿನ ಆಡಳಿತವನ್ನು ದ್ವೇಷವು ಬದಲಾಯಿಸಲು ಅವಕಾಶ ನೀಡುತ್ತದೆ ಎಂದು ಪಿಡಿಪಿ ಅಧ್ಯಕ್ಷೆ ಮೆಹಬೂಬಾ ಮುಫ್ತಿ...

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ | ಒತ್ತಡಕ್ಕೆ ಮಣಿದು ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ : ರಾಹುಲ್ ಗಾಂಧಿ

ಭಾರತ-ಅಮೆರಿಕ ವ್ಯಾಪಾರ ಒಪ್ಪಂದ ಸಂಬಂಧ ಪ್ರಧಾನಿ ನರೇಂದ್ರ ಮೋದಿ ವಿರುದ್ದ ವಿಪಕ್ಷ ನಾಯಕ ರಾಹುಲ್ ಗಾಂಧಿ ಮಂಗಳವಾರ (ಫೆ.3) ತೀವ್ರ ವಾಗ್ದಾಳಿ ನಡೆಸಿದ್ದು, "ಪ್ರಧಾನಿ ರಾಜಿ ಮಾಡಿಕೊಂಡಿದ್ದಾರೆ, ದೇಶವನ್ನು ಮಾರಿದ್ದಾರೆ" ಎಂದು ಆರೋಪಿಸಿದರು. ಸಂಸತ್ತಿನ...

ಧರ್ಮಸ್ಥಳ ಪ್ರಕರಣದ ಚರ್ಚೆ ವೇಳೆ ಹಲ್ಲೆಗೆ ಯತ್ನ; ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ, ಕಿರಿಕ್ ಕೀರ್ತಿ ವಿರುದ್ಧ ಎಫ್‌ಐಆರ್

2025ರ ಅಕ್ಟೋಬರ್‌ನಲ್ಲಿ ‘R.ಕನ್ನಡ’ ಸುದ್ದಿ ವಾಹಿನಿಯಲ್ಲಿ ಧರ್ಮಸ್ಥಳ ಪ್ರಕರಣ ಸಂಬಂಧ ನಡೆದಿದ್ದ ಚರ್ಚಾ ಕಾರ್ಯಕ್ರಮದ ವೇಳೆ ದಾಂಧಲೆ ನಡೆಸಿ, ಹಲ್ಲೆಗೆ ಯತ್ನಿಸಿದ್ದ ಹಿಂದುತ್ವ ಕೋಮುವಾದಿ ಕಾರ್ಯಕರ್ತ ವಸಂತ್ ಗಿಳಿಯಾರ್, ಪುನೀತ್ ಕೆರೆಹಳ್ಳಿ ಹಾಗೂ...

ಲೋಕಸಭೆಯಲ್ಲಿ ನರವಾಣೆ ಆತ್ಮಕಥೆ ಗದ್ದಲ : ವಿಪಕ್ಷಗಳ 8 ಮಂದಿ ಸಂಸದರು ಅಮಾನತು

ಮಾಜಿ ಸೇನಾ ಮುಖ್ಯಸ್ಥ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಕತೆಯ ವಿಚಾರ ಮಂಗಳವಾರ (ಫೆ.3) ಕೂಡ ಲೋಕಸಭೆಯಲ್ಲಿ ತೀವ್ರ ಗದ್ದಲಕ್ಕೆ ಕಾರಣವಾಯಿತು. ಪುಸ್ತಕದ ವಿಷಯಗಳನ್ನು ಪ್ರಸ್ತಾಪಿಸಲು ವಿರೋಧ ಪಕ್ಷದ ನಾಯಕ ರಾಹುಲ್...

ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್ ರಾಷ್ಟ್ರಪತಿಗಳಿಗೆ ಬರೆದ ಮನ ಮುಟ್ಟುವ ಪತ್ರ

ಕೇಂದ್ರ ಸರ್ಕಾರ ವಿಬಿಜಿ- ರಾಮ್ ಜಿ 2025 ಕಾನೂನನ್ನು ವಾಪಸ್ ಪಡೆಯಬೇಕು ಹಾಗೂ ನರೇಗಾ ಯೋಜನೆಯನ್ನು ಮರು ಸ್ಥಾಪಿಸಬೇಕು ಎಂದು ಮನ್ರೇಗಾ ಕಾರ್ಮಿಕರ ಮಹಾ ಪಂಚಾಯತ್‌ ರಾಷ್ಟ್ರಪತಿಗಳಿಗೆ ಮನವಿ ಪತ್ರ ಸಲ್ಲಿಸಿದೆ.  2026 ಫೆಬ್ರವರಿ...

ಗುಜರಾತ್‌| ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ

ಗುಜರಾತ್‌ನ ಪಠಾನ್ ಜಿಲ್ಲೆಯ ಗ್ರಾಮವೊಂದರಲ್ಲಿ, ಕುದುರೆ ಸವಾರಿ ಮಾಡಿದ ದಲಿತ ವರನ ಮೇಲೆ ಕತ್ತಿಯಿಂದ ಹಲ್ಲೆ ನಡೆಸಿರುವ ಘಟನೆ ನಡೆದಿದೆ. ದಲಿತ ಸಮುದಾಯದ ಯುವಕ ವಿಶಾಲ್ ಚಾವ್ಡಾಗೆ ಮದುವೆಯ ಸಂತೋಷದ ದಿನವು ಜೀವನದ ದುಃಸ್ವಪ್ನವಾಗಿ...