Homeಮುಖಪುಟಸಣ್ಣ ಮಟ್ಟದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ: ಮಿಶ್ರ ಪ್ರತಿಕ್ರಿಯೆ

ಸಣ್ಣ ಮಟ್ಟದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ: ಮಿಶ್ರ ಪ್ರತಿಕ್ರಿಯೆ

- Advertisement -
- Advertisement -

ಕಳೆದೊಂದು ವರ್ಷದಿಂದ ಸತತ ಏರುಗತಿಯಲ್ಲಿದ್ದ ಇಂಧನದ ಬೆಲೆಯಲ್ಲಿ ಸಣ್ಣ ಮಟ್ಟದ ಇಳಿಕೆಯಾಗಿದೆ. ಒಕ್ಕೂಟ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಶುಂಕವನ್ನು ಪ್ರತಿ ಲೀಟರ್ ಮೇಲೆ 5 ರೂ ಮತ್ತು ಡೀಸೆಲ್ ಮೇಲೆ 10 ರೂ ಕಡಿತಗೊಳಿಸಿದೆ. ಇದರ ಬೆನ್ನಲ್ಲೆ ಬಿಜೆಪಿ ಆಡಳಿತದ 9 ರಾಜ್ಯಗಳು ಸಹ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಕಡಿತ ಮಾಡಿವೆ. ಈ ಕ್ರಮಕ್ಕೆ ಜನರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರನ್ನು ಅನುಸರಿಸಿ ಕರ್ನಾಟಕ, ಹಿಮಾಚಲ ಪ್ರದೇಶ, ತ್ರಿಪುರ, ಮಣಿಪುರ, ಅಸ್ಸಾಂ, ಗೋವಾ, ಉತ್ತರ ಪ್ರದೇಶ, ಗುಜರಾತ್ ಮತ್ತು ಉತ್ತರಖಂಡ ರಾಜ್ಯಗಳು ತಮ್ಮ ವ್ಯಾಟ್ ಕಡಿತ ಮಾಡಿವೆ. ಕರ್ನಾಟಕ, ತ್ರಿಪುರ, ಮಣಿಪುರ, ಅಸ್ಸಾಂ, ಗೋವಾ ರಾಜ್ಯಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಲೀಟರ್‌ಗೆ ತಲಾ 7 ರೂ ಕಡಿತಗೊಳಿಸಿವೆ. ಉಳಿದ ರಾಜ್ಯಗಳು ತಲಾ 2 ರೂನಷ್ಟು ಕಡಿತಗೊಳಿಸಿವೆ.

ಒಕ್ಕೂಟ ಸರ್ಕಾರದ ಬೆಲೆ ಕಡಿತವು ಗುರುವಾರ ಮುಂಜಾನೆಯಿಂದಲೇ ಜಾರಿಗೆ ಬಂದಿದ್ದರೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಘೋಷಿಸಿರುವ ಬೆಲೆ ಕಡಿತವು ಗುರುವಾರ ಸಂಜೆಯಿಂದ ಜಾರಿಗೆ ಬರಲಿದೆ ಎನ್ನಲಾಗಿದೆ.

ಇಂದು ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 107.64 ರೂ ಇದ್ದರೆ, ಡೀಸೆಲ್ ಬೆಲೆ 92.03 ರೂ ಆಗಿದೆ.

“ಕರ್ನಾಟಕ ರಾಜ್ಯ ಸರಕಾರವು ಡೀಸೆಲ್‌ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ದರಿಸಿದೆ. ಈ ನಮ್ಮ ನಿರ್ಧಾರದಿಂದ ರಾಜ್ಯ ಸರಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ‌” ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿದ್ದಾರೆ.

5 ರೂ ಕಡಿತಗೊಳಿಸಿದ ನಿಮ್ಮ ನಾಟಕ ನಿಲ್ಲಿಸಿ – ಲಾಲುಪ್ರಸಾದ್ ಯಾದವ್

ಮೋದಿ ಸರ್ಕಾರ ಘೋಷಿಸಿದ ಬೆಲೆ ಇಳಿಕೆ ಯಾವುದಕ್ಕೂ ಸಾಲುವುದಿಲ್ಲ. 5 ರೂ ಕಡಿತಗೊಳಿಸಿದ ನಿಮ್ಮ ನಾಟಕ ನಿಲ್ಲಿಸಿ. ಉತ್ತರ ಪ್ರದೇಶ ಚುನಾವಣೆ ಬಳಿಕೆ ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಗಳು ಹೆಚ್ಚಾಗಲಿವೆ. 50 ರೂ ಕಡಿತಗೊಳಿಸಿದ್ದರೆ ಮಾತ್ರ ಜನರಿಗೆ ಉಪಯೋಗವಾಗಲಿದೆ ಎಂದು ಆರ್‌ಜೆಡಿ ವರಷ್ಟರಾದ ಲಾಲುಪ್ರಸಾದ್ ಯಾದವ್ ಪ್ರತಿಕ್ರಿಯಿಸಿದ್ದಾರೆ.

ಈ ಒಂದು ವರ್ಷದಲ್ಲಿ ಪೆಟ್ರೋಲ್ ಬೆಲೆ ಹೆಚ್ಚಿಸಿದ್ದು : ₹36, ಕಡಿತಗೊಳಿಸಿದ್ದು : ₹5

ಡೀಸೆಲ್ ಬೆಲೆ ; ಹೆಚ್ಚಿಸಿದ್ದು : ₹27 ಕಡಿತಗೊಳಿಸಿದ್ದು : ₹10

ಮೋದಿ ಸರ್ಕಾರ ಮಾಡಬೇಕಿದಿದ್ದು: ತೆರಿಗೆ ಭಯೋತ್ಪಾದನೆ ನಿಲ್ಲಿಸಲಿ.
ಇಂತಹ ಕಣ್ಣೊರೆಸುವ ತಂತ್ರಗಳಿಂದ ಜನರನ್ನು ಮೂರ್ಖರನ್ನಾಗಿಸುವುದು ನಿಲ್ಲಿಸಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕಿಸಲಾಗಿದೆ.

ಉಪಚುನಾವಣೆ ಸೋಲಿನಿಂದ ಬೆಲೆ ಇಳಿಕೆ?

ಅಕ್ಟೋಬರ್ 30 ರಂದು ನಡೆದ 30 ವಿಧಾನಸಭಾ ಕ್ಷೇತ್ರಗಳು ಮತ್ತು 3 ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲುಂಟಾಗಿದೆ. ಇದರಲ್ಲಿ ಬಿಜೆಪಿ ಕೇವಲ 7 ವಿಧಾನಸಭೆ ಮತ್ತು ಒಂದು ಲೋಕಸಭಾ ಚುನಾವಣೆಯಲ್ಲಿ ಮಾತ್ರ ಗೆದ್ದಿತ್ತು. ಬಿಜೆಪಿ ಅಧಿಕಾರದಲ್ಲಿರುವ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಮೂರು ವಿಧಾನಸಭೆ ಮತ್ತು ಒಂದು ಲೋಕಸಭಾ ಕ್ಷೇತ್ರದಲ್ಲಿ ಹೀನಾಯ ಸೋಲುಂಡಿತ್ತು.

ಅದೇ ರೀತಿ ಕರ್ನಾಟಕ, ರಾಜಸ್ಥಾನ, ಮಹಾರಾಷ್ಟ್ರದಲ್ಲಿ ಬಿಜೆಪಿ ಸೋತಿತ್ತು. ಇದು ಮುಂಬರುವ ರಾಜ್ಯಗಳ ವಿಧಾನಸಭಾ ಚುನಾವಣೆಯ ದಿಕ್ಸೂಚಿ ಎಂಬ ಮಾತುಗಳು ಕೇಳಿಬಂದಿದ್ದವು. 2022ರ ಆರಂಭದಲ್ಲಿ ಗೋವಾ, ಉತ್ತರ ಪ್ರದೇಶ ಸೇರಿ ಹಲವು ರಾಜ್ಯಗಳಲ್ಲಿ ಚುನಾವಣೆ ಇರುವುದರಿಂದ ಈ ಸಣ್ಣ ಮಟ್ಟದ ಬೆಲೆ ಇಳಿಕೆ ಮಾಡಲಾಗಿದೆ ಎಂದು ಹಲವರು ದೂರಿದ್ದಾರೆ.


ಇದನ್ನೂ ಓದಿ: ಪೆಟ್ರೋಲ್ ದರ ಹೆಚ್ಚಳಕ್ಕೆ ಆಯಿಲ್ ಬಾಂಡ್ ಕಾರಣ? – BJP ನಾಯಕರ ಹೇಳಿಕೆಯ ನಿಜಾಂಶವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...