Homeಮುಖಪುಟಸಣ್ಣ ಮಟ್ಟದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ: ಮಿಶ್ರ ಪ್ರತಿಕ್ರಿಯೆ

ಸಣ್ಣ ಮಟ್ಟದಲ್ಲಿ ಪೆಟ್ರೋಲ್, ಡೀಸೆಲ್ ಬೆಲೆ ಇಳಿಕೆ: ಮಿಶ್ರ ಪ್ರತಿಕ್ರಿಯೆ

- Advertisement -
- Advertisement -

ಕಳೆದೊಂದು ವರ್ಷದಿಂದ ಸತತ ಏರುಗತಿಯಲ್ಲಿದ್ದ ಇಂಧನದ ಬೆಲೆಯಲ್ಲಿ ಸಣ್ಣ ಮಟ್ಟದ ಇಳಿಕೆಯಾಗಿದೆ. ಒಕ್ಕೂಟ ಸರ್ಕಾರವು ಪೆಟ್ರೋಲ್ ಮೇಲಿನ ಅಬಕಾರಿ ಶುಂಕವನ್ನು ಪ್ರತಿ ಲೀಟರ್ ಮೇಲೆ 5 ರೂ ಮತ್ತು ಡೀಸೆಲ್ ಮೇಲೆ 10 ರೂ ಕಡಿತಗೊಳಿಸಿದೆ. ಇದರ ಬೆನ್ನಲ್ಲೆ ಬಿಜೆಪಿ ಆಡಳಿತದ 9 ರಾಜ್ಯಗಳು ಸಹ ಪೆಟ್ರೋಲ್, ಡೀಸೆಲ್ ಮೇಲಿನ ವ್ಯಾಟ್ ಕಡಿತ ಮಾಡಿವೆ. ಈ ಕ್ರಮಕ್ಕೆ ಜನರಿಂದ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾಗಿದೆ.

ಪ್ರಧಾನಿ ನರೇಂದ್ರ ಮೋದಿಯವರನ್ನು ಅನುಸರಿಸಿ ಕರ್ನಾಟಕ, ಹಿಮಾಚಲ ಪ್ರದೇಶ, ತ್ರಿಪುರ, ಮಣಿಪುರ, ಅಸ್ಸಾಂ, ಗೋವಾ, ಉತ್ತರ ಪ್ರದೇಶ, ಗುಜರಾತ್ ಮತ್ತು ಉತ್ತರಖಂಡ ರಾಜ್ಯಗಳು ತಮ್ಮ ವ್ಯಾಟ್ ಕಡಿತ ಮಾಡಿವೆ. ಕರ್ನಾಟಕ, ತ್ರಿಪುರ, ಮಣಿಪುರ, ಅಸ್ಸಾಂ, ಗೋವಾ ರಾಜ್ಯಗಳು ಪೆಟ್ರೋಲ್ ಮತ್ತು ಡೀಸೆಲ್ ಮೇಲೆ ಲೀಟರ್‌ಗೆ ತಲಾ 7 ರೂ ಕಡಿತಗೊಳಿಸಿವೆ. ಉಳಿದ ರಾಜ್ಯಗಳು ತಲಾ 2 ರೂನಷ್ಟು ಕಡಿತಗೊಳಿಸಿವೆ.

ಒಕ್ಕೂಟ ಸರ್ಕಾರದ ಬೆಲೆ ಕಡಿತವು ಗುರುವಾರ ಮುಂಜಾನೆಯಿಂದಲೇ ಜಾರಿಗೆ ಬಂದಿದ್ದರೆ ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಘೋಷಿಸಿರುವ ಬೆಲೆ ಕಡಿತವು ಗುರುವಾರ ಸಂಜೆಯಿಂದ ಜಾರಿಗೆ ಬರಲಿದೆ ಎನ್ನಲಾಗಿದೆ.

ಇಂದು ಬೆಂಗಳೂರಿನಲ್ಲಿ ಪೆಟ್ರೋಲ್ ಬೆಲೆ ಲೀಟರ್‌ಗೆ 107.64 ರೂ ಇದ್ದರೆ, ಡೀಸೆಲ್ ಬೆಲೆ 92.03 ರೂ ಆಗಿದೆ.

“ಕರ್ನಾಟಕ ರಾಜ್ಯ ಸರಕಾರವು ಡೀಸೆಲ್‌ ಮತ್ತು ಪೆಟ್ರೋಲ್ ಮೇಲೆ ತಲಾ 7 ರೂ ಕಡಿಮೆಗೊಳಿಸಲು ನಿರ್ದರಿಸಿದೆ. ಈ ನಮ್ಮ ನಿರ್ಧಾರದಿಂದ ರಾಜ್ಯ ಸರಕಾರಕ್ಕೆ ಅಂದಾಜು 2100 ಕೋಟಿ ರೂಪಾಯಿ ಕೆ.ಎಸ್.ಟಿ ಯಿಂದ ಬೊಕ್ಕಸಕ್ಕೆ ನಷ್ಟವಾಗುತ್ತದೆ. ರಾಜ್ಯದಲ್ಲಿ ಪೆಟ್ರೋಲ್ ಬೆಲೆ ಅಂದಾಜು 95.50 ರೂ ಹಾಗೂ ಡಿಸೇಲ್ ಅಂದಾಜು 81.50 ರೂ ಆಗುವ ನೀರಿಕ್ಷೆಯಿದೆ‌” ಎಂದು ಕರ್ನಾಟಕ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಟ್ವೀಟ್ ಮಾಡಿದ್ದಾರೆ.

5 ರೂ ಕಡಿತಗೊಳಿಸಿದ ನಿಮ್ಮ ನಾಟಕ ನಿಲ್ಲಿಸಿ – ಲಾಲುಪ್ರಸಾದ್ ಯಾದವ್

ಮೋದಿ ಸರ್ಕಾರ ಘೋಷಿಸಿದ ಬೆಲೆ ಇಳಿಕೆ ಯಾವುದಕ್ಕೂ ಸಾಲುವುದಿಲ್ಲ. 5 ರೂ ಕಡಿತಗೊಳಿಸಿದ ನಿಮ್ಮ ನಾಟಕ ನಿಲ್ಲಿಸಿ. ಉತ್ತರ ಪ್ರದೇಶ ಚುನಾವಣೆ ಬಳಿಕೆ ಮತ್ತೆ ಪೆಟ್ರೋಲ್, ಡೀಸೆಲ್ ಬೆಲೆಗಳು ಹೆಚ್ಚಾಗಲಿವೆ. 50 ರೂ ಕಡಿತಗೊಳಿಸಿದ್ದರೆ ಮಾತ್ರ ಜನರಿಗೆ ಉಪಯೋಗವಾಗಲಿದೆ ಎಂದು ಆರ್‌ಜೆಡಿ ವರಷ್ಟರಾದ ಲಾಲುಪ್ರಸಾದ್ ಯಾದವ್ ಪ್ರತಿಕ್ರಿಯಿಸಿದ್ದಾರೆ.

ಈ ಒಂದು ವರ್ಷದಲ್ಲಿ ಪೆಟ್ರೋಲ್ ಬೆಲೆ ಹೆಚ್ಚಿಸಿದ್ದು : ₹36, ಕಡಿತಗೊಳಿಸಿದ್ದು : ₹5

ಡೀಸೆಲ್ ಬೆಲೆ ; ಹೆಚ್ಚಿಸಿದ್ದು : ₹27 ಕಡಿತಗೊಳಿಸಿದ್ದು : ₹10

ಮೋದಿ ಸರ್ಕಾರ ಮಾಡಬೇಕಿದಿದ್ದು: ತೆರಿಗೆ ಭಯೋತ್ಪಾದನೆ ನಿಲ್ಲಿಸಲಿ.
ಇಂತಹ ಕಣ್ಣೊರೆಸುವ ತಂತ್ರಗಳಿಂದ ಜನರನ್ನು ಮೂರ್ಖರನ್ನಾಗಿಸುವುದು ನಿಲ್ಲಿಸಲಿ ಎಂದು ಸಾಮಾಜಿಕ ಜಾಲತಾಣದಲ್ಲಿ ಟೀಕಿಸಲಾಗಿದೆ.

ಉಪಚುನಾವಣೆ ಸೋಲಿನಿಂದ ಬೆಲೆ ಇಳಿಕೆ?

ಅಕ್ಟೋಬರ್ 30 ರಂದು ನಡೆದ 30 ವಿಧಾನಸಭಾ ಕ್ಷೇತ್ರಗಳು ಮತ್ತು 3 ಲೋಕಸಭಾ ಉಪ ಚುನಾವಣೆಯಲ್ಲಿ ಬಿಜೆಪಿಗೆ ಸೋಲುಂಟಾಗಿದೆ. ಇದರಲ್ಲಿ ಬಿಜೆಪಿ ಕೇವಲ 7 ವಿಧಾನಸಭೆ ಮತ್ತು ಒಂದು ಲೋಕಸಭಾ ಚುನಾವಣೆಯಲ್ಲಿ ಮಾತ್ರ ಗೆದ್ದಿತ್ತು. ಬಿಜೆಪಿ ಅಧಿಕಾರದಲ್ಲಿರುವ ಹಿಮಾಚಲ ಪ್ರದೇಶದಲ್ಲಿ ಬಿಜೆಪಿ ಮೂರು ವಿಧಾನಸಭೆ ಮತ್ತು ಒಂದು ಲೋಕಸಭಾ ಕ್ಷೇತ್ರದಲ್ಲಿ ಹೀನಾಯ ಸೋಲುಂಡಿತ್ತು.

ಅದೇ ರೀತಿ ಕರ್ನಾಟಕ, ರಾಜಸ್ಥಾನ, ಮಹಾರಾಷ್ಟ್ರದಲ್ಲಿ ಬಿಜೆಪಿ ಸೋತಿತ್ತು. ಇದು ಮುಂಬರುವ ರಾಜ್ಯಗಳ ವಿಧಾನಸಭಾ ಚುನಾವಣೆಯ ದಿಕ್ಸೂಚಿ ಎಂಬ ಮಾತುಗಳು ಕೇಳಿಬಂದಿದ್ದವು. 2022ರ ಆರಂಭದಲ್ಲಿ ಗೋವಾ, ಉತ್ತರ ಪ್ರದೇಶ ಸೇರಿ ಹಲವು ರಾಜ್ಯಗಳಲ್ಲಿ ಚುನಾವಣೆ ಇರುವುದರಿಂದ ಈ ಸಣ್ಣ ಮಟ್ಟದ ಬೆಲೆ ಇಳಿಕೆ ಮಾಡಲಾಗಿದೆ ಎಂದು ಹಲವರು ದೂರಿದ್ದಾರೆ.


ಇದನ್ನೂ ಓದಿ: ಪೆಟ್ರೋಲ್ ದರ ಹೆಚ್ಚಳಕ್ಕೆ ಆಯಿಲ್ ಬಾಂಡ್ ಕಾರಣ? – BJP ನಾಯಕರ ಹೇಳಿಕೆಯ ನಿಜಾಂಶವೇನು?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಮ ಮಂದಿರ ದೇಣಿಗೆ ಹಗರಣ: ಅರ್ಜಿ ವಿಚಾರಣೆ ಕೆಲ ದಿನ ತಡವಾದರೆ ‘ಆಕಾಶವೇನೂ ಉರುಳಿ ಬೀಳುವುದಿಲ್ಲ’ ಎಂದ ಸುಪ್ರೀಂ ಕೋರ್ಟ್

ಅಯೋಧ್ಯೆಯ ರಾಮ ಮಂದಿರಕ್ಕೆ ಭಕ್ತರಿಂದ ಬಂದ ದೇಣಿಗೆ ಹಣ ದುರುಪಯೋಗ ಆಗಿರುವ ಕುರಿತು ಸಿಬಿಐ ನೇತೃತ್ವದ ಬಹು-ಸಂಸ್ಥೆಗಳ ಜಂಟಿ ತನಿಖೆಗೆ ಆದೇಶಿಸಬೇಕೆಂದು ಕೋರಿ ಸಲ್ಲಿಕೆಯಾಗಿದ್ದ ಅರ್ಜಿಗಳ ತುರ್ತು ವಿಚಾರಣೆಯನ್ನು ಸುಪ್ರೀಂ ಕೋರ್ಟ್ ಸೋಮವಾರ...

ಕಾಕ್ರೋಚ್ ಪಾರ್ಟಿ ಧರಣಿ : ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಆರಂಭಿಸಿದ ಸೋನಮ್ ವಾಂಗ್‌ಚುಕ್

ನೀಟ್ ಸೇರಿದಂತೆ ವಿವಿಧ ಪರೀಕ್ಷೆಗಳ ಪ್ರಶ್ನೆ ಪತ್ರಿಕೆ ಸೋರಿಕೆ, ಹಲವು ಅಕ್ರಮ, ಶೈಕ್ಷಣಿಕ ಅವ್ಯವಸ್ಥೆಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಕ್ರೋಚ್ ಜನತಾ...

SIR ವೇಳೆ ಮತಪಟ್ಟಿಯಿಂದ ಹೆಸರು ಡಿಲೀಟ್: ‘ದಿ ಟೆಲಿಗ್ರಾಫ್’ ಮಾಜಿ ಸಂಪಾದಕ ರಾಜಗೋಪಾಲ್ ಪಾಸ್‌ಪೋರ್ಟ್ ನವೀಕರಣಕ್ಕೆ ತಡೆ

ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ವೇಳೆ ಮತದಾರರ ಪಟ್ಟಿಯಿಂದ ಹೆಸರು ತೆಗೆದುಹಾಕಿದ ಕಾರಣ ಪಾಸ್‌ಪೋರ್ಟ್ ನವೀಕರಿಸಲು ಆಗುತ್ತಿಲ್ಲ ಎಂದು ದೇಶದ ಖ್ಯಾತ ಇಂಗ್ಲಿಷ್ ದಿನಪತ್ರಿಕೆ ‘ದಿ ಟೆಲಿಗ್ರಾಫ್’ನ ಮಾಜಿ ಸಂಪಾದಕ ಆರ್. ರಾಜಗೋಪಾಲ್...

‘ಈಗಲೂ ಮಮತಾ ಬ್ಯಾನರ್ಜಿಯೇ ನಮ್ಮ ನಾಯಕಿ’ : ಟಿಎಂಸಿ ಬಂಡಾಯ ಬಣದ ಅಧ್ಯಕ್ಷ ಅರೂಪ್ ರಾಯ್ ಹೇಳಿಕೆ

"ಮಮತಾ ಬ್ಯಾನರ್ಜಿ ಅವರೇ ಇಂದಿಗೂ ನಮ್ಮ ನಾಯಕಿ. ಅವರೇ ಈ ಪಕ್ಷವನ್ನು ಸ್ಥಾಪಿಸಿದವರು. ಅವರೇ ನಮ್ಮ ಪಕ್ಷದ ಕಾಂದಾರಿ (ಮಾರ್ಗದರ್ಶಕರು ಅಥವಾ ಪಕ್ಷವನ್ನು ಮುನ್ನಡೆಸುವವರು). ಮಮತಾ ಬ್ಯಾನರ್ಜಿ ಅವರಿಂದಾಗಿಯೇ ನಾವು ಈ ಪಕ್ಷವನ್ನು...

ಪಶ್ಚಿಮ ಬಂಗಾಳದ ಆಹಾರ ಸಂಸ್ಕೃತಿಯನ್ನು ಗೌರವಿಸುತ್ತೇವೆ ಎಂಬ ಬಿಜೆಪಿಯ ಚುನಾವಣಾ ಭರವಸೆಗೆ ಈಗ ‘ಮೊಟ್ಟೆ’ ಮೊದಲ ಬಲಿ

ಚುನಾವಣಾ ಸಮಯದಲ್ಲಿ, ಬಿಜೆಪಿ ಪರಿಸ್ಥಿತಿಯನ್ನು ಮತ್ತು ಮೀನಿನ ಮಾರುಕಟ್ಟೆಯ ನಾಡಿಮಿಡಿತವನ್ನು ಸರಿಯಾಗಿಯೇ ಅರ್ಥಮಾಡಿಕೊಂಡಿತ್ತು. ಅವರ ನಾಯಕರು ಟಿವಿ ಕ್ಯಾಮೆರಾಗಳ ಮುಂದೆ ಮೀನುಗಳನ್ನು ಪ್ರದರ್ಶಿಸಿದರು ಮತ್ತು ಕುರಿ ಮಾಂಸದೂಟವನ್ನು ಸವಿದಿದ್ದರು. ಬಂಗಾಳಿಗಳ ತಟ್ಟೆಗೆ (ಆಹಾರಕ್ಕೆ)...

24 ಗಂಟೆಗೂ ಮೊದಲೇ ಮಹಾರಾಷ್ಟ್ರದಲ್ಲಿ TET ಪ್ರಶ್ನೆ ಪತ್ರಿಕೆ ಸೋರಿಕೆ: ರದ್ದಾದ ಪರೀಕ್ಷೆ

ಮಹಾರಾಷ್ಟ್ರದಲ್ಲಿ ಮತ್ತೊಂದು ಪರೀಕ್ಷಾ ಅಕ್ರಮದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಜೂನ್ 28ರ ಭಾನುವಾರ ನಡೆಯಬೇಕಿದ್ದ ‘ಶಿಕ್ಷಕರ ಅರ್ಹತಾ ಪರೀಕ್ಷೆ’ (TET) ಆರಂಭಕ್ಕೆ ಕೇವಲ 24 ಗಂಟೆಗಳ ಮುನ್ನವೇ ಪ್ರಶ್ನೆ ಪತ್ರಿಕೆ ಸೋರಿಕೆಯಾದ...

ಸೌತೆಕಾಯಿ ಕೃಷಿಗೆ ತನ್ನ ಸಚಿವಾಲಯದಿಂದಲೇ ₹99 ಲಕ್ಷ ಸಬ್ಸಿಡಿ ಪಡೆದ ಕೇಂದ್ರ BJP ಸಚಿವ ಭಾಗೀರಥ್ ಚೌಧರಿ

ಕೇಂದ್ರ ಕೃಷಿ ಖಾತೆ ರಾಜ್ಯ ಸಚಿವ ಭಾಗೀರಥ್ ಚೌಧರಿ ಅವರು ತಮ್ಮದೇ ಸಚಿವಾಲಯದ ವ್ಯಾಪ್ತಿಗೆ ಒರುವ ಯೋಜನೆಯಡಿ, ವಾಣಿಜ್ಯ ಸೌತೆಕಾಯಿ ಕೃಷಿ ಯೋಜನೆಗಾಗಿ 99.03 ಲಕ್ಷ ರೂ. ಸಬ್ಸಿಡಿ (ಸಹಾಯಧನ) ಪಡೆದಿರುವುದು ತನಿಖಾ...

‘ಆರ್‌ಎಸ್‌ಎಸ್‌ ನೋಂದಣಿಯಾದರೆ ಒಳ್ಳೆಯದು’: ರಾಮಮಂದಿರ ಹಗರಣ ವಿಚಾರದಲ್ಲಿ ‘ಸತ್ಯ ಹೊರಬರಬೇಕು’: ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ

‘ರಾಷ್ಟ್ರೀಯ ಸ್ವಯಂಸೇವಕ ಸಂಘವನ್ನು (ಆರ್‌ಎಸ್‌ಎಸ್‌) ನೋಂದಣಿ ಮಾಡಿಸಿದರೆ ಯಾರಿಗೂ ಆರೋಪ ಮಾಡಲು ಅವಕಾಶ ಇರುವುದಿಲ್ಲ’ ಎಂದು ಪೇಜಾವರ ಮಠದ ವಿಶ್ವಪ್ರಸನ್ನ ತೀರ್ಥ ಸ್ವಾಮೀಜಿ ಶುಕ್ರವಾರ ಹೇಳಿದ್ದಾರೆ. ಆರ್‌ಎಸ್‌ಎಸ್ ನೋಂದಣಿ ಕುರಿತು ಕರ್ನಾಟಕದ ಗೃಹ ಸಚಿವ...

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...