Homeಕರ್ನಾಟಕಪೆಟ್ರೋಲ್-ಡೀಸೆಲ್; 21ನೇ ದಿನವೂ ಬೆಲೆ ಏರಿಕೆ; ಬೆಂಗಳೂರಿನಲ್ಲಿ ಪೆಟ್ರೋಲ್ 82.9 ರೂ

ಪೆಟ್ರೋಲ್-ಡೀಸೆಲ್; 21ನೇ ದಿನವೂ ಬೆಲೆ ಏರಿಕೆ; ಬೆಂಗಳೂರಿನಲ್ಲಿ ಪೆಟ್ರೋಲ್ 82.9 ರೂ

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರಂತರವಾಗಿ ಏರಿಸುತ್ತಿದೆ. 21 ನೆ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆ ಆಗುತ್ತಿರುವ ಸಮಯದಲ್ಲಿ ಜನರನ್ನು ದಿಕ್ಕೆಡಿಸಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸುವುದು ಸಾಮಾನ್ಯವಾದ ಸಂಗತಿ. ಇದು ಬಹಳ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಆದರೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈ ಸಂಪ್ರದಾಯಕ್ಕೆ ವಿರುದ್ಧವಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆ ಆಗುತ್ತಿದ್ದರೂ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಳೆದ 21 ದಿನಗಳಿಂದ ನಿರಂತರವಾಗಿ ಹೆಚ್ಚಳ ಮಾಡುತ್ತಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲವು ಪ್ರತಿ ಬ್ಯಾರೆಲ್ಗೆ 41.50 ಡಾಲರ್ ಇದೆ. ಒಂದು ಡಾಲರ್ ಗೆ ರೂಪಾಯಿ ಮೌಲ್ಯ 75.66 ರಷ್ಟಿದೆ. ಆದರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪ್ರತಿದಿನ ಏರಿಸಲಾಗುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ಬೆಲೆ ಕಡಿಮೆ ಇರುವುದರಿಂದ ಹಾಗೂ ಕೊರೋನಾ ಮತ್ತು ಲಾಕ್ಡೌನ್ ನಂತಹ ಕಷ್ಟದ ಸಂದರ್ಭ ಇದಾಗಿರುವುದರಿಂದ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಕೆ ಮಾಡಬೇಕು. ಜನರಿಂದ ಹಣ ಸುಲಿಯಲು ಇದು ಸೂಕ್ತ ಕಾಲವಲ್ಲ ಎಂದು ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಆದರೂ ಪ್ರತಿಪಕ್ಷಗಳ ಮಾತಿಗೆ ಕಿಮ್ಮತ್ತು ಕೊಡದ ಮೋದಿ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏರಿಸುತ್ತಲೇ ಇದೆ.

ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು ಪೆಟ್ರೋಲ್ ಗೆ 32.98 ರೂಪಾಯಿ ಮತ್ತು ಡೀಸೆಲ್ ಗೆ 31.83 ರೂಪಾಯಿ ಹಾಗೂ ಪೆಟ್ರೋಲ್ ಮೇಲಿನ ಡೀಲರ್ ಕಮಿಷನ್ 3.60 ರೂಪಾಯಿ ಮತ್ತು ಡೀಸೆಲ್ ಮೇಲಿನ ಡೀಲರ್ ಕಮಿಷನ್ 2.53 ರೂಪಾಯಿ ವಿಧಿಸುತ್ತಿದೆ. ಅಂದರೆ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದಲ್ಲಿ ನೇರವಾಗಿ ಅರ್ಧ ಹಣ ಕೇಂದ್ರ ಸರ್ಕಾರದ ತಿಜೋರಿ ಸೇರಲಿದೆ.

ನಿರಂತರವಾಗಿ ಕಳೆದ 21 ದಿನಗಳಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಾಗುತ್ತಿದ್ದು ಈವರೆಗೆ ಪ್ರತಿ ಲೀಟರ್ ಪೆಟ್ರೋಲ್ಗೆ 9.12 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ಗೆ 11.01 ರೂಪಾಯಿ ಹೆಚ್ಚಳ ಮಾಡಲಾಗಿದೆ. ಇಂದು ಪ್ರತಿ ಲೀಟರ್ ಪೆಟ್ರೋಲ್ ಗೆ 25 ಪೈಸೆ ಮತ್ತು ಪ್ರತಿ ಲೀಟರ್ ಡೀಸೆಲ್ ಗೆ 21 ಪೈಸೆ ಹೆಚ್ಚಿಸಲಾಗಿದೆ. ದೇಶದ ವಿವಿದ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಇಂತಿವೆ.

ಪೆಟ್ರೋಲ್, ಡೀಸೆಲ್ ಬೆಲೆ

• ಭೂಪಾಲ್- ಪೆಟ್ರೋಲ್ 88.03ರೂ., ಡೀಸೆಲ್ 79.81 ರೂ.
• ಮುಂಬೈ- ಪೆಟ್ರೋಲ್ 87.14 ರೂ., ಡೀಸೆಲ್ 78.71 ರೂ.
• ಚೆನ್ನೈ- ಪೆಟ್ರೋಲ್ 83.59 ರೂ., ಡೀಸೆಲ್ 77.61 ರೂ.
• ಪಾಟ್ನಾ- ಪೆಟ್ರೋಲ್ 83.27 ರೂ., ಡೀಸೆಲ್ 77.30 ರೂ.
• ಬೆಂಗಳೂರು- ಪೆಟ್ರೋಲ್ 82.97 ರೂ., ಡೀಸೆಲ್ 76.05 ರೂ.
• ಕೋಲ್ಕತ್ತಾ- ಪೆಟ್ರೋಲ್ 82.05 ರೂ., ಡೀಸೆಲ್ 75.52 ರೂ.
• ಲಕ್ನೊ- ಪೆಟ್ರೋಲ್ 80.94ರೂ., ಡೀಸೆಲ್ 72.37 ರೂ.
• ನೋಯ್ಡಾ- ಪೆಟ್ರೋಲ್ 80.92ರೂ., ಡೀಸೆಲ್ 72.33 ರೂ.
• ದೆಹಲಿ- ಪೆಟ್ರೋಲ್ 80.38 ರೂ., ಡೀಸೆಲ್ 80.40ರೂ.
• ರಾಂಚಿ- ಪೆಟ್ರೋಲ್ 80.26 ರೂ., ಡೀಸೆಲ್ 76.39ರೂ.
• ಫರೀದಾಬಾದ್- ಪೆಟ್ರೋಲ್ 78.83ರೂ., ಡೀಸೆಲ್ 73.00 ರೂ.
• ಗುರುಗ್ರಾಂ- ಪೆಟ್ರೋಲ್ 78.59ರೂ., ಡೀಸೆಲ್ 72.53 ರೂ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...