Homeಕರ್ನಾಟಕಪೆಟ್ರೋಲ್-ಡೀಸೆಲ್; 21ನೇ ದಿನವೂ ಬೆಲೆ ಏರಿಕೆ; ಬೆಂಗಳೂರಿನಲ್ಲಿ ಪೆಟ್ರೋಲ್ 82.9 ರೂ

ಪೆಟ್ರೋಲ್-ಡೀಸೆಲ್; 21ನೇ ದಿನವೂ ಬೆಲೆ ಏರಿಕೆ; ಬೆಂಗಳೂರಿನಲ್ಲಿ ಪೆಟ್ರೋಲ್ 82.9 ರೂ

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರಂತರವಾಗಿ ಏರಿಸುತ್ತಿದೆ. 21 ನೆ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆ ಆಗುತ್ತಿರುವ ಸಮಯದಲ್ಲಿ ಜನರನ್ನು ದಿಕ್ಕೆಡಿಸಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸುವುದು ಸಾಮಾನ್ಯವಾದ ಸಂಗತಿ. ಇದು ಬಹಳ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಆದರೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈ ಸಂಪ್ರದಾಯಕ್ಕೆ ವಿರುದ್ಧವಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆ ಆಗುತ್ತಿದ್ದರೂ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಳೆದ 21 ದಿನಗಳಿಂದ ನಿರಂತರವಾಗಿ ಹೆಚ್ಚಳ ಮಾಡುತ್ತಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲವು ಪ್ರತಿ ಬ್ಯಾರೆಲ್ಗೆ 41.50 ಡಾಲರ್ ಇದೆ. ಒಂದು ಡಾಲರ್ ಗೆ ರೂಪಾಯಿ ಮೌಲ್ಯ 75.66 ರಷ್ಟಿದೆ. ಆದರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪ್ರತಿದಿನ ಏರಿಸಲಾಗುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ಬೆಲೆ ಕಡಿಮೆ ಇರುವುದರಿಂದ ಹಾಗೂ ಕೊರೋನಾ ಮತ್ತು ಲಾಕ್ಡೌನ್ ನಂತಹ ಕಷ್ಟದ ಸಂದರ್ಭ ಇದಾಗಿರುವುದರಿಂದ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಕೆ ಮಾಡಬೇಕು. ಜನರಿಂದ ಹಣ ಸುಲಿಯಲು ಇದು ಸೂಕ್ತ ಕಾಲವಲ್ಲ ಎಂದು ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಆದರೂ ಪ್ರತಿಪಕ್ಷಗಳ ಮಾತಿಗೆ ಕಿಮ್ಮತ್ತು ಕೊಡದ ಮೋದಿ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏರಿಸುತ್ತಲೇ ಇದೆ.

ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು ಪೆಟ್ರೋಲ್ ಗೆ 32.98 ರೂಪಾಯಿ ಮತ್ತು ಡೀಸೆಲ್ ಗೆ 31.83 ರೂಪಾಯಿ ಹಾಗೂ ಪೆಟ್ರೋಲ್ ಮೇಲಿನ ಡೀಲರ್ ಕಮಿಷನ್ 3.60 ರೂಪಾಯಿ ಮತ್ತು ಡೀಸೆಲ್ ಮೇಲಿನ ಡೀಲರ್ ಕಮಿಷನ್ 2.53 ರೂಪಾಯಿ ವಿಧಿಸುತ್ತಿದೆ. ಅಂದರೆ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದಲ್ಲಿ ನೇರವಾಗಿ ಅರ್ಧ ಹಣ ಕೇಂದ್ರ ಸರ್ಕಾರದ ತಿಜೋರಿ ಸೇರಲಿದೆ.

ನಿರಂತರವಾಗಿ ಕಳೆದ 21 ದಿನಗಳಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಾಗುತ್ತಿದ್ದು ಈವರೆಗೆ ಪ್ರತಿ ಲೀಟರ್ ಪೆಟ್ರೋಲ್ಗೆ 9.12 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ಗೆ 11.01 ರೂಪಾಯಿ ಹೆಚ್ಚಳ ಮಾಡಲಾಗಿದೆ. ಇಂದು ಪ್ರತಿ ಲೀಟರ್ ಪೆಟ್ರೋಲ್ ಗೆ 25 ಪೈಸೆ ಮತ್ತು ಪ್ರತಿ ಲೀಟರ್ ಡೀಸೆಲ್ ಗೆ 21 ಪೈಸೆ ಹೆಚ್ಚಿಸಲಾಗಿದೆ. ದೇಶದ ವಿವಿದ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಇಂತಿವೆ.

ಪೆಟ್ರೋಲ್, ಡೀಸೆಲ್ ಬೆಲೆ

• ಭೂಪಾಲ್- ಪೆಟ್ರೋಲ್ 88.03ರೂ., ಡೀಸೆಲ್ 79.81 ರೂ.
• ಮುಂಬೈ- ಪೆಟ್ರೋಲ್ 87.14 ರೂ., ಡೀಸೆಲ್ 78.71 ರೂ.
• ಚೆನ್ನೈ- ಪೆಟ್ರೋಲ್ 83.59 ರೂ., ಡೀಸೆಲ್ 77.61 ರೂ.
• ಪಾಟ್ನಾ- ಪೆಟ್ರೋಲ್ 83.27 ರೂ., ಡೀಸೆಲ್ 77.30 ರೂ.
• ಬೆಂಗಳೂರು- ಪೆಟ್ರೋಲ್ 82.97 ರೂ., ಡೀಸೆಲ್ 76.05 ರೂ.
• ಕೋಲ್ಕತ್ತಾ- ಪೆಟ್ರೋಲ್ 82.05 ರೂ., ಡೀಸೆಲ್ 75.52 ರೂ.
• ಲಕ್ನೊ- ಪೆಟ್ರೋಲ್ 80.94ರೂ., ಡೀಸೆಲ್ 72.37 ರೂ.
• ನೋಯ್ಡಾ- ಪೆಟ್ರೋಲ್ 80.92ರೂ., ಡೀಸೆಲ್ 72.33 ರೂ.
• ದೆಹಲಿ- ಪೆಟ್ರೋಲ್ 80.38 ರೂ., ಡೀಸೆಲ್ 80.40ರೂ.
• ರಾಂಚಿ- ಪೆಟ್ರೋಲ್ 80.26 ರೂ., ಡೀಸೆಲ್ 76.39ರೂ.
• ಫರೀದಾಬಾದ್- ಪೆಟ್ರೋಲ್ 78.83ರೂ., ಡೀಸೆಲ್ 73.00 ರೂ.
• ಗುರುಗ್ರಾಂ- ಪೆಟ್ರೋಲ್ 78.59ರೂ., ಡೀಸೆಲ್ 72.53 ರೂ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...

ಮುಂಬೈ: 2 ದಿನಗಳಿಂದ ಹೊತ್ತಿ ಉರಿಯುತ್ತಿರುವ ಪೊವೈ ಬೆಟ್ಟಗಳು: ನಿವಾಸಿಗಳಿಂದ ಅಧಿಕಾರಿಗಳ ನಿಷ್ಕ್ರಿಯತೆಯ ಆರೋಪ 

ಮುಂಬೈನ ಪೊವೈ ಬೆಟ್ಟಗಳ ಪ್ರದೇಶದಲ್ಲಿ ಸಂಭವಿಸಿದ ಬೆಂಕಿ ಕಳೆದ ಎರಡು ದಿನಗಳಿಂದ ಉರಿಯುತ್ತಿದೆ ಎಂದು ವರದಿಯಾಗಿದೆ. ನಿವಾಸಿಗಳು ಬೆಂಕಿಯ ವೀಡಿಯೊಗಳನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ ಮತ್ತು ನಾಗರಿಕ ಅಧಿಕಾರಿಗಳಿಂದ ಯಾವುದೇ ಪ್ರತಿಕ್ರಿಯೆಯು ಸಿಕ್ಕಿಲ್ಲ...

‘ದಲಿತ ಕ್ರೈಸ್ತ’ರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು: ಮಾನವ ಹಕ್ಕುಗಳ ಕಾರ್ಯಕರ್ತ ವಿನ್ಸೆಂಟ್ ಕಥಿರ್

"ದಲಿತ ಕ್ರೈಸ್ತರನ್ನು ಪರಿಶಿಷ್ಟ ಜಾತಿ ಎಂದು ಗುರುತಿಸಬೇಕು, ಇದರಿಂದಾಗಿ ಜಾತಿ ಹಿಂಸಾಚಾರದ ಬಲಿಪಶುಗಳು ಎಸ್‌ಸಿ/ಎಸ್‌ಟಿ (ದೌರ್ಜನ್ಯ ತಡೆ) ಕಾಯ್ದೆಯ ನಿಬಂಧನೆಗಳ ಪ್ರಕಾರ ಸರ್ಕಾರದಿಂದ ಪರಿಹಾರವನ್ನು ಪಡೆಯಬಹುದು" ಎಂದು ಮಾನವ ಹಕ್ಕುಗಳ ಕಾರ್ಯಕರ್ತ ಹಾಗೂ...

ಪಶ್ಚಿಮ ಏಷ್ಯಾ ಬಿಕ್ಕಟ್ಟು : ಇರಾನ್ ವಿದೇಶಾಂಗ ಸಚಿವರ ಜೊತೆ ಜೈಶಂಕರ್ ಚರ್ಚೆ

ಭಾರತದ ವಿದೇಶಾಂಗ ಸಚಿವ ಎಸ್‌. ಜೈಶಂಕರ್ ಅವರು ಇರಾನ್ ವಿದೇಶಾಂಗ ಸಚಿವ ಸಯ್ಯದ್ ಅಬ್ಬಾಸ್ ಅರಘ್ಚಿ ಅವರೊಂದಿಗೆ ಮಂಗಳವಾರ (ಮಾ.10) ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಈ ವೇಳೆ ಪಶ್ಚಿಮ ಏಷ್ಯಾದ ಬೆಳವಣಿಗೆಗಳು...