Homeಕರ್ನಾಟಕಪೆಟ್ರೋಲ್-ಡೀಸೆಲ್; 21ನೇ ದಿನವೂ ಬೆಲೆ ಏರಿಕೆ; ಬೆಂಗಳೂರಿನಲ್ಲಿ ಪೆಟ್ರೋಲ್ 82.9 ರೂ

ಪೆಟ್ರೋಲ್-ಡೀಸೆಲ್; 21ನೇ ದಿನವೂ ಬೆಲೆ ಏರಿಕೆ; ಬೆಂಗಳೂರಿನಲ್ಲಿ ಪೆಟ್ರೋಲ್ 82.9 ರೂ

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರಂತರವಾಗಿ ಏರಿಸುತ್ತಿದೆ. 21 ನೆ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆ ಆಗುತ್ತಿರುವ ಸಮಯದಲ್ಲಿ ಜನರನ್ನು ದಿಕ್ಕೆಡಿಸಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸುವುದು ಸಾಮಾನ್ಯವಾದ ಸಂಗತಿ. ಇದು ಬಹಳ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಆದರೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈ ಸಂಪ್ರದಾಯಕ್ಕೆ ವಿರುದ್ಧವಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆ ಆಗುತ್ತಿದ್ದರೂ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಳೆದ 21 ದಿನಗಳಿಂದ ನಿರಂತರವಾಗಿ ಹೆಚ್ಚಳ ಮಾಡುತ್ತಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲವು ಪ್ರತಿ ಬ್ಯಾರೆಲ್ಗೆ 41.50 ಡಾಲರ್ ಇದೆ. ಒಂದು ಡಾಲರ್ ಗೆ ರೂಪಾಯಿ ಮೌಲ್ಯ 75.66 ರಷ್ಟಿದೆ. ಆದರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪ್ರತಿದಿನ ಏರಿಸಲಾಗುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ಬೆಲೆ ಕಡಿಮೆ ಇರುವುದರಿಂದ ಹಾಗೂ ಕೊರೋನಾ ಮತ್ತು ಲಾಕ್ಡೌನ್ ನಂತಹ ಕಷ್ಟದ ಸಂದರ್ಭ ಇದಾಗಿರುವುದರಿಂದ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಕೆ ಮಾಡಬೇಕು. ಜನರಿಂದ ಹಣ ಸುಲಿಯಲು ಇದು ಸೂಕ್ತ ಕಾಲವಲ್ಲ ಎಂದು ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಆದರೂ ಪ್ರತಿಪಕ್ಷಗಳ ಮಾತಿಗೆ ಕಿಮ್ಮತ್ತು ಕೊಡದ ಮೋದಿ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏರಿಸುತ್ತಲೇ ಇದೆ.

ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು ಪೆಟ್ರೋಲ್ ಗೆ 32.98 ರೂಪಾಯಿ ಮತ್ತು ಡೀಸೆಲ್ ಗೆ 31.83 ರೂಪಾಯಿ ಹಾಗೂ ಪೆಟ್ರೋಲ್ ಮೇಲಿನ ಡೀಲರ್ ಕಮಿಷನ್ 3.60 ರೂಪಾಯಿ ಮತ್ತು ಡೀಸೆಲ್ ಮೇಲಿನ ಡೀಲರ್ ಕಮಿಷನ್ 2.53 ರೂಪಾಯಿ ವಿಧಿಸುತ್ತಿದೆ. ಅಂದರೆ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದಲ್ಲಿ ನೇರವಾಗಿ ಅರ್ಧ ಹಣ ಕೇಂದ್ರ ಸರ್ಕಾರದ ತಿಜೋರಿ ಸೇರಲಿದೆ.

ನಿರಂತರವಾಗಿ ಕಳೆದ 21 ದಿನಗಳಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಾಗುತ್ತಿದ್ದು ಈವರೆಗೆ ಪ್ರತಿ ಲೀಟರ್ ಪೆಟ್ರೋಲ್ಗೆ 9.12 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ಗೆ 11.01 ರೂಪಾಯಿ ಹೆಚ್ಚಳ ಮಾಡಲಾಗಿದೆ. ಇಂದು ಪ್ರತಿ ಲೀಟರ್ ಪೆಟ್ರೋಲ್ ಗೆ 25 ಪೈಸೆ ಮತ್ತು ಪ್ರತಿ ಲೀಟರ್ ಡೀಸೆಲ್ ಗೆ 21 ಪೈಸೆ ಹೆಚ್ಚಿಸಲಾಗಿದೆ. ದೇಶದ ವಿವಿದ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಇಂತಿವೆ.

ಪೆಟ್ರೋಲ್, ಡೀಸೆಲ್ ಬೆಲೆ

• ಭೂಪಾಲ್- ಪೆಟ್ರೋಲ್ 88.03ರೂ., ಡೀಸೆಲ್ 79.81 ರೂ.
• ಮುಂಬೈ- ಪೆಟ್ರೋಲ್ 87.14 ರೂ., ಡೀಸೆಲ್ 78.71 ರೂ.
• ಚೆನ್ನೈ- ಪೆಟ್ರೋಲ್ 83.59 ರೂ., ಡೀಸೆಲ್ 77.61 ರೂ.
• ಪಾಟ್ನಾ- ಪೆಟ್ರೋಲ್ 83.27 ರೂ., ಡೀಸೆಲ್ 77.30 ರೂ.
• ಬೆಂಗಳೂರು- ಪೆಟ್ರೋಲ್ 82.97 ರೂ., ಡೀಸೆಲ್ 76.05 ರೂ.
• ಕೋಲ್ಕತ್ತಾ- ಪೆಟ್ರೋಲ್ 82.05 ರೂ., ಡೀಸೆಲ್ 75.52 ರೂ.
• ಲಕ್ನೊ- ಪೆಟ್ರೋಲ್ 80.94ರೂ., ಡೀಸೆಲ್ 72.37 ರೂ.
• ನೋಯ್ಡಾ- ಪೆಟ್ರೋಲ್ 80.92ರೂ., ಡೀಸೆಲ್ 72.33 ರೂ.
• ದೆಹಲಿ- ಪೆಟ್ರೋಲ್ 80.38 ರೂ., ಡೀಸೆಲ್ 80.40ರೂ.
• ರಾಂಚಿ- ಪೆಟ್ರೋಲ್ 80.26 ರೂ., ಡೀಸೆಲ್ 76.39ರೂ.
• ಫರೀದಾಬಾದ್- ಪೆಟ್ರೋಲ್ 78.83ರೂ., ಡೀಸೆಲ್ 73.00 ರೂ.
• ಗುರುಗ್ರಾಂ- ಪೆಟ್ರೋಲ್ 78.59ರೂ., ಡೀಸೆಲ್ 72.53 ರೂ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...

ಮುಂಬೈ| ಬುರ್ಖಾ ಧರಿಸಿ ಲೋಕಲ್‌ ಟ್ರೈನ್‌ನ ಮಹಿಳಾ ಬೋಗಿಯಲ್ಲಿ ಪ್ರಯಾಣಿಸಿದ ವ್ಯಕ್ತಿ ಬಂಧನ

ಮುಂಬೈನ ಉಪನಗರ ರೈಲಿನ ಮಹಿಳಾ ಬೋಗಿಯಲ್ಲಿ ಬುರ್ಖಾ ಧರಿಸಿ ಪ್ರಯಾಣಿಸುತ್ತಿದ್ದ ಆರೋಪದ ಮೇಲೆ ನಾಸಿಕ್‌ನ 57 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಅಧಿಕಾರಿಗಳು ಬುಧವಾರ ತಿಳಿಸಿದ್ದಾರೆ. ಈ ಘಟನೆ ಫೆಬ್ರವರಿ 6 ರಂದು ಘಾಟ್ಕೋಪರ್...

ಎಪ್‌ಸ್ಟೀನ್‌ ಫೈಲ್ಸ್ ಜನಾಕ್ರೋಶ : ಎಐ ಶೃಂಗಸಭೆಯಿಂದ ದೂರ ಉಳಿದ ಬಿಲ್‌ ಗೇಟ್ಸ್‌

ಎಪ್‌ಸ್ಟೀನ್‌ ಫೈಲ್ಸ್‌ ಮುಂದಿಟ್ಟುಕೊಂಡು ಜನರು ತೀವ್ರ ವಿರೋಧ ವ್ಯಕ್ತಪಡಿಸಿದ ಬೆನ್ನಲ್ಲೇ, 'ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆ'ಯಿಂದ ಮೈಕ್ರೋಸಾಫ್ಟ್‌ ಸಹ-ಸಂಸ್ಥಾಪಕ ಬಿಲ್ ಗೇಟ್ಸ್ ದೂರ ಉಳಿದಿದ್ದಾರೆ. ಈ ಕುರಿತು ಗೇಟ್ಸ್ ಫೌಂಡೇಶನ್ ಇಂಡಿಯಾ ಗುರುವಾರ...

ಬೆಂಗಳೂರಿನಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್‌ಗಳಿಗೆ ಎಚ್ಚರಿಕೆ

ಬೆಂಗಳೂರು: ಫ್ರೇಸರ್ ಟೌನ್ ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿನ ಎಂಎಂ ರಸ್ತೆಯಲ್ಲಿ ರಂಜಾನ್ ಆಹಾರ ಮೇಳ ನಡೆಸದಂತೆ ಹೋಟೆಲ್ ಮಾಲೀಕರಿಗೆ ಸ್ಥಳೀಯ ನಿವಾಸಿಗಳು ಎಚ್ಚರಿಕೆ ನೀಡಿದ್ದಾರೆ. ರಂಜಾನ್ ಆಹಾರ ಮೇಳದಿಂದ ಸಂಚಾರ ದಟ್ಟಣೆ. ಅವ್ಯವಸ್ಥೆಯ ಜೊತೆಗೆ...

‘ದಿ ಕೇರಳ ಸ್ಟೋರಿ-2’ ಚಲನಚಿತ್ರ ಜಾತ್ಯತೀತತೆಗೆ ಬೆದರಿಕೆ: ಮುಖ್ಯಮಂತ್ರಿ ಪಿಣರಾಯಿ ವಿಜಯನ್

'ದಿ ಕೇರಳ ಸ್ಟೋರಿ' ಚಿತ್ರದ ಎರಡನೇ ಭಾಗ ಬಿಡುಗಡೆಯಾಗುತ್ತಿರುವ ಬಗ್ಗೆ ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕಳವಳ ವ್ಯಕ್ತಪಡಿಸಿದ್ದು, ಇದರ ಮೊದಲ ಭಾಗವು "ರಾಜ್ಯದ ವಿರುದ್ಧ ದ್ವೇಷವನ್ನು ಹರಡುವ ಮತ್ತು ನಮ್ಮ ಜಾತ್ಯತೀತ...

ಬಿಜೆಪಿ ಸೇರಲು ಸಿದ್ದರಾದ ಭೂಪೇನ್ ಬೋರಾ : ಪ್ರಿಯಾಂಕಾ, ಡಿಕೆಶಿ ಸೇರಿದಂತೆ ‘ಕೈ ಟ್ರಬಲ್ ಶೂಟರ್‌ಗಳು’ ಅಸ್ಸಾಂಗೆ ದೌಡು

ರಾಜ್ಯ ಕಾಂಗ್ರೆಸ್‌ ಘಟಕದ ಮಾಜಿ ಅಧ್ಯಕ್ಷ ಭೂಪೇನ್ ಬೋರಾ ಬಿಜೆಪಿಗೆ ಹಾರಲು ಸಿದ್ದರಾಗಿರುವ ನಡುವೆ ಪ್ರಿಯಾಂಕಾ ಗಾಂಧಿ, ಡಿ.ಕೆ ಶಿವಕುಮಾರ್ ಸೇರಿದಂತೆ ಕಾಂಗ್ರೆಸ್‌ನ ಟ್ರಬಲ್ ಶೂಟರ್‌ಗಳ ತಂಡ ಅಸ್ಸಾಂಗೆ ದೌಡಾಯಿಸಿದೆ. ಅಸ್ಸಾಂ ಕಾಂಗ್ರೆಸ್ ಅಭ್ಯರ್ಥಿಗಳ...

ಸರ್ಕಾರದ ಭರವಸೆಗೆ ಮಣಿಯದ ಸಾರಿಗೆ ಸಿಬ್ಬಂದಿ : ಮುಷ್ಕರ ಮುಂದುವರಿಸಲು ನಿರ್ಧಾರ

ಹಿಂಬಾಕಿ ಪಾವತಿ, ವೇತನ ಪರಿಷ್ಕರಣೆ ಸೇರಿದಂತೆ ವಿವಿಧ ಬೇಡಿಕೆಗಳನ್ನು ಮುಂದಿಟ್ಟುಕೊಂಡು ರಾಜ್ಯದ ನಾಲ್ಕು ಸಾರಿಗೆ ನಿಗಮಗಳಾದ ಕೆಎಸ್‌ಆರ್‌ಟಿಸಿ, ಕೆಕೆಆರ್‌ಟಿಸಿ, ಎನ್‌ಡಬ್ಲ್ಯುಕೆಆರ್‌ಟಿಸಿ ಹಾಗೂ ಬಿಎಂಟಿಸಿಯ ನೌಕರರು ಇಂದು (ಫೆ.19) ಮುಷ್ಕರಕ್ಕೆ ಕರೆ ಕೊಟ್ಟಿದ್ದಾರೆ. ನೌಕರರ ಪ್ರತಿಭಟನೆ...