Homeಕರ್ನಾಟಕಪೆಟ್ರೋಲ್-ಡೀಸೆಲ್; 21ನೇ ದಿನವೂ ಬೆಲೆ ಏರಿಕೆ; ಬೆಂಗಳೂರಿನಲ್ಲಿ ಪೆಟ್ರೋಲ್ 82.9 ರೂ

ಪೆಟ್ರೋಲ್-ಡೀಸೆಲ್; 21ನೇ ದಿನವೂ ಬೆಲೆ ಏರಿಕೆ; ಬೆಂಗಳೂರಿನಲ್ಲಿ ಪೆಟ್ರೋಲ್ 82.9 ರೂ

- Advertisement -
- Advertisement -

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಸರ್ಕಾರ ಭಾರತದಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ನಿರಂತರವಾಗಿ ಏರಿಸುತ್ತಿದೆ. 21 ನೆ ದಿನವೂ ಪೆಟ್ರೋಲ್ ಮತ್ತು ಡೀಸೆಲ್ ದರ ಏರಿದ್ದು, ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆ ಆಗುತ್ತಿರುವ ಸಮಯದಲ್ಲಿ ಜನರನ್ನು ದಿಕ್ಕೆಡಿಸಿದೆ.

ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಹೆಚ್ಚಳವಾದಾಗ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಹೆಚ್ಚಿಸುವುದು ಸಾಮಾನ್ಯವಾದ ಸಂಗತಿ. ಇದು ಬಹಳ ಹಿಂದಿನಿಂದಲೂ ನಡೆದುಕೊಂಡು ಬಂದಿದೆ. ಆದರೆ ನರೇಂದ್ರ ಮೋದಿ ನೇತೃತ್ವದ ಸರ್ಕಾರ ಈ ಸಂಪ್ರದಾಯಕ್ಕೆ ವಿರುದ್ಧವಾಗಿ ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ದರ ಕಡಿಮೆ ಆಗುತ್ತಿದ್ದರೂ ದೇಶಿಯ ಮಾರುಕಟ್ಟೆಯಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಳೆದ 21 ದಿನಗಳಿಂದ ನಿರಂತರವಾಗಿ ಹೆಚ್ಚಳ ಮಾಡುತ್ತಿದೆ.

ಅಂತರರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾ ತೈಲವು ಪ್ರತಿ ಬ್ಯಾರೆಲ್ಗೆ 41.50 ಡಾಲರ್ ಇದೆ. ಒಂದು ಡಾಲರ್ ಗೆ ರೂಪಾಯಿ ಮೌಲ್ಯ 75.66 ರಷ್ಟಿದೆ. ಆದರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ಪ್ರತಿದಿನ ಏರಿಸಲಾಗುತ್ತಿದೆ. ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕ್ರೂಡ್ ಆಯಿಲ್ ಬೆಲೆ ಕಡಿಮೆ ಇರುವುದರಿಂದ ಹಾಗೂ ಕೊರೋನಾ ಮತ್ತು ಲಾಕ್ಡೌನ್ ನಂತಹ ಕಷ್ಟದ ಸಂದರ್ಭ ಇದಾಗಿರುವುದರಿಂದ ಕೇಂದ್ರ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಇಳಿಕೆ ಮಾಡಬೇಕು. ಜನರಿಂದ ಹಣ ಸುಲಿಯಲು ಇದು ಸೂಕ್ತ ಕಾಲವಲ್ಲ ಎಂದು ಕಾಂಗ್ರೆಸ್ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದೆ. ಆದರೂ ಪ್ರತಿಪಕ್ಷಗಳ ಮಾತಿಗೆ ಕಿಮ್ಮತ್ತು ಕೊಡದ ಮೋದಿ ಸರ್ಕಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಏರಿಸುತ್ತಲೇ ಇದೆ.

ಕೇಂದ್ರ ಸರ್ಕಾರ ಅಬಕಾರಿ ಸುಂಕವನ್ನು ಪೆಟ್ರೋಲ್ ಗೆ 32.98 ರೂಪಾಯಿ ಮತ್ತು ಡೀಸೆಲ್ ಗೆ 31.83 ರೂಪಾಯಿ ಹಾಗೂ ಪೆಟ್ರೋಲ್ ಮೇಲಿನ ಡೀಲರ್ ಕಮಿಷನ್ 3.60 ರೂಪಾಯಿ ಮತ್ತು ಡೀಸೆಲ್ ಮೇಲಿನ ಡೀಲರ್ ಕಮಿಷನ್ 2.53 ರೂಪಾಯಿ ವಿಧಿಸುತ್ತಿದೆ. ಅಂದರೆ ಪೆಟ್ರೋಲ್ ಮತ್ತು ಡೀಸೆಲ್ ಮಾರಾಟದಲ್ಲಿ ನೇರವಾಗಿ ಅರ್ಧ ಹಣ ಕೇಂದ್ರ ಸರ್ಕಾರದ ತಿಜೋರಿ ಸೇರಲಿದೆ.

ನಿರಂತರವಾಗಿ ಕಳೆದ 21 ದಿನಗಳಿಂದ ಪೆಟ್ರೋಲ್-ಡೀಸೆಲ್ ಬೆಲೆ ಹೆಚ್ಚಾಗುತ್ತಿದ್ದು ಈವರೆಗೆ ಪ್ರತಿ ಲೀಟರ್ ಪೆಟ್ರೋಲ್ಗೆ 9.12 ರೂಪಾಯಿ ಹಾಗೂ ಪ್ರತಿ ಲೀಟರ್ ಡೀಸೆಲ್ ಗೆ 11.01 ರೂಪಾಯಿ ಹೆಚ್ಚಳ ಮಾಡಲಾಗಿದೆ. ಇಂದು ಪ್ರತಿ ಲೀಟರ್ ಪೆಟ್ರೋಲ್ ಗೆ 25 ಪೈಸೆ ಮತ್ತು ಪ್ರತಿ ಲೀಟರ್ ಡೀಸೆಲ್ ಗೆ 21 ಪೈಸೆ ಹೆಚ್ಚಿಸಲಾಗಿದೆ. ದೇಶದ ವಿವಿದ ನಗರಗಳಲ್ಲಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳು ಇಂತಿವೆ.

ಪೆಟ್ರೋಲ್, ಡೀಸೆಲ್ ಬೆಲೆ

• ಭೂಪಾಲ್- ಪೆಟ್ರೋಲ್ 88.03ರೂ., ಡೀಸೆಲ್ 79.81 ರೂ.
• ಮುಂಬೈ- ಪೆಟ್ರೋಲ್ 87.14 ರೂ., ಡೀಸೆಲ್ 78.71 ರೂ.
• ಚೆನ್ನೈ- ಪೆಟ್ರೋಲ್ 83.59 ರೂ., ಡೀಸೆಲ್ 77.61 ರೂ.
• ಪಾಟ್ನಾ- ಪೆಟ್ರೋಲ್ 83.27 ರೂ., ಡೀಸೆಲ್ 77.30 ರೂ.
• ಬೆಂಗಳೂರು- ಪೆಟ್ರೋಲ್ 82.97 ರೂ., ಡೀಸೆಲ್ 76.05 ರೂ.
• ಕೋಲ್ಕತ್ತಾ- ಪೆಟ್ರೋಲ್ 82.05 ರೂ., ಡೀಸೆಲ್ 75.52 ರೂ.
• ಲಕ್ನೊ- ಪೆಟ್ರೋಲ್ 80.94ರೂ., ಡೀಸೆಲ್ 72.37 ರೂ.
• ನೋಯ್ಡಾ- ಪೆಟ್ರೋಲ್ 80.92ರೂ., ಡೀಸೆಲ್ 72.33 ರೂ.
• ದೆಹಲಿ- ಪೆಟ್ರೋಲ್ 80.38 ರೂ., ಡೀಸೆಲ್ 80.40ರೂ.
• ರಾಂಚಿ- ಪೆಟ್ರೋಲ್ 80.26 ರೂ., ಡೀಸೆಲ್ 76.39ರೂ.
• ಫರೀದಾಬಾದ್- ಪೆಟ್ರೋಲ್ 78.83ರೂ., ಡೀಸೆಲ್ 73.00 ರೂ.
• ಗುರುಗ್ರಾಂ- ಪೆಟ್ರೋಲ್ 78.59ರೂ., ಡೀಸೆಲ್ 72.53 ರೂ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...