Homeಕರ್ನಾಟಕಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ಡೀಸೆಲ್ ಬೆಲೆ ಹೆಚ್ಚಾಗಿರುವುದರಿಂದ ಬಸ್ ಪ್ರಯಾಣ ದರ ಹೆಚ್ಚಾಗುತ್ತದೆ. ಸರಕುಸಾಗಣೆ ವೆಚ್ಚವೂ ಅಧಿಕಗೊಳ್ಳುತ್ತದೆ. ಹೊಲ ಉಳುಮೆ ಮಾಡಲು ಟ್ರ್ಯಾಕ್ಟರ್ ಬಾಡಿಗೆ ತೀರಾ ಹೆಚ್ಚಾಗಲಿದೆ!

- Advertisement -
- Advertisement -

ಕೇಂದ್ರದ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಬಜೆಟ್ ಮಂಡಿಸಿದ ಕೆಲವೇ ಗಂಟೆಗಳಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆ ಕಾಣುತ್ತಿದ್ದಂತೆ ಜನಸಾಮಾನ್ಯರನ್ನು ತಬ್ಬಿಬ್ಬುಗೊಳಿಸಿದೆ. ಗ್ರಾಮೀಣ ಪ್ರದೇಶದ ಜನರು ಬೈಕ್, ಟಿವಿಎಸ್ ಗಳನ್ನು ಮೂಲೆಗೆ ತಳ್ಳಿ ಸಂಚಾರಕ್ಕೆ ಕುದುರೆ ಮತ್ತು ಕತ್ತೆ ಬಳಸುತ್ತಿರುವುದು ಬೆಳಕಿಗೆ ಬಂದಿದೆ. ತೈಲೋತ್ಪನ್ನಗಳ ಬೆಲೆ ಲೀಟರ್ ಗೆ ನೂರು ರೂಗಳತ್ತ ಗಗನಮುಖಿಯಾಗಿ ಸಾಗುತ್ತಿದ್ದಂತೆಯೇ ಈ ಸಂಚಾರಿ ವ್ಯಾಪಾರಿಗಳು ಈ ಮಾರ್ಗ ಹಿಡಿದಿದ್ದಾರೆ. ಮತ್ತೊಂದು ಕಡೆ ದುಬಾರಿ ಬೆಲೆಗಳಿಂದಾಗಿ ರೈತರು ಬಾಣಲೆಯಿಂದ ಬೆಂಕಿಗೆ ಬೀಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ.

ಹಿಂದಿನ ಕಾಲದಲ್ಲಿ ಸಂಚಾರಕ್ಕೆ ಬಳಸುತ್ತಿದ್ದ ಪರಿಸರಸ್ನೇಹಿ ಪ್ರಾಣಿಗಳ ಮೇಲೆಯೇ ಯುವಕರ ಸವಾರಿ ಸಾಗಿದೆ. ಇದಕ್ಕೆ ನಿದರ್ಶನವೆಂಬಂತೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕು ವೆಂಕಟಾಪುರದಲ್ಲಿ ಇಬ್ಬರು ಯುವಕರು ಕತ್ತೆ – ಕುದುರೆ ಮೇಲೆ ಪ್ರಯಾಣ ಬೆಳೆಸಿ ದುಬಾರಿ ಜೀವನ ನಡೆಸುತ್ತಿರುವ ಸಂಕಟ ಸಮಯದಲ್ಲಿ ಪರ್ಯಾಯ ಮಾರ್ಗ ಹುಡುಕಿಕೊಂಡಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ಬಜೆಟ್ ಜನ ಸಾಮಾನ್ಯರಿಗೆ ಹೊರೆಯಾಗಿದೆ, ನಿತ್ಯವೂ ಹಳ್ಳಿಗಳಿಂದ ಪಟ್ಟಣಕ್ಕೆ ದ್ವಿಚಕ್ರ ವಾಹನಗಳಲ್ಲಿ ಹೋಗುವುದು ದುಸ್ಥರ ಎಂಬುದನ್ನು ಸಾರಿ ಹೇಳುತ್ತಿದ್ದಾರೆ.

ವೆಂಕಟಮ್ಮನಹಳ್ಳಿಯ 40 ವರ್ಷದ ಸೋಮಶೇಖರ್ ದಿನಸಿ ವ್ಯಾಪಾರಿ. ಹಳ್ಳಿಹಳ್ಳಿಗೆ ಟಿವಿಎಸ್ ಎಕ್ಸ್ ಎಲ್ ವಾಹನದಲ್ಲಿ ತೆರಳಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿ ದಿನಕ್ಕೆ ಹತ್ತಾರು ಹಳ್ಳಿಗಳನ್ನು ತಿರುಗಿ ವ್ಯಾಪಾರ ಮಾಡಿ ದಿನಕ್ಕೆ 100 ರೂ ಗಳಿಸುತ್ತಿದ್ದರು. ಪೆಟ್ರೋಲ್ ಬೆಲೆ ಜಾಸ್ತಿಯಾಗುತ್ತಿದ್ದಂತೆಯೇ ಬಂದ ಲಾಭದ ಹಣ ಪೂರ ಪೆಟ್ರೋಲ್ ಖರ್ಚಿಗೆ ಸರಿಯಾಗುತ್ತಿತ್ತು. ಇದನ್ನು ಮನಗಂಡ ಸೋಮಶೇಖರ್ ಸಂಚಾರಿ ವ್ಯಾಪಾರಕ್ಕೆ ಕುದುರೆ ಬಳಕೆ ಮಾಡುತ್ತಿದ್ದಾರೆ. ಒಮ್ಮೆ ಹುಲ್ಲು ಖರೀದಿ ಮಾಡಿದರೆ ಆರು ತಿಂಗಳಿಗಾಗುವಷ್ಟು ಸಿಗುತ್ತದೆ. ಇದಕ್ಕೆ ಹೆಚ್ಚೆಂದರೆ 1000 ರೂಪಾಯಿ ವೆಚ್ಚ ತಗಲುತ್ತದೆ. ಕುದುರೆ ತೆಗೆದುಕೊಂಡು ಎರಡು ತಿಂಗಳಾಗಿದೆ. ಹೆಚ್ಚು ಖರ್ಚು ಬರುತ್ತಿಲ್ಲ. ಇದುವರೆಗೆ ಪೆಟ್ರೋಲ್ ಗೆ ವೆಚ್ಚ ಮಾಡುತ್ತಿದ್ದ ಹಣ ಉಳಿಯುತ್ತಿದೆ. ಗೋಣಿಹಳ್ಳಿ, ಪೆನಗೊಂಡೆ, ತಿರುಮಣಿ ಹೀಗೆ ಹಲವು ಹಳ್ಳಿಗಳನ್ನು ತಿರುಗುತ್ತೇನೆ. ಒಂದಷ್ಟು ಹಣ ಉಳಿಯುವಂತೆ ಆಗಿದೆ ಎಂದು ಸೋಮಶೇಖರ್ ತಿಳಿಸುತ್ತಾರೆ.

ರಾಮಲಿಂಗಯ್ಯ ಹೆಚ್ಚು ತಿಳುವಳಿಕೆ ಇಲ್ಲ. ಈತನೂ ಕೂಡ ಸಂಚಾರಿ ವ್ಯಾಪಾರಿ. ಬಟ್ಟೆ ವ್ಯಾಪಾರಕ್ಕೆ ಕತ್ತೆ ಖರೀದಿ ಮಾಡಿದ್ದು ನಿತ್ಯವೂ ಕತ್ತೆಯ ಮೇಲೆ ಬಟ್ಟೆಗಳನ್ನು ಹೇರಿಕೊಂಡು ಹೋಗಿ ಮಾರಾಟ ಮಾಡುತ್ತಾ ಜೀವನ ಸಾಗಿಸುತ್ತಿದ್ದಾರೆ. ಈ ಹಿಂದೆ ಸೈಕಲ್ ಮೇಲೆ ಹೋಗುತ್ತಿದ್ದರು. ಅದು ತುಳಿಯಲು ಆಗದೆ ಹಳೆಯ ಟಿವಿಎಸ್ ಬಳಸಿದರು. ನಿತ್ಯವೂ ಪೆಟ್ರೋಲ್ ಗೆ ಹಣ ಸುರಿಯುತ್ತಿದ್ದರು. ಬರುವ ಸಣ್ಣ ಲಾಭಾಂಶವೂ ಪೆಟ್ರೋಲ್ ಗೆ ಆಗುತ್ತಿತ್ತು. ಇದರಿಂದ ಏನೂ ಉಳಿಯುತ್ತಿರಲಿಲ್ಲ. ದಿನಕ್ಕೆ 800 ರೂ ಬಟ್ಟೆ ವ್ಯಾಪಾರ ಮಾಡಿದರೆ ಬಂದ ಬಹುತೇಕ ಹಣ ಪೆಟ್ರೋಲ್ ಗೆ ಖರ್ಚಾಗುತ್ತಿತ್ತು. ಹಾಗಾಗಿ ಕತ್ತೆ ಖರೀದಿ ಮಾಡಿರುವ ರಾಮಲಿಂಗಯ್ಯ “ಈಗ ಬಟ್ಟೆ ವ್ಯಾಪಾರದಿಂದ ಸಣ್ಣ ಉಳಿತಾಯ ಮಾಡುವಂತಹ ಸ್ಥಿತಿಗೆ ಬಂದಿದೆ. ಒಮ್ಮೆ ಭತ್ತದ ಹುಲ್ಲು ಖರೀದಿಸಿದರೆ ಆರೇಳು ತಿಂಗಳು ಬರುತ್ತದೆ. ವ್ಯಾಪಾರಕ್ಕೂ ಇದು ಸಹಕಾರಿಯಾಗಿದೆ” ಎನ್ನುತ್ತಾರೆ ರಾಮಲಿಂಗಯ್ಯ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಗ್ರಾಮೀಣ ಪ್ರದೇಶದ ಮೇಲೆ ಗಾಢ ಪರಿಣಾಮ ಬೀರಿದೆ.  ಕೃಷಿಕರು ಮತ್ತು ಜನಸಾಮಾನ್ಯರನ್ನು ಕಂಗೆಡುವಂತೆ ಮಾಡಿದೆ. ಕೃಷಿ ಪರಿಕರಗಳನ್ನು ಇಳಿಕೆ ಮಾಡಿರುವ ಸರ್ಕಾರ ನಿತ್ಯವೂ ಕೋಟ್ಯಂತರ ರೂಪಾಯಿ ವಹಿವಾಟು ನಡೆಯುವ ತೈಲದ ಬೆಲೆ ಏರಿಕೆ ಮಾಡಿರುವುದು ಜನರ ನಡುವೆ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ. ಯಾವುದರ ಬೆಲೆ ಯಾವ ಕ್ಷಣದಲ್ಲಿ ಹೆಚ್ಚಳವಾಗಲಿದೆ ಎಂಬ ಆತಂಕ ರೈತರು ಮತ್ತು ಜನಸಾಮಾನ್ಯರನ್ನು ಕಾಡುತ್ತಿದೆ.

ಗ್ರಾಮೀಣ ಭಾಗದಲ್ಲಿ ಹೊಲ ಉಳಲು ಬಹುತೇಕ ರೈತರು ಟ್ರ್ಯಾಕ್ಟರ್ ಗಳನ್ನೇ ನೆಚ್ಚಿಕೊಂಡಿದ್ದಾರೆ. ಸಣ್ಣ ಹಿಡುವಳಿ, ಮಧ್ಯಮ ಹಿಡುವಳಿದಾರರು ಕೂಡ ಟ್ರ್ಯಾಕ್ಟರ್ ಮೂಲಕ ಹೊಲ ಉತ್ತುವುದು ಸಾಮಾನ್ಯವಾಗಿದೆ. ಈವರೆಗೆ ಒಂದು ಗಂಟೆ ಹೊಲ ಉಳುಮೆ ಮಾಡಲು 800 ರೂಪಾಯಿ ಇತ್ತು. ಡ್ರೈವರ್ ಬ್ಯಾಟ ಪ್ರತ್ಯೇಕ ಕೊಡಬೇಕಿತ್ತು. ಇದನ್ನೇ ಭರಿಸಲು ಬಡ ರೈತರಿಗೆ ಕಷ್ಟವಾಗಿತ್ತು. ಟ್ರ್ಯಾಕ್ಟರ್ ಗೆ ಡೀಸೆಲ್ ಹೆಚ್ಚು ಬಳಕೆ ಆಗುತ್ತದೆ ಈಗ ಬೆಲೆ ಹೆಚ್ಚಳದಿಂದ ಒಂದು ಗಂಟೆ ಹೊಲ ಉಳುಮೆ ಮಾಡಲು 1400 ರೂಗೆ ಏರಿಕೆಯಾಗಲಿದೆ. ಇಷ್ಟು ಹಣ ಕೊಡುವಷ್ಟು ರೈತರಿಗೆ ಶಕ್ತಿ ಇಲ್ಲ. ಡೀಸೆಲ್ ಬೆಲೆ ಇಳಿಕೆಯಾಗಿದ್ದರೆ ರೈತರಿಗೆ ಅನುಕೂಲವಾಗುತ್ತಿತ್ತು. ಆದರೆ ಈಗಿನ ಪರಿಸ್ಥಿತಿ ರೈತರಿಗೆ ಪೂರಕವಾಗಿಲ್ಲ. ಡ್ರೈವರ್ ಬ್ಯಾಟ, ಊಟ, ಬೀಡಿ ಎಕ್ಸ್ ಟ್ರಾ ಎನ್ನುತ್ತಾರೆ ಗುಬ್ಬಿ ತಾಲೂಕಿನ ರೈತ ಮರಿಯಣ್ಣ.

ಡೀಸೆಲ್ ಬೆಲೆ ಹೆಚ್ಚಾಗಿರುವುದರಿಂದ ಬಸ್ ಪ್ರಯಾಣ ದರ ಹೆಚ್ಚಾಗುತ್ತದೆ. ಸರಕುಸಾಗಣೆ ವೆಚ್ಚವೂ ಅಧಿಕಗೊಳ್ಳುತ್ತದೆ. ಇದು ವಿವಿಧ ಬಗೆಯ ಪ್ರಯಾಣಿಕರು ಮತ್ತು ಸರಕುಗಳ ಬೆಲೆ ಹೆಚ್ಚಳಕ್ಕೆ ಕಾರಣವಾಗುತ್ತದೆ. ಬಡವರು, ರೈತರು, ವಿದ್ಯಾರ್ಥಿಗಳು ಪ್ರಯಾಣ ವೆಚ್ಚ ಭರಿಸಲು ಅಸಾಧ್ಯವಾಗುತ್ತದೆ. ಕೂಲಿ ಮಾಡುವವರು, ಆರ್ಥಿಕ ಸಂಕಷ್ಟದಲ್ಲಿರುವವರು ದೊಡ್ಡಮಟ್ಟದ ಸಮಸ್ಯೆಗೆ ಗುರಿಯಾಗಬೇಕಾಗುತ್ತದೆ. ಹಳ್ಳಿಗಳು ಮತ್ತಷ್ಟು ಹಿಂದುಳಿಯಲು ಕಾರಣವಾಗುತ್ತದೆ. ರೈತರ ಮೂಗಿಗೆ ತುಪ್ಪ ಸವರಿ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.


ಇದನ್ನೂ ಓದಿ: ಕನ್ನಡಿಗರೆಂದರೆ ಒಕ್ಕೂಟ ಸರ್ಕಾರಕ್ಕೆ ತಾತ್ಸಾರ: ಕೇಂದ್ರ ಬಜೆಟ್ ವಿರುದ್ಧ ಕರವೇ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...