Homeಕರ್ನಾಟಕಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ಡೀಸೆಲ್ ಬೆಲೆ ಹೆಚ್ಚಾಗಿರುವುದರಿಂದ ಬಸ್ ಪ್ರಯಾಣ ದರ ಹೆಚ್ಚಾಗುತ್ತದೆ. ಸರಕುಸಾಗಣೆ ವೆಚ್ಚವೂ ಅಧಿಕಗೊಳ್ಳುತ್ತದೆ. ಹೊಲ ಉಳುಮೆ ಮಾಡಲು ಟ್ರ್ಯಾಕ್ಟರ್ ಬಾಡಿಗೆ ತೀರಾ ಹೆಚ್ಚಾಗಲಿದೆ!

- Advertisement -
- Advertisement -

ಕೇಂದ್ರದ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಬಜೆಟ್ ಮಂಡಿಸಿದ ಕೆಲವೇ ಗಂಟೆಗಳಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆ ಕಾಣುತ್ತಿದ್ದಂತೆ ಜನಸಾಮಾನ್ಯರನ್ನು ತಬ್ಬಿಬ್ಬುಗೊಳಿಸಿದೆ. ಗ್ರಾಮೀಣ ಪ್ರದೇಶದ ಜನರು ಬೈಕ್, ಟಿವಿಎಸ್ ಗಳನ್ನು ಮೂಲೆಗೆ ತಳ್ಳಿ ಸಂಚಾರಕ್ಕೆ ಕುದುರೆ ಮತ್ತು ಕತ್ತೆ ಬಳಸುತ್ತಿರುವುದು ಬೆಳಕಿಗೆ ಬಂದಿದೆ. ತೈಲೋತ್ಪನ್ನಗಳ ಬೆಲೆ ಲೀಟರ್ ಗೆ ನೂರು ರೂಗಳತ್ತ ಗಗನಮುಖಿಯಾಗಿ ಸಾಗುತ್ತಿದ್ದಂತೆಯೇ ಈ ಸಂಚಾರಿ ವ್ಯಾಪಾರಿಗಳು ಈ ಮಾರ್ಗ ಹಿಡಿದಿದ್ದಾರೆ. ಮತ್ತೊಂದು ಕಡೆ ದುಬಾರಿ ಬೆಲೆಗಳಿಂದಾಗಿ ರೈತರು ಬಾಣಲೆಯಿಂದ ಬೆಂಕಿಗೆ ಬೀಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ.

ಹಿಂದಿನ ಕಾಲದಲ್ಲಿ ಸಂಚಾರಕ್ಕೆ ಬಳಸುತ್ತಿದ್ದ ಪರಿಸರಸ್ನೇಹಿ ಪ್ರಾಣಿಗಳ ಮೇಲೆಯೇ ಯುವಕರ ಸವಾರಿ ಸಾಗಿದೆ. ಇದಕ್ಕೆ ನಿದರ್ಶನವೆಂಬಂತೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕು ವೆಂಕಟಾಪುರದಲ್ಲಿ ಇಬ್ಬರು ಯುವಕರು ಕತ್ತೆ – ಕುದುರೆ ಮೇಲೆ ಪ್ರಯಾಣ ಬೆಳೆಸಿ ದುಬಾರಿ ಜೀವನ ನಡೆಸುತ್ತಿರುವ ಸಂಕಟ ಸಮಯದಲ್ಲಿ ಪರ್ಯಾಯ ಮಾರ್ಗ ಹುಡುಕಿಕೊಂಡಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ಬಜೆಟ್ ಜನ ಸಾಮಾನ್ಯರಿಗೆ ಹೊರೆಯಾಗಿದೆ, ನಿತ್ಯವೂ ಹಳ್ಳಿಗಳಿಂದ ಪಟ್ಟಣಕ್ಕೆ ದ್ವಿಚಕ್ರ ವಾಹನಗಳಲ್ಲಿ ಹೋಗುವುದು ದುಸ್ಥರ ಎಂಬುದನ್ನು ಸಾರಿ ಹೇಳುತ್ತಿದ್ದಾರೆ.

ವೆಂಕಟಮ್ಮನಹಳ್ಳಿಯ 40 ವರ್ಷದ ಸೋಮಶೇಖರ್ ದಿನಸಿ ವ್ಯಾಪಾರಿ. ಹಳ್ಳಿಹಳ್ಳಿಗೆ ಟಿವಿಎಸ್ ಎಕ್ಸ್ ಎಲ್ ವಾಹನದಲ್ಲಿ ತೆರಳಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿ ದಿನಕ್ಕೆ ಹತ್ತಾರು ಹಳ್ಳಿಗಳನ್ನು ತಿರುಗಿ ವ್ಯಾಪಾರ ಮಾಡಿ ದಿನಕ್ಕೆ 100 ರೂ ಗಳಿಸುತ್ತಿದ್ದರು. ಪೆಟ್ರೋಲ್ ಬೆಲೆ ಜಾಸ್ತಿಯಾಗುತ್ತಿದ್ದಂತೆಯೇ ಬಂದ ಲಾಭದ ಹಣ ಪೂರ ಪೆಟ್ರೋಲ್ ಖರ್ಚಿಗೆ ಸರಿಯಾಗುತ್ತಿತ್ತು. ಇದನ್ನು ಮನಗಂಡ ಸೋಮಶೇಖರ್ ಸಂಚಾರಿ ವ್ಯಾಪಾರಕ್ಕೆ ಕುದುರೆ ಬಳಕೆ ಮಾಡುತ್ತಿದ್ದಾರೆ. ಒಮ್ಮೆ ಹುಲ್ಲು ಖರೀದಿ ಮಾಡಿದರೆ ಆರು ತಿಂಗಳಿಗಾಗುವಷ್ಟು ಸಿಗುತ್ತದೆ. ಇದಕ್ಕೆ ಹೆಚ್ಚೆಂದರೆ 1000 ರೂಪಾಯಿ ವೆಚ್ಚ ತಗಲುತ್ತದೆ. ಕುದುರೆ ತೆಗೆದುಕೊಂಡು ಎರಡು ತಿಂಗಳಾಗಿದೆ. ಹೆಚ್ಚು ಖರ್ಚು ಬರುತ್ತಿಲ್ಲ. ಇದುವರೆಗೆ ಪೆಟ್ರೋಲ್ ಗೆ ವೆಚ್ಚ ಮಾಡುತ್ತಿದ್ದ ಹಣ ಉಳಿಯುತ್ತಿದೆ. ಗೋಣಿಹಳ್ಳಿ, ಪೆನಗೊಂಡೆ, ತಿರುಮಣಿ ಹೀಗೆ ಹಲವು ಹಳ್ಳಿಗಳನ್ನು ತಿರುಗುತ್ತೇನೆ. ಒಂದಷ್ಟು ಹಣ ಉಳಿಯುವಂತೆ ಆಗಿದೆ ಎಂದು ಸೋಮಶೇಖರ್ ತಿಳಿಸುತ್ತಾರೆ.

ರಾಮಲಿಂಗಯ್ಯ ಹೆಚ್ಚು ತಿಳುವಳಿಕೆ ಇಲ್ಲ. ಈತನೂ ಕೂಡ ಸಂಚಾರಿ ವ್ಯಾಪಾರಿ. ಬಟ್ಟೆ ವ್ಯಾಪಾರಕ್ಕೆ ಕತ್ತೆ ಖರೀದಿ ಮಾಡಿದ್ದು ನಿತ್ಯವೂ ಕತ್ತೆಯ ಮೇಲೆ ಬಟ್ಟೆಗಳನ್ನು ಹೇರಿಕೊಂಡು ಹೋಗಿ ಮಾರಾಟ ಮಾಡುತ್ತಾ ಜೀವನ ಸಾಗಿಸುತ್ತಿದ್ದಾರೆ. ಈ ಹಿಂದೆ ಸೈಕಲ್ ಮೇಲೆ ಹೋಗುತ್ತಿದ್ದರು. ಅದು ತುಳಿಯಲು ಆಗದೆ ಹಳೆಯ ಟಿವಿಎಸ್ ಬಳಸಿದರು. ನಿತ್ಯವೂ ಪೆಟ್ರೋಲ್ ಗೆ ಹಣ ಸುರಿಯುತ್ತಿದ್ದರು. ಬರುವ ಸಣ್ಣ ಲಾಭಾಂಶವೂ ಪೆಟ್ರೋಲ್ ಗೆ ಆಗುತ್ತಿತ್ತು. ಇದರಿಂದ ಏನೂ ಉಳಿಯುತ್ತಿರಲಿಲ್ಲ. ದಿನಕ್ಕೆ 800 ರೂ ಬಟ್ಟೆ ವ್ಯಾಪಾರ ಮಾಡಿದರೆ ಬಂದ ಬಹುತೇಕ ಹಣ ಪೆಟ್ರೋಲ್ ಗೆ ಖರ್ಚಾಗುತ್ತಿತ್ತು. ಹಾಗಾಗಿ ಕತ್ತೆ ಖರೀದಿ ಮಾಡಿರುವ ರಾಮಲಿಂಗಯ್ಯ “ಈಗ ಬಟ್ಟೆ ವ್ಯಾಪಾರದಿಂದ ಸಣ್ಣ ಉಳಿತಾಯ ಮಾಡುವಂತಹ ಸ್ಥಿತಿಗೆ ಬಂದಿದೆ. ಒಮ್ಮೆ ಭತ್ತದ ಹುಲ್ಲು ಖರೀದಿಸಿದರೆ ಆರೇಳು ತಿಂಗಳು ಬರುತ್ತದೆ. ವ್ಯಾಪಾರಕ್ಕೂ ಇದು ಸಹಕಾರಿಯಾಗಿದೆ” ಎನ್ನುತ್ತಾರೆ ರಾಮಲಿಂಗಯ್ಯ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಗ್ರಾಮೀಣ ಪ್ರದೇಶದ ಮೇಲೆ ಗಾಢ ಪರಿಣಾಮ ಬೀರಿದೆ.  ಕೃಷಿಕರು ಮತ್ತು ಜನಸಾಮಾನ್ಯರನ್ನು ಕಂಗೆಡುವಂತೆ ಮಾಡಿದೆ. ಕೃಷಿ ಪರಿಕರಗಳನ್ನು ಇಳಿಕೆ ಮಾಡಿರುವ ಸರ್ಕಾರ ನಿತ್ಯವೂ ಕೋಟ್ಯಂತರ ರೂಪಾಯಿ ವಹಿವಾಟು ನಡೆಯುವ ತೈಲದ ಬೆಲೆ ಏರಿಕೆ ಮಾಡಿರುವುದು ಜನರ ನಡುವೆ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ. ಯಾವುದರ ಬೆಲೆ ಯಾವ ಕ್ಷಣದಲ್ಲಿ ಹೆಚ್ಚಳವಾಗಲಿದೆ ಎಂಬ ಆತಂಕ ರೈತರು ಮತ್ತು ಜನಸಾಮಾನ್ಯರನ್ನು ಕಾಡುತ್ತಿದೆ.

ಗ್ರಾಮೀಣ ಭಾಗದಲ್ಲಿ ಹೊಲ ಉಳಲು ಬಹುತೇಕ ರೈತರು ಟ್ರ್ಯಾಕ್ಟರ್ ಗಳನ್ನೇ ನೆಚ್ಚಿಕೊಂಡಿದ್ದಾರೆ. ಸಣ್ಣ ಹಿಡುವಳಿ, ಮಧ್ಯಮ ಹಿಡುವಳಿದಾರರು ಕೂಡ ಟ್ರ್ಯಾಕ್ಟರ್ ಮೂಲಕ ಹೊಲ ಉತ್ತುವುದು ಸಾಮಾನ್ಯವಾಗಿದೆ. ಈವರೆಗೆ ಒಂದು ಗಂಟೆ ಹೊಲ ಉಳುಮೆ ಮಾಡಲು 800 ರೂಪಾಯಿ ಇತ್ತು. ಡ್ರೈವರ್ ಬ್ಯಾಟ ಪ್ರತ್ಯೇಕ ಕೊಡಬೇಕಿತ್ತು. ಇದನ್ನೇ ಭರಿಸಲು ಬಡ ರೈತರಿಗೆ ಕಷ್ಟವಾಗಿತ್ತು. ಟ್ರ್ಯಾಕ್ಟರ್ ಗೆ ಡೀಸೆಲ್ ಹೆಚ್ಚು ಬಳಕೆ ಆಗುತ್ತದೆ ಈಗ ಬೆಲೆ ಹೆಚ್ಚಳದಿಂದ ಒಂದು ಗಂಟೆ ಹೊಲ ಉಳುಮೆ ಮಾಡಲು 1400 ರೂಗೆ ಏರಿಕೆಯಾಗಲಿದೆ. ಇಷ್ಟು ಹಣ ಕೊಡುವಷ್ಟು ರೈತರಿಗೆ ಶಕ್ತಿ ಇಲ್ಲ. ಡೀಸೆಲ್ ಬೆಲೆ ಇಳಿಕೆಯಾಗಿದ್ದರೆ ರೈತರಿಗೆ ಅನುಕೂಲವಾಗುತ್ತಿತ್ತು. ಆದರೆ ಈಗಿನ ಪರಿಸ್ಥಿತಿ ರೈತರಿಗೆ ಪೂರಕವಾಗಿಲ್ಲ. ಡ್ರೈವರ್ ಬ್ಯಾಟ, ಊಟ, ಬೀಡಿ ಎಕ್ಸ್ ಟ್ರಾ ಎನ್ನುತ್ತಾರೆ ಗುಬ್ಬಿ ತಾಲೂಕಿನ ರೈತ ಮರಿಯಣ್ಣ.

ಡೀಸೆಲ್ ಬೆಲೆ ಹೆಚ್ಚಾಗಿರುವುದರಿಂದ ಬಸ್ ಪ್ರಯಾಣ ದರ ಹೆಚ್ಚಾಗುತ್ತದೆ. ಸರಕುಸಾಗಣೆ ವೆಚ್ಚವೂ ಅಧಿಕಗೊಳ್ಳುತ್ತದೆ. ಇದು ವಿವಿಧ ಬಗೆಯ ಪ್ರಯಾಣಿಕರು ಮತ್ತು ಸರಕುಗಳ ಬೆಲೆ ಹೆಚ್ಚಳಕ್ಕೆ ಕಾರಣವಾಗುತ್ತದೆ. ಬಡವರು, ರೈತರು, ವಿದ್ಯಾರ್ಥಿಗಳು ಪ್ರಯಾಣ ವೆಚ್ಚ ಭರಿಸಲು ಅಸಾಧ್ಯವಾಗುತ್ತದೆ. ಕೂಲಿ ಮಾಡುವವರು, ಆರ್ಥಿಕ ಸಂಕಷ್ಟದಲ್ಲಿರುವವರು ದೊಡ್ಡಮಟ್ಟದ ಸಮಸ್ಯೆಗೆ ಗುರಿಯಾಗಬೇಕಾಗುತ್ತದೆ. ಹಳ್ಳಿಗಳು ಮತ್ತಷ್ಟು ಹಿಂದುಳಿಯಲು ಕಾರಣವಾಗುತ್ತದೆ. ರೈತರ ಮೂಗಿಗೆ ತುಪ್ಪ ಸವರಿ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.


ಇದನ್ನೂ ಓದಿ: ಕನ್ನಡಿಗರೆಂದರೆ ಒಕ್ಕೂಟ ಸರ್ಕಾರಕ್ಕೆ ತಾತ್ಸಾರ: ಕೇಂದ್ರ ಬಜೆಟ್ ವಿರುದ್ಧ ಕರವೇ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...