Homeಕರ್ನಾಟಕಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ಡೀಸೆಲ್ ಬೆಲೆ ಹೆಚ್ಚಾಗಿರುವುದರಿಂದ ಬಸ್ ಪ್ರಯಾಣ ದರ ಹೆಚ್ಚಾಗುತ್ತದೆ. ಸರಕುಸಾಗಣೆ ವೆಚ್ಚವೂ ಅಧಿಕಗೊಳ್ಳುತ್ತದೆ. ಹೊಲ ಉಳುಮೆ ಮಾಡಲು ಟ್ರ್ಯಾಕ್ಟರ್ ಬಾಡಿಗೆ ತೀರಾ ಹೆಚ್ಚಾಗಲಿದೆ!

- Advertisement -
- Advertisement -

ಕೇಂದ್ರದ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಬಜೆಟ್ ಮಂಡಿಸಿದ ಕೆಲವೇ ಗಂಟೆಗಳಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆ ಕಾಣುತ್ತಿದ್ದಂತೆ ಜನಸಾಮಾನ್ಯರನ್ನು ತಬ್ಬಿಬ್ಬುಗೊಳಿಸಿದೆ. ಗ್ರಾಮೀಣ ಪ್ರದೇಶದ ಜನರು ಬೈಕ್, ಟಿವಿಎಸ್ ಗಳನ್ನು ಮೂಲೆಗೆ ತಳ್ಳಿ ಸಂಚಾರಕ್ಕೆ ಕುದುರೆ ಮತ್ತು ಕತ್ತೆ ಬಳಸುತ್ತಿರುವುದು ಬೆಳಕಿಗೆ ಬಂದಿದೆ. ತೈಲೋತ್ಪನ್ನಗಳ ಬೆಲೆ ಲೀಟರ್ ಗೆ ನೂರು ರೂಗಳತ್ತ ಗಗನಮುಖಿಯಾಗಿ ಸಾಗುತ್ತಿದ್ದಂತೆಯೇ ಈ ಸಂಚಾರಿ ವ್ಯಾಪಾರಿಗಳು ಈ ಮಾರ್ಗ ಹಿಡಿದಿದ್ದಾರೆ. ಮತ್ತೊಂದು ಕಡೆ ದುಬಾರಿ ಬೆಲೆಗಳಿಂದಾಗಿ ರೈತರು ಬಾಣಲೆಯಿಂದ ಬೆಂಕಿಗೆ ಬೀಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ.

ಹಿಂದಿನ ಕಾಲದಲ್ಲಿ ಸಂಚಾರಕ್ಕೆ ಬಳಸುತ್ತಿದ್ದ ಪರಿಸರಸ್ನೇಹಿ ಪ್ರಾಣಿಗಳ ಮೇಲೆಯೇ ಯುವಕರ ಸವಾರಿ ಸಾಗಿದೆ. ಇದಕ್ಕೆ ನಿದರ್ಶನವೆಂಬಂತೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕು ವೆಂಕಟಾಪುರದಲ್ಲಿ ಇಬ್ಬರು ಯುವಕರು ಕತ್ತೆ – ಕುದುರೆ ಮೇಲೆ ಪ್ರಯಾಣ ಬೆಳೆಸಿ ದುಬಾರಿ ಜೀವನ ನಡೆಸುತ್ತಿರುವ ಸಂಕಟ ಸಮಯದಲ್ಲಿ ಪರ್ಯಾಯ ಮಾರ್ಗ ಹುಡುಕಿಕೊಂಡಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ಬಜೆಟ್ ಜನ ಸಾಮಾನ್ಯರಿಗೆ ಹೊರೆಯಾಗಿದೆ, ನಿತ್ಯವೂ ಹಳ್ಳಿಗಳಿಂದ ಪಟ್ಟಣಕ್ಕೆ ದ್ವಿಚಕ್ರ ವಾಹನಗಳಲ್ಲಿ ಹೋಗುವುದು ದುಸ್ಥರ ಎಂಬುದನ್ನು ಸಾರಿ ಹೇಳುತ್ತಿದ್ದಾರೆ.

ವೆಂಕಟಮ್ಮನಹಳ್ಳಿಯ 40 ವರ್ಷದ ಸೋಮಶೇಖರ್ ದಿನಸಿ ವ್ಯಾಪಾರಿ. ಹಳ್ಳಿಹಳ್ಳಿಗೆ ಟಿವಿಎಸ್ ಎಕ್ಸ್ ಎಲ್ ವಾಹನದಲ್ಲಿ ತೆರಳಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿ ದಿನಕ್ಕೆ ಹತ್ತಾರು ಹಳ್ಳಿಗಳನ್ನು ತಿರುಗಿ ವ್ಯಾಪಾರ ಮಾಡಿ ದಿನಕ್ಕೆ 100 ರೂ ಗಳಿಸುತ್ತಿದ್ದರು. ಪೆಟ್ರೋಲ್ ಬೆಲೆ ಜಾಸ್ತಿಯಾಗುತ್ತಿದ್ದಂತೆಯೇ ಬಂದ ಲಾಭದ ಹಣ ಪೂರ ಪೆಟ್ರೋಲ್ ಖರ್ಚಿಗೆ ಸರಿಯಾಗುತ್ತಿತ್ತು. ಇದನ್ನು ಮನಗಂಡ ಸೋಮಶೇಖರ್ ಸಂಚಾರಿ ವ್ಯಾಪಾರಕ್ಕೆ ಕುದುರೆ ಬಳಕೆ ಮಾಡುತ್ತಿದ್ದಾರೆ. ಒಮ್ಮೆ ಹುಲ್ಲು ಖರೀದಿ ಮಾಡಿದರೆ ಆರು ತಿಂಗಳಿಗಾಗುವಷ್ಟು ಸಿಗುತ್ತದೆ. ಇದಕ್ಕೆ ಹೆಚ್ಚೆಂದರೆ 1000 ರೂಪಾಯಿ ವೆಚ್ಚ ತಗಲುತ್ತದೆ. ಕುದುರೆ ತೆಗೆದುಕೊಂಡು ಎರಡು ತಿಂಗಳಾಗಿದೆ. ಹೆಚ್ಚು ಖರ್ಚು ಬರುತ್ತಿಲ್ಲ. ಇದುವರೆಗೆ ಪೆಟ್ರೋಲ್ ಗೆ ವೆಚ್ಚ ಮಾಡುತ್ತಿದ್ದ ಹಣ ಉಳಿಯುತ್ತಿದೆ. ಗೋಣಿಹಳ್ಳಿ, ಪೆನಗೊಂಡೆ, ತಿರುಮಣಿ ಹೀಗೆ ಹಲವು ಹಳ್ಳಿಗಳನ್ನು ತಿರುಗುತ್ತೇನೆ. ಒಂದಷ್ಟು ಹಣ ಉಳಿಯುವಂತೆ ಆಗಿದೆ ಎಂದು ಸೋಮಶೇಖರ್ ತಿಳಿಸುತ್ತಾರೆ.

ರಾಮಲಿಂಗಯ್ಯ ಹೆಚ್ಚು ತಿಳುವಳಿಕೆ ಇಲ್ಲ. ಈತನೂ ಕೂಡ ಸಂಚಾರಿ ವ್ಯಾಪಾರಿ. ಬಟ್ಟೆ ವ್ಯಾಪಾರಕ್ಕೆ ಕತ್ತೆ ಖರೀದಿ ಮಾಡಿದ್ದು ನಿತ್ಯವೂ ಕತ್ತೆಯ ಮೇಲೆ ಬಟ್ಟೆಗಳನ್ನು ಹೇರಿಕೊಂಡು ಹೋಗಿ ಮಾರಾಟ ಮಾಡುತ್ತಾ ಜೀವನ ಸಾಗಿಸುತ್ತಿದ್ದಾರೆ. ಈ ಹಿಂದೆ ಸೈಕಲ್ ಮೇಲೆ ಹೋಗುತ್ತಿದ್ದರು. ಅದು ತುಳಿಯಲು ಆಗದೆ ಹಳೆಯ ಟಿವಿಎಸ್ ಬಳಸಿದರು. ನಿತ್ಯವೂ ಪೆಟ್ರೋಲ್ ಗೆ ಹಣ ಸುರಿಯುತ್ತಿದ್ದರು. ಬರುವ ಸಣ್ಣ ಲಾಭಾಂಶವೂ ಪೆಟ್ರೋಲ್ ಗೆ ಆಗುತ್ತಿತ್ತು. ಇದರಿಂದ ಏನೂ ಉಳಿಯುತ್ತಿರಲಿಲ್ಲ. ದಿನಕ್ಕೆ 800 ರೂ ಬಟ್ಟೆ ವ್ಯಾಪಾರ ಮಾಡಿದರೆ ಬಂದ ಬಹುತೇಕ ಹಣ ಪೆಟ್ರೋಲ್ ಗೆ ಖರ್ಚಾಗುತ್ತಿತ್ತು. ಹಾಗಾಗಿ ಕತ್ತೆ ಖರೀದಿ ಮಾಡಿರುವ ರಾಮಲಿಂಗಯ್ಯ “ಈಗ ಬಟ್ಟೆ ವ್ಯಾಪಾರದಿಂದ ಸಣ್ಣ ಉಳಿತಾಯ ಮಾಡುವಂತಹ ಸ್ಥಿತಿಗೆ ಬಂದಿದೆ. ಒಮ್ಮೆ ಭತ್ತದ ಹುಲ್ಲು ಖರೀದಿಸಿದರೆ ಆರೇಳು ತಿಂಗಳು ಬರುತ್ತದೆ. ವ್ಯಾಪಾರಕ್ಕೂ ಇದು ಸಹಕಾರಿಯಾಗಿದೆ” ಎನ್ನುತ್ತಾರೆ ರಾಮಲಿಂಗಯ್ಯ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಗ್ರಾಮೀಣ ಪ್ರದೇಶದ ಮೇಲೆ ಗಾಢ ಪರಿಣಾಮ ಬೀರಿದೆ.  ಕೃಷಿಕರು ಮತ್ತು ಜನಸಾಮಾನ್ಯರನ್ನು ಕಂಗೆಡುವಂತೆ ಮಾಡಿದೆ. ಕೃಷಿ ಪರಿಕರಗಳನ್ನು ಇಳಿಕೆ ಮಾಡಿರುವ ಸರ್ಕಾರ ನಿತ್ಯವೂ ಕೋಟ್ಯಂತರ ರೂಪಾಯಿ ವಹಿವಾಟು ನಡೆಯುವ ತೈಲದ ಬೆಲೆ ಏರಿಕೆ ಮಾಡಿರುವುದು ಜನರ ನಡುವೆ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ. ಯಾವುದರ ಬೆಲೆ ಯಾವ ಕ್ಷಣದಲ್ಲಿ ಹೆಚ್ಚಳವಾಗಲಿದೆ ಎಂಬ ಆತಂಕ ರೈತರು ಮತ್ತು ಜನಸಾಮಾನ್ಯರನ್ನು ಕಾಡುತ್ತಿದೆ.

ಗ್ರಾಮೀಣ ಭಾಗದಲ್ಲಿ ಹೊಲ ಉಳಲು ಬಹುತೇಕ ರೈತರು ಟ್ರ್ಯಾಕ್ಟರ್ ಗಳನ್ನೇ ನೆಚ್ಚಿಕೊಂಡಿದ್ದಾರೆ. ಸಣ್ಣ ಹಿಡುವಳಿ, ಮಧ್ಯಮ ಹಿಡುವಳಿದಾರರು ಕೂಡ ಟ್ರ್ಯಾಕ್ಟರ್ ಮೂಲಕ ಹೊಲ ಉತ್ತುವುದು ಸಾಮಾನ್ಯವಾಗಿದೆ. ಈವರೆಗೆ ಒಂದು ಗಂಟೆ ಹೊಲ ಉಳುಮೆ ಮಾಡಲು 800 ರೂಪಾಯಿ ಇತ್ತು. ಡ್ರೈವರ್ ಬ್ಯಾಟ ಪ್ರತ್ಯೇಕ ಕೊಡಬೇಕಿತ್ತು. ಇದನ್ನೇ ಭರಿಸಲು ಬಡ ರೈತರಿಗೆ ಕಷ್ಟವಾಗಿತ್ತು. ಟ್ರ್ಯಾಕ್ಟರ್ ಗೆ ಡೀಸೆಲ್ ಹೆಚ್ಚು ಬಳಕೆ ಆಗುತ್ತದೆ ಈಗ ಬೆಲೆ ಹೆಚ್ಚಳದಿಂದ ಒಂದು ಗಂಟೆ ಹೊಲ ಉಳುಮೆ ಮಾಡಲು 1400 ರೂಗೆ ಏರಿಕೆಯಾಗಲಿದೆ. ಇಷ್ಟು ಹಣ ಕೊಡುವಷ್ಟು ರೈತರಿಗೆ ಶಕ್ತಿ ಇಲ್ಲ. ಡೀಸೆಲ್ ಬೆಲೆ ಇಳಿಕೆಯಾಗಿದ್ದರೆ ರೈತರಿಗೆ ಅನುಕೂಲವಾಗುತ್ತಿತ್ತು. ಆದರೆ ಈಗಿನ ಪರಿಸ್ಥಿತಿ ರೈತರಿಗೆ ಪೂರಕವಾಗಿಲ್ಲ. ಡ್ರೈವರ್ ಬ್ಯಾಟ, ಊಟ, ಬೀಡಿ ಎಕ್ಸ್ ಟ್ರಾ ಎನ್ನುತ್ತಾರೆ ಗುಬ್ಬಿ ತಾಲೂಕಿನ ರೈತ ಮರಿಯಣ್ಣ.

ಡೀಸೆಲ್ ಬೆಲೆ ಹೆಚ್ಚಾಗಿರುವುದರಿಂದ ಬಸ್ ಪ್ರಯಾಣ ದರ ಹೆಚ್ಚಾಗುತ್ತದೆ. ಸರಕುಸಾಗಣೆ ವೆಚ್ಚವೂ ಅಧಿಕಗೊಳ್ಳುತ್ತದೆ. ಇದು ವಿವಿಧ ಬಗೆಯ ಪ್ರಯಾಣಿಕರು ಮತ್ತು ಸರಕುಗಳ ಬೆಲೆ ಹೆಚ್ಚಳಕ್ಕೆ ಕಾರಣವಾಗುತ್ತದೆ. ಬಡವರು, ರೈತರು, ವಿದ್ಯಾರ್ಥಿಗಳು ಪ್ರಯಾಣ ವೆಚ್ಚ ಭರಿಸಲು ಅಸಾಧ್ಯವಾಗುತ್ತದೆ. ಕೂಲಿ ಮಾಡುವವರು, ಆರ್ಥಿಕ ಸಂಕಷ್ಟದಲ್ಲಿರುವವರು ದೊಡ್ಡಮಟ್ಟದ ಸಮಸ್ಯೆಗೆ ಗುರಿಯಾಗಬೇಕಾಗುತ್ತದೆ. ಹಳ್ಳಿಗಳು ಮತ್ತಷ್ಟು ಹಿಂದುಳಿಯಲು ಕಾರಣವಾಗುತ್ತದೆ. ರೈತರ ಮೂಗಿಗೆ ತುಪ್ಪ ಸವರಿ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.


ಇದನ್ನೂ ಓದಿ: ಕನ್ನಡಿಗರೆಂದರೆ ಒಕ್ಕೂಟ ಸರ್ಕಾರಕ್ಕೆ ತಾತ್ಸಾರ: ಕೇಂದ್ರ ಬಜೆಟ್ ವಿರುದ್ಧ ಕರವೇ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....