Homeಕರ್ನಾಟಕಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ಡೀಸೆಲ್ ಬೆಲೆ ಹೆಚ್ಚಾಗಿರುವುದರಿಂದ ಬಸ್ ಪ್ರಯಾಣ ದರ ಹೆಚ್ಚಾಗುತ್ತದೆ. ಸರಕುಸಾಗಣೆ ವೆಚ್ಚವೂ ಅಧಿಕಗೊಳ್ಳುತ್ತದೆ. ಹೊಲ ಉಳುಮೆ ಮಾಡಲು ಟ್ರ್ಯಾಕ್ಟರ್ ಬಾಡಿಗೆ ತೀರಾ ಹೆಚ್ಚಾಗಲಿದೆ!

- Advertisement -
- Advertisement -

ಕೇಂದ್ರದ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಬಜೆಟ್ ಮಂಡಿಸಿದ ಕೆಲವೇ ಗಂಟೆಗಳಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆ ಕಾಣುತ್ತಿದ್ದಂತೆ ಜನಸಾಮಾನ್ಯರನ್ನು ತಬ್ಬಿಬ್ಬುಗೊಳಿಸಿದೆ. ಗ್ರಾಮೀಣ ಪ್ರದೇಶದ ಜನರು ಬೈಕ್, ಟಿವಿಎಸ್ ಗಳನ್ನು ಮೂಲೆಗೆ ತಳ್ಳಿ ಸಂಚಾರಕ್ಕೆ ಕುದುರೆ ಮತ್ತು ಕತ್ತೆ ಬಳಸುತ್ತಿರುವುದು ಬೆಳಕಿಗೆ ಬಂದಿದೆ. ತೈಲೋತ್ಪನ್ನಗಳ ಬೆಲೆ ಲೀಟರ್ ಗೆ ನೂರು ರೂಗಳತ್ತ ಗಗನಮುಖಿಯಾಗಿ ಸಾಗುತ್ತಿದ್ದಂತೆಯೇ ಈ ಸಂಚಾರಿ ವ್ಯಾಪಾರಿಗಳು ಈ ಮಾರ್ಗ ಹಿಡಿದಿದ್ದಾರೆ. ಮತ್ತೊಂದು ಕಡೆ ದುಬಾರಿ ಬೆಲೆಗಳಿಂದಾಗಿ ರೈತರು ಬಾಣಲೆಯಿಂದ ಬೆಂಕಿಗೆ ಬೀಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ.

ಹಿಂದಿನ ಕಾಲದಲ್ಲಿ ಸಂಚಾರಕ್ಕೆ ಬಳಸುತ್ತಿದ್ದ ಪರಿಸರಸ್ನೇಹಿ ಪ್ರಾಣಿಗಳ ಮೇಲೆಯೇ ಯುವಕರ ಸವಾರಿ ಸಾಗಿದೆ. ಇದಕ್ಕೆ ನಿದರ್ಶನವೆಂಬಂತೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕು ವೆಂಕಟಾಪುರದಲ್ಲಿ ಇಬ್ಬರು ಯುವಕರು ಕತ್ತೆ – ಕುದುರೆ ಮೇಲೆ ಪ್ರಯಾಣ ಬೆಳೆಸಿ ದುಬಾರಿ ಜೀವನ ನಡೆಸುತ್ತಿರುವ ಸಂಕಟ ಸಮಯದಲ್ಲಿ ಪರ್ಯಾಯ ಮಾರ್ಗ ಹುಡುಕಿಕೊಂಡಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ಬಜೆಟ್ ಜನ ಸಾಮಾನ್ಯರಿಗೆ ಹೊರೆಯಾಗಿದೆ, ನಿತ್ಯವೂ ಹಳ್ಳಿಗಳಿಂದ ಪಟ್ಟಣಕ್ಕೆ ದ್ವಿಚಕ್ರ ವಾಹನಗಳಲ್ಲಿ ಹೋಗುವುದು ದುಸ್ಥರ ಎಂಬುದನ್ನು ಸಾರಿ ಹೇಳುತ್ತಿದ್ದಾರೆ.

ವೆಂಕಟಮ್ಮನಹಳ್ಳಿಯ 40 ವರ್ಷದ ಸೋಮಶೇಖರ್ ದಿನಸಿ ವ್ಯಾಪಾರಿ. ಹಳ್ಳಿಹಳ್ಳಿಗೆ ಟಿವಿಎಸ್ ಎಕ್ಸ್ ಎಲ್ ವಾಹನದಲ್ಲಿ ತೆರಳಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿ ದಿನಕ್ಕೆ ಹತ್ತಾರು ಹಳ್ಳಿಗಳನ್ನು ತಿರುಗಿ ವ್ಯಾಪಾರ ಮಾಡಿ ದಿನಕ್ಕೆ 100 ರೂ ಗಳಿಸುತ್ತಿದ್ದರು. ಪೆಟ್ರೋಲ್ ಬೆಲೆ ಜಾಸ್ತಿಯಾಗುತ್ತಿದ್ದಂತೆಯೇ ಬಂದ ಲಾಭದ ಹಣ ಪೂರ ಪೆಟ್ರೋಲ್ ಖರ್ಚಿಗೆ ಸರಿಯಾಗುತ್ತಿತ್ತು. ಇದನ್ನು ಮನಗಂಡ ಸೋಮಶೇಖರ್ ಸಂಚಾರಿ ವ್ಯಾಪಾರಕ್ಕೆ ಕುದುರೆ ಬಳಕೆ ಮಾಡುತ್ತಿದ್ದಾರೆ. ಒಮ್ಮೆ ಹುಲ್ಲು ಖರೀದಿ ಮಾಡಿದರೆ ಆರು ತಿಂಗಳಿಗಾಗುವಷ್ಟು ಸಿಗುತ್ತದೆ. ಇದಕ್ಕೆ ಹೆಚ್ಚೆಂದರೆ 1000 ರೂಪಾಯಿ ವೆಚ್ಚ ತಗಲುತ್ತದೆ. ಕುದುರೆ ತೆಗೆದುಕೊಂಡು ಎರಡು ತಿಂಗಳಾಗಿದೆ. ಹೆಚ್ಚು ಖರ್ಚು ಬರುತ್ತಿಲ್ಲ. ಇದುವರೆಗೆ ಪೆಟ್ರೋಲ್ ಗೆ ವೆಚ್ಚ ಮಾಡುತ್ತಿದ್ದ ಹಣ ಉಳಿಯುತ್ತಿದೆ. ಗೋಣಿಹಳ್ಳಿ, ಪೆನಗೊಂಡೆ, ತಿರುಮಣಿ ಹೀಗೆ ಹಲವು ಹಳ್ಳಿಗಳನ್ನು ತಿರುಗುತ್ತೇನೆ. ಒಂದಷ್ಟು ಹಣ ಉಳಿಯುವಂತೆ ಆಗಿದೆ ಎಂದು ಸೋಮಶೇಖರ್ ತಿಳಿಸುತ್ತಾರೆ.

ರಾಮಲಿಂಗಯ್ಯ ಹೆಚ್ಚು ತಿಳುವಳಿಕೆ ಇಲ್ಲ. ಈತನೂ ಕೂಡ ಸಂಚಾರಿ ವ್ಯಾಪಾರಿ. ಬಟ್ಟೆ ವ್ಯಾಪಾರಕ್ಕೆ ಕತ್ತೆ ಖರೀದಿ ಮಾಡಿದ್ದು ನಿತ್ಯವೂ ಕತ್ತೆಯ ಮೇಲೆ ಬಟ್ಟೆಗಳನ್ನು ಹೇರಿಕೊಂಡು ಹೋಗಿ ಮಾರಾಟ ಮಾಡುತ್ತಾ ಜೀವನ ಸಾಗಿಸುತ್ತಿದ್ದಾರೆ. ಈ ಹಿಂದೆ ಸೈಕಲ್ ಮೇಲೆ ಹೋಗುತ್ತಿದ್ದರು. ಅದು ತುಳಿಯಲು ಆಗದೆ ಹಳೆಯ ಟಿವಿಎಸ್ ಬಳಸಿದರು. ನಿತ್ಯವೂ ಪೆಟ್ರೋಲ್ ಗೆ ಹಣ ಸುರಿಯುತ್ತಿದ್ದರು. ಬರುವ ಸಣ್ಣ ಲಾಭಾಂಶವೂ ಪೆಟ್ರೋಲ್ ಗೆ ಆಗುತ್ತಿತ್ತು. ಇದರಿಂದ ಏನೂ ಉಳಿಯುತ್ತಿರಲಿಲ್ಲ. ದಿನಕ್ಕೆ 800 ರೂ ಬಟ್ಟೆ ವ್ಯಾಪಾರ ಮಾಡಿದರೆ ಬಂದ ಬಹುತೇಕ ಹಣ ಪೆಟ್ರೋಲ್ ಗೆ ಖರ್ಚಾಗುತ್ತಿತ್ತು. ಹಾಗಾಗಿ ಕತ್ತೆ ಖರೀದಿ ಮಾಡಿರುವ ರಾಮಲಿಂಗಯ್ಯ “ಈಗ ಬಟ್ಟೆ ವ್ಯಾಪಾರದಿಂದ ಸಣ್ಣ ಉಳಿತಾಯ ಮಾಡುವಂತಹ ಸ್ಥಿತಿಗೆ ಬಂದಿದೆ. ಒಮ್ಮೆ ಭತ್ತದ ಹುಲ್ಲು ಖರೀದಿಸಿದರೆ ಆರೇಳು ತಿಂಗಳು ಬರುತ್ತದೆ. ವ್ಯಾಪಾರಕ್ಕೂ ಇದು ಸಹಕಾರಿಯಾಗಿದೆ” ಎನ್ನುತ್ತಾರೆ ರಾಮಲಿಂಗಯ್ಯ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಗ್ರಾಮೀಣ ಪ್ರದೇಶದ ಮೇಲೆ ಗಾಢ ಪರಿಣಾಮ ಬೀರಿದೆ.  ಕೃಷಿಕರು ಮತ್ತು ಜನಸಾಮಾನ್ಯರನ್ನು ಕಂಗೆಡುವಂತೆ ಮಾಡಿದೆ. ಕೃಷಿ ಪರಿಕರಗಳನ್ನು ಇಳಿಕೆ ಮಾಡಿರುವ ಸರ್ಕಾರ ನಿತ್ಯವೂ ಕೋಟ್ಯಂತರ ರೂಪಾಯಿ ವಹಿವಾಟು ನಡೆಯುವ ತೈಲದ ಬೆಲೆ ಏರಿಕೆ ಮಾಡಿರುವುದು ಜನರ ನಡುವೆ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ. ಯಾವುದರ ಬೆಲೆ ಯಾವ ಕ್ಷಣದಲ್ಲಿ ಹೆಚ್ಚಳವಾಗಲಿದೆ ಎಂಬ ಆತಂಕ ರೈತರು ಮತ್ತು ಜನಸಾಮಾನ್ಯರನ್ನು ಕಾಡುತ್ತಿದೆ.

ಗ್ರಾಮೀಣ ಭಾಗದಲ್ಲಿ ಹೊಲ ಉಳಲು ಬಹುತೇಕ ರೈತರು ಟ್ರ್ಯಾಕ್ಟರ್ ಗಳನ್ನೇ ನೆಚ್ಚಿಕೊಂಡಿದ್ದಾರೆ. ಸಣ್ಣ ಹಿಡುವಳಿ, ಮಧ್ಯಮ ಹಿಡುವಳಿದಾರರು ಕೂಡ ಟ್ರ್ಯಾಕ್ಟರ್ ಮೂಲಕ ಹೊಲ ಉತ್ತುವುದು ಸಾಮಾನ್ಯವಾಗಿದೆ. ಈವರೆಗೆ ಒಂದು ಗಂಟೆ ಹೊಲ ಉಳುಮೆ ಮಾಡಲು 800 ರೂಪಾಯಿ ಇತ್ತು. ಡ್ರೈವರ್ ಬ್ಯಾಟ ಪ್ರತ್ಯೇಕ ಕೊಡಬೇಕಿತ್ತು. ಇದನ್ನೇ ಭರಿಸಲು ಬಡ ರೈತರಿಗೆ ಕಷ್ಟವಾಗಿತ್ತು. ಟ್ರ್ಯಾಕ್ಟರ್ ಗೆ ಡೀಸೆಲ್ ಹೆಚ್ಚು ಬಳಕೆ ಆಗುತ್ತದೆ ಈಗ ಬೆಲೆ ಹೆಚ್ಚಳದಿಂದ ಒಂದು ಗಂಟೆ ಹೊಲ ಉಳುಮೆ ಮಾಡಲು 1400 ರೂಗೆ ಏರಿಕೆಯಾಗಲಿದೆ. ಇಷ್ಟು ಹಣ ಕೊಡುವಷ್ಟು ರೈತರಿಗೆ ಶಕ್ತಿ ಇಲ್ಲ. ಡೀಸೆಲ್ ಬೆಲೆ ಇಳಿಕೆಯಾಗಿದ್ದರೆ ರೈತರಿಗೆ ಅನುಕೂಲವಾಗುತ್ತಿತ್ತು. ಆದರೆ ಈಗಿನ ಪರಿಸ್ಥಿತಿ ರೈತರಿಗೆ ಪೂರಕವಾಗಿಲ್ಲ. ಡ್ರೈವರ್ ಬ್ಯಾಟ, ಊಟ, ಬೀಡಿ ಎಕ್ಸ್ ಟ್ರಾ ಎನ್ನುತ್ತಾರೆ ಗುಬ್ಬಿ ತಾಲೂಕಿನ ರೈತ ಮರಿಯಣ್ಣ.

ಡೀಸೆಲ್ ಬೆಲೆ ಹೆಚ್ಚಾಗಿರುವುದರಿಂದ ಬಸ್ ಪ್ರಯಾಣ ದರ ಹೆಚ್ಚಾಗುತ್ತದೆ. ಸರಕುಸಾಗಣೆ ವೆಚ್ಚವೂ ಅಧಿಕಗೊಳ್ಳುತ್ತದೆ. ಇದು ವಿವಿಧ ಬಗೆಯ ಪ್ರಯಾಣಿಕರು ಮತ್ತು ಸರಕುಗಳ ಬೆಲೆ ಹೆಚ್ಚಳಕ್ಕೆ ಕಾರಣವಾಗುತ್ತದೆ. ಬಡವರು, ರೈತರು, ವಿದ್ಯಾರ್ಥಿಗಳು ಪ್ರಯಾಣ ವೆಚ್ಚ ಭರಿಸಲು ಅಸಾಧ್ಯವಾಗುತ್ತದೆ. ಕೂಲಿ ಮಾಡುವವರು, ಆರ್ಥಿಕ ಸಂಕಷ್ಟದಲ್ಲಿರುವವರು ದೊಡ್ಡಮಟ್ಟದ ಸಮಸ್ಯೆಗೆ ಗುರಿಯಾಗಬೇಕಾಗುತ್ತದೆ. ಹಳ್ಳಿಗಳು ಮತ್ತಷ್ಟು ಹಿಂದುಳಿಯಲು ಕಾರಣವಾಗುತ್ತದೆ. ರೈತರ ಮೂಗಿಗೆ ತುಪ್ಪ ಸವರಿ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.


ಇದನ್ನೂ ಓದಿ: ಕನ್ನಡಿಗರೆಂದರೆ ಒಕ್ಕೂಟ ಸರ್ಕಾರಕ್ಕೆ ತಾತ್ಸಾರ: ಕೇಂದ್ರ ಬಜೆಟ್ ವಿರುದ್ಧ ಕರವೇ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...