Homeಕರ್ನಾಟಕಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ಡೀಸೆಲ್ ಬೆಲೆ ಹೆಚ್ಚಾಗಿರುವುದರಿಂದ ಬಸ್ ಪ್ರಯಾಣ ದರ ಹೆಚ್ಚಾಗುತ್ತದೆ. ಸರಕುಸಾಗಣೆ ವೆಚ್ಚವೂ ಅಧಿಕಗೊಳ್ಳುತ್ತದೆ. ಹೊಲ ಉಳುಮೆ ಮಾಡಲು ಟ್ರ್ಯಾಕ್ಟರ್ ಬಾಡಿಗೆ ತೀರಾ ಹೆಚ್ಚಾಗಲಿದೆ!

- Advertisement -
- Advertisement -

ಕೇಂದ್ರದ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಬಜೆಟ್ ಮಂಡಿಸಿದ ಕೆಲವೇ ಗಂಟೆಗಳಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆ ಕಾಣುತ್ತಿದ್ದಂತೆ ಜನಸಾಮಾನ್ಯರನ್ನು ತಬ್ಬಿಬ್ಬುಗೊಳಿಸಿದೆ. ಗ್ರಾಮೀಣ ಪ್ರದೇಶದ ಜನರು ಬೈಕ್, ಟಿವಿಎಸ್ ಗಳನ್ನು ಮೂಲೆಗೆ ತಳ್ಳಿ ಸಂಚಾರಕ್ಕೆ ಕುದುರೆ ಮತ್ತು ಕತ್ತೆ ಬಳಸುತ್ತಿರುವುದು ಬೆಳಕಿಗೆ ಬಂದಿದೆ. ತೈಲೋತ್ಪನ್ನಗಳ ಬೆಲೆ ಲೀಟರ್ ಗೆ ನೂರು ರೂಗಳತ್ತ ಗಗನಮುಖಿಯಾಗಿ ಸಾಗುತ್ತಿದ್ದಂತೆಯೇ ಈ ಸಂಚಾರಿ ವ್ಯಾಪಾರಿಗಳು ಈ ಮಾರ್ಗ ಹಿಡಿದಿದ್ದಾರೆ. ಮತ್ತೊಂದು ಕಡೆ ದುಬಾರಿ ಬೆಲೆಗಳಿಂದಾಗಿ ರೈತರು ಬಾಣಲೆಯಿಂದ ಬೆಂಕಿಗೆ ಬೀಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ.

ಹಿಂದಿನ ಕಾಲದಲ್ಲಿ ಸಂಚಾರಕ್ಕೆ ಬಳಸುತ್ತಿದ್ದ ಪರಿಸರಸ್ನೇಹಿ ಪ್ರಾಣಿಗಳ ಮೇಲೆಯೇ ಯುವಕರ ಸವಾರಿ ಸಾಗಿದೆ. ಇದಕ್ಕೆ ನಿದರ್ಶನವೆಂಬಂತೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕು ವೆಂಕಟಾಪುರದಲ್ಲಿ ಇಬ್ಬರು ಯುವಕರು ಕತ್ತೆ – ಕುದುರೆ ಮೇಲೆ ಪ್ರಯಾಣ ಬೆಳೆಸಿ ದುಬಾರಿ ಜೀವನ ನಡೆಸುತ್ತಿರುವ ಸಂಕಟ ಸಮಯದಲ್ಲಿ ಪರ್ಯಾಯ ಮಾರ್ಗ ಹುಡುಕಿಕೊಂಡಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ಬಜೆಟ್ ಜನ ಸಾಮಾನ್ಯರಿಗೆ ಹೊರೆಯಾಗಿದೆ, ನಿತ್ಯವೂ ಹಳ್ಳಿಗಳಿಂದ ಪಟ್ಟಣಕ್ಕೆ ದ್ವಿಚಕ್ರ ವಾಹನಗಳಲ್ಲಿ ಹೋಗುವುದು ದುಸ್ಥರ ಎಂಬುದನ್ನು ಸಾರಿ ಹೇಳುತ್ತಿದ್ದಾರೆ.

ವೆಂಕಟಮ್ಮನಹಳ್ಳಿಯ 40 ವರ್ಷದ ಸೋಮಶೇಖರ್ ದಿನಸಿ ವ್ಯಾಪಾರಿ. ಹಳ್ಳಿಹಳ್ಳಿಗೆ ಟಿವಿಎಸ್ ಎಕ್ಸ್ ಎಲ್ ವಾಹನದಲ್ಲಿ ತೆರಳಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿ ದಿನಕ್ಕೆ ಹತ್ತಾರು ಹಳ್ಳಿಗಳನ್ನು ತಿರುಗಿ ವ್ಯಾಪಾರ ಮಾಡಿ ದಿನಕ್ಕೆ 100 ರೂ ಗಳಿಸುತ್ತಿದ್ದರು. ಪೆಟ್ರೋಲ್ ಬೆಲೆ ಜಾಸ್ತಿಯಾಗುತ್ತಿದ್ದಂತೆಯೇ ಬಂದ ಲಾಭದ ಹಣ ಪೂರ ಪೆಟ್ರೋಲ್ ಖರ್ಚಿಗೆ ಸರಿಯಾಗುತ್ತಿತ್ತು. ಇದನ್ನು ಮನಗಂಡ ಸೋಮಶೇಖರ್ ಸಂಚಾರಿ ವ್ಯಾಪಾರಕ್ಕೆ ಕುದುರೆ ಬಳಕೆ ಮಾಡುತ್ತಿದ್ದಾರೆ. ಒಮ್ಮೆ ಹುಲ್ಲು ಖರೀದಿ ಮಾಡಿದರೆ ಆರು ತಿಂಗಳಿಗಾಗುವಷ್ಟು ಸಿಗುತ್ತದೆ. ಇದಕ್ಕೆ ಹೆಚ್ಚೆಂದರೆ 1000 ರೂಪಾಯಿ ವೆಚ್ಚ ತಗಲುತ್ತದೆ. ಕುದುರೆ ತೆಗೆದುಕೊಂಡು ಎರಡು ತಿಂಗಳಾಗಿದೆ. ಹೆಚ್ಚು ಖರ್ಚು ಬರುತ್ತಿಲ್ಲ. ಇದುವರೆಗೆ ಪೆಟ್ರೋಲ್ ಗೆ ವೆಚ್ಚ ಮಾಡುತ್ತಿದ್ದ ಹಣ ಉಳಿಯುತ್ತಿದೆ. ಗೋಣಿಹಳ್ಳಿ, ಪೆನಗೊಂಡೆ, ತಿರುಮಣಿ ಹೀಗೆ ಹಲವು ಹಳ್ಳಿಗಳನ್ನು ತಿರುಗುತ್ತೇನೆ. ಒಂದಷ್ಟು ಹಣ ಉಳಿಯುವಂತೆ ಆಗಿದೆ ಎಂದು ಸೋಮಶೇಖರ್ ತಿಳಿಸುತ್ತಾರೆ.

ರಾಮಲಿಂಗಯ್ಯ ಹೆಚ್ಚು ತಿಳುವಳಿಕೆ ಇಲ್ಲ. ಈತನೂ ಕೂಡ ಸಂಚಾರಿ ವ್ಯಾಪಾರಿ. ಬಟ್ಟೆ ವ್ಯಾಪಾರಕ್ಕೆ ಕತ್ತೆ ಖರೀದಿ ಮಾಡಿದ್ದು ನಿತ್ಯವೂ ಕತ್ತೆಯ ಮೇಲೆ ಬಟ್ಟೆಗಳನ್ನು ಹೇರಿಕೊಂಡು ಹೋಗಿ ಮಾರಾಟ ಮಾಡುತ್ತಾ ಜೀವನ ಸಾಗಿಸುತ್ತಿದ್ದಾರೆ. ಈ ಹಿಂದೆ ಸೈಕಲ್ ಮೇಲೆ ಹೋಗುತ್ತಿದ್ದರು. ಅದು ತುಳಿಯಲು ಆಗದೆ ಹಳೆಯ ಟಿವಿಎಸ್ ಬಳಸಿದರು. ನಿತ್ಯವೂ ಪೆಟ್ರೋಲ್ ಗೆ ಹಣ ಸುರಿಯುತ್ತಿದ್ದರು. ಬರುವ ಸಣ್ಣ ಲಾಭಾಂಶವೂ ಪೆಟ್ರೋಲ್ ಗೆ ಆಗುತ್ತಿತ್ತು. ಇದರಿಂದ ಏನೂ ಉಳಿಯುತ್ತಿರಲಿಲ್ಲ. ದಿನಕ್ಕೆ 800 ರೂ ಬಟ್ಟೆ ವ್ಯಾಪಾರ ಮಾಡಿದರೆ ಬಂದ ಬಹುತೇಕ ಹಣ ಪೆಟ್ರೋಲ್ ಗೆ ಖರ್ಚಾಗುತ್ತಿತ್ತು. ಹಾಗಾಗಿ ಕತ್ತೆ ಖರೀದಿ ಮಾಡಿರುವ ರಾಮಲಿಂಗಯ್ಯ “ಈಗ ಬಟ್ಟೆ ವ್ಯಾಪಾರದಿಂದ ಸಣ್ಣ ಉಳಿತಾಯ ಮಾಡುವಂತಹ ಸ್ಥಿತಿಗೆ ಬಂದಿದೆ. ಒಮ್ಮೆ ಭತ್ತದ ಹುಲ್ಲು ಖರೀದಿಸಿದರೆ ಆರೇಳು ತಿಂಗಳು ಬರುತ್ತದೆ. ವ್ಯಾಪಾರಕ್ಕೂ ಇದು ಸಹಕಾರಿಯಾಗಿದೆ” ಎನ್ನುತ್ತಾರೆ ರಾಮಲಿಂಗಯ್ಯ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಗ್ರಾಮೀಣ ಪ್ರದೇಶದ ಮೇಲೆ ಗಾಢ ಪರಿಣಾಮ ಬೀರಿದೆ.  ಕೃಷಿಕರು ಮತ್ತು ಜನಸಾಮಾನ್ಯರನ್ನು ಕಂಗೆಡುವಂತೆ ಮಾಡಿದೆ. ಕೃಷಿ ಪರಿಕರಗಳನ್ನು ಇಳಿಕೆ ಮಾಡಿರುವ ಸರ್ಕಾರ ನಿತ್ಯವೂ ಕೋಟ್ಯಂತರ ರೂಪಾಯಿ ವಹಿವಾಟು ನಡೆಯುವ ತೈಲದ ಬೆಲೆ ಏರಿಕೆ ಮಾಡಿರುವುದು ಜನರ ನಡುವೆ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ. ಯಾವುದರ ಬೆಲೆ ಯಾವ ಕ್ಷಣದಲ್ಲಿ ಹೆಚ್ಚಳವಾಗಲಿದೆ ಎಂಬ ಆತಂಕ ರೈತರು ಮತ್ತು ಜನಸಾಮಾನ್ಯರನ್ನು ಕಾಡುತ್ತಿದೆ.

ಗ್ರಾಮೀಣ ಭಾಗದಲ್ಲಿ ಹೊಲ ಉಳಲು ಬಹುತೇಕ ರೈತರು ಟ್ರ್ಯಾಕ್ಟರ್ ಗಳನ್ನೇ ನೆಚ್ಚಿಕೊಂಡಿದ್ದಾರೆ. ಸಣ್ಣ ಹಿಡುವಳಿ, ಮಧ್ಯಮ ಹಿಡುವಳಿದಾರರು ಕೂಡ ಟ್ರ್ಯಾಕ್ಟರ್ ಮೂಲಕ ಹೊಲ ಉತ್ತುವುದು ಸಾಮಾನ್ಯವಾಗಿದೆ. ಈವರೆಗೆ ಒಂದು ಗಂಟೆ ಹೊಲ ಉಳುಮೆ ಮಾಡಲು 800 ರೂಪಾಯಿ ಇತ್ತು. ಡ್ರೈವರ್ ಬ್ಯಾಟ ಪ್ರತ್ಯೇಕ ಕೊಡಬೇಕಿತ್ತು. ಇದನ್ನೇ ಭರಿಸಲು ಬಡ ರೈತರಿಗೆ ಕಷ್ಟವಾಗಿತ್ತು. ಟ್ರ್ಯಾಕ್ಟರ್ ಗೆ ಡೀಸೆಲ್ ಹೆಚ್ಚು ಬಳಕೆ ಆಗುತ್ತದೆ ಈಗ ಬೆಲೆ ಹೆಚ್ಚಳದಿಂದ ಒಂದು ಗಂಟೆ ಹೊಲ ಉಳುಮೆ ಮಾಡಲು 1400 ರೂಗೆ ಏರಿಕೆಯಾಗಲಿದೆ. ಇಷ್ಟು ಹಣ ಕೊಡುವಷ್ಟು ರೈತರಿಗೆ ಶಕ್ತಿ ಇಲ್ಲ. ಡೀಸೆಲ್ ಬೆಲೆ ಇಳಿಕೆಯಾಗಿದ್ದರೆ ರೈತರಿಗೆ ಅನುಕೂಲವಾಗುತ್ತಿತ್ತು. ಆದರೆ ಈಗಿನ ಪರಿಸ್ಥಿತಿ ರೈತರಿಗೆ ಪೂರಕವಾಗಿಲ್ಲ. ಡ್ರೈವರ್ ಬ್ಯಾಟ, ಊಟ, ಬೀಡಿ ಎಕ್ಸ್ ಟ್ರಾ ಎನ್ನುತ್ತಾರೆ ಗುಬ್ಬಿ ತಾಲೂಕಿನ ರೈತ ಮರಿಯಣ್ಣ.

ಡೀಸೆಲ್ ಬೆಲೆ ಹೆಚ್ಚಾಗಿರುವುದರಿಂದ ಬಸ್ ಪ್ರಯಾಣ ದರ ಹೆಚ್ಚಾಗುತ್ತದೆ. ಸರಕುಸಾಗಣೆ ವೆಚ್ಚವೂ ಅಧಿಕಗೊಳ್ಳುತ್ತದೆ. ಇದು ವಿವಿಧ ಬಗೆಯ ಪ್ರಯಾಣಿಕರು ಮತ್ತು ಸರಕುಗಳ ಬೆಲೆ ಹೆಚ್ಚಳಕ್ಕೆ ಕಾರಣವಾಗುತ್ತದೆ. ಬಡವರು, ರೈತರು, ವಿದ್ಯಾರ್ಥಿಗಳು ಪ್ರಯಾಣ ವೆಚ್ಚ ಭರಿಸಲು ಅಸಾಧ್ಯವಾಗುತ್ತದೆ. ಕೂಲಿ ಮಾಡುವವರು, ಆರ್ಥಿಕ ಸಂಕಷ್ಟದಲ್ಲಿರುವವರು ದೊಡ್ಡಮಟ್ಟದ ಸಮಸ್ಯೆಗೆ ಗುರಿಯಾಗಬೇಕಾಗುತ್ತದೆ. ಹಳ್ಳಿಗಳು ಮತ್ತಷ್ಟು ಹಿಂದುಳಿಯಲು ಕಾರಣವಾಗುತ್ತದೆ. ರೈತರ ಮೂಗಿಗೆ ತುಪ್ಪ ಸವರಿ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.


ಇದನ್ನೂ ಓದಿ: ಕನ್ನಡಿಗರೆಂದರೆ ಒಕ್ಕೂಟ ಸರ್ಕಾರಕ್ಕೆ ತಾತ್ಸಾರ: ಕೇಂದ್ರ ಬಜೆಟ್ ವಿರುದ್ಧ ಕರವೇ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...