Homeಕರ್ನಾಟಕಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ಡೀಸೆಲ್ ಬೆಲೆ ಹೆಚ್ಚಾಗಿರುವುದರಿಂದ ಬಸ್ ಪ್ರಯಾಣ ದರ ಹೆಚ್ಚಾಗುತ್ತದೆ. ಸರಕುಸಾಗಣೆ ವೆಚ್ಚವೂ ಅಧಿಕಗೊಳ್ಳುತ್ತದೆ. ಹೊಲ ಉಳುಮೆ ಮಾಡಲು ಟ್ರ್ಯಾಕ್ಟರ್ ಬಾಡಿಗೆ ತೀರಾ ಹೆಚ್ಚಾಗಲಿದೆ!

- Advertisement -
- Advertisement -

ಕೇಂದ್ರದ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಬಜೆಟ್ ಮಂಡಿಸಿದ ಕೆಲವೇ ಗಂಟೆಗಳಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆ ಕಾಣುತ್ತಿದ್ದಂತೆ ಜನಸಾಮಾನ್ಯರನ್ನು ತಬ್ಬಿಬ್ಬುಗೊಳಿಸಿದೆ. ಗ್ರಾಮೀಣ ಪ್ರದೇಶದ ಜನರು ಬೈಕ್, ಟಿವಿಎಸ್ ಗಳನ್ನು ಮೂಲೆಗೆ ತಳ್ಳಿ ಸಂಚಾರಕ್ಕೆ ಕುದುರೆ ಮತ್ತು ಕತ್ತೆ ಬಳಸುತ್ತಿರುವುದು ಬೆಳಕಿಗೆ ಬಂದಿದೆ. ತೈಲೋತ್ಪನ್ನಗಳ ಬೆಲೆ ಲೀಟರ್ ಗೆ ನೂರು ರೂಗಳತ್ತ ಗಗನಮುಖಿಯಾಗಿ ಸಾಗುತ್ತಿದ್ದಂತೆಯೇ ಈ ಸಂಚಾರಿ ವ್ಯಾಪಾರಿಗಳು ಈ ಮಾರ್ಗ ಹಿಡಿದಿದ್ದಾರೆ. ಮತ್ತೊಂದು ಕಡೆ ದುಬಾರಿ ಬೆಲೆಗಳಿಂದಾಗಿ ರೈತರು ಬಾಣಲೆಯಿಂದ ಬೆಂಕಿಗೆ ಬೀಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ.

ಹಿಂದಿನ ಕಾಲದಲ್ಲಿ ಸಂಚಾರಕ್ಕೆ ಬಳಸುತ್ತಿದ್ದ ಪರಿಸರಸ್ನೇಹಿ ಪ್ರಾಣಿಗಳ ಮೇಲೆಯೇ ಯುವಕರ ಸವಾರಿ ಸಾಗಿದೆ. ಇದಕ್ಕೆ ನಿದರ್ಶನವೆಂಬಂತೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕು ವೆಂಕಟಾಪುರದಲ್ಲಿ ಇಬ್ಬರು ಯುವಕರು ಕತ್ತೆ – ಕುದುರೆ ಮೇಲೆ ಪ್ರಯಾಣ ಬೆಳೆಸಿ ದುಬಾರಿ ಜೀವನ ನಡೆಸುತ್ತಿರುವ ಸಂಕಟ ಸಮಯದಲ್ಲಿ ಪರ್ಯಾಯ ಮಾರ್ಗ ಹುಡುಕಿಕೊಂಡಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ಬಜೆಟ್ ಜನ ಸಾಮಾನ್ಯರಿಗೆ ಹೊರೆಯಾಗಿದೆ, ನಿತ್ಯವೂ ಹಳ್ಳಿಗಳಿಂದ ಪಟ್ಟಣಕ್ಕೆ ದ್ವಿಚಕ್ರ ವಾಹನಗಳಲ್ಲಿ ಹೋಗುವುದು ದುಸ್ಥರ ಎಂಬುದನ್ನು ಸಾರಿ ಹೇಳುತ್ತಿದ್ದಾರೆ.

ವೆಂಕಟಮ್ಮನಹಳ್ಳಿಯ 40 ವರ್ಷದ ಸೋಮಶೇಖರ್ ದಿನಸಿ ವ್ಯಾಪಾರಿ. ಹಳ್ಳಿಹಳ್ಳಿಗೆ ಟಿವಿಎಸ್ ಎಕ್ಸ್ ಎಲ್ ವಾಹನದಲ್ಲಿ ತೆರಳಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿ ದಿನಕ್ಕೆ ಹತ್ತಾರು ಹಳ್ಳಿಗಳನ್ನು ತಿರುಗಿ ವ್ಯಾಪಾರ ಮಾಡಿ ದಿನಕ್ಕೆ 100 ರೂ ಗಳಿಸುತ್ತಿದ್ದರು. ಪೆಟ್ರೋಲ್ ಬೆಲೆ ಜಾಸ್ತಿಯಾಗುತ್ತಿದ್ದಂತೆಯೇ ಬಂದ ಲಾಭದ ಹಣ ಪೂರ ಪೆಟ್ರೋಲ್ ಖರ್ಚಿಗೆ ಸರಿಯಾಗುತ್ತಿತ್ತು. ಇದನ್ನು ಮನಗಂಡ ಸೋಮಶೇಖರ್ ಸಂಚಾರಿ ವ್ಯಾಪಾರಕ್ಕೆ ಕುದುರೆ ಬಳಕೆ ಮಾಡುತ್ತಿದ್ದಾರೆ. ಒಮ್ಮೆ ಹುಲ್ಲು ಖರೀದಿ ಮಾಡಿದರೆ ಆರು ತಿಂಗಳಿಗಾಗುವಷ್ಟು ಸಿಗುತ್ತದೆ. ಇದಕ್ಕೆ ಹೆಚ್ಚೆಂದರೆ 1000 ರೂಪಾಯಿ ವೆಚ್ಚ ತಗಲುತ್ತದೆ. ಕುದುರೆ ತೆಗೆದುಕೊಂಡು ಎರಡು ತಿಂಗಳಾಗಿದೆ. ಹೆಚ್ಚು ಖರ್ಚು ಬರುತ್ತಿಲ್ಲ. ಇದುವರೆಗೆ ಪೆಟ್ರೋಲ್ ಗೆ ವೆಚ್ಚ ಮಾಡುತ್ತಿದ್ದ ಹಣ ಉಳಿಯುತ್ತಿದೆ. ಗೋಣಿಹಳ್ಳಿ, ಪೆನಗೊಂಡೆ, ತಿರುಮಣಿ ಹೀಗೆ ಹಲವು ಹಳ್ಳಿಗಳನ್ನು ತಿರುಗುತ್ತೇನೆ. ಒಂದಷ್ಟು ಹಣ ಉಳಿಯುವಂತೆ ಆಗಿದೆ ಎಂದು ಸೋಮಶೇಖರ್ ತಿಳಿಸುತ್ತಾರೆ.

ರಾಮಲಿಂಗಯ್ಯ ಹೆಚ್ಚು ತಿಳುವಳಿಕೆ ಇಲ್ಲ. ಈತನೂ ಕೂಡ ಸಂಚಾರಿ ವ್ಯಾಪಾರಿ. ಬಟ್ಟೆ ವ್ಯಾಪಾರಕ್ಕೆ ಕತ್ತೆ ಖರೀದಿ ಮಾಡಿದ್ದು ನಿತ್ಯವೂ ಕತ್ತೆಯ ಮೇಲೆ ಬಟ್ಟೆಗಳನ್ನು ಹೇರಿಕೊಂಡು ಹೋಗಿ ಮಾರಾಟ ಮಾಡುತ್ತಾ ಜೀವನ ಸಾಗಿಸುತ್ತಿದ್ದಾರೆ. ಈ ಹಿಂದೆ ಸೈಕಲ್ ಮೇಲೆ ಹೋಗುತ್ತಿದ್ದರು. ಅದು ತುಳಿಯಲು ಆಗದೆ ಹಳೆಯ ಟಿವಿಎಸ್ ಬಳಸಿದರು. ನಿತ್ಯವೂ ಪೆಟ್ರೋಲ್ ಗೆ ಹಣ ಸುರಿಯುತ್ತಿದ್ದರು. ಬರುವ ಸಣ್ಣ ಲಾಭಾಂಶವೂ ಪೆಟ್ರೋಲ್ ಗೆ ಆಗುತ್ತಿತ್ತು. ಇದರಿಂದ ಏನೂ ಉಳಿಯುತ್ತಿರಲಿಲ್ಲ. ದಿನಕ್ಕೆ 800 ರೂ ಬಟ್ಟೆ ವ್ಯಾಪಾರ ಮಾಡಿದರೆ ಬಂದ ಬಹುತೇಕ ಹಣ ಪೆಟ್ರೋಲ್ ಗೆ ಖರ್ಚಾಗುತ್ತಿತ್ತು. ಹಾಗಾಗಿ ಕತ್ತೆ ಖರೀದಿ ಮಾಡಿರುವ ರಾಮಲಿಂಗಯ್ಯ “ಈಗ ಬಟ್ಟೆ ವ್ಯಾಪಾರದಿಂದ ಸಣ್ಣ ಉಳಿತಾಯ ಮಾಡುವಂತಹ ಸ್ಥಿತಿಗೆ ಬಂದಿದೆ. ಒಮ್ಮೆ ಭತ್ತದ ಹುಲ್ಲು ಖರೀದಿಸಿದರೆ ಆರೇಳು ತಿಂಗಳು ಬರುತ್ತದೆ. ವ್ಯಾಪಾರಕ್ಕೂ ಇದು ಸಹಕಾರಿಯಾಗಿದೆ” ಎನ್ನುತ್ತಾರೆ ರಾಮಲಿಂಗಯ್ಯ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಗ್ರಾಮೀಣ ಪ್ರದೇಶದ ಮೇಲೆ ಗಾಢ ಪರಿಣಾಮ ಬೀರಿದೆ.  ಕೃಷಿಕರು ಮತ್ತು ಜನಸಾಮಾನ್ಯರನ್ನು ಕಂಗೆಡುವಂತೆ ಮಾಡಿದೆ. ಕೃಷಿ ಪರಿಕರಗಳನ್ನು ಇಳಿಕೆ ಮಾಡಿರುವ ಸರ್ಕಾರ ನಿತ್ಯವೂ ಕೋಟ್ಯಂತರ ರೂಪಾಯಿ ವಹಿವಾಟು ನಡೆಯುವ ತೈಲದ ಬೆಲೆ ಏರಿಕೆ ಮಾಡಿರುವುದು ಜನರ ನಡುವೆ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ. ಯಾವುದರ ಬೆಲೆ ಯಾವ ಕ್ಷಣದಲ್ಲಿ ಹೆಚ್ಚಳವಾಗಲಿದೆ ಎಂಬ ಆತಂಕ ರೈತರು ಮತ್ತು ಜನಸಾಮಾನ್ಯರನ್ನು ಕಾಡುತ್ತಿದೆ.

ಗ್ರಾಮೀಣ ಭಾಗದಲ್ಲಿ ಹೊಲ ಉಳಲು ಬಹುತೇಕ ರೈತರು ಟ್ರ್ಯಾಕ್ಟರ್ ಗಳನ್ನೇ ನೆಚ್ಚಿಕೊಂಡಿದ್ದಾರೆ. ಸಣ್ಣ ಹಿಡುವಳಿ, ಮಧ್ಯಮ ಹಿಡುವಳಿದಾರರು ಕೂಡ ಟ್ರ್ಯಾಕ್ಟರ್ ಮೂಲಕ ಹೊಲ ಉತ್ತುವುದು ಸಾಮಾನ್ಯವಾಗಿದೆ. ಈವರೆಗೆ ಒಂದು ಗಂಟೆ ಹೊಲ ಉಳುಮೆ ಮಾಡಲು 800 ರೂಪಾಯಿ ಇತ್ತು. ಡ್ರೈವರ್ ಬ್ಯಾಟ ಪ್ರತ್ಯೇಕ ಕೊಡಬೇಕಿತ್ತು. ಇದನ್ನೇ ಭರಿಸಲು ಬಡ ರೈತರಿಗೆ ಕಷ್ಟವಾಗಿತ್ತು. ಟ್ರ್ಯಾಕ್ಟರ್ ಗೆ ಡೀಸೆಲ್ ಹೆಚ್ಚು ಬಳಕೆ ಆಗುತ್ತದೆ ಈಗ ಬೆಲೆ ಹೆಚ್ಚಳದಿಂದ ಒಂದು ಗಂಟೆ ಹೊಲ ಉಳುಮೆ ಮಾಡಲು 1400 ರೂಗೆ ಏರಿಕೆಯಾಗಲಿದೆ. ಇಷ್ಟು ಹಣ ಕೊಡುವಷ್ಟು ರೈತರಿಗೆ ಶಕ್ತಿ ಇಲ್ಲ. ಡೀಸೆಲ್ ಬೆಲೆ ಇಳಿಕೆಯಾಗಿದ್ದರೆ ರೈತರಿಗೆ ಅನುಕೂಲವಾಗುತ್ತಿತ್ತು. ಆದರೆ ಈಗಿನ ಪರಿಸ್ಥಿತಿ ರೈತರಿಗೆ ಪೂರಕವಾಗಿಲ್ಲ. ಡ್ರೈವರ್ ಬ್ಯಾಟ, ಊಟ, ಬೀಡಿ ಎಕ್ಸ್ ಟ್ರಾ ಎನ್ನುತ್ತಾರೆ ಗುಬ್ಬಿ ತಾಲೂಕಿನ ರೈತ ಮರಿಯಣ್ಣ.

ಡೀಸೆಲ್ ಬೆಲೆ ಹೆಚ್ಚಾಗಿರುವುದರಿಂದ ಬಸ್ ಪ್ರಯಾಣ ದರ ಹೆಚ್ಚಾಗುತ್ತದೆ. ಸರಕುಸಾಗಣೆ ವೆಚ್ಚವೂ ಅಧಿಕಗೊಳ್ಳುತ್ತದೆ. ಇದು ವಿವಿಧ ಬಗೆಯ ಪ್ರಯಾಣಿಕರು ಮತ್ತು ಸರಕುಗಳ ಬೆಲೆ ಹೆಚ್ಚಳಕ್ಕೆ ಕಾರಣವಾಗುತ್ತದೆ. ಬಡವರು, ರೈತರು, ವಿದ್ಯಾರ್ಥಿಗಳು ಪ್ರಯಾಣ ವೆಚ್ಚ ಭರಿಸಲು ಅಸಾಧ್ಯವಾಗುತ್ತದೆ. ಕೂಲಿ ಮಾಡುವವರು, ಆರ್ಥಿಕ ಸಂಕಷ್ಟದಲ್ಲಿರುವವರು ದೊಡ್ಡಮಟ್ಟದ ಸಮಸ್ಯೆಗೆ ಗುರಿಯಾಗಬೇಕಾಗುತ್ತದೆ. ಹಳ್ಳಿಗಳು ಮತ್ತಷ್ಟು ಹಿಂದುಳಿಯಲು ಕಾರಣವಾಗುತ್ತದೆ. ರೈತರ ಮೂಗಿಗೆ ತುಪ್ಪ ಸವರಿ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.


ಇದನ್ನೂ ಓದಿ: ಕನ್ನಡಿಗರೆಂದರೆ ಒಕ್ಕೂಟ ಸರ್ಕಾರಕ್ಕೆ ತಾತ್ಸಾರ: ಕೇಂದ್ರ ಬಜೆಟ್ ವಿರುದ್ಧ ಕರವೇ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...