Homeಕರ್ನಾಟಕಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ಡೀಸೆಲ್ ಬೆಲೆ ಹೆಚ್ಚಾಗಿರುವುದರಿಂದ ಬಸ್ ಪ್ರಯಾಣ ದರ ಹೆಚ್ಚಾಗುತ್ತದೆ. ಸರಕುಸಾಗಣೆ ವೆಚ್ಚವೂ ಅಧಿಕಗೊಳ್ಳುತ್ತದೆ. ಹೊಲ ಉಳುಮೆ ಮಾಡಲು ಟ್ರ್ಯಾಕ್ಟರ್ ಬಾಡಿಗೆ ತೀರಾ ಹೆಚ್ಚಾಗಲಿದೆ!

- Advertisement -
- Advertisement -

ಕೇಂದ್ರದ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಬಜೆಟ್ ಮಂಡಿಸಿದ ಕೆಲವೇ ಗಂಟೆಗಳಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆ ಕಾಣುತ್ತಿದ್ದಂತೆ ಜನಸಾಮಾನ್ಯರನ್ನು ತಬ್ಬಿಬ್ಬುಗೊಳಿಸಿದೆ. ಗ್ರಾಮೀಣ ಪ್ರದೇಶದ ಜನರು ಬೈಕ್, ಟಿವಿಎಸ್ ಗಳನ್ನು ಮೂಲೆಗೆ ತಳ್ಳಿ ಸಂಚಾರಕ್ಕೆ ಕುದುರೆ ಮತ್ತು ಕತ್ತೆ ಬಳಸುತ್ತಿರುವುದು ಬೆಳಕಿಗೆ ಬಂದಿದೆ. ತೈಲೋತ್ಪನ್ನಗಳ ಬೆಲೆ ಲೀಟರ್ ಗೆ ನೂರು ರೂಗಳತ್ತ ಗಗನಮುಖಿಯಾಗಿ ಸಾಗುತ್ತಿದ್ದಂತೆಯೇ ಈ ಸಂಚಾರಿ ವ್ಯಾಪಾರಿಗಳು ಈ ಮಾರ್ಗ ಹಿಡಿದಿದ್ದಾರೆ. ಮತ್ತೊಂದು ಕಡೆ ದುಬಾರಿ ಬೆಲೆಗಳಿಂದಾಗಿ ರೈತರು ಬಾಣಲೆಯಿಂದ ಬೆಂಕಿಗೆ ಬೀಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ.

ಹಿಂದಿನ ಕಾಲದಲ್ಲಿ ಸಂಚಾರಕ್ಕೆ ಬಳಸುತ್ತಿದ್ದ ಪರಿಸರಸ್ನೇಹಿ ಪ್ರಾಣಿಗಳ ಮೇಲೆಯೇ ಯುವಕರ ಸವಾರಿ ಸಾಗಿದೆ. ಇದಕ್ಕೆ ನಿದರ್ಶನವೆಂಬಂತೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕು ವೆಂಕಟಾಪುರದಲ್ಲಿ ಇಬ್ಬರು ಯುವಕರು ಕತ್ತೆ – ಕುದುರೆ ಮೇಲೆ ಪ್ರಯಾಣ ಬೆಳೆಸಿ ದುಬಾರಿ ಜೀವನ ನಡೆಸುತ್ತಿರುವ ಸಂಕಟ ಸಮಯದಲ್ಲಿ ಪರ್ಯಾಯ ಮಾರ್ಗ ಹುಡುಕಿಕೊಂಡಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ಬಜೆಟ್ ಜನ ಸಾಮಾನ್ಯರಿಗೆ ಹೊರೆಯಾಗಿದೆ, ನಿತ್ಯವೂ ಹಳ್ಳಿಗಳಿಂದ ಪಟ್ಟಣಕ್ಕೆ ದ್ವಿಚಕ್ರ ವಾಹನಗಳಲ್ಲಿ ಹೋಗುವುದು ದುಸ್ಥರ ಎಂಬುದನ್ನು ಸಾರಿ ಹೇಳುತ್ತಿದ್ದಾರೆ.

ವೆಂಕಟಮ್ಮನಹಳ್ಳಿಯ 40 ವರ್ಷದ ಸೋಮಶೇಖರ್ ದಿನಸಿ ವ್ಯಾಪಾರಿ. ಹಳ್ಳಿಹಳ್ಳಿಗೆ ಟಿವಿಎಸ್ ಎಕ್ಸ್ ಎಲ್ ವಾಹನದಲ್ಲಿ ತೆರಳಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿ ದಿನಕ್ಕೆ ಹತ್ತಾರು ಹಳ್ಳಿಗಳನ್ನು ತಿರುಗಿ ವ್ಯಾಪಾರ ಮಾಡಿ ದಿನಕ್ಕೆ 100 ರೂ ಗಳಿಸುತ್ತಿದ್ದರು. ಪೆಟ್ರೋಲ್ ಬೆಲೆ ಜಾಸ್ತಿಯಾಗುತ್ತಿದ್ದಂತೆಯೇ ಬಂದ ಲಾಭದ ಹಣ ಪೂರ ಪೆಟ್ರೋಲ್ ಖರ್ಚಿಗೆ ಸರಿಯಾಗುತ್ತಿತ್ತು. ಇದನ್ನು ಮನಗಂಡ ಸೋಮಶೇಖರ್ ಸಂಚಾರಿ ವ್ಯಾಪಾರಕ್ಕೆ ಕುದುರೆ ಬಳಕೆ ಮಾಡುತ್ತಿದ್ದಾರೆ. ಒಮ್ಮೆ ಹುಲ್ಲು ಖರೀದಿ ಮಾಡಿದರೆ ಆರು ತಿಂಗಳಿಗಾಗುವಷ್ಟು ಸಿಗುತ್ತದೆ. ಇದಕ್ಕೆ ಹೆಚ್ಚೆಂದರೆ 1000 ರೂಪಾಯಿ ವೆಚ್ಚ ತಗಲುತ್ತದೆ. ಕುದುರೆ ತೆಗೆದುಕೊಂಡು ಎರಡು ತಿಂಗಳಾಗಿದೆ. ಹೆಚ್ಚು ಖರ್ಚು ಬರುತ್ತಿಲ್ಲ. ಇದುವರೆಗೆ ಪೆಟ್ರೋಲ್ ಗೆ ವೆಚ್ಚ ಮಾಡುತ್ತಿದ್ದ ಹಣ ಉಳಿಯುತ್ತಿದೆ. ಗೋಣಿಹಳ್ಳಿ, ಪೆನಗೊಂಡೆ, ತಿರುಮಣಿ ಹೀಗೆ ಹಲವು ಹಳ್ಳಿಗಳನ್ನು ತಿರುಗುತ್ತೇನೆ. ಒಂದಷ್ಟು ಹಣ ಉಳಿಯುವಂತೆ ಆಗಿದೆ ಎಂದು ಸೋಮಶೇಖರ್ ತಿಳಿಸುತ್ತಾರೆ.

ರಾಮಲಿಂಗಯ್ಯ ಹೆಚ್ಚು ತಿಳುವಳಿಕೆ ಇಲ್ಲ. ಈತನೂ ಕೂಡ ಸಂಚಾರಿ ವ್ಯಾಪಾರಿ. ಬಟ್ಟೆ ವ್ಯಾಪಾರಕ್ಕೆ ಕತ್ತೆ ಖರೀದಿ ಮಾಡಿದ್ದು ನಿತ್ಯವೂ ಕತ್ತೆಯ ಮೇಲೆ ಬಟ್ಟೆಗಳನ್ನು ಹೇರಿಕೊಂಡು ಹೋಗಿ ಮಾರಾಟ ಮಾಡುತ್ತಾ ಜೀವನ ಸಾಗಿಸುತ್ತಿದ್ದಾರೆ. ಈ ಹಿಂದೆ ಸೈಕಲ್ ಮೇಲೆ ಹೋಗುತ್ತಿದ್ದರು. ಅದು ತುಳಿಯಲು ಆಗದೆ ಹಳೆಯ ಟಿವಿಎಸ್ ಬಳಸಿದರು. ನಿತ್ಯವೂ ಪೆಟ್ರೋಲ್ ಗೆ ಹಣ ಸುರಿಯುತ್ತಿದ್ದರು. ಬರುವ ಸಣ್ಣ ಲಾಭಾಂಶವೂ ಪೆಟ್ರೋಲ್ ಗೆ ಆಗುತ್ತಿತ್ತು. ಇದರಿಂದ ಏನೂ ಉಳಿಯುತ್ತಿರಲಿಲ್ಲ. ದಿನಕ್ಕೆ 800 ರೂ ಬಟ್ಟೆ ವ್ಯಾಪಾರ ಮಾಡಿದರೆ ಬಂದ ಬಹುತೇಕ ಹಣ ಪೆಟ್ರೋಲ್ ಗೆ ಖರ್ಚಾಗುತ್ತಿತ್ತು. ಹಾಗಾಗಿ ಕತ್ತೆ ಖರೀದಿ ಮಾಡಿರುವ ರಾಮಲಿಂಗಯ್ಯ “ಈಗ ಬಟ್ಟೆ ವ್ಯಾಪಾರದಿಂದ ಸಣ್ಣ ಉಳಿತಾಯ ಮಾಡುವಂತಹ ಸ್ಥಿತಿಗೆ ಬಂದಿದೆ. ಒಮ್ಮೆ ಭತ್ತದ ಹುಲ್ಲು ಖರೀದಿಸಿದರೆ ಆರೇಳು ತಿಂಗಳು ಬರುತ್ತದೆ. ವ್ಯಾಪಾರಕ್ಕೂ ಇದು ಸಹಕಾರಿಯಾಗಿದೆ” ಎನ್ನುತ್ತಾರೆ ರಾಮಲಿಂಗಯ್ಯ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಗ್ರಾಮೀಣ ಪ್ರದೇಶದ ಮೇಲೆ ಗಾಢ ಪರಿಣಾಮ ಬೀರಿದೆ.  ಕೃಷಿಕರು ಮತ್ತು ಜನಸಾಮಾನ್ಯರನ್ನು ಕಂಗೆಡುವಂತೆ ಮಾಡಿದೆ. ಕೃಷಿ ಪರಿಕರಗಳನ್ನು ಇಳಿಕೆ ಮಾಡಿರುವ ಸರ್ಕಾರ ನಿತ್ಯವೂ ಕೋಟ್ಯಂತರ ರೂಪಾಯಿ ವಹಿವಾಟು ನಡೆಯುವ ತೈಲದ ಬೆಲೆ ಏರಿಕೆ ಮಾಡಿರುವುದು ಜನರ ನಡುವೆ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ. ಯಾವುದರ ಬೆಲೆ ಯಾವ ಕ್ಷಣದಲ್ಲಿ ಹೆಚ್ಚಳವಾಗಲಿದೆ ಎಂಬ ಆತಂಕ ರೈತರು ಮತ್ತು ಜನಸಾಮಾನ್ಯರನ್ನು ಕಾಡುತ್ತಿದೆ.

ಗ್ರಾಮೀಣ ಭಾಗದಲ್ಲಿ ಹೊಲ ಉಳಲು ಬಹುತೇಕ ರೈತರು ಟ್ರ್ಯಾಕ್ಟರ್ ಗಳನ್ನೇ ನೆಚ್ಚಿಕೊಂಡಿದ್ದಾರೆ. ಸಣ್ಣ ಹಿಡುವಳಿ, ಮಧ್ಯಮ ಹಿಡುವಳಿದಾರರು ಕೂಡ ಟ್ರ್ಯಾಕ್ಟರ್ ಮೂಲಕ ಹೊಲ ಉತ್ತುವುದು ಸಾಮಾನ್ಯವಾಗಿದೆ. ಈವರೆಗೆ ಒಂದು ಗಂಟೆ ಹೊಲ ಉಳುಮೆ ಮಾಡಲು 800 ರೂಪಾಯಿ ಇತ್ತು. ಡ್ರೈವರ್ ಬ್ಯಾಟ ಪ್ರತ್ಯೇಕ ಕೊಡಬೇಕಿತ್ತು. ಇದನ್ನೇ ಭರಿಸಲು ಬಡ ರೈತರಿಗೆ ಕಷ್ಟವಾಗಿತ್ತು. ಟ್ರ್ಯಾಕ್ಟರ್ ಗೆ ಡೀಸೆಲ್ ಹೆಚ್ಚು ಬಳಕೆ ಆಗುತ್ತದೆ ಈಗ ಬೆಲೆ ಹೆಚ್ಚಳದಿಂದ ಒಂದು ಗಂಟೆ ಹೊಲ ಉಳುಮೆ ಮಾಡಲು 1400 ರೂಗೆ ಏರಿಕೆಯಾಗಲಿದೆ. ಇಷ್ಟು ಹಣ ಕೊಡುವಷ್ಟು ರೈತರಿಗೆ ಶಕ್ತಿ ಇಲ್ಲ. ಡೀಸೆಲ್ ಬೆಲೆ ಇಳಿಕೆಯಾಗಿದ್ದರೆ ರೈತರಿಗೆ ಅನುಕೂಲವಾಗುತ್ತಿತ್ತು. ಆದರೆ ಈಗಿನ ಪರಿಸ್ಥಿತಿ ರೈತರಿಗೆ ಪೂರಕವಾಗಿಲ್ಲ. ಡ್ರೈವರ್ ಬ್ಯಾಟ, ಊಟ, ಬೀಡಿ ಎಕ್ಸ್ ಟ್ರಾ ಎನ್ನುತ್ತಾರೆ ಗುಬ್ಬಿ ತಾಲೂಕಿನ ರೈತ ಮರಿಯಣ್ಣ.

ಡೀಸೆಲ್ ಬೆಲೆ ಹೆಚ್ಚಾಗಿರುವುದರಿಂದ ಬಸ್ ಪ್ರಯಾಣ ದರ ಹೆಚ್ಚಾಗುತ್ತದೆ. ಸರಕುಸಾಗಣೆ ವೆಚ್ಚವೂ ಅಧಿಕಗೊಳ್ಳುತ್ತದೆ. ಇದು ವಿವಿಧ ಬಗೆಯ ಪ್ರಯಾಣಿಕರು ಮತ್ತು ಸರಕುಗಳ ಬೆಲೆ ಹೆಚ್ಚಳಕ್ಕೆ ಕಾರಣವಾಗುತ್ತದೆ. ಬಡವರು, ರೈತರು, ವಿದ್ಯಾರ್ಥಿಗಳು ಪ್ರಯಾಣ ವೆಚ್ಚ ಭರಿಸಲು ಅಸಾಧ್ಯವಾಗುತ್ತದೆ. ಕೂಲಿ ಮಾಡುವವರು, ಆರ್ಥಿಕ ಸಂಕಷ್ಟದಲ್ಲಿರುವವರು ದೊಡ್ಡಮಟ್ಟದ ಸಮಸ್ಯೆಗೆ ಗುರಿಯಾಗಬೇಕಾಗುತ್ತದೆ. ಹಳ್ಳಿಗಳು ಮತ್ತಷ್ಟು ಹಿಂದುಳಿಯಲು ಕಾರಣವಾಗುತ್ತದೆ. ರೈತರ ಮೂಗಿಗೆ ತುಪ್ಪ ಸವರಿ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.


ಇದನ್ನೂ ಓದಿ: ಕನ್ನಡಿಗರೆಂದರೆ ಒಕ್ಕೂಟ ಸರ್ಕಾರಕ್ಕೆ ತಾತ್ಸಾರ: ಕೇಂದ್ರ ಬಜೆಟ್ ವಿರುದ್ಧ ಕರವೇ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: BLO ಮನೆ-ಮನೆ ಭೇಟಿ ಗಡುವು ಆಗಸ್ಟ್‌ 17ರವರೆಗೆ ವಿಸ್ತರಣೆ!

ರಾಜ್ಯದಲ್ಲಿ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಗೆ ಸಂಬಂಧಿಸಿದಂತೆ ಕೇಂದ್ರ ಚುನಾವಣಾ ಆಯೋಗವು (ECI) ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಮನೆ-ಮನೆ ಗಣತಿ ಪ್ರಕ್ರಿಯೆಯ ಗಡುವನ್ನು ಆಗಸ್ಟ್ 17ರವರೆಗೆ ವಿಸ್ತರಿಸಲಾಗಿದ್ದು,...

ಕಾವೇರಿ ವಿಚಾರದಲ್ಲಿ ಅಗ್ಗದ ರಾಜಕೀಯ ಮಾಡಲ್ಲ: ತಮಿಳುನಾಡು ಸಿಎಂ ವಿಜಯ್

ಕರ್ನಾಟಕ ಸರ್ಕಾರ ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಾಗಿರುವ ವಿಚಾರವಾಗಿ ತಮಿಳುನಾಡಿನಲ್ಲಿ ರಾಜಕೀಯ ಕಾವು ಏರುತ್ತಿರುವ ಬೆನ್ನಲ್ಲೇ, ಈ ಕುರಿತು ತಕ್ಷಣವೇ ಸರ್ವಪಕ್ಷಗಳ ಸಭೆಯನ್ನು ಆಯೋಜಿಸುವ ಯಾವುದೇ ಅಗತ್ಯವಿಲ್ಲ ಎಂದು ತಮಿಳುನಾಡು ಮುಖ್ಯಮಂತ್ರಿ ಸಿ....

ಬೆಂಗಳೂರಿನ ಜಕ್ಕೂರಿನಲ್ಲಿ 22-23 ವರ್ಷದ ಇಬ್ಬರು ನೇಪಾಳಿ ಯುವತಿಯರ ಶವಗಳು ಮರಕ್ಕೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆ

ಬೆಂಗಳೂರು: ಜಕ್ಕೂರು ಮುಖ್ಯ ರಸ್ತೆಯ ನಿರ್ಜನ ಪ್ರದೇಶವೊಂದರಲ್ಲಿ ನೇಪಾಳ ಮೂಲದ ಇಬ್ಬರು ಯುವತಿಯರು ಒಂದೇ ಸೀರೆಯಿಂದ ಮರಕ್ಕೆ ನೇಣು ಬಿಗಿದುಕೊಂಡ ಸ್ಥಿತಿಯಲ್ಲಿ ಪತ್ತೆಯಾಗಿರುವ ಆಘಾತಕಾರಿ ಘಟನೆ ಗುರುವಾರ ಮುಂಜಾನೆ ಬೆಳಕಿಗೆ ಬಂದಿದೆ. ಮೃತರನ್ನು ನೇಪಾಳ...

NEET Paper Leak: ಒಂದೇ ಒಂದು CCTV ಇರಲಿಲ್ಲ, ಚೆಕಿಂಗ್ ಇರಲಿಲ್ಲ! ಪ್ರಶ್ನೆ ಪತ್ರಿಕೆ ಲೀಕ್ ಮಾಡಿದ್ದು ಹೇಗೆ? CBI ವರದಿ ಇಲ್ಲಿದೆ

ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ನೀಟ್ (NEET) ಪರೀಕ್ಷೆಯ ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಕೇಂದ್ರೀಯ ತನಿಖಾ ದಳ (ಸಿಬಿಐ) ತನ್ನ ಅಂತಿಮ ಚಾರ್ಜ್‌ಶೀಟ್ ಸಲ್ಲಿಸಿದೆ. ರಾಷ್ಟ್ರೀಯ ಪರೀಕ್ಷಾ ಸಂಸ್ಥೆಯ (NTA)...

ಉತ್ತರಾಖಂಡ : ರಾಜ್ಯ ಮುಖ್ಯ ಚುನಾವಣಾ ಅಧಿಕಾರಿಗೆ SIR ನೋಟಿಸ್

ಉತ್ತರಾಖಂಡದಲ್ಲಿ ಚುನಾವಣಾ ಆಯೋಗ ನಡೆಸುತ್ತಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯು ಉನ್ನತ ಸರ್ಕಾರಿ ಅಧಿಕಾರಿಗಳು ಮತ್ತು ಜನಪ್ರತಿನಿಧಿಗಳ ಮನೆ ಬಾಗಿಲಿಗೆ ತಲುಪಿದೆ. ರಾಜ್ಯದ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ),...

SIR: ಗಣತಿ ನಮೂನೆ ವಾಪಸ್‌ಗೆ ನಾಳೆಯೇ ಅಂತಿಮ ಗಡುವು, 1.10 ಕೋಟಿ ಮತದಾರರ ಹೆಸರು ಡಿಲೀಟ್‌!

ರಾಜ್ಯಾದ್ಯಂತ ನಡೆಯುತ್ತಿರುವ ‘ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯ ಮೊದಲ ಹಂತವಾದ ಗಣತಿ ನಮೂನೆಗಳನ್ನು ಭರ್ತಿ ಮಾಡಿ ವಾಪಸ್ ನೀಡಲು ನಾಳೆ (ಆಗಸ್ಟ್ 8) ಕೊನೆಯ ದಿನವಾಗಿದೆ. ಈ ನಡುವೆ...

ಕರ್ನಾಟಕ ಎಸ್ಐಆರ್: ಬೆಂಗಳೂರಿನ ಅರ್ಧದಷ್ಟು ಮತದಾರರು ‘ಹೊರಕ್ಕೆ’: ರಾಜ್ಯದಲ್ಲಿ 1.11 ಕೋಟಿ ಜನರು ಮತದಾನದ ಹಕ್ಕು ಕಳೆದುಕೊಳ್ಳುವ ಭೀತಿ

ಕರ್ನಾಟಕದಲ್ಲಿ ಭಾರತೀಯ ಚುನಾವಣಾ ಆಯೋಗವು (ECI) ಕೈಗೊಂಡಿರುವ ‘ವಿಶೇಷ ತೀವ್ರ ಪರಿಷ್ಕರಣೆ’ (Special Intensive Revision - SIR) ಪ್ರಕ್ರಿಯೆಯು ರಾಜ್ಯದ ಕೋಟ್ಯಂತರ ನಾಗರಿಕರ ಮತದಾನದ ಹಕ್ಕನ್ನೇ ಕಸಿದುಕೊಳ್ಳುವ ಭೀತಿಯನ್ನು ಹುಟ್ಟುಹಾಕಿದೆ. ಪ್ರಜಾಪ್ರಭುತ್ವ...

ಎರಡು ನ್ಯೂಸ್ ಚಾನೆಲ್‌ಗಳಿಗೆ ಉದಯನಿಧಿ ಲೀಗಲ್ ನೋಟಿಸ್ : ಸಾರ್ವಜನಿಕ ಕ್ಷಮೆಯಾಚನೆ, 100 ಕೋಟಿ ಪರಿಹಾರಕ್ಕೆ ಆಗ್ರಹ-ವರದಿ

ತಮಿಳುನಾಡಿನ ವಿರೋಧ ಪಕ್ಷದ ನಾಯಕ ಹಾಗೂ ಡಿಎಂಕೆ ಯುವ ಘಟಕದ ಕಾರ್ಯದರ್ಶಿ ಉದಯನಿಧಿ ಸ್ಟಾಲಿನ್ ಅವರು ತಮ್ಮ ಇತ್ತೀಚಿನ ಹೇಳಿಕೆಯ ಪ್ರಸಾರಕ್ಕೆ ಸಂಬಂಧಿಸಿದಂತೆ ಮಾನನಷ್ಟ ಆರೋಪ ಮಾಡಿ ಎರಡು ರಾಷ್ಟ್ರೀಯ ಸುದ್ದಿ ವಾಹಿನಿಗಳಿಗೆ...

CJP ರಾಷ್ಟ್ರೀಯ ಕಾರ್ಯಕಾರಿ ಸಮಿತಿ ರಚನೆ: ಅಭಿಜೀತ್ ದೀಪ್ಕೆಗೆ ‘ರಾಷ್ಟ್ರೀಯ ಸಂಚಾಲಕ’

ದೇಶಾದ್ಯಂತ ವಿದ್ಯಾರ್ಥಿ ಮತ್ತು ಯುವಜನರ ಬೃಹತ್ ಹೋರಾಟದ ಮೂಲಕ ಗಮನಸೆಳೆದಿರುವ ಕಾಕ್ರೋಚ್ ಜನತಾ ಪಾರ್ಟಿ (CJP) ಅಧಿಕೃತವಾಗಿ ತನ್ನ ಮೊದಲ 14 ಸದಸ್ಯರ ರಾಷ್ಟ್ರೀಯ ಕಾರ್ಯಕಾರಿ ಸಮಿತಿಯನ್ನು (National Working Committee) ಪ್ರಕಟಿಸಿದೆ....

ಕ್ಷೇತ್ರ ಪುನರ್ ವಿಂಗಡಣೆಗೆ ಡಿಎಂಕೆ ವಿರೋಧ: ‘ಮೃದು ಧೋರಣೆ’ ವದಂತಿಗೆ ಉದಯನಿಧಿ ಸ್ಟಾಲಿನ್ ಬ್ರೇಕ್

ಕ್ಷೇತ್ರ ಪುನರ್ ವಿಂಗಡಣೆ ಮಸೂದೆಯನ್ನು ಕೇಂದ್ರ ಸರ್ಕಾರ ಮರುಪರಿಚಯಿಸಲು ಮುಂದಾಗಿರುವುದು ತಮಿಳುನಾಡಿನಲ್ಲಿ ತೀವ್ರ ರಾಜಕೀಯ ಕಸರತ್ತಿಗೆ ಕಾರಣವಾಗಿದೆ. ಕ್ಷೇತ್ರ ಪುನರ್ ವಿಂಗಡಣೆ ವಿಷಯದಲ್ಲಿ ಡಿಎಂಕೆ (DMK) ತನ್ನ ಕಠಿಣ ನಿಲುವನ್ನು ಮೃದುಗೊಳಿಸಿದೆ ಎಂಬ...