Homeಕರ್ನಾಟಕಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ಡೀಸೆಲ್ ಬೆಲೆ ಹೆಚ್ಚಾಗಿರುವುದರಿಂದ ಬಸ್ ಪ್ರಯಾಣ ದರ ಹೆಚ್ಚಾಗುತ್ತದೆ. ಸರಕುಸಾಗಣೆ ವೆಚ್ಚವೂ ಅಧಿಕಗೊಳ್ಳುತ್ತದೆ. ಹೊಲ ಉಳುಮೆ ಮಾಡಲು ಟ್ರ್ಯಾಕ್ಟರ್ ಬಾಡಿಗೆ ತೀರಾ ಹೆಚ್ಚಾಗಲಿದೆ!

- Advertisement -
- Advertisement -

ಕೇಂದ್ರದ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಬಜೆಟ್ ಮಂಡಿಸಿದ ಕೆಲವೇ ಗಂಟೆಗಳಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆ ಕಾಣುತ್ತಿದ್ದಂತೆ ಜನಸಾಮಾನ್ಯರನ್ನು ತಬ್ಬಿಬ್ಬುಗೊಳಿಸಿದೆ. ಗ್ರಾಮೀಣ ಪ್ರದೇಶದ ಜನರು ಬೈಕ್, ಟಿವಿಎಸ್ ಗಳನ್ನು ಮೂಲೆಗೆ ತಳ್ಳಿ ಸಂಚಾರಕ್ಕೆ ಕುದುರೆ ಮತ್ತು ಕತ್ತೆ ಬಳಸುತ್ತಿರುವುದು ಬೆಳಕಿಗೆ ಬಂದಿದೆ. ತೈಲೋತ್ಪನ್ನಗಳ ಬೆಲೆ ಲೀಟರ್ ಗೆ ನೂರು ರೂಗಳತ್ತ ಗಗನಮುಖಿಯಾಗಿ ಸಾಗುತ್ತಿದ್ದಂತೆಯೇ ಈ ಸಂಚಾರಿ ವ್ಯಾಪಾರಿಗಳು ಈ ಮಾರ್ಗ ಹಿಡಿದಿದ್ದಾರೆ. ಮತ್ತೊಂದು ಕಡೆ ದುಬಾರಿ ಬೆಲೆಗಳಿಂದಾಗಿ ರೈತರು ಬಾಣಲೆಯಿಂದ ಬೆಂಕಿಗೆ ಬೀಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ.

ಹಿಂದಿನ ಕಾಲದಲ್ಲಿ ಸಂಚಾರಕ್ಕೆ ಬಳಸುತ್ತಿದ್ದ ಪರಿಸರಸ್ನೇಹಿ ಪ್ರಾಣಿಗಳ ಮೇಲೆಯೇ ಯುವಕರ ಸವಾರಿ ಸಾಗಿದೆ. ಇದಕ್ಕೆ ನಿದರ್ಶನವೆಂಬಂತೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕು ವೆಂಕಟಾಪುರದಲ್ಲಿ ಇಬ್ಬರು ಯುವಕರು ಕತ್ತೆ – ಕುದುರೆ ಮೇಲೆ ಪ್ರಯಾಣ ಬೆಳೆಸಿ ದುಬಾರಿ ಜೀವನ ನಡೆಸುತ್ತಿರುವ ಸಂಕಟ ಸಮಯದಲ್ಲಿ ಪರ್ಯಾಯ ಮಾರ್ಗ ಹುಡುಕಿಕೊಂಡಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ಬಜೆಟ್ ಜನ ಸಾಮಾನ್ಯರಿಗೆ ಹೊರೆಯಾಗಿದೆ, ನಿತ್ಯವೂ ಹಳ್ಳಿಗಳಿಂದ ಪಟ್ಟಣಕ್ಕೆ ದ್ವಿಚಕ್ರ ವಾಹನಗಳಲ್ಲಿ ಹೋಗುವುದು ದುಸ್ಥರ ಎಂಬುದನ್ನು ಸಾರಿ ಹೇಳುತ್ತಿದ್ದಾರೆ.

ವೆಂಕಟಮ್ಮನಹಳ್ಳಿಯ 40 ವರ್ಷದ ಸೋಮಶೇಖರ್ ದಿನಸಿ ವ್ಯಾಪಾರಿ. ಹಳ್ಳಿಹಳ್ಳಿಗೆ ಟಿವಿಎಸ್ ಎಕ್ಸ್ ಎಲ್ ವಾಹನದಲ್ಲಿ ತೆರಳಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿ ದಿನಕ್ಕೆ ಹತ್ತಾರು ಹಳ್ಳಿಗಳನ್ನು ತಿರುಗಿ ವ್ಯಾಪಾರ ಮಾಡಿ ದಿನಕ್ಕೆ 100 ರೂ ಗಳಿಸುತ್ತಿದ್ದರು. ಪೆಟ್ರೋಲ್ ಬೆಲೆ ಜಾಸ್ತಿಯಾಗುತ್ತಿದ್ದಂತೆಯೇ ಬಂದ ಲಾಭದ ಹಣ ಪೂರ ಪೆಟ್ರೋಲ್ ಖರ್ಚಿಗೆ ಸರಿಯಾಗುತ್ತಿತ್ತು. ಇದನ್ನು ಮನಗಂಡ ಸೋಮಶೇಖರ್ ಸಂಚಾರಿ ವ್ಯಾಪಾರಕ್ಕೆ ಕುದುರೆ ಬಳಕೆ ಮಾಡುತ್ತಿದ್ದಾರೆ. ಒಮ್ಮೆ ಹುಲ್ಲು ಖರೀದಿ ಮಾಡಿದರೆ ಆರು ತಿಂಗಳಿಗಾಗುವಷ್ಟು ಸಿಗುತ್ತದೆ. ಇದಕ್ಕೆ ಹೆಚ್ಚೆಂದರೆ 1000 ರೂಪಾಯಿ ವೆಚ್ಚ ತಗಲುತ್ತದೆ. ಕುದುರೆ ತೆಗೆದುಕೊಂಡು ಎರಡು ತಿಂಗಳಾಗಿದೆ. ಹೆಚ್ಚು ಖರ್ಚು ಬರುತ್ತಿಲ್ಲ. ಇದುವರೆಗೆ ಪೆಟ್ರೋಲ್ ಗೆ ವೆಚ್ಚ ಮಾಡುತ್ತಿದ್ದ ಹಣ ಉಳಿಯುತ್ತಿದೆ. ಗೋಣಿಹಳ್ಳಿ, ಪೆನಗೊಂಡೆ, ತಿರುಮಣಿ ಹೀಗೆ ಹಲವು ಹಳ್ಳಿಗಳನ್ನು ತಿರುಗುತ್ತೇನೆ. ಒಂದಷ್ಟು ಹಣ ಉಳಿಯುವಂತೆ ಆಗಿದೆ ಎಂದು ಸೋಮಶೇಖರ್ ತಿಳಿಸುತ್ತಾರೆ.

ರಾಮಲಿಂಗಯ್ಯ ಹೆಚ್ಚು ತಿಳುವಳಿಕೆ ಇಲ್ಲ. ಈತನೂ ಕೂಡ ಸಂಚಾರಿ ವ್ಯಾಪಾರಿ. ಬಟ್ಟೆ ವ್ಯಾಪಾರಕ್ಕೆ ಕತ್ತೆ ಖರೀದಿ ಮಾಡಿದ್ದು ನಿತ್ಯವೂ ಕತ್ತೆಯ ಮೇಲೆ ಬಟ್ಟೆಗಳನ್ನು ಹೇರಿಕೊಂಡು ಹೋಗಿ ಮಾರಾಟ ಮಾಡುತ್ತಾ ಜೀವನ ಸಾಗಿಸುತ್ತಿದ್ದಾರೆ. ಈ ಹಿಂದೆ ಸೈಕಲ್ ಮೇಲೆ ಹೋಗುತ್ತಿದ್ದರು. ಅದು ತುಳಿಯಲು ಆಗದೆ ಹಳೆಯ ಟಿವಿಎಸ್ ಬಳಸಿದರು. ನಿತ್ಯವೂ ಪೆಟ್ರೋಲ್ ಗೆ ಹಣ ಸುರಿಯುತ್ತಿದ್ದರು. ಬರುವ ಸಣ್ಣ ಲಾಭಾಂಶವೂ ಪೆಟ್ರೋಲ್ ಗೆ ಆಗುತ್ತಿತ್ತು. ಇದರಿಂದ ಏನೂ ಉಳಿಯುತ್ತಿರಲಿಲ್ಲ. ದಿನಕ್ಕೆ 800 ರೂ ಬಟ್ಟೆ ವ್ಯಾಪಾರ ಮಾಡಿದರೆ ಬಂದ ಬಹುತೇಕ ಹಣ ಪೆಟ್ರೋಲ್ ಗೆ ಖರ್ಚಾಗುತ್ತಿತ್ತು. ಹಾಗಾಗಿ ಕತ್ತೆ ಖರೀದಿ ಮಾಡಿರುವ ರಾಮಲಿಂಗಯ್ಯ “ಈಗ ಬಟ್ಟೆ ವ್ಯಾಪಾರದಿಂದ ಸಣ್ಣ ಉಳಿತಾಯ ಮಾಡುವಂತಹ ಸ್ಥಿತಿಗೆ ಬಂದಿದೆ. ಒಮ್ಮೆ ಭತ್ತದ ಹುಲ್ಲು ಖರೀದಿಸಿದರೆ ಆರೇಳು ತಿಂಗಳು ಬರುತ್ತದೆ. ವ್ಯಾಪಾರಕ್ಕೂ ಇದು ಸಹಕಾರಿಯಾಗಿದೆ” ಎನ್ನುತ್ತಾರೆ ರಾಮಲಿಂಗಯ್ಯ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಗ್ರಾಮೀಣ ಪ್ರದೇಶದ ಮೇಲೆ ಗಾಢ ಪರಿಣಾಮ ಬೀರಿದೆ.  ಕೃಷಿಕರು ಮತ್ತು ಜನಸಾಮಾನ್ಯರನ್ನು ಕಂಗೆಡುವಂತೆ ಮಾಡಿದೆ. ಕೃಷಿ ಪರಿಕರಗಳನ್ನು ಇಳಿಕೆ ಮಾಡಿರುವ ಸರ್ಕಾರ ನಿತ್ಯವೂ ಕೋಟ್ಯಂತರ ರೂಪಾಯಿ ವಹಿವಾಟು ನಡೆಯುವ ತೈಲದ ಬೆಲೆ ಏರಿಕೆ ಮಾಡಿರುವುದು ಜನರ ನಡುವೆ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ. ಯಾವುದರ ಬೆಲೆ ಯಾವ ಕ್ಷಣದಲ್ಲಿ ಹೆಚ್ಚಳವಾಗಲಿದೆ ಎಂಬ ಆತಂಕ ರೈತರು ಮತ್ತು ಜನಸಾಮಾನ್ಯರನ್ನು ಕಾಡುತ್ತಿದೆ.

ಗ್ರಾಮೀಣ ಭಾಗದಲ್ಲಿ ಹೊಲ ಉಳಲು ಬಹುತೇಕ ರೈತರು ಟ್ರ್ಯಾಕ್ಟರ್ ಗಳನ್ನೇ ನೆಚ್ಚಿಕೊಂಡಿದ್ದಾರೆ. ಸಣ್ಣ ಹಿಡುವಳಿ, ಮಧ್ಯಮ ಹಿಡುವಳಿದಾರರು ಕೂಡ ಟ್ರ್ಯಾಕ್ಟರ್ ಮೂಲಕ ಹೊಲ ಉತ್ತುವುದು ಸಾಮಾನ್ಯವಾಗಿದೆ. ಈವರೆಗೆ ಒಂದು ಗಂಟೆ ಹೊಲ ಉಳುಮೆ ಮಾಡಲು 800 ರೂಪಾಯಿ ಇತ್ತು. ಡ್ರೈವರ್ ಬ್ಯಾಟ ಪ್ರತ್ಯೇಕ ಕೊಡಬೇಕಿತ್ತು. ಇದನ್ನೇ ಭರಿಸಲು ಬಡ ರೈತರಿಗೆ ಕಷ್ಟವಾಗಿತ್ತು. ಟ್ರ್ಯಾಕ್ಟರ್ ಗೆ ಡೀಸೆಲ್ ಹೆಚ್ಚು ಬಳಕೆ ಆಗುತ್ತದೆ ಈಗ ಬೆಲೆ ಹೆಚ್ಚಳದಿಂದ ಒಂದು ಗಂಟೆ ಹೊಲ ಉಳುಮೆ ಮಾಡಲು 1400 ರೂಗೆ ಏರಿಕೆಯಾಗಲಿದೆ. ಇಷ್ಟು ಹಣ ಕೊಡುವಷ್ಟು ರೈತರಿಗೆ ಶಕ್ತಿ ಇಲ್ಲ. ಡೀಸೆಲ್ ಬೆಲೆ ಇಳಿಕೆಯಾಗಿದ್ದರೆ ರೈತರಿಗೆ ಅನುಕೂಲವಾಗುತ್ತಿತ್ತು. ಆದರೆ ಈಗಿನ ಪರಿಸ್ಥಿತಿ ರೈತರಿಗೆ ಪೂರಕವಾಗಿಲ್ಲ. ಡ್ರೈವರ್ ಬ್ಯಾಟ, ಊಟ, ಬೀಡಿ ಎಕ್ಸ್ ಟ್ರಾ ಎನ್ನುತ್ತಾರೆ ಗುಬ್ಬಿ ತಾಲೂಕಿನ ರೈತ ಮರಿಯಣ್ಣ.

ಡೀಸೆಲ್ ಬೆಲೆ ಹೆಚ್ಚಾಗಿರುವುದರಿಂದ ಬಸ್ ಪ್ರಯಾಣ ದರ ಹೆಚ್ಚಾಗುತ್ತದೆ. ಸರಕುಸಾಗಣೆ ವೆಚ್ಚವೂ ಅಧಿಕಗೊಳ್ಳುತ್ತದೆ. ಇದು ವಿವಿಧ ಬಗೆಯ ಪ್ರಯಾಣಿಕರು ಮತ್ತು ಸರಕುಗಳ ಬೆಲೆ ಹೆಚ್ಚಳಕ್ಕೆ ಕಾರಣವಾಗುತ್ತದೆ. ಬಡವರು, ರೈತರು, ವಿದ್ಯಾರ್ಥಿಗಳು ಪ್ರಯಾಣ ವೆಚ್ಚ ಭರಿಸಲು ಅಸಾಧ್ಯವಾಗುತ್ತದೆ. ಕೂಲಿ ಮಾಡುವವರು, ಆರ್ಥಿಕ ಸಂಕಷ್ಟದಲ್ಲಿರುವವರು ದೊಡ್ಡಮಟ್ಟದ ಸಮಸ್ಯೆಗೆ ಗುರಿಯಾಗಬೇಕಾಗುತ್ತದೆ. ಹಳ್ಳಿಗಳು ಮತ್ತಷ್ಟು ಹಿಂದುಳಿಯಲು ಕಾರಣವಾಗುತ್ತದೆ. ರೈತರ ಮೂಗಿಗೆ ತುಪ್ಪ ಸವರಿ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.


ಇದನ್ನೂ ಓದಿ: ಕನ್ನಡಿಗರೆಂದರೆ ಒಕ್ಕೂಟ ಸರ್ಕಾರಕ್ಕೆ ತಾತ್ಸಾರ: ಕೇಂದ್ರ ಬಜೆಟ್ ವಿರುದ್ಧ ಕರವೇ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನರೇಗಾ ಹೆಸರು ಬದಲಾವಣೆಯು ರಾಜ್ಯಗಳ ಸ್ವಾಯತ್ತತೆ, ಅಂಚಿನ ಸಮುದಾಯಗಳ ಹಕ್ಕಿನ ಮೇಲೆ ನೇರ ದಾಳಿ: ರಾಹುಲ್

ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ) ಹೆಸರು ಬದಲಾವಣೆಯು ರಾಜ್ಯಗಳ ಹಕ್ಕುಗಳನ್ನು ದುರ್ಬಲಗೊಳಿಸುತ್ತಿದೆ. ಅಂಚಿನ ಸಮುದಾಯಗಳ ಹಕ್ಕಿನ ಮೇಲೆ ನೇರವಾಗಿ ದಾಳಿ ಮಾಡಲಾಗುತ್ತಿದೆ ಎಂದು ಲೋಕಸಭೆ ವಿರೋಧ ಪಕ್ಷದ...

‘2025ರಲ್ಲಿ ಗಾಜಾ ಪತ್ರಕರ್ತರಿಗೆ ವಿಶ್ವದ ಅತ್ಯಂತ ಅಪಾಯಕಾರಿ ಸ್ಥಳವಾಯಿತು’: ಪ್ಯಾಲೆಸ್ಟೀನಿಯನ್ ಪತ್ರಕರ್ತರ ಒಕ್ಕೂಟ

ಪ್ಯಾಲೆಸ್ಟೀನಿಯನ್ ಪತ್ರಕರ್ತರ ವಿರುದ್ಧ ಇಸ್ರೇಲ್‌ನ ವ್ಯವಸ್ಥಿತ ಹಿಂಸಾಚಾರ ಅಭಿಯಾನವು ಅಕ್ಟೋಬರ್ 2023 ರಿಂದ ನಡೆಯುತ್ತಿದೆ, ಇದು 2025 ರಲ್ಲಿ ಅತ್ಯಂತ ಮಾರಕ ಸ್ಥಿತಿಗೆ ತಲುಪಿತು. ಡಜನ್‌ಗಟ್ಟಲೆ ಮಾಧ್ಯಮ ಕಾರ್ಯಕರ್ತರನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ದಾಳಿ...

ಗಡಿ ಘರ್ಷಣೆ ಕೊನೆಗೊಳಿಸಿದ ಥೈಲ್ಯಾಂಡ್ ಮತ್ತು ಕಾಂಬೋಡಿಯಾ: ತಕ್ಷಣದ ಕದನ ವಿರಾಮಕ್ಕೆ ಎರಡು ದೇಶಗಳ ಒಪ್ಪಿಗೆ

ಥೈಲ್ಯಾಂಡ್ ಮತ್ತು ಕಾಂಬೋಡಿಯಾಗಳು ತಕ್ಷಣದ ಕದನ ವಿರಾಮಕ್ಕೆ ಒಪ್ಪಿಕೊಂಡಿವೆ, ಇದು ಇತ್ತೀಚಿನ ಗಡಿ ಘರ್ಷಣೆಗಳ ನಂತರದ ಉದ್ವಿಗ್ನತೆಯನ್ನು ಕಡಿಮೆ ಮಾಡುವತ್ತ ಒಂದು ಪ್ರಮುಖ ಹೆಜ್ಜೆಯಾಗಿದೆ.  ಶನಿವಾರ ಎರಡೂ ದೇಶಗಳ ರಕ್ಷಣಾ ಸಚಿವರು ಸಹಿ ಮಾಡಿದ...

‘ಬಡವರ ಹೊಟ್ಟೆಗೆ ಒದ್ದ ನಂತರ, ಮೋದಿ ಸರ್ಕಾರ ಅವರ ಬೆನ್ನಿಗೆ ಚೂರಿ ಹಾಕಿದೆ’: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಶನಿವಾರ ಪ್ರಧಾನಿ ನರೇಂದ್ರ ಮೋದಿ ಅವರ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಯುಪಿಎಯ ದೂರದೃಷ್ಟಿಯ ಕಾರ್ಯಕ್ರಮವಾದ ಎಂಜಿಎನ್‌ಆರ್‌ಇಜಿಎಯನ್ನು ರದ್ದುಗೊಳಿಸುವ ಮೂಲಕ ಅವರು "ಬಡವರ ಹೊಟ್ಟೆಗೆ...

ಕರ್ನಾಟಕದ ವಿಚಾರದಲ್ಲಿ ಪಿಣರಾಯಿ ವಿಜಯನ್ ಹಸ್ತಕ್ಷೇಪ ಮಾಡಬಾರದು: ಡಿಸಿಎಂ ಡಿ.ಕೆ. ಶಿವಕುಮಾರ್

"ಕೋಗಿಲು ಬಡಾವಣೆಯಲ್ಲಿ ಅಕ್ರಮ ಒತ್ತುವರಿ ಪ್ರದೇಶ ನೆಲಸಮಗೊಳಿಸಿರುವ ಪ್ರಕರಣದಲ್ಲಿ ಸತ್ಯಾಸತ್ಯತೆ ಅರಿಯದೇ ಕೇರಳ ಸಿಎಂ ಪಿಣರಾಯಿ ವಿಜಯನ್ ಅವರು ಕರ್ನಾಟಕ ವಿಚಾರದಲ್ಲಿ ಹಸ್ತಕ್ಷೇಪ ಮಾಡಬಾರದು" ಎಂದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು...

ಮಧ್ಯಪ್ರದೇಶ| ಬಿಜೆಪಿ ನಾಯಕಿ ಮಗನ ಮೇಲೆ ಅತ್ಯಾಚಾರ ಆರೋಪ; ವಿಷ ಸೇವಿಸಿದ ಸಂತ್ರಸ್ತೆ ಸ್ಥಿತಿ ಗಂಭೀರ

ಮಧ್ಯಪ್ರದೇಶದ ಶಿವಪುರಿ ನಗರ ಸಭೆಯ ಅಧ್ಯಕ್ಷೆ ಮತ್ತು ಬಿಜೆಪಿ ನಾಯಕಿ ಗಾಯತ್ರಿ ಶರ್ಮಾ ಅವರ ಪುತ್ರ ರಜತ್ ಶರ್ಮಾ ವಿರುದ್ಧ ಏಪ್ರಿಲ್ 30 ರಂದು ಎಫ್‌ಐಆರ್ ದಾಖಲಿಸಿದ್ದ ಮಹಿಳೆಯ ಆರೋಗ್ಯ ಹದಗೆಟ್ಟ ನಂತರ...

ದೆಹಲಿಯಲ್ಲಿ ಹೊಸ ವರ್ಷಕ್ಕೂ ಮುನ್ನ ಬೃಹತ್ ಕಾರ್ಯಾಚರಣೆ: 285 ಜನರ ಬಂಧನ, ಶಸ್ತ್ರಾಸ್ತ್ರಗಳು ಮತ್ತು ಮಾದಕ ವಸ್ತುಗಳ ವಶ

ದೆಹಲಿ ಹೊಸ ವರ್ಷಾಚರಣೆಗೆ ಸಜ್ಜಾಗುತ್ತಿದ್ದಂತೆ, ಹಬ್ಬದ ದಟ್ಟಣೆಯಲ್ಲಿ ಅಪರಾಧಗಳನ್ನು ತಡೆಗಟ್ಟುವ ಪ್ರಯತ್ನದಲ್ಲಿ, ಪೊಲೀಸರು ರಾಷ್ಟ್ರ ರಾಜಧಾನಿಯಾದ್ಯಂತ ರಾತ್ರಿಯಿಡೀ ವಿಸ್ತೃತ ದಾಳಿ ನಡೆಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ ನೂರಾರು ಆರೋಪಿಗಳನ್ನು ಬಂಧಿಸಿದ್ದು, ಅಕ್ರಮ ಶಸ್ತ್ರಾಸ್ತ್ರಗಳು, ಮಾದಕ...

ಅತ್ಯಾಚಾರಿ ಸೆಂಗಾರ್‌ ಜೀವಾವಧಿ ಶಿಕ್ಷೆ ಅಮಾನತು; ದೆಹಲಿ ಹೈಕೋರ್ಟ್ ಮುಂದೆ ಸಂತ್ರಸ್ತೆ ತಾಯಿ ಪ್ರತಿಭಟನೆ

ಉನ್ನಾವ್ ಅತ್ಯಾಚಾರ ಪ್ರಕರಣದಲ್ಲಿ ಮಾಜಿ ಬಿಜೆಪಿ ಶಾಸಕ ಕುಲದೀಪ್ ಸಿಂಗ್ ಸೆಂಗಾರ್‌ನ ಜೈಲು ಶಿಕ್ಷೆಯನ್ನು ಅಮಾನತುಗೊಳಿಸಿರುವುದನ್ನು ವಿರೋಧಿಸಿ ದೆಹಲಿ ಹೈಕೋರ್ಟ್ ಹೊರಗೆ ಶುಕ್ರವಾರ (ಡಿ.26) ಪ್ರತಿಭಟನೆ ನಡೆಸಲಾಯಿತು. ಸೆಂಗಾರ್‌ಗೆ ನಿಡುರವ ಜಾಮೀನು ತಿರಸ್ಕರಿಸಬೇಕೆಂದು...

‘ಉತ್ತರ ಪ್ರದೇಶದ ಗಾಳಿ ಕರ್ನಾಟಕಕ್ಕೂ ಬೀಸಿದೆ, ಬುಲ್ಡೋಜರ್ ನೀತಿ ಇಲ್ಲೂ ಜಾರಿ ಮಾಡುವ ಕೆಲಸ ನಡೆಯುತ್ತಿದೆ: ಪಿಣರಾಯಿ ವಿಜಯನ್ ಟೀಕೆ

ಬೆಂಗಳೂರು: ಕರ್ನಾಟಕ ಸರ್ಕಾರಕ್ಕೂ ಉತ್ತರ ಪ್ರದೇಶ ಸರ್ಕಾರದ ಗಾಳಿ ಬಿಸಿದೆ. ಅಲ್ಲಿನ ಬುಲ್ಡೋಜರ್ ನೀತಿಯನ್ನು ಇಲ್ಲೂ ತರುವ ಕೆಲಸ ನಡೆಯುತ್ತಿದೆ ಎಂದು ಕೇರಳದ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಕರ್ನಾಟಕದ ಕಾಂಗ್ರೆಸ್​​​ ಸರ್ಕಾರದ ವಿರುದ್ಧ...

ಡೆಹ್ರಾಡೂನ್‌ನಲ್ಲಿ ಜನಾಂಗೀಯ ದಾಳಿ; ಚಾಕು ಇರಿತಕ್ಕೆ ಒಳಗಾಗಿದ್ದ ತ್ರಿಪುರ ವಿದ್ಯಾರ್ಥಿ ಸಾವು

ಜನಾಂಗೀಯ ನಿಂದನೆಯಿಂದ ಪ್ರಾರಂಭವಾಯಿತು ಎನ್ನಲಾದ ಜಗಳವು ಹಿಂಸಾತ್ಮಕ ಪ್ರತಿಭಟನೆಗೆ ತಿರುಗಿದ್ದು, ಚಾಕು ಇರಿತದ ನಂತರ ತ್ರಿಪುರದ ವಿದ್ಯಾರ್ಥಿಯೊಬ್ಬ ಮೃತಪಟ್ಟಿದ್ದಾನೆ ಎಂದು ಪೊಲೀಸರು ಹೇಳಿದ್ದಾರೆ. ಉತ್ತರಾಖಂಡ್ ಆಸ್ಪತ್ರೆಯಲ್ಲಿ ಎರಡು ವಾರಗಳಿಗೂ ಹೆಚ್ಚು ಕಾಲ ಚಿಕಿತ್ಸೆ ಪಡೆಯುತ್ತಿದ್ದ...