Homeಕರ್ನಾಟಕಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ಪೆಟ್ರೋಲ್, ಡೀಸೆಲ್ ಬೆಲೆ ದಿಢೀರ್ ಏರಿಕೆ: ಕತ್ತೆ, ಕುದುರೆ ಮೊರೆ ಹೋದ ಜನತೆ

ಡೀಸೆಲ್ ಬೆಲೆ ಹೆಚ್ಚಾಗಿರುವುದರಿಂದ ಬಸ್ ಪ್ರಯಾಣ ದರ ಹೆಚ್ಚಾಗುತ್ತದೆ. ಸರಕುಸಾಗಣೆ ವೆಚ್ಚವೂ ಅಧಿಕಗೊಳ್ಳುತ್ತದೆ. ಹೊಲ ಉಳುಮೆ ಮಾಡಲು ಟ್ರ್ಯಾಕ್ಟರ್ ಬಾಡಿಗೆ ತೀರಾ ಹೆಚ್ಚಾಗಲಿದೆ!

- Advertisement -
- Advertisement -

ಕೇಂದ್ರದ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಬಜೆಟ್ ಮಂಡಿಸಿದ ಕೆಲವೇ ಗಂಟೆಗಳಲ್ಲಿ ಡೀಸೆಲ್ ಮತ್ತು ಪೆಟ್ರೋಲ್ ಬೆಲೆ ಏರಿಕೆ ಕಾಣುತ್ತಿದ್ದಂತೆ ಜನಸಾಮಾನ್ಯರನ್ನು ತಬ್ಬಿಬ್ಬುಗೊಳಿಸಿದೆ. ಗ್ರಾಮೀಣ ಪ್ರದೇಶದ ಜನರು ಬೈಕ್, ಟಿವಿಎಸ್ ಗಳನ್ನು ಮೂಲೆಗೆ ತಳ್ಳಿ ಸಂಚಾರಕ್ಕೆ ಕುದುರೆ ಮತ್ತು ಕತ್ತೆ ಬಳಸುತ್ತಿರುವುದು ಬೆಳಕಿಗೆ ಬಂದಿದೆ. ತೈಲೋತ್ಪನ್ನಗಳ ಬೆಲೆ ಲೀಟರ್ ಗೆ ನೂರು ರೂಗಳತ್ತ ಗಗನಮುಖಿಯಾಗಿ ಸಾಗುತ್ತಿದ್ದಂತೆಯೇ ಈ ಸಂಚಾರಿ ವ್ಯಾಪಾರಿಗಳು ಈ ಮಾರ್ಗ ಹಿಡಿದಿದ್ದಾರೆ. ಮತ್ತೊಂದು ಕಡೆ ದುಬಾರಿ ಬೆಲೆಗಳಿಂದಾಗಿ ರೈತರು ಬಾಣಲೆಯಿಂದ ಬೆಂಕಿಗೆ ಬೀಳುವಂತಹ ಪರಿಸ್ಥಿತಿ ನಿರ್ಮಾಣವಾಗಿದೆ ಎಂಬ ಚರ್ಚೆ ಜೋರಾಗಿ ನಡೆಯುತ್ತಿದೆ.

ಹಿಂದಿನ ಕಾಲದಲ್ಲಿ ಸಂಚಾರಕ್ಕೆ ಬಳಸುತ್ತಿದ್ದ ಪರಿಸರಸ್ನೇಹಿ ಪ್ರಾಣಿಗಳ ಮೇಲೆಯೇ ಯುವಕರ ಸವಾರಿ ಸಾಗಿದೆ. ಇದಕ್ಕೆ ನಿದರ್ಶನವೆಂಬಂತೆ ತುಮಕೂರು ಜಿಲ್ಲೆಯ ಪಾವಗಡ ತಾಲೂಕು ವೆಂಕಟಾಪುರದಲ್ಲಿ ಇಬ್ಬರು ಯುವಕರು ಕತ್ತೆ – ಕುದುರೆ ಮೇಲೆ ಪ್ರಯಾಣ ಬೆಳೆಸಿ ದುಬಾರಿ ಜೀವನ ನಡೆಸುತ್ತಿರುವ ಸಂಕಟ ಸಮಯದಲ್ಲಿ ಪರ್ಯಾಯ ಮಾರ್ಗ ಹುಡುಕಿಕೊಂಡಿದ್ದಾರೆ. ಈ ಮೂಲಕ ಕೇಂದ್ರ ಸರ್ಕಾರದ ಬಜೆಟ್ ಜನ ಸಾಮಾನ್ಯರಿಗೆ ಹೊರೆಯಾಗಿದೆ, ನಿತ್ಯವೂ ಹಳ್ಳಿಗಳಿಂದ ಪಟ್ಟಣಕ್ಕೆ ದ್ವಿಚಕ್ರ ವಾಹನಗಳಲ್ಲಿ ಹೋಗುವುದು ದುಸ್ಥರ ಎಂಬುದನ್ನು ಸಾರಿ ಹೇಳುತ್ತಿದ್ದಾರೆ.

ವೆಂಕಟಮ್ಮನಹಳ್ಳಿಯ 40 ವರ್ಷದ ಸೋಮಶೇಖರ್ ದಿನಸಿ ವ್ಯಾಪಾರಿ. ಹಳ್ಳಿಹಳ್ಳಿಗೆ ಟಿವಿಎಸ್ ಎಕ್ಸ್ ಎಲ್ ವಾಹನದಲ್ಲಿ ತೆರಳಿ ವ್ಯಾಪಾರ ಮಾಡುತ್ತಿದ್ದ ವ್ಯಕ್ತಿ ದಿನಕ್ಕೆ ಹತ್ತಾರು ಹಳ್ಳಿಗಳನ್ನು ತಿರುಗಿ ವ್ಯಾಪಾರ ಮಾಡಿ ದಿನಕ್ಕೆ 100 ರೂ ಗಳಿಸುತ್ತಿದ್ದರು. ಪೆಟ್ರೋಲ್ ಬೆಲೆ ಜಾಸ್ತಿಯಾಗುತ್ತಿದ್ದಂತೆಯೇ ಬಂದ ಲಾಭದ ಹಣ ಪೂರ ಪೆಟ್ರೋಲ್ ಖರ್ಚಿಗೆ ಸರಿಯಾಗುತ್ತಿತ್ತು. ಇದನ್ನು ಮನಗಂಡ ಸೋಮಶೇಖರ್ ಸಂಚಾರಿ ವ್ಯಾಪಾರಕ್ಕೆ ಕುದುರೆ ಬಳಕೆ ಮಾಡುತ್ತಿದ್ದಾರೆ. ಒಮ್ಮೆ ಹುಲ್ಲು ಖರೀದಿ ಮಾಡಿದರೆ ಆರು ತಿಂಗಳಿಗಾಗುವಷ್ಟು ಸಿಗುತ್ತದೆ. ಇದಕ್ಕೆ ಹೆಚ್ಚೆಂದರೆ 1000 ರೂಪಾಯಿ ವೆಚ್ಚ ತಗಲುತ್ತದೆ. ಕುದುರೆ ತೆಗೆದುಕೊಂಡು ಎರಡು ತಿಂಗಳಾಗಿದೆ. ಹೆಚ್ಚು ಖರ್ಚು ಬರುತ್ತಿಲ್ಲ. ಇದುವರೆಗೆ ಪೆಟ್ರೋಲ್ ಗೆ ವೆಚ್ಚ ಮಾಡುತ್ತಿದ್ದ ಹಣ ಉಳಿಯುತ್ತಿದೆ. ಗೋಣಿಹಳ್ಳಿ, ಪೆನಗೊಂಡೆ, ತಿರುಮಣಿ ಹೀಗೆ ಹಲವು ಹಳ್ಳಿಗಳನ್ನು ತಿರುಗುತ್ತೇನೆ. ಒಂದಷ್ಟು ಹಣ ಉಳಿಯುವಂತೆ ಆಗಿದೆ ಎಂದು ಸೋಮಶೇಖರ್ ತಿಳಿಸುತ್ತಾರೆ.

ರಾಮಲಿಂಗಯ್ಯ ಹೆಚ್ಚು ತಿಳುವಳಿಕೆ ಇಲ್ಲ. ಈತನೂ ಕೂಡ ಸಂಚಾರಿ ವ್ಯಾಪಾರಿ. ಬಟ್ಟೆ ವ್ಯಾಪಾರಕ್ಕೆ ಕತ್ತೆ ಖರೀದಿ ಮಾಡಿದ್ದು ನಿತ್ಯವೂ ಕತ್ತೆಯ ಮೇಲೆ ಬಟ್ಟೆಗಳನ್ನು ಹೇರಿಕೊಂಡು ಹೋಗಿ ಮಾರಾಟ ಮಾಡುತ್ತಾ ಜೀವನ ಸಾಗಿಸುತ್ತಿದ್ದಾರೆ. ಈ ಹಿಂದೆ ಸೈಕಲ್ ಮೇಲೆ ಹೋಗುತ್ತಿದ್ದರು. ಅದು ತುಳಿಯಲು ಆಗದೆ ಹಳೆಯ ಟಿವಿಎಸ್ ಬಳಸಿದರು. ನಿತ್ಯವೂ ಪೆಟ್ರೋಲ್ ಗೆ ಹಣ ಸುರಿಯುತ್ತಿದ್ದರು. ಬರುವ ಸಣ್ಣ ಲಾಭಾಂಶವೂ ಪೆಟ್ರೋಲ್ ಗೆ ಆಗುತ್ತಿತ್ತು. ಇದರಿಂದ ಏನೂ ಉಳಿಯುತ್ತಿರಲಿಲ್ಲ. ದಿನಕ್ಕೆ 800 ರೂ ಬಟ್ಟೆ ವ್ಯಾಪಾರ ಮಾಡಿದರೆ ಬಂದ ಬಹುತೇಕ ಹಣ ಪೆಟ್ರೋಲ್ ಗೆ ಖರ್ಚಾಗುತ್ತಿತ್ತು. ಹಾಗಾಗಿ ಕತ್ತೆ ಖರೀದಿ ಮಾಡಿರುವ ರಾಮಲಿಂಗಯ್ಯ “ಈಗ ಬಟ್ಟೆ ವ್ಯಾಪಾರದಿಂದ ಸಣ್ಣ ಉಳಿತಾಯ ಮಾಡುವಂತಹ ಸ್ಥಿತಿಗೆ ಬಂದಿದೆ. ಒಮ್ಮೆ ಭತ್ತದ ಹುಲ್ಲು ಖರೀದಿಸಿದರೆ ಆರೇಳು ತಿಂಗಳು ಬರುತ್ತದೆ. ವ್ಯಾಪಾರಕ್ಕೂ ಇದು ಸಹಕಾರಿಯಾಗಿದೆ” ಎನ್ನುತ್ತಾರೆ ರಾಮಲಿಂಗಯ್ಯ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯು ಗ್ರಾಮೀಣ ಪ್ರದೇಶದ ಮೇಲೆ ಗಾಢ ಪರಿಣಾಮ ಬೀರಿದೆ.  ಕೃಷಿಕರು ಮತ್ತು ಜನಸಾಮಾನ್ಯರನ್ನು ಕಂಗೆಡುವಂತೆ ಮಾಡಿದೆ. ಕೃಷಿ ಪರಿಕರಗಳನ್ನು ಇಳಿಕೆ ಮಾಡಿರುವ ಸರ್ಕಾರ ನಿತ್ಯವೂ ಕೋಟ್ಯಂತರ ರೂಪಾಯಿ ವಹಿವಾಟು ನಡೆಯುವ ತೈಲದ ಬೆಲೆ ಏರಿಕೆ ಮಾಡಿರುವುದು ಜನರ ನಡುವೆ ವ್ಯಾಪಕ ಚರ್ಚೆಯನ್ನು ಹುಟ್ಟುಹಾಕಿದೆ. ಯಾವುದರ ಬೆಲೆ ಯಾವ ಕ್ಷಣದಲ್ಲಿ ಹೆಚ್ಚಳವಾಗಲಿದೆ ಎಂಬ ಆತಂಕ ರೈತರು ಮತ್ತು ಜನಸಾಮಾನ್ಯರನ್ನು ಕಾಡುತ್ತಿದೆ.

ಗ್ರಾಮೀಣ ಭಾಗದಲ್ಲಿ ಹೊಲ ಉಳಲು ಬಹುತೇಕ ರೈತರು ಟ್ರ್ಯಾಕ್ಟರ್ ಗಳನ್ನೇ ನೆಚ್ಚಿಕೊಂಡಿದ್ದಾರೆ. ಸಣ್ಣ ಹಿಡುವಳಿ, ಮಧ್ಯಮ ಹಿಡುವಳಿದಾರರು ಕೂಡ ಟ್ರ್ಯಾಕ್ಟರ್ ಮೂಲಕ ಹೊಲ ಉತ್ತುವುದು ಸಾಮಾನ್ಯವಾಗಿದೆ. ಈವರೆಗೆ ಒಂದು ಗಂಟೆ ಹೊಲ ಉಳುಮೆ ಮಾಡಲು 800 ರೂಪಾಯಿ ಇತ್ತು. ಡ್ರೈವರ್ ಬ್ಯಾಟ ಪ್ರತ್ಯೇಕ ಕೊಡಬೇಕಿತ್ತು. ಇದನ್ನೇ ಭರಿಸಲು ಬಡ ರೈತರಿಗೆ ಕಷ್ಟವಾಗಿತ್ತು. ಟ್ರ್ಯಾಕ್ಟರ್ ಗೆ ಡೀಸೆಲ್ ಹೆಚ್ಚು ಬಳಕೆ ಆಗುತ್ತದೆ ಈಗ ಬೆಲೆ ಹೆಚ್ಚಳದಿಂದ ಒಂದು ಗಂಟೆ ಹೊಲ ಉಳುಮೆ ಮಾಡಲು 1400 ರೂಗೆ ಏರಿಕೆಯಾಗಲಿದೆ. ಇಷ್ಟು ಹಣ ಕೊಡುವಷ್ಟು ರೈತರಿಗೆ ಶಕ್ತಿ ಇಲ್ಲ. ಡೀಸೆಲ್ ಬೆಲೆ ಇಳಿಕೆಯಾಗಿದ್ದರೆ ರೈತರಿಗೆ ಅನುಕೂಲವಾಗುತ್ತಿತ್ತು. ಆದರೆ ಈಗಿನ ಪರಿಸ್ಥಿತಿ ರೈತರಿಗೆ ಪೂರಕವಾಗಿಲ್ಲ. ಡ್ರೈವರ್ ಬ್ಯಾಟ, ಊಟ, ಬೀಡಿ ಎಕ್ಸ್ ಟ್ರಾ ಎನ್ನುತ್ತಾರೆ ಗುಬ್ಬಿ ತಾಲೂಕಿನ ರೈತ ಮರಿಯಣ್ಣ.

ಡೀಸೆಲ್ ಬೆಲೆ ಹೆಚ್ಚಾಗಿರುವುದರಿಂದ ಬಸ್ ಪ್ರಯಾಣ ದರ ಹೆಚ್ಚಾಗುತ್ತದೆ. ಸರಕುಸಾಗಣೆ ವೆಚ್ಚವೂ ಅಧಿಕಗೊಳ್ಳುತ್ತದೆ. ಇದು ವಿವಿಧ ಬಗೆಯ ಪ್ರಯಾಣಿಕರು ಮತ್ತು ಸರಕುಗಳ ಬೆಲೆ ಹೆಚ್ಚಳಕ್ಕೆ ಕಾರಣವಾಗುತ್ತದೆ. ಬಡವರು, ರೈತರು, ವಿದ್ಯಾರ್ಥಿಗಳು ಪ್ರಯಾಣ ವೆಚ್ಚ ಭರಿಸಲು ಅಸಾಧ್ಯವಾಗುತ್ತದೆ. ಕೂಲಿ ಮಾಡುವವರು, ಆರ್ಥಿಕ ಸಂಕಷ್ಟದಲ್ಲಿರುವವರು ದೊಡ್ಡಮಟ್ಟದ ಸಮಸ್ಯೆಗೆ ಗುರಿಯಾಗಬೇಕಾಗುತ್ತದೆ. ಹಳ್ಳಿಗಳು ಮತ್ತಷ್ಟು ಹಿಂದುಳಿಯಲು ಕಾರಣವಾಗುತ್ತದೆ. ರೈತರ ಮೂಗಿಗೆ ತುಪ್ಪ ಸವರಿ ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ರೈತ ಮುಖಂಡರು ಆರೋಪಿಸಿದ್ದಾರೆ.


ಇದನ್ನೂ ಓದಿ: ಕನ್ನಡಿಗರೆಂದರೆ ಒಕ್ಕೂಟ ಸರ್ಕಾರಕ್ಕೆ ತಾತ್ಸಾರ: ಕೇಂದ್ರ ಬಜೆಟ್ ವಿರುದ್ಧ ಕರವೇ ಕಿಡಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಎಂದರೆ ‘ಶಾ ಇನ್ಸ್ಟಿಗೇಟೆಡ್ ರಿಮೂವಲ್ʼ : ಕಾಂಗ್ರೆಸ್

ಚುನಾವಣಾ ಆಯೋಗ ಕೈಗೊಂಡಿರುವ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯಲ್ಲಿ (ಎಸ್‌ಐಆರ್) ದೊಡ್ಡ ಪ್ರಮಾಣದಲ್ಲಿ ಮತದಾರರ ಹೆಸರುಗಳನ್ನು ಕೈಬಿಡುತ್ತಿರುವ ವಿಷಯವನ್ನು ಪ್ರಸ್ತಾಪಿಸಿರುವ ಕಾಂಗ್ರೆಸ್, ಈ ಎಸ್‌ಐಆರ್ ಪ್ರಕ್ರಿಯೆಯು ವಾಸ್ತವವಾಗಿ ಮತದಾರರ ಬೃಹತ್ "ಶಾ...

ಟಿ. ನರಸೀಪುರ ಗಣೇಶೋತ್ಸವದಲ್ಲಿ ಪ್ರಚೋದನಕಾರಿ ಭಾಷಣ: ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್ ದಾಖಲು

ಗಣೇಶೋತ್ಸವ ಮೆರವಣಿಗೆಯ ವೇಳೆ ಪ್ರಚೋದನಕಾರಿ ಭಾಷಣ ಮಾಡಿದ ಮತ್ತು ಸ್ಥಳದಲ್ಲಿದ್ದ ಪೊಲೀಸ್ ಅಧಿಕಾರಿಗಳ ಕರ್ತವ್ಯಕ್ಕೆ ಅಡ್ಡಿಪಡಿಸಿದ ಗಂಭೀರ ಆರೋಪದ ಮೇಲೆ ಬಿಜೆಪಿ ಮುಖಂಡ ಹಾಗೂ ಮಾಜಿ ಸಂಸದ ಪ್ರತಾಪ್ ಸಿಂಹ ವಿರುದ್ಧ ಎಫ್‌ಐಆರ್...

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...