Homeಕರ್ನಾಟಕಹೆಚ್ಚುತ್ತಿರುವ ಆಕ್ರೋಶದ ನಡುವೆ ಮತ್ತೆ ಪೆಟ್ರೋಲ್, ಡೀಸೆಲ್‌ ಬೆಲೆ ಏರಿಕೆ!

ಹೆಚ್ಚುತ್ತಿರುವ ಆಕ್ರೋಶದ ನಡುವೆ ಮತ್ತೆ ಪೆಟ್ರೋಲ್, ಡೀಸೆಲ್‌ ಬೆಲೆ ಏರಿಕೆ!

- Advertisement -
- Advertisement -

ದೇಶದಾದ್ಯಂತ ಇಂಧನ ದರಗಳು ಹೆಚ್ಚುತ್ತಿರುವುದರ ವಿರುದ್ದ ಆಕ್ರೋಶಗಳು ಹೆಚ್ಚುತ್ತಿದ್ದರೂ ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಮತ್ತೆ ಏರಿಕೆಯಾಗಿದೆ. ಮುಂಬಯಿಯಲ್ಲಿ ಪೆಟ್ರೋಲ್ ಬೆಲೆ ಗುರುವಾರ ಲೀಟರ್‌ಗೆ 107.54 ರೂ.ಗೆ ಏರಿದ್ದು, ಈ ಮೂಲಕ ಇಂಧನ ದರದ ಏರಿಕೆಯ ಮತ್ತೊಂದು ದಾಖಲೆಯ ಗರಿಷ್ಠ ಮಟ್ಟವನ್ನು ಮುಟ್ಟಿದೆ. ಮುಂಬೈನಲ್ಲಿ ಡೀಸೆಲ್ ಬೆಲೆ ಲೀಟರ್‌ 97.45 ರೂ.ಗೆ ಏರಿದೆ.

ಬೆಂಗಳೂರಿನಲ್ಲಿ ಪೆಟ್ರೋಲ್‌ ಪ್ರತಿ ಲೀಟರ್‌ಗೆ 104.94 ರೂ. ಆಗಿದ್ದು, ಡೀಸೆಲ್‌ಗೆ 95.05 ರೂ.ಗೆ ತಲುಪಿದೆ. ಗುರುವಾರ ಪೆಟ್ರೋಲ್ ಬೆಲೆಯನ್ನು 36 ಪೈಸೆ ವರೆಗೆ ಹೆಚ್ಚಿಸಿದರೆ ಡೀಸೆಲ್ ಬೆಲೆಯನ್ನು 17 ಪೈಸೆ ಹೆಚ್ಚಿಸಲಾಗಿದೆ.

ಈ ತಿಂಗಳ 15 ದಿನದ ಒಳಗೆ ಒಟ್ಟು ನಾಲ್ಕು ಬಾರಿ ಪೆಟ್ರೋಲ್ ಬೆಲೆಯನ್ನು ಏರಿಸಲಾಗಿದ್ದು, ಡೀಸೆಲ್ ಬೆಲೆಯನ್ನು ಐದು ಬಾರಿ ಬದಲಾಯಿಸಲಾಗಿದೆ.

ದೆಹಲಿಯಲ್ಲಿ, ಪೆಟ್ರೋಲ್ ಮತ್ತು ಡೀಸೆಲ್ ಎರಡರ ಚಿಲ್ಲರೆ ಬೆಲೆ ಕ್ರಮವಾಗಿ ಲೀಟರ್‌ಗೆ 101.54 ಮತ್ತು ಲೀಟರ್‌ಗೆ 89.87 ರೂ. ಆಗಿದೆ.

ಇದನ್ನೂ ಓದಿ: ಪೆಟ್ರೋಲ್‌: ಸೈಕಲ್‌ನಲ್ಲಿ ಓಡಾಡಿದರೆ ವ್ಯಾಯಾಮ ಆಗುತ್ತದೆ ಎಂದ ದಾವಣಗೆರೆ ಬಿಜೆಪಿ ಸಂಸದ

ಭೋಪಾಲ್‌ನಲ್ಲಿ, ಪೆಟ್ರೋಲ್ ಬೆಲೆ ಪ್ರತಿ ಲೀಟರ್‌ಗೆ 109.89 ರೂ.ಗೆ ಏರಿದ್ದು ಮತ್ತು ಡೀಸೆಲ್ ಬೆಲೆ ಪ್ರತಿ ಲೀಟರ್‌ಗೆ 98.67 ರೂ. ಆಗಿದೆ.

ಪಶ್ಚಿಮ ಬಂಗಾಳದ ಕೋಲ್ಕತ್ತಾದಲ್ಲಿ ಪ್ರತಿ ಲೀಟರ್‌‌ ಪೆಟ್ರೋಲ್‌ಗೆ 101.74 ರೂ. ಮತ್ತು ಡೀಸೆಲ್‌ಗೆ 93.02 ರೂ. ತಲುಪಿದೆ.

ದೇಶಾದ್ಯಂತ ದರಗಳನ್ನು ಹೆಚ್ಚಿಸಲಾಗಿದ್ದು, ಮೌಲ್ಯವರ್ಧಿತ ತೆರಿಗೆಯ ಪ್ರಮಾಣವನ್ನು ಅವಲಂಬಿಸಿ ರಾಜ್ಯದಿಂದ ರಾಜ್ಯಕ್ಕೆ ಈ ದರಗಳು ಭಿನ್ನವಾಗಿರುತ್ತದೆ.

ಈ ಮಧ್ಯೆ, ಬೆಲೆ ಏರಿಕೆಯ ವಿರುದ್ದ ಜುಲೈ 7 ರಿಂದ 10 ದಿನಗಳ ರಾಷ್ಟ್ರವ್ಯಾಪಿ ಆಂದೋಲನ ನಡೆಸಲು ಕಾಂಗ್ರೆಸ್ ನಿರ್ಧರಿಸಿದೆ.

ದೇಶಾದ್ಯಂತ ಹೆಚ್ಚುತ್ತಿರುವ ಇಂಧನ ಬೆಲೆಗಳ ವಿರುದ್ಧ ಹಲವಾರು ರಾಜಕೀಯ ಪಕ್ಷಗಳು ಪ್ರತಿಭಟನೆ ನಡೆಸಿವೆ. ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ, ಮಹಾರಾಷ್ಟ್ರ ಉಪ ಸಿಎಂ ಅಜಿತ್ ಪವಾರ್, ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಮತ್ತು ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಸೇರಿದಂತೆ ರಾಜಕೀಯ ಮುಖಂಡರು ಹೆಚ್ಚುತ್ತಿರುವ ಇಂಧನ ಬೆಲೆಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಮತ್ತು ಅದನ್ನು ಕಡಿತಗೊಳಿಸುವಂತೆ ಒತ್ತಾಯಿಸಿದ್ದಾರೆ.

ಇದನ್ನೂ ಓದಿ: ‘ಕಷ್ಟಗಳಿದ್ದರೆ ಸುಖದ ಬೆಲೆ ತಿಳಿಯುತ್ತದೆ’ – ಪೆಟ್ರೋಲ್ ದರ ಏರಿಕೆಗೆ ಬಿಜೆಪಿ ಸಚಿವನ ಸಮರ್ಥನೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...