Homeಮುಖಪುಟಚುನಾವಣೆಯ ನಂತರ ಮತ್ತೆ ಏರಲಿದೆ ಪೆಟ್ರೋಲ್-ಡಿಸೇಲ್ ದರ!

ಚುನಾವಣೆಯ ನಂತರ ಮತ್ತೆ ಏರಲಿದೆ ಪೆಟ್ರೋಲ್-ಡಿಸೇಲ್ ದರ!

- Advertisement -
- Advertisement -

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಅಸ್ಸಾಂ ರಾಜ್ಯಗಳ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ತೈಲ ಮಾರಾಟ ಕಂಪನಿಗಳು (ಒಎಂಸಿಗಳು) ಪ್ರಮುಖ ನಗರಗಳಲ್ಲಿ ಗುರುವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 14-16 ಪೈಸೆ ಕಡಿತಗೊಳಿಸಿದವು. ಕಳೆದ 15 ದಿನಗಳಲ್ಲಿ ದರಗಳಲ್ಲಿ ಯಾವ ಬದಲಾವಣೆಯನ್ನೂ ಮಾಡಿರಲಿಲ್ಲ. ಆದರೆ ಚುನಾವಣೆಯ ನಂತರ ಮತ್ತೆ ಪೆಟ್ರೋಲ್-ಡಿಸೇಲ್ ದರಗಳು ಏರುಗತಿಯಲ್ಲೇ ಇರಲಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಚುನಾವಣೆಗೂ ಪೆಟ್ರೋಲ್-ಡಿಸೇಲ್ ದರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕಂಪನಿಗಳು ಹೇಳುತ್ತವಾದರೂ ಪ್ರತಿ ಪ್ರಮುಖ ಚುನಾವಣೆಯಲ್ಲಿ ದರ ಸ್ಥಿರವಾಗಿರುವುದನ್ನು ಅಥವಾ ಅಲ್ಪ ಇಳಿಕೆಯಾಗುವುದನ್ನು ಇತ್ತೀಚಿನ ವರ್ಷಗಳಲ್ಲಿ ನೋಡುತ್ತ ಬಂದಿದ್ದೇವೆ. ಚುನಾವಣೆಯ ಸಮಯದಲ್ಲಿ ಬೆಲೆ ಸ್ಥಗಿತದ ಪರಿಣಾಮವಾಗಿ ಚುನಾವಣೆ ಮುಗಿದ ನಂತರ ಗ್ರಾಹಕರು ಪೆಟ್ರೋಲ್ ಮತ್ತು ಡೀಸೆಲ್‌ಗೆ ಹೆಚ್ಚಿನ ಬೆಲೆ ನೀಡಬೇಕಾಗಿರುವುದನ್ನು ಇತಿಹಾಸ ತೋರಿಸಿದೆ ಎಂದು ವರದಿ ತಿಳಿಸಿದೆ.

ಚುನಾವಣೆಯ ಸಮಯದಲ್ಲಿ ಇಂಧನ ಬೆಲೆಗಳು ಏಕೆ ಕಡಿಮೆ?

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿಗದಿಪಡಿಸಲು ತೈಲ ಮಾರಾಟ ಕಂಪನಿಗಳು ಮುಕ್ತವಾಗಿದ್ದರೂ ಕೂಡ ಅವು ಆಗಾಗ್ಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿತಗೊಳಿಸುತ್ತವೆ ಅಥವಾ ಇಂಧನ ಬೆಲೆಗಳು ರಾಜಕೀಯ ವಿಷಯವಾಗಿ ಪರಿಣಮಿಸುವುದರಿಂದ ಚುನಾವಣೆಗಳ ಸಮಯದಲ್ಲಿ ಅವುಗಳನ್ನು ಸ್ಥಿರವಾಗಿ ಇಡುತ್ತವೆ. ಇದು ಸಹಜವಾಗಿ ಕೇಂದ್ರದಲ್ಲಿ ಆಳುವ ಪಕ್ಷದ ಹಿತಾಸಕ್ತಿ ಕಾಪಾಡುವುದೇ ಆಗಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿನ ಕಚ್ಚಾ ತೈಲದ ಬೆಲೆಯ ಆಧಾರದಲ್ಲಿ ಇಲ್ಲಿ ಇಂಧನ ದರ ಇರುತ್ತವೆ ಎಂಬುದು ಇತ್ತೀಚಿನ ತಿಂಗಳುಗಳಲ್ಲಿ ಹುಸಿಯಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತೆರಿಗೆ ಹೊರೆ ಮಾತ್ರ ಸ್ಥಿರವಾಗಿ ಇದ್ದೇ ಇದೆ.

ಕಚ್ಚಾ ತೈಲದ ಬೆಲೆಯಲ್ಲಿ ಗಮನಾರ್ಹ ಏರಿಳಿತವಾದರೂ ಕೂಡ ಇತ್ತೀಚಿನ 47 ದಿನಗಳ ಅವಧಿಯಲ್ಲಿ ಕೇವಲ ನಾಲ್ಕು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪರಿಷ್ಕರಿಸಲಾಗಿದೆ. ಚುನಾವಣೆ ಘೋಷಣೆಯಾದ ಪರಿಣಾಮ ಈ ಪ್ರಕ್ರಿಯೆ ನಡೆದಿದೆ ಎಂದು ತಜ್ಞರು ಹೇಳುತ್ತಾರೆ.

ಚುನಾವಣೆಯ ನಂತರ ಹೇಗೆ ಬದಲಾಗುತ್ತವೆ?

ಚುನಾವಣೆ ನಂತರ ತೈಲ ಮಾರಾಟ ಕಂಪನಿಗಳು ತಮ್ಮ ಮಾರುಕಟ್ಟೆ ಮಾರ್ಜಿನ್‌ಗಳನ್ನು ಸಾಮಾನ್ಯ ಮಟ್ಟಕ್ಕೆ ಪುನಃಸ್ಥಾಪಿಸಲು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕಚ್ಚಾ ತೈಲ ಬೆಲೆಯ ಯಾವುದೇ ಕುಸಿತದ ಪ್ರಯೋಜನವನ್ನು ಗ್ರಾಹಕರಿಗೆ ತಲುಪಿಸಲು ತೈಲ ಮಾರಾಟ ಕಂಪನಿಗಳು ನಿಧಾನವಾಗಿರುವುದರಿಂದ ಚುನಾವಣೆ ನಂತರ ಗ್ರಾಹಕರು ಹೆಚ್ಚು ಪಾವತಿಸಬೇಕಾಗಬಹುದು ಎಂದು ತಜ್ಞರು ಹೇಳುತ್ತಾರೆ.

ತೈಲ ಮಾರಾಟ ಕಂಪನಿಗಳು ಮತ್ತು ಚುನಾವಣೆ

ಚುನಾವಣೆಯ ಸಮಯದಲ್ಲಿ ಹೂಡಿಕೆದಾರರು ಇಂತಹ ಕ್ರಮಗಳನ್ನು ನಿರೀಕ್ಷಿಸುತ್ತಾರೆ ಮತ್ತು ನಂತರದ ಅವಧಿಯಲ್ಲಿ ಮರಳಿ ಪ್ರಮಾಣಿತ ಮಾರ್ಜಿನ್‌ಗಳಿಗೆ ಹಿಂತಿರುಗುತ್ತಾರೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಫೆಬ್ರವರಿ 27 ರ ಆರಂಭದಿಂದ ಒಎಂಸಿಗಳು ಬೆಲೆಗಳ ಪರಿಷ್ಕರಣೆಯನ್ನು ನಿಲ್ಲಿಸಿದಾಗ ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ನ ಷೇರಿನ ಬೆಲೆ ಶೇಕಡಾ 8 ರಷ್ಟು ಕುಸಿದಿದ್ದರೆ, ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ನ ಷೇರಿನ ಬೆಲೆ ಶೇ. 10 ಕುಸಿದಿದೆ. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಶೇ 1.4 ರಷ್ಟು ಕುಸಿದಿದೆ.
ಅಂತಹ ಪ್ರಕ್ರಿಯೆಗಳು ಒಎಂಸಿಗಳ ದೀರ್ಘಕಾಲೀನ ಮೌಲ್ಯಮಾಪನಗಳ ಮೇಲೆ ಪರಿಣಾಮ ಬೀರಬಹುದು ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ, ಮುಖ್ಯವಾಗಿ ಖಾಸಗೀಕರಣಗೊಳ್ಳಲಿರುವ ಬಿಪಿಸಿಎಲ್ ಕಂಪನಿಯ ಮೇಲೆ ಇದರ ಪರಿಣಾಮ ಹೆಚ್ಚು ಎನ್ನಲಾಗಿದೆ.

“ರಾಜಕೀಯವಾಗಿ ಲಾಭದಾಯಕವಾದಾಗಲೆಲ್ಲಾ ಸರ್ಕಾರವು ನಿಮ್ಮ ಮಾರ್ಕೆಟಿಂಗ್ ಮಾರ್ಜಿನ್‌ಗಳನ್ನು ಕಡಿತಗೊಳಿಸಿದಾಗ ಯಾರಾದರೂ ಹೆಚ್ಚಿನ ಮೌಲ್ಯಮಾಪನವನ್ನು (ಖಾಸಗೀಕರಣಗೊಳ್ಳಲಿರುವ ಬಿಪಿಸಿಎಲ್ ಕಂಪನಿಗೆ) ಏಕೆ ನೀಡುತ್ತಾರೆ ಎಂದು ವಿಶ್ಲೇಷಕರೊಬ್ಬರು ಹೇಳಿದ್ದಾರೆ. ಖಾಸಗೀಕರಣದ ನಂತರವೂ, ಉಳಿದ ಸರ್ಕಾರಿ ಸ್ವಾಮ್ಯದ ರಿಫೈನರ್‌ಗಳು – ಐಒಸಿಎಲ್ ಮತ್ತು ಎಚ್‌ಪಿಸಿಎಲ್- ಚುನಾವಣೆಯ ಸಮಯದಲ್ಲಿ ಬೆಲೆಗಳನ್ನು ಕಡಿತಗೊಳಿಸಿದರೆ, ಬಿಪಿಸಿಎಲ್ ಕೂಡ ಆ ಬೆಲೆಗಳೊಂದಿಗೆ ಹೊಂದಿಕೆಯಾಗಬೇಕಾಗುತ್ತದೆ.


ಇದನ್ನೂ ಓದಿ: ಇವಿಎಂ ಸುರಕ್ಷತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಡಿಎಂಕೆ ಮುಖ್ಯಸ್ಥ ಸ್ಟಾಲಿನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...