Homeಮುಖಪುಟಚುನಾವಣೆಯ ನಂತರ ಮತ್ತೆ ಏರಲಿದೆ ಪೆಟ್ರೋಲ್-ಡಿಸೇಲ್ ದರ!

ಚುನಾವಣೆಯ ನಂತರ ಮತ್ತೆ ಏರಲಿದೆ ಪೆಟ್ರೋಲ್-ಡಿಸೇಲ್ ದರ!

- Advertisement -
- Advertisement -

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಅಸ್ಸಾಂ ರಾಜ್ಯಗಳ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ತೈಲ ಮಾರಾಟ ಕಂಪನಿಗಳು (ಒಎಂಸಿಗಳು) ಪ್ರಮುಖ ನಗರಗಳಲ್ಲಿ ಗುರುವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 14-16 ಪೈಸೆ ಕಡಿತಗೊಳಿಸಿದವು. ಕಳೆದ 15 ದಿನಗಳಲ್ಲಿ ದರಗಳಲ್ಲಿ ಯಾವ ಬದಲಾವಣೆಯನ್ನೂ ಮಾಡಿರಲಿಲ್ಲ. ಆದರೆ ಚುನಾವಣೆಯ ನಂತರ ಮತ್ತೆ ಪೆಟ್ರೋಲ್-ಡಿಸೇಲ್ ದರಗಳು ಏರುಗತಿಯಲ್ಲೇ ಇರಲಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಚುನಾವಣೆಗೂ ಪೆಟ್ರೋಲ್-ಡಿಸೇಲ್ ದರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕಂಪನಿಗಳು ಹೇಳುತ್ತವಾದರೂ ಪ್ರತಿ ಪ್ರಮುಖ ಚುನಾವಣೆಯಲ್ಲಿ ದರ ಸ್ಥಿರವಾಗಿರುವುದನ್ನು ಅಥವಾ ಅಲ್ಪ ಇಳಿಕೆಯಾಗುವುದನ್ನು ಇತ್ತೀಚಿನ ವರ್ಷಗಳಲ್ಲಿ ನೋಡುತ್ತ ಬಂದಿದ್ದೇವೆ. ಚುನಾವಣೆಯ ಸಮಯದಲ್ಲಿ ಬೆಲೆ ಸ್ಥಗಿತದ ಪರಿಣಾಮವಾಗಿ ಚುನಾವಣೆ ಮುಗಿದ ನಂತರ ಗ್ರಾಹಕರು ಪೆಟ್ರೋಲ್ ಮತ್ತು ಡೀಸೆಲ್‌ಗೆ ಹೆಚ್ಚಿನ ಬೆಲೆ ನೀಡಬೇಕಾಗಿರುವುದನ್ನು ಇತಿಹಾಸ ತೋರಿಸಿದೆ ಎಂದು ವರದಿ ತಿಳಿಸಿದೆ.

ಚುನಾವಣೆಯ ಸಮಯದಲ್ಲಿ ಇಂಧನ ಬೆಲೆಗಳು ಏಕೆ ಕಡಿಮೆ?

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿಗದಿಪಡಿಸಲು ತೈಲ ಮಾರಾಟ ಕಂಪನಿಗಳು ಮುಕ್ತವಾಗಿದ್ದರೂ ಕೂಡ ಅವು ಆಗಾಗ್ಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿತಗೊಳಿಸುತ್ತವೆ ಅಥವಾ ಇಂಧನ ಬೆಲೆಗಳು ರಾಜಕೀಯ ವಿಷಯವಾಗಿ ಪರಿಣಮಿಸುವುದರಿಂದ ಚುನಾವಣೆಗಳ ಸಮಯದಲ್ಲಿ ಅವುಗಳನ್ನು ಸ್ಥಿರವಾಗಿ ಇಡುತ್ತವೆ. ಇದು ಸಹಜವಾಗಿ ಕೇಂದ್ರದಲ್ಲಿ ಆಳುವ ಪಕ್ಷದ ಹಿತಾಸಕ್ತಿ ಕಾಪಾಡುವುದೇ ಆಗಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿನ ಕಚ್ಚಾ ತೈಲದ ಬೆಲೆಯ ಆಧಾರದಲ್ಲಿ ಇಲ್ಲಿ ಇಂಧನ ದರ ಇರುತ್ತವೆ ಎಂಬುದು ಇತ್ತೀಚಿನ ತಿಂಗಳುಗಳಲ್ಲಿ ಹುಸಿಯಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತೆರಿಗೆ ಹೊರೆ ಮಾತ್ರ ಸ್ಥಿರವಾಗಿ ಇದ್ದೇ ಇದೆ.

ಕಚ್ಚಾ ತೈಲದ ಬೆಲೆಯಲ್ಲಿ ಗಮನಾರ್ಹ ಏರಿಳಿತವಾದರೂ ಕೂಡ ಇತ್ತೀಚಿನ 47 ದಿನಗಳ ಅವಧಿಯಲ್ಲಿ ಕೇವಲ ನಾಲ್ಕು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪರಿಷ್ಕರಿಸಲಾಗಿದೆ. ಚುನಾವಣೆ ಘೋಷಣೆಯಾದ ಪರಿಣಾಮ ಈ ಪ್ರಕ್ರಿಯೆ ನಡೆದಿದೆ ಎಂದು ತಜ್ಞರು ಹೇಳುತ್ತಾರೆ.

ಚುನಾವಣೆಯ ನಂತರ ಹೇಗೆ ಬದಲಾಗುತ್ತವೆ?

ಚುನಾವಣೆ ನಂತರ ತೈಲ ಮಾರಾಟ ಕಂಪನಿಗಳು ತಮ್ಮ ಮಾರುಕಟ್ಟೆ ಮಾರ್ಜಿನ್‌ಗಳನ್ನು ಸಾಮಾನ್ಯ ಮಟ್ಟಕ್ಕೆ ಪುನಃಸ್ಥಾಪಿಸಲು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕಚ್ಚಾ ತೈಲ ಬೆಲೆಯ ಯಾವುದೇ ಕುಸಿತದ ಪ್ರಯೋಜನವನ್ನು ಗ್ರಾಹಕರಿಗೆ ತಲುಪಿಸಲು ತೈಲ ಮಾರಾಟ ಕಂಪನಿಗಳು ನಿಧಾನವಾಗಿರುವುದರಿಂದ ಚುನಾವಣೆ ನಂತರ ಗ್ರಾಹಕರು ಹೆಚ್ಚು ಪಾವತಿಸಬೇಕಾಗಬಹುದು ಎಂದು ತಜ್ಞರು ಹೇಳುತ್ತಾರೆ.

ತೈಲ ಮಾರಾಟ ಕಂಪನಿಗಳು ಮತ್ತು ಚುನಾವಣೆ

ಚುನಾವಣೆಯ ಸಮಯದಲ್ಲಿ ಹೂಡಿಕೆದಾರರು ಇಂತಹ ಕ್ರಮಗಳನ್ನು ನಿರೀಕ್ಷಿಸುತ್ತಾರೆ ಮತ್ತು ನಂತರದ ಅವಧಿಯಲ್ಲಿ ಮರಳಿ ಪ್ರಮಾಣಿತ ಮಾರ್ಜಿನ್‌ಗಳಿಗೆ ಹಿಂತಿರುಗುತ್ತಾರೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಫೆಬ್ರವರಿ 27 ರ ಆರಂಭದಿಂದ ಒಎಂಸಿಗಳು ಬೆಲೆಗಳ ಪರಿಷ್ಕರಣೆಯನ್ನು ನಿಲ್ಲಿಸಿದಾಗ ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ನ ಷೇರಿನ ಬೆಲೆ ಶೇಕಡಾ 8 ರಷ್ಟು ಕುಸಿದಿದ್ದರೆ, ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ನ ಷೇರಿನ ಬೆಲೆ ಶೇ. 10 ಕುಸಿದಿದೆ. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಶೇ 1.4 ರಷ್ಟು ಕುಸಿದಿದೆ.
ಅಂತಹ ಪ್ರಕ್ರಿಯೆಗಳು ಒಎಂಸಿಗಳ ದೀರ್ಘಕಾಲೀನ ಮೌಲ್ಯಮಾಪನಗಳ ಮೇಲೆ ಪರಿಣಾಮ ಬೀರಬಹುದು ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ, ಮುಖ್ಯವಾಗಿ ಖಾಸಗೀಕರಣಗೊಳ್ಳಲಿರುವ ಬಿಪಿಸಿಎಲ್ ಕಂಪನಿಯ ಮೇಲೆ ಇದರ ಪರಿಣಾಮ ಹೆಚ್ಚು ಎನ್ನಲಾಗಿದೆ.

“ರಾಜಕೀಯವಾಗಿ ಲಾಭದಾಯಕವಾದಾಗಲೆಲ್ಲಾ ಸರ್ಕಾರವು ನಿಮ್ಮ ಮಾರ್ಕೆಟಿಂಗ್ ಮಾರ್ಜಿನ್‌ಗಳನ್ನು ಕಡಿತಗೊಳಿಸಿದಾಗ ಯಾರಾದರೂ ಹೆಚ್ಚಿನ ಮೌಲ್ಯಮಾಪನವನ್ನು (ಖಾಸಗೀಕರಣಗೊಳ್ಳಲಿರುವ ಬಿಪಿಸಿಎಲ್ ಕಂಪನಿಗೆ) ಏಕೆ ನೀಡುತ್ತಾರೆ ಎಂದು ವಿಶ್ಲೇಷಕರೊಬ್ಬರು ಹೇಳಿದ್ದಾರೆ. ಖಾಸಗೀಕರಣದ ನಂತರವೂ, ಉಳಿದ ಸರ್ಕಾರಿ ಸ್ವಾಮ್ಯದ ರಿಫೈನರ್‌ಗಳು – ಐಒಸಿಎಲ್ ಮತ್ತು ಎಚ್‌ಪಿಸಿಎಲ್- ಚುನಾವಣೆಯ ಸಮಯದಲ್ಲಿ ಬೆಲೆಗಳನ್ನು ಕಡಿತಗೊಳಿಸಿದರೆ, ಬಿಪಿಸಿಎಲ್ ಕೂಡ ಆ ಬೆಲೆಗಳೊಂದಿಗೆ ಹೊಂದಿಕೆಯಾಗಬೇಕಾಗುತ್ತದೆ.


ಇದನ್ನೂ ಓದಿ: ಇವಿಎಂ ಸುರಕ್ಷತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಡಿಎಂಕೆ ಮುಖ್ಯಸ್ಥ ಸ್ಟಾಲಿನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...