Homeಮುಖಪುಟಚುನಾವಣೆಯ ನಂತರ ಮತ್ತೆ ಏರಲಿದೆ ಪೆಟ್ರೋಲ್-ಡಿಸೇಲ್ ದರ!

ಚುನಾವಣೆಯ ನಂತರ ಮತ್ತೆ ಏರಲಿದೆ ಪೆಟ್ರೋಲ್-ಡಿಸೇಲ್ ದರ!

- Advertisement -
- Advertisement -

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಅಸ್ಸಾಂ ರಾಜ್ಯಗಳ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ತೈಲ ಮಾರಾಟ ಕಂಪನಿಗಳು (ಒಎಂಸಿಗಳು) ಪ್ರಮುಖ ನಗರಗಳಲ್ಲಿ ಗುರುವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 14-16 ಪೈಸೆ ಕಡಿತಗೊಳಿಸಿದವು. ಕಳೆದ 15 ದಿನಗಳಲ್ಲಿ ದರಗಳಲ್ಲಿ ಯಾವ ಬದಲಾವಣೆಯನ್ನೂ ಮಾಡಿರಲಿಲ್ಲ. ಆದರೆ ಚುನಾವಣೆಯ ನಂತರ ಮತ್ತೆ ಪೆಟ್ರೋಲ್-ಡಿಸೇಲ್ ದರಗಳು ಏರುಗತಿಯಲ್ಲೇ ಇರಲಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಚುನಾವಣೆಗೂ ಪೆಟ್ರೋಲ್-ಡಿಸೇಲ್ ದರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕಂಪನಿಗಳು ಹೇಳುತ್ತವಾದರೂ ಪ್ರತಿ ಪ್ರಮುಖ ಚುನಾವಣೆಯಲ್ಲಿ ದರ ಸ್ಥಿರವಾಗಿರುವುದನ್ನು ಅಥವಾ ಅಲ್ಪ ಇಳಿಕೆಯಾಗುವುದನ್ನು ಇತ್ತೀಚಿನ ವರ್ಷಗಳಲ್ಲಿ ನೋಡುತ್ತ ಬಂದಿದ್ದೇವೆ. ಚುನಾವಣೆಯ ಸಮಯದಲ್ಲಿ ಬೆಲೆ ಸ್ಥಗಿತದ ಪರಿಣಾಮವಾಗಿ ಚುನಾವಣೆ ಮುಗಿದ ನಂತರ ಗ್ರಾಹಕರು ಪೆಟ್ರೋಲ್ ಮತ್ತು ಡೀಸೆಲ್‌ಗೆ ಹೆಚ್ಚಿನ ಬೆಲೆ ನೀಡಬೇಕಾಗಿರುವುದನ್ನು ಇತಿಹಾಸ ತೋರಿಸಿದೆ ಎಂದು ವರದಿ ತಿಳಿಸಿದೆ.

ಚುನಾವಣೆಯ ಸಮಯದಲ್ಲಿ ಇಂಧನ ಬೆಲೆಗಳು ಏಕೆ ಕಡಿಮೆ?

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿಗದಿಪಡಿಸಲು ತೈಲ ಮಾರಾಟ ಕಂಪನಿಗಳು ಮುಕ್ತವಾಗಿದ್ದರೂ ಕೂಡ ಅವು ಆಗಾಗ್ಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿತಗೊಳಿಸುತ್ತವೆ ಅಥವಾ ಇಂಧನ ಬೆಲೆಗಳು ರಾಜಕೀಯ ವಿಷಯವಾಗಿ ಪರಿಣಮಿಸುವುದರಿಂದ ಚುನಾವಣೆಗಳ ಸಮಯದಲ್ಲಿ ಅವುಗಳನ್ನು ಸ್ಥಿರವಾಗಿ ಇಡುತ್ತವೆ. ಇದು ಸಹಜವಾಗಿ ಕೇಂದ್ರದಲ್ಲಿ ಆಳುವ ಪಕ್ಷದ ಹಿತಾಸಕ್ತಿ ಕಾಪಾಡುವುದೇ ಆಗಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿನ ಕಚ್ಚಾ ತೈಲದ ಬೆಲೆಯ ಆಧಾರದಲ್ಲಿ ಇಲ್ಲಿ ಇಂಧನ ದರ ಇರುತ್ತವೆ ಎಂಬುದು ಇತ್ತೀಚಿನ ತಿಂಗಳುಗಳಲ್ಲಿ ಹುಸಿಯಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತೆರಿಗೆ ಹೊರೆ ಮಾತ್ರ ಸ್ಥಿರವಾಗಿ ಇದ್ದೇ ಇದೆ.

ಕಚ್ಚಾ ತೈಲದ ಬೆಲೆಯಲ್ಲಿ ಗಮನಾರ್ಹ ಏರಿಳಿತವಾದರೂ ಕೂಡ ಇತ್ತೀಚಿನ 47 ದಿನಗಳ ಅವಧಿಯಲ್ಲಿ ಕೇವಲ ನಾಲ್ಕು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪರಿಷ್ಕರಿಸಲಾಗಿದೆ. ಚುನಾವಣೆ ಘೋಷಣೆಯಾದ ಪರಿಣಾಮ ಈ ಪ್ರಕ್ರಿಯೆ ನಡೆದಿದೆ ಎಂದು ತಜ್ಞರು ಹೇಳುತ್ತಾರೆ.

ಚುನಾವಣೆಯ ನಂತರ ಹೇಗೆ ಬದಲಾಗುತ್ತವೆ?

ಚುನಾವಣೆ ನಂತರ ತೈಲ ಮಾರಾಟ ಕಂಪನಿಗಳು ತಮ್ಮ ಮಾರುಕಟ್ಟೆ ಮಾರ್ಜಿನ್‌ಗಳನ್ನು ಸಾಮಾನ್ಯ ಮಟ್ಟಕ್ಕೆ ಪುನಃಸ್ಥಾಪಿಸಲು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕಚ್ಚಾ ತೈಲ ಬೆಲೆಯ ಯಾವುದೇ ಕುಸಿತದ ಪ್ರಯೋಜನವನ್ನು ಗ್ರಾಹಕರಿಗೆ ತಲುಪಿಸಲು ತೈಲ ಮಾರಾಟ ಕಂಪನಿಗಳು ನಿಧಾನವಾಗಿರುವುದರಿಂದ ಚುನಾವಣೆ ನಂತರ ಗ್ರಾಹಕರು ಹೆಚ್ಚು ಪಾವತಿಸಬೇಕಾಗಬಹುದು ಎಂದು ತಜ್ಞರು ಹೇಳುತ್ತಾರೆ.

ತೈಲ ಮಾರಾಟ ಕಂಪನಿಗಳು ಮತ್ತು ಚುನಾವಣೆ

ಚುನಾವಣೆಯ ಸಮಯದಲ್ಲಿ ಹೂಡಿಕೆದಾರರು ಇಂತಹ ಕ್ರಮಗಳನ್ನು ನಿರೀಕ್ಷಿಸುತ್ತಾರೆ ಮತ್ತು ನಂತರದ ಅವಧಿಯಲ್ಲಿ ಮರಳಿ ಪ್ರಮಾಣಿತ ಮಾರ್ಜಿನ್‌ಗಳಿಗೆ ಹಿಂತಿರುಗುತ್ತಾರೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಫೆಬ್ರವರಿ 27 ರ ಆರಂಭದಿಂದ ಒಎಂಸಿಗಳು ಬೆಲೆಗಳ ಪರಿಷ್ಕರಣೆಯನ್ನು ನಿಲ್ಲಿಸಿದಾಗ ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ನ ಷೇರಿನ ಬೆಲೆ ಶೇಕಡಾ 8 ರಷ್ಟು ಕುಸಿದಿದ್ದರೆ, ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ನ ಷೇರಿನ ಬೆಲೆ ಶೇ. 10 ಕುಸಿದಿದೆ. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಶೇ 1.4 ರಷ್ಟು ಕುಸಿದಿದೆ.
ಅಂತಹ ಪ್ರಕ್ರಿಯೆಗಳು ಒಎಂಸಿಗಳ ದೀರ್ಘಕಾಲೀನ ಮೌಲ್ಯಮಾಪನಗಳ ಮೇಲೆ ಪರಿಣಾಮ ಬೀರಬಹುದು ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ, ಮುಖ್ಯವಾಗಿ ಖಾಸಗೀಕರಣಗೊಳ್ಳಲಿರುವ ಬಿಪಿಸಿಎಲ್ ಕಂಪನಿಯ ಮೇಲೆ ಇದರ ಪರಿಣಾಮ ಹೆಚ್ಚು ಎನ್ನಲಾಗಿದೆ.

“ರಾಜಕೀಯವಾಗಿ ಲಾಭದಾಯಕವಾದಾಗಲೆಲ್ಲಾ ಸರ್ಕಾರವು ನಿಮ್ಮ ಮಾರ್ಕೆಟಿಂಗ್ ಮಾರ್ಜಿನ್‌ಗಳನ್ನು ಕಡಿತಗೊಳಿಸಿದಾಗ ಯಾರಾದರೂ ಹೆಚ್ಚಿನ ಮೌಲ್ಯಮಾಪನವನ್ನು (ಖಾಸಗೀಕರಣಗೊಳ್ಳಲಿರುವ ಬಿಪಿಸಿಎಲ್ ಕಂಪನಿಗೆ) ಏಕೆ ನೀಡುತ್ತಾರೆ ಎಂದು ವಿಶ್ಲೇಷಕರೊಬ್ಬರು ಹೇಳಿದ್ದಾರೆ. ಖಾಸಗೀಕರಣದ ನಂತರವೂ, ಉಳಿದ ಸರ್ಕಾರಿ ಸ್ವಾಮ್ಯದ ರಿಫೈನರ್‌ಗಳು – ಐಒಸಿಎಲ್ ಮತ್ತು ಎಚ್‌ಪಿಸಿಎಲ್- ಚುನಾವಣೆಯ ಸಮಯದಲ್ಲಿ ಬೆಲೆಗಳನ್ನು ಕಡಿತಗೊಳಿಸಿದರೆ, ಬಿಪಿಸಿಎಲ್ ಕೂಡ ಆ ಬೆಲೆಗಳೊಂದಿಗೆ ಹೊಂದಿಕೆಯಾಗಬೇಕಾಗುತ್ತದೆ.


ಇದನ್ನೂ ಓದಿ: ಇವಿಎಂ ಸುರಕ್ಷತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಡಿಎಂಕೆ ಮುಖ್ಯಸ್ಥ ಸ್ಟಾಲಿನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...