Homeಮುಖಪುಟಚುನಾವಣೆಯ ನಂತರ ಮತ್ತೆ ಏರಲಿದೆ ಪೆಟ್ರೋಲ್-ಡಿಸೇಲ್ ದರ!

ಚುನಾವಣೆಯ ನಂತರ ಮತ್ತೆ ಏರಲಿದೆ ಪೆಟ್ರೋಲ್-ಡಿಸೇಲ್ ದರ!

- Advertisement -
- Advertisement -

ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಅಸ್ಸಾಂ ರಾಜ್ಯಗಳ ಚುನಾವಣೆ ದೃಷ್ಟಿಯಲ್ಲಿ ಇಟ್ಟುಕೊಂಡು ತೈಲ ಮಾರಾಟ ಕಂಪನಿಗಳು (ಒಎಂಸಿಗಳು) ಪ್ರಮುಖ ನಗರಗಳಲ್ಲಿ ಗುರುವಾರ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಲೀಟರ್‌ಗೆ 14-16 ಪೈಸೆ ಕಡಿತಗೊಳಿಸಿದವು. ಕಳೆದ 15 ದಿನಗಳಲ್ಲಿ ದರಗಳಲ್ಲಿ ಯಾವ ಬದಲಾವಣೆಯನ್ನೂ ಮಾಡಿರಲಿಲ್ಲ. ಆದರೆ ಚುನಾವಣೆಯ ನಂತರ ಮತ್ತೆ ಪೆಟ್ರೋಲ್-ಡಿಸೇಲ್ ದರಗಳು ಏರುಗತಿಯಲ್ಲೇ ಇರಲಿವೆ ಎಂದು ಇಂಡಿಯನ್ ಎಕ್ಸ್‌ಪ್ರೆಸ್‌ ವರದಿ ಮಾಡಿದೆ.

ಚುನಾವಣೆಗೂ ಪೆಟ್ರೋಲ್-ಡಿಸೇಲ್ ದರಕ್ಕೂ ಯಾವುದೇ ಸಂಬಂಧವಿಲ್ಲ ಎಂದು ಕಂಪನಿಗಳು ಹೇಳುತ್ತವಾದರೂ ಪ್ರತಿ ಪ್ರಮುಖ ಚುನಾವಣೆಯಲ್ಲಿ ದರ ಸ್ಥಿರವಾಗಿರುವುದನ್ನು ಅಥವಾ ಅಲ್ಪ ಇಳಿಕೆಯಾಗುವುದನ್ನು ಇತ್ತೀಚಿನ ವರ್ಷಗಳಲ್ಲಿ ನೋಡುತ್ತ ಬಂದಿದ್ದೇವೆ. ಚುನಾವಣೆಯ ಸಮಯದಲ್ಲಿ ಬೆಲೆ ಸ್ಥಗಿತದ ಪರಿಣಾಮವಾಗಿ ಚುನಾವಣೆ ಮುಗಿದ ನಂತರ ಗ್ರಾಹಕರು ಪೆಟ್ರೋಲ್ ಮತ್ತು ಡೀಸೆಲ್‌ಗೆ ಹೆಚ್ಚಿನ ಬೆಲೆ ನೀಡಬೇಕಾಗಿರುವುದನ್ನು ಇತಿಹಾಸ ತೋರಿಸಿದೆ ಎಂದು ವರದಿ ತಿಳಿಸಿದೆ.

ಚುನಾವಣೆಯ ಸಮಯದಲ್ಲಿ ಇಂಧನ ಬೆಲೆಗಳು ಏಕೆ ಕಡಿಮೆ?

ಪೆಟ್ರೋಲ್ ಮತ್ತು ಡೀಸೆಲ್ ಬೆಲೆಗಳನ್ನು ನಿಗದಿಪಡಿಸಲು ತೈಲ ಮಾರಾಟ ಕಂಪನಿಗಳು ಮುಕ್ತವಾಗಿದ್ದರೂ ಕೂಡ ಅವು ಆಗಾಗ್ಗೆ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಕಡಿತಗೊಳಿಸುತ್ತವೆ ಅಥವಾ ಇಂಧನ ಬೆಲೆಗಳು ರಾಜಕೀಯ ವಿಷಯವಾಗಿ ಪರಿಣಮಿಸುವುದರಿಂದ ಚುನಾವಣೆಗಳ ಸಮಯದಲ್ಲಿ ಅವುಗಳನ್ನು ಸ್ಥಿರವಾಗಿ ಇಡುತ್ತವೆ. ಇದು ಸಹಜವಾಗಿ ಕೇಂದ್ರದಲ್ಲಿ ಆಳುವ ಪಕ್ಷದ ಹಿತಾಸಕ್ತಿ ಕಾಪಾಡುವುದೇ ಆಗಿದೆ.

ಅಂತಾರಾಷ್ಟ್ರೀಯ ಮಟ್ಟದಲ್ಲಿನ ಕಚ್ಚಾ ತೈಲದ ಬೆಲೆಯ ಆಧಾರದಲ್ಲಿ ಇಲ್ಲಿ ಇಂಧನ ದರ ಇರುತ್ತವೆ ಎಂಬುದು ಇತ್ತೀಚಿನ ತಿಂಗಳುಗಳಲ್ಲಿ ಹುಸಿಯಾಗಿದೆ. ಕೇಂದ್ರ ಮತ್ತು ರಾಜ್ಯ ಸರ್ಕಾರಗಳ ತೆರಿಗೆ ಹೊರೆ ಮಾತ್ರ ಸ್ಥಿರವಾಗಿ ಇದ್ದೇ ಇದೆ.

ಕಚ್ಚಾ ತೈಲದ ಬೆಲೆಯಲ್ಲಿ ಗಮನಾರ್ಹ ಏರಿಳಿತವಾದರೂ ಕೂಡ ಇತ್ತೀಚಿನ 47 ದಿನಗಳ ಅವಧಿಯಲ್ಲಿ ಕೇವಲ ನಾಲ್ಕು ಬಾರಿ ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಪರಿಷ್ಕರಿಸಲಾಗಿದೆ. ಚುನಾವಣೆ ಘೋಷಣೆಯಾದ ಪರಿಣಾಮ ಈ ಪ್ರಕ್ರಿಯೆ ನಡೆದಿದೆ ಎಂದು ತಜ್ಞರು ಹೇಳುತ್ತಾರೆ.

ಚುನಾವಣೆಯ ನಂತರ ಹೇಗೆ ಬದಲಾಗುತ್ತವೆ?

ಚುನಾವಣೆ ನಂತರ ತೈಲ ಮಾರಾಟ ಕಂಪನಿಗಳು ತಮ್ಮ ಮಾರುಕಟ್ಟೆ ಮಾರ್ಜಿನ್‌ಗಳನ್ನು ಸಾಮಾನ್ಯ ಮಟ್ಟಕ್ಕೆ ಪುನಃಸ್ಥಾಪಿಸಲು ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯನ್ನು ಹೆಚ್ಚಿಸುವ ಸಾಧ್ಯತೆಯಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಕಚ್ಚಾ ತೈಲ ಬೆಲೆಯ ಯಾವುದೇ ಕುಸಿತದ ಪ್ರಯೋಜನವನ್ನು ಗ್ರಾಹಕರಿಗೆ ತಲುಪಿಸಲು ತೈಲ ಮಾರಾಟ ಕಂಪನಿಗಳು ನಿಧಾನವಾಗಿರುವುದರಿಂದ ಚುನಾವಣೆ ನಂತರ ಗ್ರಾಹಕರು ಹೆಚ್ಚು ಪಾವತಿಸಬೇಕಾಗಬಹುದು ಎಂದು ತಜ್ಞರು ಹೇಳುತ್ತಾರೆ.

ತೈಲ ಮಾರಾಟ ಕಂಪನಿಗಳು ಮತ್ತು ಚುನಾವಣೆ

ಚುನಾವಣೆಯ ಸಮಯದಲ್ಲಿ ಹೂಡಿಕೆದಾರರು ಇಂತಹ ಕ್ರಮಗಳನ್ನು ನಿರೀಕ್ಷಿಸುತ್ತಾರೆ ಮತ್ತು ನಂತರದ ಅವಧಿಯಲ್ಲಿ ಮರಳಿ ಪ್ರಮಾಣಿತ ಮಾರ್ಜಿನ್‌ಗಳಿಗೆ ಹಿಂತಿರುಗುತ್ತಾರೆ ಎಂದು ತಜ್ಞರು ಅಭಿಪ್ರಾಯಪಟ್ಟಿದ್ದಾರೆ. ಫೆಬ್ರವರಿ 27 ರ ಆರಂಭದಿಂದ ಒಎಂಸಿಗಳು ಬೆಲೆಗಳ ಪರಿಷ್ಕರಣೆಯನ್ನು ನಿಲ್ಲಿಸಿದಾಗ ಇಂಡಿಯನ್ ಆಯಿಲ್ ಕಾರ್ಪೊರೇಶನ್ ಲಿಮಿಟೆಡ್ (ಐಒಸಿಎಲ್) ನ ಷೇರಿನ ಬೆಲೆ ಶೇಕಡಾ 8 ರಷ್ಟು ಕುಸಿದಿದ್ದರೆ, ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ನ ಷೇರಿನ ಬೆಲೆ ಶೇ. 10 ಕುಸಿದಿದೆ. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಎಚ್‌ಪಿಸಿಎಲ್) ಶೇ 1.4 ರಷ್ಟು ಕುಸಿದಿದೆ.
ಅಂತಹ ಪ್ರಕ್ರಿಯೆಗಳು ಒಎಂಸಿಗಳ ದೀರ್ಘಕಾಲೀನ ಮೌಲ್ಯಮಾಪನಗಳ ಮೇಲೆ ಪರಿಣಾಮ ಬೀರಬಹುದು ಎಂದು ವಿಶ್ಲೇಷಕರು ಅಭಿಪ್ರಾಯಪಟ್ಟಿದ್ದಾರೆ, ಮುಖ್ಯವಾಗಿ ಖಾಸಗೀಕರಣಗೊಳ್ಳಲಿರುವ ಬಿಪಿಸಿಎಲ್ ಕಂಪನಿಯ ಮೇಲೆ ಇದರ ಪರಿಣಾಮ ಹೆಚ್ಚು ಎನ್ನಲಾಗಿದೆ.

“ರಾಜಕೀಯವಾಗಿ ಲಾಭದಾಯಕವಾದಾಗಲೆಲ್ಲಾ ಸರ್ಕಾರವು ನಿಮ್ಮ ಮಾರ್ಕೆಟಿಂಗ್ ಮಾರ್ಜಿನ್‌ಗಳನ್ನು ಕಡಿತಗೊಳಿಸಿದಾಗ ಯಾರಾದರೂ ಹೆಚ್ಚಿನ ಮೌಲ್ಯಮಾಪನವನ್ನು (ಖಾಸಗೀಕರಣಗೊಳ್ಳಲಿರುವ ಬಿಪಿಸಿಎಲ್ ಕಂಪನಿಗೆ) ಏಕೆ ನೀಡುತ್ತಾರೆ ಎಂದು ವಿಶ್ಲೇಷಕರೊಬ್ಬರು ಹೇಳಿದ್ದಾರೆ. ಖಾಸಗೀಕರಣದ ನಂತರವೂ, ಉಳಿದ ಸರ್ಕಾರಿ ಸ್ವಾಮ್ಯದ ರಿಫೈನರ್‌ಗಳು – ಐಒಸಿಎಲ್ ಮತ್ತು ಎಚ್‌ಪಿಸಿಎಲ್- ಚುನಾವಣೆಯ ಸಮಯದಲ್ಲಿ ಬೆಲೆಗಳನ್ನು ಕಡಿತಗೊಳಿಸಿದರೆ, ಬಿಪಿಸಿಎಲ್ ಕೂಡ ಆ ಬೆಲೆಗಳೊಂದಿಗೆ ಹೊಂದಿಕೆಯಾಗಬೇಕಾಗುತ್ತದೆ.


ಇದನ್ನೂ ಓದಿ: ಇವಿಎಂ ಸುರಕ್ಷತೆಯ ಬಗ್ಗೆ ಅನುಮಾನ ವ್ಯಕ್ತಪಡಿಸಿದ ಡಿಎಂಕೆ ಮುಖ್ಯಸ್ಥ ಸ್ಟಾಲಿನ್!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...