Homeಮುಖಪುಟ'ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದರು, ಪ್ರಾಣಿಯಂತೆ ಥಳಿಸಿದರು' : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ ಮಾಡಿದ ಪತ್ರಕರ್ತ

‘ಗುಪ್ತಾಂಗಕ್ಕೆ ಪೆಟ್ರೋಲ್ ಸುರಿದರು, ಪ್ರಾಣಿಯಂತೆ ಥಳಿಸಿದರು’ : ಪೊಲೀಸರ ವಿರುದ್ಧ ಚಿತ್ರಹಿಂಸೆ ಆರೋಪ ಮಾಡಿದ ಪತ್ರಕರ್ತ

- Advertisement -
- Advertisement -

ಗುಜರಾತ್‌ನ ರಾಜ್‌ಕೋಟ್‌ನ ಸ್ಥಳೀಯ ಪತ್ರಕರ್ತ ಸುದೇಶ್ ವಡೇಚಾ ಎಂಬವರು, ಪೊಲೀಸ್ ಕಸ್ಟಡಿಯಲ್ಲಿ ತನಗೆ ತೀವ್ರ ಚಿತ್ರ ಹಿಂಸೆ ನೀಡಲಾಗಿದೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

‘ಖಬರ್ ರಾಜ್‌ಕೋಟ್ ಕಿ ನ್ಯೂಸ್’ ಎಂಬ ಆನ್‌ಲೈನ್ ಮಾಧ್ಯಮವನ್ನು ನಡೆಸುತ್ತಿರುವ ವಡೇಚಾ, ರಾಜ್‌ಕೋಟ್ ಅಪರಾಧ ವಿಭಾಗದ ಉಪ ಪೊಲೀಸ್ ಆಯುಕ್ತ (ಡಿಸಿಪಿ) ಜಗದೀಶ್ ಬಂಗದ್ವಾ ಮತ್ತು ಅವರ ತಂಡ ತನ್ನನ್ನು ಕ್ರೂರವಾಗಿ ಥಳಿಸಿ ಅಮಾನವೀಯವಾಗಿ ನಡೆಸಿಕೊಂಡಿದೆ ಎಂದು ಹೇಳಿದ್ದಾರೆ.

ಪೊಲೀಸರು ಈ ಆರೋಪಗಳನ್ನು ಸ್ಪಷ್ಟವಾಗಿ ನಿರಾಕರಿಸಿದ್ದು, ಇದು ‘ನಾಟಕ’ ಎಂದು ಕರೆದಿದ್ದಾರೆ.

ಸುದ್ದಿ ಸಂಸ್ಥೆ ‘ದಿ ವೈರ್’ ಜೊತೆ ದೂರವಾಣಿಯಲ್ಲಿ ಮಾತನಾಡಿರುವ ವಡೇಚಾ, “ಮನೆಯಿಂದ ಸುಮಾರು ಎರಡು ಕಿಲೋಮೀಟರ್ ದೂರದಲ್ಲಿರುವ ಸ್ಥಳದಿಂದ ಮಾರ್ಚ್ 22ರಂದು ಪೊಲೀಸರು ನನ್ನನ್ನು ಬಂಧಿಸಿದ್ದರು” ಎಂದು ತಿಳಿಸಿದ್ದಾರೆ.

“ಅಪರಾಧ ವಿಭಾಗದ ಸಿಬ್ಬಂದಿ ಯಾವುದೇ ವಿವರಣೆಯನ್ನು ನೀಡದೆ ನನ್ನನ್ನು ಕರೆದೊಯ್ದರು. ನಂತರ ಸುಲಿಗೆ ಪ್ರಕರಣವೊಂದಕ್ಕೆ ಸಂಬಂಧಿಸಿದಂತೆ ನನ್ನ ಮೇಲೆ ಹಲ್ಲೆ ನಡೆಸಿದರು. ನನ್ನ ಬಟ್ಟೆಗಳನ್ನು ಬಿಚ್ಚಿ ಜನನಾಂಗಕ್ಕೆ ಪೆಟ್ರೋಲ್ ಸುರಿದಿದ್ದಾರೆ. ತಲೆಕೆಳಗಾಗಿ ನೇತುಹಾಕಿ ಪ್ರಾಣಿಯಂತೆ ಥಳಿಸಿದ್ದಾರೆ, ಇದರಿಂದಾಗಿ ಕಿವಿಯ ತಮಟೆ ಹರಿದಿದೆ, ಕಾಲು ಮುರಿದಿದೆ ಮತ್ತು ಬೆನ್ನು ಹಾಗೂ ತಲೆಗೆ ತೀವ್ರ ಗಾಯಗಳಾಗಿವೆ” ಎಂದು ಹೇಳಿಕೊಂಡಿದ್ದಾರೆ.

ವಡೇಚಾ ಅವರ ಪ್ರಕಾರ, ಮಾರ್ಚ್ 23ರಂದು ಅವರನ್ನು ರಾಜ್‌ಕೋಟ್ ಸಿವಿಲ್ ಆಸ್ಪತ್ರೆಗೆ ದಾಖಲಿಸಲಾಗಿತ್ತು.

“ಬಂಧನದಿಂದ 24 ಗಂಟೆಗಳ ನಂತರ ನಾನು ಬಿಡುಗಡೆಯಾದಾಗ, ನನ್ನ ಸ್ಥಿತಿ ಮತ್ತಷ್ಟು ಹದಗೆಟ್ಟಿತು. ನಾನು 108 ಅಂಬ್ಯುಲೆನ್ಸ್ ಮೂಲಕ ಆಸ್ಪತ್ರೆಗೆ ತೆರಳಿದ್ದೆ, ಆದರೆ ಅಲ್ಲೂ ಸಹ ನನ್ನನ್ನು ದಾಖಲಿಸಿಕೊಳ್ಳದಂತೆ ಪೊಲೀಸ್ ಅಧಿಕಾರಿಗಳು ವೈದ್ಯರ ಮೇಲೆ ಒತ್ತಡ ಹೇರುತ್ತಿದ್ದರು. ನನ್ನ ಮೇಲೆ ಸುಳ್ಳು ಮೊಕದ್ದಮೆಗಳನ್ನು ಹೂಡುವುದಾಗಿ ಮತ್ತು ನನ್ನ ಮನೆಯನ್ನು ಕೆಡವುವುದಾಗಿ ನನಗೆ ಬೆದರಿಕೆ ಹಾಕಿದ್ದಾರೆ” ಎಂದು ವಡೇಚಾ ತಿಳಿಸಿದ್ದಾರೆ.

ಈ ಸಂಪೂರ್ಣ ಪ್ರಕರಣವು ಅಸಿಮ್ ಆಗಮ್ ಎಂಬ ಬಿಲ್ಡರ್‌ಗೆ ಸಂಬಂಧಿಸಿದೆ ಎಂದು ವಡೇಚಾ ಹೇಳಿದ್ದಾರೆ. ಅಸಿಮ್ ಅವರ ಅಕ್ರಮ ನಿರ್ಮಾಣ ಚಟುವಟಿಕೆಗಳ ಬಗ್ಗೆ ವಡೇಚಾ ಈ ಹಿಂದೆ ವರದಿ ಮಾಡಿದ್ದರು ಎನ್ನಲಾಗಿದೆ.

“ನನ್ನ ವಿರುದ್ಧ ಯಾವುದೇ ಗಂಭೀರವಾದ ದೂರು ಇರಲಿಲ್ಲ, ಆದರೂ ಅವರ (ಬಿಲ್ಡರ್ ಅಸಿಮ್) ಸೂಚನೆಯ ಮೇರೆಗೆ ನನ್ನನ್ನು ಈ ಪ್ರಕರಣದಲ್ಲಿ ಸಿಲುಕಿಸಿ, ಈ ರೀತಿ ಹಲ್ಲೆ ನಡೆಸಲಾಗಿದೆ” ಎಂದು ವಡೇಚಾ ಆರೋಪಿಸಿದ್ದಾರೆ.

ಈ ಕುರಿತು ಮಾತನಾಡಿದ ರಾಜ್‌ಕೋಟ್ ಕ್ರೈಂ ಬ್ರಾಂಚ್ ಡಿಸಿಪಿ ಬಂಗದ್ವಾ, ವಡೇಚಾ ಅವರ ಆರೋಪಗಳನ್ನು ತಳ್ಳಿಹಾಕಿದ್ದಾರೆ ಎಂದು ದಿ ವೈರ್ ವರದಿ ತಿಳಿಸಿದೆ.

“ನಾವು ಅವರ ಮೇಲೆ ಯಾವುದೇ ದೈಹಿಕ ಹಲ್ಲೆ ನಡೆಸಿಲ್ಲ. ಅವರು ಒಬ್ಬ ಅಪರಾಧಿಯಾಗಿದ್ದು, ಅವರ ವಿರುದ್ಧ ಈಗಾಗಲೇ ಹಲವಾರು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ” ಎಂದು ಬಂಗದ್ವಾ ಹೇಳಿದ್ದಾರೆ.

ಡಿಸಿಪಿ ಕೆಲವು ದಾಖಲೆಗಳನ್ನು ಹಂಚಿಕೊಂಡಿದ್ದು, ಅವುಗಳ ಪ್ರಕಾರ 2020ಮತ್ತು 2025ರ ನಡುವೆ ವಡೇಚಾ ವಿರುದ್ಧ ಎಂಟು ಪ್ರಕರಣಗಳು ದಾಖಲಾಗಿವೆ. ಇವುಗಳಲ್ಲಿ ಹೆಚ್ಚಿನವು ಶಾಂತಿ ಭಂಗ ಮತ್ತು ಸ್ಥಳೀಯ ವಿವಾದಗಳಿಗೆ ಸಂಬಂಧಿಸಿವೆ. ಕೆಲವು ಪ್ರಕರಣಗಳಲ್ಲಿ ದೂರುದಾರರೇ ತದನಂತರ ಅವುಗಳನ್ನು ವಜಾಗೊಳಿಸುವಂತೆ ಶಿಫಾರಸು ಮಾಡಿದ್ದಾರೆ ಎಂದು ದಿ ವೈರ್ ಉಲ್ಲೇಖಿಸಿದೆ.

ತೀರಾ ಇತ್ತೀಚಿನ ಪ್ರಕರಣವು 2026ರ ಮಾರ್ಚ್ 10ಕ್ಕೆ ಸಂಬಂಧಿಸಿದ್ದಾಗಿದ್ದು, ‘ಭಾಗ್ಯಲಕ್ಷ್ಮಿ ಸ್ಕ್ರ್ಯಾಪ್’ ಎಂಬ ಸಂಸ್ಥೆಯ ಮಾಲೀಕ ಭರತ್‌ಭಾಯಿ ವೀರ್‌ಜಿಭಾಯಿ ಸಾಗರ್ ಎಂಬವರು ವಡೇಚಾ ತಮ್ಮ ವ್ಯವಹಾರದ ಸ್ಥಳದ ವಿಡಿಯೋ ಚಿತ್ರೀಕರಿಸಿ ದೊಡ್ಡ ಮೊತ್ತದ ಹಣ ಸುಲಿಗೆಗೆ ಯತ್ನಿಸಿದ್ದಾರೆ ಎಂದು ಆರೋಪಿಸಿದ್ದಾರೆ ಎಂದು ವರದಿ ವಿವರಿಸಿದೆ.

ಸಾಗರ್ ಅವರಿಗೆ ಆ ವಿಡಿಯೋದಲ್ಲಿದ್ದ ವಿಷಯದ ಬಗ್ಗೆ ನಿಖರವಾಗಿ ಏನನ್ನೂ ಹೇಳಲು ಸಾಧ್ಯವಾಗಿಲ್ಲ. ಪೊಲೀಸರಂತೆಯೇ ಅವರು ಕೂಡ ದೈಹಿಕ ಹಲ್ಲೆಯ ಆರೋಪಗಳನ್ನು ‘ನಾಟಕ’ ಎಂದು ಕರೆದಿದ್ದಾರೆ.

ಆದಾಗ್ಯೂ, ವಡೇಚಾ ಅವರ ವಿರುದ್ಧ ಸುಲಿಗೆ ಪ್ರಕರಣಕ್ಕೆ ಸಂಬಂಧಿಸಿದಂತೆ ಅಧಿಕೃತ ಎಫ್‌ಐಆರ್ ದಾಖಲಾಗಿಲ್ಲ. ಬದಲಿಗೆ ಕೇವಲ ಸಾಗರ್ ಅವರು ಡಿಸಿಪಿ ಕಚೇರಿಗೆ ಸಲ್ಲಿಸಿದ ಅರ್ಜಿಗೆ ಸಂಬಂಧಿಸಿದಂತೆ ಅವರನ್ನು ಬಂಧಿಸಲಾಗಿದೆ. ಇದು ಗಮನಾರ್ಹ ಸಂಗತಿ ಎಂದು ದಿ ವೈರ್ ವರದಿ ಹೇಳಿದೆ.

ದಿ ವೈರ್ ಹಿಂದಿ ಜೊತೆ ಮಾತನಾಡಿದ ವಡೇಚಾ, ಸುಲಿಗೆ ಆರೋಪಗಳನ್ನು ಸ್ಪಷ್ಟವಾಗಿ ನಿರಾಕರಿಸಿದ್ದಾರೆ.

ಈ ನಡುವೆ, ಮಾರ್ಚ್ 27ರಂದು ವಡ್ಗಾಮ್ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಶಾಸಕ ಜಿಗ್ನೇಶ್ ಮೇವಾನಿ ಅವರು ರಾಜ್‌ಕೋಟ್ ಸಿವಿಲ್ ಆಸ್ಪತ್ರೆಯಲ್ಲಿ ವಡೇಚಾ ಅವರನ್ನು ಭೇಟಿ ಮಾಡಿದ್ದು, ಈ ಕುರಿತ ವಿಡಿಯೋವನ್ನು ಸಾಮಾಜಿಕ ಮಾಧ್ಯಮದಲ್ಲಿ ಹಂಚಿಕೊಂಡಿದ್ದಾರೆ.

ಸುದ್ದಿ ಸಂಸ್ಥೆ ಪಿಟಿಐ ವರದಿ ಪ್ರಕಾರ, ಮೇವಾನಿ ಅವರು ಗುಜರಾತ್‌ ಮುಖ್ಯಮಂತ್ರಿಗೆ ಪತ್ರ ಬರೆದಿದ್ದು, ಡಿಸಿಪಿ ವಿರುದ್ಧ ಎಫ್‌ಐಆರ್ ದಾಖಲಿಸಲು ಹಾಗೂ ಅವರ ಬಂಧನ ಮತ್ತು ವಜಾಕ್ಕೆ ಒತ್ತಾಯಿಸಿದ್ದಾರೆ.

ಪಿಟಿಐ ಜೊತೆ ಮಾತನಾಡಿದ ಡಿಸಿಪಿ ಬಂಗದ್ವಾ, “ಅವರ (ವಡೇಚಾ) ವಿರುದ್ಧ ಕ್ರಿಮಿನಲ್ ದೂರು ಬಾಕಿ ಇದೆ. ತನಿಖೆಯಿಂದ ತಪ್ಪಿಸಿಕೊಳ್ಳಲು ಅವರು ಇದೆಲ್ಲವನ್ನೂ ಮಾಡುತ್ತಿದ್ದಾರೆ” ಎಂದು ಹೇಳಿದ್ದಾರೆ. ಶಾಸಕ ಮೇವಾನಿ ‘ವೈಯಕ್ತಿಕ ಹಿತಾಸಕ್ತಿಗಾಗಿ’ ಈ ವಿಷಯವನ್ನು ಮುನ್ನಲೆಗೆ ತರುತ್ತಿದ್ದಾರೆ ಎಂದು ಆರೋಪಿಸಿದ್ದಾರೆ.

ಗುಜರಾತ್‌ನ ಮಾಜಿ ಐಪಿಎಸ್ ಅಧಿಕಾರಿ ರಮೇಶ್ ಸವಾನಿ ಕೂಡ ಈ ವಿಷಯದ ಬಗ್ಗೆ ಪ್ರತಿಕ್ರಿಯಿಸಿದ್ದಾರೆ. ಫೇಸ್‌ಬುಕ್ ಪೋಸ್ಟ್‌ನಲ್ಲಿ ಅವರು, ವಡೇಚಾ ಪೊಲೀಸರ ವಿರುದ್ದ ಮಾಡಿರುವ ಆರೋಪಗಳನ್ನು ಅತ್ಯಂತ ಗಂಭೀರವೆಂದು ಬಣ್ಣಿಸಿದ್ದು, “ನ್ಯಾಯಾಲಯ ಕೂಡ ಇಂತಹ ಶಿಕ್ಷೆ ವಿಧಿಸಲು ಸಾಧ್ಯವಿಲ್ಲ” ಎಂದು ಹೇಳಿದ್ದಾರೆ.

“ಒಂದು ವೇಳೆ ಆರೋಪಗಳು ನಿಜವಾಗಿದ್ದರೆ, ಇಂತಹ ಕ್ರೌರ್ಯವನ್ನು ಎಸಗಲು ಪೊಲೀಸರು ಕಾನೂನಿನ ಮಿತಿಗಳನ್ನು ಯಾಕೆ ಮೀರಿದರು?” ಎಂದು ಅವರು ಪ್ರಶ್ನಿಸಿದ್ದಾರೆ.

“ವಡೇಚಾ ವಿರುದ್ಧ ಯಾವುದೇ ಗಂಭೀರ ಕ್ರಿಮಿನಲ್ ಪ್ರಕರಣಗಳು ಬಾಕಿ ಇಲ್ಲ; ಆದರೂ, ಅವರ ಮೇಲೆ ಇಂತಹ ದೌರ್ಜನ್ಯ ನಡೆದಿದ್ದರೆ, ಅದು ಗಂಭೀರ ಕಳವಳದ ವಿಷಯ. ಇಂತಹ ಕ್ರೌರ್ಯವನ್ನು ಸಾಮಾನ್ಯವಾಗಿ ದುರ್ಬಲ ಮತ್ತು ಅಂಚಿನಲ್ಲಿರುವ ಸಮುದಾಯಗಳಿಗೆ ಸೇರಿದ ವ್ಯಕ್ತಿಗಳ ಮೇಲೆ ಎಸಗಲಾಗುತ್ತದೆ” ಎಂದು ಸವಾನಿ ಹೇಳಿದ್ದಾರೆ.

ಪ್ರಸ್ತುತ, ಈ ಪ್ರಕರಣದಲ್ಲಿ ಎರಡೂ ಕಡೆಯವರು ಮಾಡಿರುವ ಆರೋಪಗಳು ಮತ್ತು ಸಮರ್ಥನೆಗಳು ಸಂಪೂರ್ಣವಾಗಿ ತದ್ವಿರುದ್ದವಾಗಿವೆ. ಒಂದು ಕಡೆ ಪತ್ರಕರ್ತ ಗಂಭೀರ ಆರೋಪಗಳನ್ನು ಮಾಡುತ್ತಿದ್ದರೆ, ಮತ್ತೊಂದು ಕಡೆ ಪೊಲೀಸರು ಅವುಗಳನ್ನು ನಿರಾಕರಿಸುತ್ತಿದ್ದಾರೆ.





ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...