Homeಮುಖಪುಟಪೆಟ್ರೋಲ್ ಬೆಲೆ ಏರಿಕೆ ಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ - ಬಿಜೆಪಿ ಮುಖಂಡ

ಪೆಟ್ರೋಲ್ ಬೆಲೆ ಏರಿಕೆ ಚುನಾವಣೆಯ ಮೇಲೆ ಪರಿಣಾಮ ಬೀರುವುದಿಲ್ಲ – ಬಿಜೆಪಿ ಮುಖಂಡ

"ನಾನು ಪ್ರತಿಪಕ್ಷದಲ್ಲಿದ್ದಾಗ ಬೆಲೆ ಏರಿಕೆಯ ಬಗ್ಗೆ ಪ್ರತಿಭಟನೆ ನಡೆಸಿದೆ. ಇದು ದೊಡ್ಡ ವಿಷಯವಲ್ಲ. ನಾವು ಪ್ರತಿಪಕ್ಷದಲ್ಲಿದ್ದಾಗ ಪ್ರತಿಭಟಿಸುತ್ತೇವೆ. ಇಂಧನ ಬೆಲೆಗಳ ಬಗ್ಗೆ ಸಾರ್ವಜನಿಕರು ತಲೆಕೆಡಿಸಿಕೊಳ್ಳುವುದಿಲ್ಲ..."

- Advertisement -
- Advertisement -

“ಪೆಟ್ರೋಲ್ ಬೆಲೆ ಏರಿಕೆಯ ಬಗ್ಗೆ ಸಾರ್ವಜನಿಕರಿಗೆ ಕಾಳಜಿಯಿಲ್ಲ, ಇದು ರಾಜ್ಯದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮೇಲೆ ಯಾವುದೇ ಪರಿಣಾಮ ಬೀರುವುದಿಲ್ಲ” ಎಂದು ಬಿಜೆಪಿಯ ಕೇರಳ ಘಟಕದ ಅಧ್ಯಕ್ಷ ಕೆ ಸುರೇಂದ್ರನ್ ಮಂಗಳವಾರ ಹೇಳಿದ್ದಾರೆ.

ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಸೋಮವಾರ ಸತತ ಆರನೇ ದಿನವೂ ಏರಿಕೆಯಾಗಿದ್ದು, ಪ್ರತಿ ಲೀಟರ್‌ಗೆ 26-30 ಪೈಸೆ ಏರಿಕೆಯಾಗಿದೆ.

ದೆಹಲಿಯಲ್ಲಿ ಪೆಟ್ರೋಲ್ ದರ ಲೀಟರ್‌ಗೆ 83.41 ರೂ.ಗಳಿಂದ, 83.71 ರೂ.ಗೆ ಏರಿಕೆಯಾಗಿದೆ. ಡೀಸೆಲ್ ಪ್ರತಿ ಲೀಟರ್‌ಗೆ 73.61 ರಿಂದ ರೂ. 73.87 ರೂಪಾಯಿಗೆ ಏರಿಕೆಯಾಗಿದೆ.

ಇದನ್ನೂ ಓದಿ: ಪಿಸ್ತೂಲ್-ಪೆಟ್ರೋಲ್-ಫಾರ್ಮಾ-ಡ್ರಗ್-ಡಾಲರ್ ಪ್ರಪಂಚವನ್ನು ನಿಯಂತ್ರಿಸುತ್ತಿರುವ ಪಂಚ ಅಸ್ತ್ರಗಳು!

ಕಾಂಗ್ರೆಸ್ ಪಕ್ಷವೇ ಬೆಲೆ ನಿಯಂತ್ರಣ ಪ್ರಾಧಿಕಾರವನ್ನು ತೈಲ ಕಂಪನಿಗಳಿಗೆ ಹಸ್ತಾಂತರಿಸಿದೆ ಎಂದು ಸುರೇಂದ್ರನ್ ಆರೋಪಿಸಿದ್ದಾರೆ.

“ದೇಶದಲ್ಲಿ ಇಂಧನ ದರ ಏರಿಕೆಯು ಸಾರ್ವಜನಿಕರ ಮೇಲೆ ಪರಿಣಾಮ ಬೀರುವುದಿಲ್ಲ ಮತ್ತು ಇದು ಚುನಾವಣೆಯಲ್ಲಿ ಪರಿಗಣಿಸಬಹುದಾದ ಒಂದು ಅಂಶವಲ್ಲ. ತೈಲ ಕಂಪನಿಗಳಿಗೆ ದರ ನಿರ್ಧರಿಸುವ ಅಧಿಕಾರವನ್ನು ಕಾಂಗ್ರೆಸ್ ಪಕ್ಷವೇ ನೀಡಿದ್ದು” ಎಂದು ಸುರೇಂದ್ರನ್ ಸುದ್ದಿಗಾರರಿಗೆ ತಿಳಿಸಿದರು.

ಮೂರು ಹಂತದ ಸ್ಥಳೀಯ ಸಂಸ್ಥೆಗಳ ಚುನಾವಣೆಯ ಮೊದಲ ಹಂತದ ಚುನಾವಣೆ ಇಂದು ನಡೆಯುತ್ತಿದೆ. ಈ ಸಂದರ್ಭದಲ್ಲಿ ಅವರ ಅಭಿಪ್ರಾಯ ವ್ಯಕ್ತವಾಗಿದೆ.

ಇದನ್ನೂ ಓದಿ: ಮುಳುಗುತ್ತಿರುವ ಭಾರತ ಮತ್ತು ಅದರೊಳಗಿರುವ ನಾವು: ದೇವನೂರು ಮಹಾದೇವ

ಯುಪಿಎ ಆಳ್ವಿಕೆಯಲ್ಲಿ ಇಂಧನ ಬೆಲೆ ಏರಿಕೆಯ ವಿರುದ್ಧ ಸುರೇಂದ್ರನ್ ತನ್ನ ಸ್ಕೂಟರ್ ಅನ್ನು ತಳ್ಳಿಕೊಂಡು ಹೋಗಿ ಪ್ರತಿಭಟನೆ ಮಾಡಿದ್ದರ ಬಗ್ಗೆ ಕೇಳಿದಾಗ, “ಇಂದು ಇದನ್ನು ಮಾಡಲು ಪ್ರತಿಪಕ್ಷಗಳಲ್ಲಿ ಜನರಿದ್ದಾರೆ” ಎಂದು ಹೇಳಿದರು.

“ನಾನು ಪ್ರತಿಪಕ್ಷದಲ್ಲಿದ್ದಾಗ ಇಂಧನ ಬೆಲೆ ಏರಿಕೆಯ ಬಗ್ಗೆ ಪ್ರತಿಭಟನೆ ನಡೆಸಿದೆ. ಇದು ದೊಡ್ಡ ವಿಷಯವಲ್ಲ. ನಾವು ಪ್ರತಿಪಕ್ಷದಲ್ಲಿದ್ದಾಗ ಪ್ರತಿಭಟಿಸುತ್ತೇವೆ. ಇಂಧನ ಬೆಲೆಗಳ ಬಗ್ಗೆ ಸಾರ್ವಜನಿಕರು ತಲೆಕೆಡಿಸಿಕೊಳ್ಳುವುದಿಲ್ಲ. ನಾವು ಉಚಿತ ಅಕ್ಕಿ, ಅಡುಗೆ ಅನಿಲವನ್ನು ನೀಡುತ್ತಿದ್ದೇವೆ. ಅಗ್ಗದ ದರದಲ್ಲಿ ಔಷಧಿ, ಕಿಸಾನ್ ಸಮ್ಮಾನ್ ನಿಧಿ ಮತ್ತು ಸಾರ್ವಜನಿಕರಿಗೆ ಇತರ ಪ್ರಯೋಜನಗಳನ್ನು ಒದಗಿಸುತ್ತಿದ್ದೇವೆ. ಅದಕ್ಕಾಗಿಯೇ ನಾವು ದೇಶಾದ್ಯಂತ ಎಲ್ಲಾ ಚುನಾವಣೆಗಳನ್ನು ಗೆಲ್ಲುತ್ತಿದ್ದೇವೆ “ಎಂದು ಸುರೇಂದ್ರನ್ ಹೇಳಿದರು.

ಇದನ್ನೂ ಓದಿ: ಅತೀ ದೊಡ್ಡ ಮತ್ತು ವಿಶ್ವಾಸಾರ್ಹ ಸರ್ವೆ ಹೇಳುತ್ತಿದೆ: ಕೇಂದ್ರ ಸರ್ಕಾರದ ಸಾಧನೆ ಸಾಲದು

ಯುಪಿಎ ಆಳ್ವಿಕೆಯಲ್ಲಿ ದೇಶದಲ್ಲಿ ಪೆಟ್ರೋಲ್ ಬೆಲೆ 87 ರೂ. ಮತ್ತು ಈಗ ಅದು ಸುಮಾರು 83 ರೂ. ಇದೆ ಎಂದು ಸುರೇಂದ್ರನ್ ಹೇಳಿದರು.

ಇದಕ್ಕೆ ಪ್ರತಿಕ್ರಿಯಿಸಿದ ಪತ್ರಕರ್ತರು, ಸರಿಯಾದ ಬೆಲೆ ಸುಮಾರು 67 ರೂ ಎಂದು ಹೇಳಿದಾಗ, ಸುರೇಂದ್ರನ್ ಅದನ್ನು ತಳ್ಳಿಹಾಕಿದರು. ಇದು ಕಾಂಗ್ರೆಸ್ ಮತ್ತು ಸಿಪಿಐ (ಎಂ) ನೀಡಿದ ಸಮರ್ಥನೆಯ ಭಾಗವಾಗಿದೆ ಎಂದು ಹೇಳಿದರು.


ಇದನ್ನೂ ಓದಿ: ಮದುವೆಯಲ್ಲಿ ಗಿಫ್ಟ್ ಬದಲು ಹೋರಾಟ ನಿರತ ರೈತರಿಗಾಗಿ ದೇಣಿಗೆ ಸಂಗ್ರಹಿಸಿದ ಕುಟುಂಬ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...