Homeಕರ್ನಾಟಕಸತತ 7ನೇ ದಿನವೂ ಪೆಟ್ರೋಲ್‌ ದರ ಹೆಚ್ಚಳ: ಗುಲ್ಬರ್ಗಾದಲ್ಲಿ 1.57 ರೂ., ಬಳ್ಳಾರಿಯಲ್ಲಿ 1.11 ರೂ....

ಸತತ 7ನೇ ದಿನವೂ ಪೆಟ್ರೋಲ್‌ ದರ ಹೆಚ್ಚಳ: ಗುಲ್ಬರ್ಗಾದಲ್ಲಿ 1.57 ರೂ., ಬಳ್ಳಾರಿಯಲ್ಲಿ 1.11 ರೂ. ಏರಿಕೆ!

- Advertisement -
- Advertisement -

ಕಳೆದ ಎಂಟು ದಿನಗಳಲ್ಲಿ ಏಳನೇ ಬಾರಿಗೆ ಮಂಗಳವಾರ ಮತ್ತೆ ಇಂಧನ ಬೆಲೆ ಏರಿಕೆಯಾಗಿದೆ. ರಾಜ್ಯ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ, ದೆಹಲಿಯಲ್ಲಿ ಪೆಟ್ರೋಲ್ ದರವನ್ನು ಲೀಟರ್‌ಗೆ 80 ಪೈಸೆ ಮತ್ತು ಡೀಸೆಲ್ ಲೀಟರ್‌ಗೆ 70 ಪೈಸೆಗಳಷ್ಟು ಹೆಚ್ಚಿಸಲಾಗಿದೆ. ಈ ಏರಿಕೆಯೊಂದಿಗೆ ರಾಜ್ಯದಲ್ಲೂ ಇಂಧನ ದರ ಹೆಚ್ಚಳವಾಗಿದ್ದು, ಪೆಟ್ರೋಲ್‌‌ 84 ಪೈಸೆ ಹೆಚ್ಚಿಸಲಾಗದ್ದು, ಪ್ರತಿ ಲೀಟರ್‌ಗೆ 106.13 ರೂ.ಗೆ ತಲುಪಿದೆ. ಡೀಸೆಲ್ ದರ 69 ಪೈಸೆ ಹೆಚ್ಚಿಸಲಾಗಿದ್ದು, ಪ್ರತಿ ಲೀಟರ್‌ಗೆ 90.19 ರೂ.ಗೆ ತಲುಪಿದೆ.

ದೇಶಾದ್ಯಂತ ದರಗಳನ್ನು ಹೆಚ್ಚಿಸಲಾಗಿದ್ದು, ಸ್ಥಳೀಯ ತೆರಿಗೆಯನ್ನು ಅವಲಂಬಿಸಿ ರಾಜ್ಯದಿಂದ ರಾಜ್ಯಕ್ಕೆ ದರಗಳು ಬದಲಾಗುತ್ತವೆ. ರಾಜ್ಯದಲ್ಲಿ ಕಳೆದ ಹತ್ತು ದಿನಗಳಲ್ಲಿ ಇಂಧನ ದರ ಏರಿಕೆ ಚಿತ್ರ ಕೆಳಗಿದೆ. ಗಮನಿಸಿ.

ಈ ದರ ಹೆಚ್ಚಳದೊಂದಿಗೆ ಬೆಂಗಳೂರಿನಲ್ಲಿ ಪ್ರತಿ ಲೀಟರ್‌‌ ಪೆಟ್ರೋಲ್‌ಗೆ 84 ಪೈಸೆ ಬೆಲೆ ಹೆಚ್ಚಾಗಿದ್ದು, 105.62 ರೂ.ಗೆ ತಲುಪಿದೆ. ಡೀಸೆಲ್‌ ಪ್ರತಿ ಲೀಟರ್‌ಗೆ 68 ಪೈಸೆ ಹೆಚ್ಚಾಗಿದ್ದು, 89.70 ರೂ. ತಲುಪಿದೆ. ರಾಜ್ಯದಲ್ಲೇ ಅತೀ ಹೆಚ್ಚು ಪೆಟ್ರೋಲ್‌ ದರ ಹೆಚ್ಚಿರುವ ಜಿಲ್ಲೆಯಾಗಿ ಚಿಕ್ಕಮಗಳೂರು ಹೊರಹೊಮ್ಮಿದ್ದು, ಪ್ರತಿ ಲೀಟರ್‌‌ ಪೆಟ್ರೋಲ್‌ ಬೆಲೆ 107.95 ರೂ. ಗೆ ತಲುಪಿದ್ದು, ಡೀಸೆಲ್ ದರ 69 ಪೈಸೆ ಹೆಚ್ಚಳದೊಂದಿಗೆ 91.71 ರೂ. ಗೆ ಏರಿಕೆಯಾಗಿದೆ.

ಇದನ್ನೂ ಓದಿ: ಚುನಾವಣೆ ಮುಗಿದ ಕೂಡಲೇ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಸಿದ್ದತೆ: ಕಾಂಗ್ರೆಸ್ ವಿರೋಧ

ಗುಲ್ಬರ್ಗಾ ಜಿಲ್ಲೆಯಲ್ಲಿ ಇಂದು ಪೆಟ್ರೋಲ್ ಬೆಲೆ 1.57 ಏರಿಕೆಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ಗೆ 106.07 ರೂ. ಆಗಿದೆ. ಡೀಸೆಲ್ ಬೆಲೆ 1.34 ಹೆಚ್ಚಳವಾಗಿದ್ದು ಇದರೊಂದಿಗೆ ಪ್ರತಿ ಲೀಟರ್‌ ಬೆಲೆ 90.13 ರೂ. ಗೆ ತಲುಪಿದೆ. ಬಳ್ಳಾರಿಯಲ್ಲೂ ಇಂದು ಪೆಟ್ರೋಲ್‌ ಬೆಲೆ 1.11 ರೂ. ಹೆಚ್ಚಿಸಲಾಗಿದೆ. ಉಳಿದಂತೆ ಬಾಕಿ ಜಿಲ್ಲೆಗಳ ಬೆಲೆಗಳು ಕೆಳಗಿನಂತಿವೆ.

ಐದು ರಾಜ್ಯಗಳಲ್ಲಿ ಚುನಾವಣೆ ಇದ್ದುದರಿಂದ ಕಚ್ಚಾ ತೈಲ ಬೆಲೆ ಏರಿಕೆಯ ಹೊರತಾಗಿಯೂ ನಾಲ್ಕು ತಿಂಗಳ ಕಾಲ ಇಂಧನ ದರಗಳನ್ನು ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಏರಿಸಿರಲಿಲ್ಲ. ಇದರ ಬಂತರ ದರ ಪರಿಷ್ಕರಣೆ ಮಾರ್ಚ್ 22 ರ ನಂತರ ಮತ್ತೆ ಪ್ರಾರಂಭವಾಗಿತ್ತು.

ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂನಂತಹ ಸರ್ಕಾರಿ ತೈಲ ಸಂಸ್ಕರಣಾಗಾರಗಳು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿನ ಕಚ್ಚಾ ತೈಲ ಬೆಲೆಗಳು ಮತ್ತು ರೂಪಾಯಿ-ಡಾಲರ್ ವಿನಿಮಯ ದರಗಳನ್ನು ಗಣನೆಗೆ ತೆಗೆದುಕೊಂಡು ಪ್ರತಿದಿನ ಇಂಧನ ದರಗಳನ್ನು ಪರಿಷ್ಕರಿಸುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳನ್ನು ಪ್ರತಿದಿನ ಬೆಳಿಗ್ಗೆ 6 ರಿಂದ ಜಾರಿಗೆ ತರಲಾಗುತ್ತದೆ.

ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಮೇಲಿನ ಸಂಪೂರ್ಣ ಸೆಸ್ ತೆಗೆದುಹಾಕಿ: ತೆಲಂಗಾಣ ಸಿಎಂ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬನ್ನಿ ದೇಶದ ಜನಗಳೆಲ್ಲಾ ಕಾಶ್ಮೀರ್ ಫ಼ೈಲ್ಸ್ ನೋಡಿ. ಪೆಟ್ರೋಲ್ ಮತ್ತು ಡಿಸೇಲ್ ದರಗಳ ಬಗ್ಗೆ ಯೋಚನೆ ಬಿಡಿ…. ನಾಚಿಕೆಯಾಗಬೇಕು ಕೇಂದ್ರ ಸರಕಾರಕ್ಕೆ……..

LEAVE A REPLY

Please enter your comment!
Please enter your name here

- Advertisment -

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....