Homeಕರ್ನಾಟಕಸತತ 7ನೇ ದಿನವೂ ಪೆಟ್ರೋಲ್‌ ದರ ಹೆಚ್ಚಳ: ಗುಲ್ಬರ್ಗಾದಲ್ಲಿ 1.57 ರೂ., ಬಳ್ಳಾರಿಯಲ್ಲಿ 1.11 ರೂ....

ಸತತ 7ನೇ ದಿನವೂ ಪೆಟ್ರೋಲ್‌ ದರ ಹೆಚ್ಚಳ: ಗುಲ್ಬರ್ಗಾದಲ್ಲಿ 1.57 ರೂ., ಬಳ್ಳಾರಿಯಲ್ಲಿ 1.11 ರೂ. ಏರಿಕೆ!

- Advertisement -
- Advertisement -

ಕಳೆದ ಎಂಟು ದಿನಗಳಲ್ಲಿ ಏಳನೇ ಬಾರಿಗೆ ಮಂಗಳವಾರ ಮತ್ತೆ ಇಂಧನ ಬೆಲೆ ಏರಿಕೆಯಾಗಿದೆ. ರಾಜ್ಯ ಇಂಧನ ಚಿಲ್ಲರೆ ವ್ಯಾಪಾರಿಗಳ ಬೆಲೆ ಅಧಿಸೂಚನೆಯ ಪ್ರಕಾರ, ದೆಹಲಿಯಲ್ಲಿ ಪೆಟ್ರೋಲ್ ದರವನ್ನು ಲೀಟರ್‌ಗೆ 80 ಪೈಸೆ ಮತ್ತು ಡೀಸೆಲ್ ಲೀಟರ್‌ಗೆ 70 ಪೈಸೆಗಳಷ್ಟು ಹೆಚ್ಚಿಸಲಾಗಿದೆ. ಈ ಏರಿಕೆಯೊಂದಿಗೆ ರಾಜ್ಯದಲ್ಲೂ ಇಂಧನ ದರ ಹೆಚ್ಚಳವಾಗಿದ್ದು, ಪೆಟ್ರೋಲ್‌‌ 84 ಪೈಸೆ ಹೆಚ್ಚಿಸಲಾಗದ್ದು, ಪ್ರತಿ ಲೀಟರ್‌ಗೆ 106.13 ರೂ.ಗೆ ತಲುಪಿದೆ. ಡೀಸೆಲ್ ದರ 69 ಪೈಸೆ ಹೆಚ್ಚಿಸಲಾಗಿದ್ದು, ಪ್ರತಿ ಲೀಟರ್‌ಗೆ 90.19 ರೂ.ಗೆ ತಲುಪಿದೆ.

ದೇಶಾದ್ಯಂತ ದರಗಳನ್ನು ಹೆಚ್ಚಿಸಲಾಗಿದ್ದು, ಸ್ಥಳೀಯ ತೆರಿಗೆಯನ್ನು ಅವಲಂಬಿಸಿ ರಾಜ್ಯದಿಂದ ರಾಜ್ಯಕ್ಕೆ ದರಗಳು ಬದಲಾಗುತ್ತವೆ. ರಾಜ್ಯದಲ್ಲಿ ಕಳೆದ ಹತ್ತು ದಿನಗಳಲ್ಲಿ ಇಂಧನ ದರ ಏರಿಕೆ ಚಿತ್ರ ಕೆಳಗಿದೆ. ಗಮನಿಸಿ.

ಈ ದರ ಹೆಚ್ಚಳದೊಂದಿಗೆ ಬೆಂಗಳೂರಿನಲ್ಲಿ ಪ್ರತಿ ಲೀಟರ್‌‌ ಪೆಟ್ರೋಲ್‌ಗೆ 84 ಪೈಸೆ ಬೆಲೆ ಹೆಚ್ಚಾಗಿದ್ದು, 105.62 ರೂ.ಗೆ ತಲುಪಿದೆ. ಡೀಸೆಲ್‌ ಪ್ರತಿ ಲೀಟರ್‌ಗೆ 68 ಪೈಸೆ ಹೆಚ್ಚಾಗಿದ್ದು, 89.70 ರೂ. ತಲುಪಿದೆ. ರಾಜ್ಯದಲ್ಲೇ ಅತೀ ಹೆಚ್ಚು ಪೆಟ್ರೋಲ್‌ ದರ ಹೆಚ್ಚಿರುವ ಜಿಲ್ಲೆಯಾಗಿ ಚಿಕ್ಕಮಗಳೂರು ಹೊರಹೊಮ್ಮಿದ್ದು, ಪ್ರತಿ ಲೀಟರ್‌‌ ಪೆಟ್ರೋಲ್‌ ಬೆಲೆ 107.95 ರೂ. ಗೆ ತಲುಪಿದ್ದು, ಡೀಸೆಲ್ ದರ 69 ಪೈಸೆ ಹೆಚ್ಚಳದೊಂದಿಗೆ 91.71 ರೂ. ಗೆ ಏರಿಕೆಯಾಗಿದೆ.

ಇದನ್ನೂ ಓದಿ: ಚುನಾವಣೆ ಮುಗಿದ ಕೂಡಲೇ ಪೆಟ್ರೋಲ್-ಡೀಸೆಲ್ ಬೆಲೆ ಏರಿಕೆಗೆ ಸಿದ್ದತೆ: ಕಾಂಗ್ರೆಸ್ ವಿರೋಧ

ಗುಲ್ಬರ್ಗಾ ಜಿಲ್ಲೆಯಲ್ಲಿ ಇಂದು ಪೆಟ್ರೋಲ್ ಬೆಲೆ 1.57 ಏರಿಕೆಯಾಗಿದ್ದು, ಇದರೊಂದಿಗೆ ಜಿಲ್ಲೆಯಲ್ಲಿ ಪ್ರತಿ ಲೀಟರ್‌ ಪೆಟ್ರೋಲ್‌ಗೆ 106.07 ರೂ. ಆಗಿದೆ. ಡೀಸೆಲ್ ಬೆಲೆ 1.34 ಹೆಚ್ಚಳವಾಗಿದ್ದು ಇದರೊಂದಿಗೆ ಪ್ರತಿ ಲೀಟರ್‌ ಬೆಲೆ 90.13 ರೂ. ಗೆ ತಲುಪಿದೆ. ಬಳ್ಳಾರಿಯಲ್ಲೂ ಇಂದು ಪೆಟ್ರೋಲ್‌ ಬೆಲೆ 1.11 ರೂ. ಹೆಚ್ಚಿಸಲಾಗಿದೆ. ಉಳಿದಂತೆ ಬಾಕಿ ಜಿಲ್ಲೆಗಳ ಬೆಲೆಗಳು ಕೆಳಗಿನಂತಿವೆ.

ಐದು ರಾಜ್ಯಗಳಲ್ಲಿ ಚುನಾವಣೆ ಇದ್ದುದರಿಂದ ಕಚ್ಚಾ ತೈಲ ಬೆಲೆ ಏರಿಕೆಯ ಹೊರತಾಗಿಯೂ ನಾಲ್ಕು ತಿಂಗಳ ಕಾಲ ಇಂಧನ ದರಗಳನ್ನು ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಏರಿಸಿರಲಿಲ್ಲ. ಇದರ ಬಂತರ ದರ ಪರಿಷ್ಕರಣೆ ಮಾರ್ಚ್ 22 ರ ನಂತರ ಮತ್ತೆ ಪ್ರಾರಂಭವಾಗಿತ್ತು.

ಇಂಡಿಯನ್ ಆಯಿಲ್, ಭಾರತ್ ಪೆಟ್ರೋಲಿಯಂ ಮತ್ತು ಹಿಂದೂಸ್ತಾನ್ ಪೆಟ್ರೋಲಿಯಂನಂತಹ ಸರ್ಕಾರಿ ತೈಲ ಸಂಸ್ಕರಣಾಗಾರಗಳು ಅಂತರರಾಷ್ಟ್ರೀಯ ಮಾರುಕಟ್ಟೆಗಳಲ್ಲಿನ ಕಚ್ಚಾ ತೈಲ ಬೆಲೆಗಳು ಮತ್ತು ರೂಪಾಯಿ-ಡಾಲರ್ ವಿನಿಮಯ ದರಗಳನ್ನು ಗಣನೆಗೆ ತೆಗೆದುಕೊಂಡು ಪ್ರತಿದಿನ ಇಂಧನ ದರಗಳನ್ನು ಪರಿಷ್ಕರಿಸುತ್ತವೆ. ಪೆಟ್ರೋಲ್ ಮತ್ತು ಡೀಸೆಲ್ ಬೆಲೆಯಲ್ಲಿ ಯಾವುದೇ ಬದಲಾವಣೆಗಳನ್ನು ಪ್ರತಿದಿನ ಬೆಳಿಗ್ಗೆ 6 ರಿಂದ ಜಾರಿಗೆ ತರಲಾಗುತ್ತದೆ.

ಇದನ್ನೂ ಓದಿ: ಪೆಟ್ರೋಲ್, ಡೀಸೆಲ್ ಮೇಲಿನ ಸಂಪೂರ್ಣ ಸೆಸ್ ತೆಗೆದುಹಾಕಿ: ತೆಲಂಗಾಣ ಸಿಎಂ ಒತ್ತಾಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಬನ್ನಿ ದೇಶದ ಜನಗಳೆಲ್ಲಾ ಕಾಶ್ಮೀರ್ ಫ಼ೈಲ್ಸ್ ನೋಡಿ. ಪೆಟ್ರೋಲ್ ಮತ್ತು ಡಿಸೇಲ್ ದರಗಳ ಬಗ್ಗೆ ಯೋಚನೆ ಬಿಡಿ…. ನಾಚಿಕೆಯಾಗಬೇಕು ಕೇಂದ್ರ ಸರಕಾರಕ್ಕೆ……..

LEAVE A REPLY

Please enter your comment!
Please enter your name here

- Advertisment -

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...

ಮಾನವೀಯತೆ ಮರೆತ ಪಂಚಾಯಿತಿ: 3 ವರ್ಷದ ಮಗುವಿನ ಮೇಲಿನ ಅತ್ಯಾಚಾರ ಪ್ರಕರಣ ಮುಚ್ಚಿಹಾಕಲು 1 ಲಕ್ಷ ರೂ.ದಂಡ, ಆ ಹಣದಲ್ಲೇ ಮದ್ಯದ ಪಾರ್ಟಿ!

ರಾಂಚಿ: ಜಾರ್ಖಂಡ್‌ನ ಗುಮ್ಲಾ ಜಿಲ್ಲೆಯ ಘಾಗ್ರಾ ಪೊಲೀಸ್ ಠಾಣಾ ವ್ಯಾಪ್ತಿಯ ಪಾಲ್ಮಾ ಗ್ರಾಮದಲ್ಲಿ ನಾಗರಿಕ ಸಮಾಜವೇ ತಲೆ ತಗ್ಗಿಸುವಂತಹ ವಿಕೃತ ಘಟನೆಯೊಂದು ಬೆಳಕಿಗೆ ಬಂದಿದೆ. ಮೂರು ವರ್ಷದ ಮಗುವಿನ ಮೇಲೆ ನಡೆದ ಭೀಕರ...

ಪೆಟ್ರೋಲ್ – ಎಥೆನಾಲ್ ಕುರಿತ ಮಾಹಿತಿ ಒದಗಿಸುವಂತೆ ತೈಲ ಸಚಿವಾಲಯಕ್ಕೆ ಕೇಂದ್ರ ಮಾಹಿತಿ ಆಯೋಗ ಆದೇಶ

ಪೆಟ್ರೋಲ್ ಉತ್ಪಾದನೆ ಮತ್ತು ಆಮದು, ಎಥೆನಾಲ್ ಸಂಗ್ರಹಣೆ, ಮಿಶ್ರಣ ಮತ್ತು ಪೆಟ್ರೋಲಿಯಂ ವಲಯದ ಲಾಭದ ಕುರಿತ ಹಿಂದಿನ ಡೇಟಾವನ್ನು ಬಹಿರಂಗಪಡಿಸುವಂತೆ ತೈಲ ಸಚಿವಾಲಯದ ಯೋಜನಾ ವಿಭಾಗವಾದ ಪೆಟ್ರೋಲಿಯಂ ಯೋಜನೆ ಮತ್ತು ವಿಶ್ಲೇಷಣಾ ಕೋಶ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣ : ಮುಸ್ಲಿಮರ ಮೇಲ್ಮನವಿ ವಿಚಾರಣೆಗೆ ಸುಪ್ರೀಂ ಸಮ್ಮತಿ; ಮಧ್ಯಂತರ ನಮಾಝ್‌ಗೆ ನಿರಾಕರಣೆ

ಮಧ್ಯಪ್ರದೇಶದ ಧಾರ್‌ನಲ್ಲಿರುವ ಐತಿಹಾಸಿಕ ಭೋಜ್‌ಶಾಲಾ-ಕಮಲ್ ಮೌಲಾ ಸಂಕೀರ್ಣವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು ಘೋಷಿಸಿ, ಅಲ್ಲಿ ನಮಾಝ್ ಮಾಡುವುದನ್ನು ನಿಷೇಧಿಸಿರುವ ಮಧ್ಯಪ್ರದೇಶ ಹೈಕೋರ್ಟ್‌ನ ತೀರ್ಪನ್ನು ಪ್ರಶ್ನಿಸಿ, ವಿವಿಧ ಮುಸ್ಲಿಂ ಸಂಘಟನೆಗಳು ಸಲ್ಲಿಸಿರುವ...

ತೀವ್ರ ಹದಗೆಟ್ಟ ಸೋನಮ್ ವಾಂಗ್ಚುಕ್ ಆರೋಗ್ಯ : ಉಪವಾಸ ಕೈ ಬಿಡುವಂತೆ ವಿಪಕ್ಷ ನಾಯಕರಿಂದ ಮನವಿ

ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕೈಗೊಂಡಿರುವ ಶಿಕ್ಷಣ ತಜ್ಞ ಹಾಗೂ ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರಿಗೆ ತಮ್ಮ ಪ್ರತಿಭಟನೆಯನ್ನು ಕೊನೆಗೊಳಿಸುವಂತೆ ವಿರೋಧ ಪಕ್ಷಗಳ ನಾಯಕರು ಮಂಗಳವಾರ (ಜು.14) ಮನವಿ...

ಮುಂಬೈ-ಪುಣೆ ಎಕ್ಸ್‌ಪ್ರೆಸ್‌ವೇ ಸಮೀಪವೇ ರಸ್ತೆಯಿಲ್ಲ; ಬಟ್ಟೆ ಜೋಲಿಯಲ್ಲಿ ಗರ್ಭಿಣಿಯನ್ನು ಆಸ್ಪತ್ರೆಗೆ ಸಾಗಿಸಿದ ಉಂಬರಾನೆ ವಾಡಿಯ ಜನ

ಖಲಾಪುರ (ರಾಯಗಢ): ಗರ್ಭಿಣಿಯನ್ನು ಯೋಗ್ಯವಾದ ರಸ್ತೆ, ಆಂಬ್ಯುಲೆನ್ಸ್ ಇಲ್ಲದ ಕಾರಣ ಬಟ್ಟೆಯ ಜೋಳಿಗೆಯಲ್ಲಿ ಆಸ್ಪತ್ರೆಗೆ ಸಾಗಿಸಿದ ಹೃದಯ ವಿದ್ರಾವಕ ಘಟನೆ ಮಹಾರಾಷ್ಟ್ರದ ರಾಯಗಢ ಜಿಲ್ಲೆಯ ಖಲಾಪುರ ತಾಲ್ಲೂಕಿಗೆ ಸೇರಿದ ಉಂಬರಾನೆ ವಾಡಿಯಲ್ಲಿ ನಡೆದಿದೆ.  ದೇಶದಲ್ಲೇ...

ಕಾಜಿರಂಗ ಹೋಟೆಲ್ ಯೋಜನೆ ವಿರುದ್ಧ ಪ್ರತಿಭಟನೆ: ಅಸ್ಸಾಂ ಹೋರಾಟಗಾರ ಪ್ರಣಬ್ ಡೋಲೆ ಅಕ್ರಮ ಬಂಧನ: ಜಿಕೆಎಲ್‌ಎಚ್‌ಆರ್‌ಪಿಸಿ ಗಂಭೀರ ಆರೋಪ

ಗುವಾಹಟಿ: ವಿಶ್ವಪ್ರಸಿದ್ಧ ಕಾಜಿರಂಗ ರಾಷ್ಟ್ರೀಯ ಉದ್ಯಾನವನದ ಸಮೀಪ ಪ್ರಸ್ತಾವಿತ ಐಷಾರಾಮಿ ಪಂಚತಾರಾ ಹೋಟೆಲ್ ಯೋಜನೆಗಾಗಿ ಆದಿವಾಸಿಗಳ ಕೃಷಿ ಹಾಗೂ ಗೋಮಾಳ ಭೂಮಿಯನ್ನು ಸ್ವಾಧೀನಪಡಿಸಿಕೊಳ್ಳುವುದನ್ನು ವಿರೋಧಿಸಿ ನಡೆದ ಪ್ರತಿಭಟನೆಗಳ ಹಿನ್ನೆಲೆಯಲ್ಲಿ, ಅಸ್ಸಾಂನ ಸಾಮಾಜಿಕ ಕಾರ್ಯಕರ್ತ...

ಬಿಡದಿ ಟೌನ್‌ಶಿಪ್: ಸರ್ಕಾರದ ಸರ್ವಾಧಿಕಾರಿ ಧೋರಣೆಗೆ ‘ಸಂಯುಕ್ತ ಹೋರಾಟ ಸಮಿತಿ’ ತೀವ್ರ ಖಂಡನೆ

"ಬಿಡದಿ ಟೌನ್‌ಶಿಪ್ ಯೋಜನೆಯು ತೀವ್ರ ವಿವಾದದಲ್ಲಿರುವಾಗಲೇ ರೈತರೊಂದಿಗೆ ಯಾವುದೇ ಮಾತುಕತೆ ನಡೆಸದೆ, ಪೊಲೀಸ್ ಬಲಪ್ರಯೋಗದ ಮೂಲಕ ಸರ್ವಾಧಿಕಾರಿ ರೀತಿಯಲ್ಲಿ ಜಂಟಿ ಸರ್ವೆ (JMC) ನಡೆಸಲು ಮುಂದಾಗಿರುವ ಸರ್ಕಾರದ ಕ್ರಮ ಅತ್ಯಂತ ಖಂಡನೀಯ" ಎಂದು...

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...