Homeಮುಖಪುಟ99.94 ರೂ ತಲುಪಿದ ಪೆಟ್ರೋಲ್ ದರ: ಬ್ಯಾಟಿಂಗ್ ದೈತ್ಯ ಡಾನ್ ಬ್ರಾಡಮನ್‌ಗೆ ಮುಂಬೈ ಶ್ರದ್ದಾಂಜಲಿ!

99.94 ರೂ ತಲುಪಿದ ಪೆಟ್ರೋಲ್ ದರ: ಬ್ಯಾಟಿಂಗ್ ದೈತ್ಯ ಡಾನ್ ಬ್ರಾಡಮನ್‌ಗೆ ಮುಂಬೈ ಶ್ರದ್ದಾಂಜಲಿ!

- Advertisement -
- Advertisement -

ಪೆಟ್ರೋಲ್ ರೇಟು ಏರಿಕೆಯಾಗುವುದೇ ನಡೆದೇ ಇದೆ. ಆದರೆ ಇವತ್ತು ಮುಂಬೈನಲ್ಲಿ ತಲುಪಿದ ಪೆಟ್ರೋಲ್‌ನ ಗರಿಷ್ಠ ಮಟ್ಟ ಕುರಿತಂತೆ ಅಸಹಾಯಕ ಮುಂಬೈಗರು ಟ್ವೀಟ್‌ಗಳನ್ನು ಮಾಡುತ್ತ, ಡಾನ್ ಬ್ರಾಡ್‌ಮನ್ ಎಂಬ ಕ್ರಿಕೆಟ್ ದಂತವ್ಯಕ್ತಿಗೆ ಶ್ರದ್ದಾಂಜಲಿ ಸಲ್ಲಿಸಿದ್ದಾರೆ!

ಏಕೆಂದರೆ ಇವತ್ತು ಮುಂಬೈನ ಪೆಟ್ರೋಲ್ ರೇಟು ಮತ್ತು ಡಾನ್ ಬ್ರಾಡ್‌ಮನ್ ಎಂಬ ಅಪ್ರತಿಮ ಬ್ಯಾಟ್ಸ್ಮನ್‌ನ ಟೆಸ್ಟ್ ಸರಾಸರಿ ಬ್ಯಾಟಿಂಗ್ ಒಂದೇ ಆಗಿವೆ. ಅಂದರೆ ಇಂದು ಮುಂಬೈನಲ್ಲಿ ಲೀಟರ್ ಪೆಟ್ರೋಲ್ ಬೆಲೆ 99.94 ರೂ ತಲುಪಿದೆ. ಬ್ರಾಡ್‌ಮನ್ ಅವರ ವೃತ್ತಿಜೀವನದ ಟೆಸ್ಟ್ ಬ್ಯಾಟಿಂಗ್ ಸರಾಸರಿ ಸಹ 99.94 ಆಗಿದೆ.

ಸಚಿನ್ ತೆಂಡೂಲ್ಕರ್ ನೆಲೆಸಿರುವ, ಮುಂಬೈ ಇಂಡಿಯನ್ಸ್ ಐಪಿಎಲ್ ತಂಡವನ್ನು ಮುನ್ನಡೆಸುತ್ತಿರುವ ಅಂಬಾನಿ ಕುಟುಂಬ ವಾಸಿಸುವ ಮುಂಬೈನಲ್ಲಿ ಈಗ ಪೆಟ್ರೋಲ್ ದರ ಸೆಂಚುರಿ ಸಮೀಪ ಬಂದು ನಿಂತಿದೆ.

ತೆಂಡೂಲ್ಕರ್, ರಿಕಿ ಪಾಂಟಿಂಗ್ ಅವರಿಗೆ ಸಾಧ್ಯವಾಗದೇ ಹೋಗಿದ್ದನ್ನು ಈಗ ಮೋದಿ ಸಾಧಿಸಿದ್ದಾರೆ ಎಂದು ಸಾಮಾಜಿಕ ಜಾಲತಾಣಗಳಲ್ಲಿ ಟ್ರೋಲ್ ಮಾಡಲಾಗುತ್ತಿದೆ.
ಕ್ರಿಕೆಟ್ ಮತ್ತು ಮೋದಿ ಎರಡರ ಆರಾಧಕರೂ ಆದ ಭಕ್ತರಿಗೆ ಇದು ಮುಜುಗರ ಉಂಟು ಮಾಡುತ್ತಿದೆ.

ಸರ್ ಡೊನಾಲ್ಡ್ ಜಾರ್ಜ್ ಬ್ರಾಡ್‌ಮನ್ ಆಸ್ಟ್ರೇಲಿಯಾದ ಮಾಜಿ ಅಂತರರಾಷ್ಟ್ರೀಯ ಕ್ರಿಕೆಟಿಗ. ಈತನನ್ನು ಸಾರ್ವಕಾಲಿಕ ಶ್ರೇಷ್ಠ ಬ್ಯಾಟ್ಸ್ಮನ್ ಎಂದು ವ್ಯಾಪಕವಾಗಿ ಅಂಗೀಕರಿಸಲಾಗಿದೆ. ಬ್ರಾಡ್‌ಮನ್ ಅವರ ವೃತ್ತಿಜೀವನದ ಟೆಸ್ಟ್ ಬ್ಯಾಟಿಂಗ್ ಸರಾಸರಿ 99.94 ಅನ್ನು ಕ್ರೀಡಾಪಟು ಒಬ್ಬರು ಪಡೆದ ದೊಡ್ಡ ಸಾಧನೆ ಎಂದು ಉಲ್ಲೇಖಿಸಲಾಗಿದೆ.

ಹಿಂದೆಲ್ಲಾ ಪೆಟ್ರೋಲ್ ಡಿಸೇಲ್ ದರ ಪೈಸೆಗಳಲ್ಲಿ ಹೆಚ್ಚಾದರೂ ಭಾರೀ ಪ್ರತಿಭಟನೆಗಳು ದಾಖಲಾಗುತ್ತಿದ್ದವು. ಈಗ ಕೋವಿಡ್ ಕಾಲದಲ್ಲಿ ಪ್ರತಿಭಟನೆ ನಿಷಿದ್ದ. ಹಾಗಾಗಿ ನೆಟ್ಟಿಗರು ಟ್ವೀಟ್ ಮೂಲಕ ತಮ್ಮ ಆಕ್ರೋಶ ಹೊರಹಾಕುತ್ತಿದ್ದಾರೆ. ಅಂತಹ ಕೆಲವು ಟ್ವೀಟ್‌ಗಳು ಇಲ್ಲಿವೆ.


ಇದನ್ನೂ ಓದಿ: ಯಾರು ಈ ಬಾಬಾ ರಾಮದೇವ್? ಏನು ಈ ಪತಂಜಲಿ?: ಆಧ್ಯಾತ್ಮಿಕ ಬಂಡವಾಳಶಾಹಿಯ ಸಂಪೂರ್ಣ ಡಿಟೇಲ್ಸ್….

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...