Homeಮುಖಪುಟಸತತ 10ನೇ ದಿನವೂ ಪೆಟ್ರೋಲ್ ಬೆಲೆ ಏರಿಕೆ: ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಖಂಡನೆ

ಸತತ 10ನೇ ದಿನವೂ ಪೆಟ್ರೋಲ್ ಬೆಲೆ ಏರಿಕೆ: ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಖಂಡನೆ

- Advertisement -
- Advertisement -

ಕಳೆದ ಹತ್ತು ದಿನಗಳಿಂದ ಪೆಟ್ರೋಲ್ ಬೆಲೆಯು ಒಂಭತ್ತು ಬಾರಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ಇದನ್ನು ವಿರೋಧಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ. ಟ್ವಿಟ್ಟರ್‌ನಲ್ಲಿ #petrolprice  ಟ್ರೆಂಡಿಂಗ್ ಆಗುತ್ತಿದೆ. ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ಲೀಟರಿಗೆ Rs 84.39 ರೂಗೆ ತಲುಪಿದೆ.

“ಯಾರಾದರೂ ಪೆಟ್ರೋಲ್ ಬೆಲೆ ಏರಿಕೆಯ ಕುರಿತು ಏನನ್ನಾದರೂ ಹೇಳುವುದು ಇದೆಯೇ? ಅಥವಾ ಅವರ ಮೇಲಿನ ಭಕ್ತಿಯಿಂದ ನಿಮ್ಮ ವಾಹನಗಳನ್ನು ಓಡಿಸುವುದನ್ನು ನಿಲ್ಲಿಸುತ್ತೀರೋ?” ಎಂದು ಗ್ರೀಷ್ಮಾ ಶುಕ್ಲಾ ಎಂಬುವವರು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಬೆಲೆ ಏರಿಕೆಯನ್ನು ಖಂಡಿಸಿ ಬೀದಿಗಿಳಿದು ತೀವ್ರ ಪ್ರತಿಭಟನೆ ಮಾಡಿದ್ದ ಬಿಜೆಪಿಗರು ಇಂದು ಸಮ್ಮುನಿರುವುದೇಕೆ ಎಂದು ಹಲವರು ಸಾಮಾಜಿಕ ಮಾದ್ಯಮಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫೆಸ್ ಬುಕ್ ನಲ್ಲಿ Gladson Almeida ಎನ್ನುವವರು ಪೆಟ್ರೋಲ್ ಬೆಲೆ ಏರಿಕೆಯ ಕುರಿತು ತಮ್ಮ ಬರಹವೊಂದನ್ನು ಹಂಚಿಕೊಂಡಿದ್ದರು. ಅದು ವೈರಲ್‌ ಆಗಿದ್ದು, ಹಲವರು ಅದನ್ನು ಹಂಚಿಕೊಂಡಿದ್ದಾರೆ.

“ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತೀ ಬ್ಯಾರೆಲಿಗೆ ಇವತ್ತು 45 ಡಾಲರ್. ಅಂದರೆ ಭಾರತಕ್ಕೆ ಪ್ರತೀ ಲೀಟರ್ ಪೆಟ್ರೋಲ್ Rs 21 ಕ್ಕೆ ಸಿಗುತ್ತೆ. ಅದಕ್ಕೆ ಸಂಸ್ಕರಣಾ ಹಾಗೂ ವಿತರಣಾ ವೆಚ್ಚ ಸೇರಿ ಪ್ರತೀ ಲೀಟರ್ ಪೆಟ್ರೋಲ್ ಗೆ Rs 29-30 ಆಗಬಹುದು. ಮಿಕ್ಕ ಐವತ್ತು ರೂಪಾಯಿಗಿಂತ ಹೆಚ್ಚಿನದ್ದು ತೆರಿಗೆ. ಈ ಐವತ್ತೊಂದು ರೂಪಾಯಿ ತೆರಿಗೆಯಲ್ಲಿ ಕೇಂದ್ರ ಸರಕಾರದ ಅಬಕಾರಿ ತೆರಿಗೆ ಪ್ರತೀ ಲೀಟರ್ ಪೆಟ್ರೋಲ್ ಮೇಲೆ Rs 32.98.” ಎಂದು ಫೇಸ್ ಬುಕ್ ಬರಹದಲ್ಲಿ ಹೇಳಿದ್ದಾರೆ.

‘ಯುಪಿಎ ಸರಕಾರದ ಆಡಳಿತವಿದ್ದ ಹತ್ತು ವರುಷಗಳಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಪ್ರತೀ ಬ್ಯಾರಲ್ ಕಚ್ಚಾ ತೈಲದ ಬೆಲೆ ಸರಾಸರಿಯಾಗಿ 80-90 ಡಾಲರ್ ಇತ್ತು. ಅಂದರೆ ಈಗಿನ ಬೆಲೆಯ ದುಪ್ಪಟ್ಟು. ಕೆಲವೊಮ್ಮೆ ಪ್ರತೀ ಬ್ಯಾರೆಲಿಗೆ 120 ಡಾಲರ್ ತನಕ ಹೋಗಿತ್ತು. ಆದರೆ ಈ ಇಡೀ ಅವಧಿಯಲ್ಲಿ ಕೇಂದ್ರ ಸರಕಾರ ವಿಧಿಸಿದ ಅತೀ ಹೆಚ್ಚಿನ ಅಬಕಾರಿ ಸುಂಕ Rs 9.50. ಮಾತ್ರ’ ಎಂದು ಹೇಳಿದ್ದಾರೆ.

“ಅದಾಗ್ಯೂ ಅಬ್ಬಾ ಏನ್ ಪ್ರತಿಭಟನೆ, ಎಂಥಾ ಉಗ್ರ ಗಲಾಟೆ. ಸ್ಮ್ರತಿ ಇರಾನಿ, ಮಾಳವಿಕಾ ಅವಿನಾಶ್, ಶೃತಿ, ತಾರಾ, ಕೆನಡಾದ ವಲಸೆ ಕಾರ್ಮಿಕ ಅಕ್ಷಯ್ ಕುಮಾರು, ಅನುಪಮ್ ಖೇರ್, ಜೂಹಿ ಚಾವ್ಲಾ, ಮುಖ್ಯಮಂತ್ರಿ ನರೇಂದ್ರ ಮೋದಿಯವರ ನೇತ್ರತ್ವದಲ್ಲಿ ಎಂಥಾ ವೈವಿಧ್ಯಮಯ ಪ್ರತಿಭಟನೆ, ಭಾರತ್ ಬಂದ್, ರಾಸ್ತಾ ರೋಕೋಗಳು!”

‘ಆದರೆ ಈ ಸರಕಾರ ಅಬಕಾರಿ ಸುಂಕವನ್ನು ಮುನ್ನೂರೈವತ್ತು ಪಟ್ಟು ಹೆಚ್ಚಿಸಿದರೂ ಒಬ್ಬನೇ ಒಬ್ಬ ಕಮಕ್-ಕಿಮಕ್ ಅನ್ನಲ್ಲ. ಬೇರೇ ದಿನಗಳಲ್ಲಿ ಹತ್ತು ರುಪಾಯಿ ಸುಂಕ ಕೊಡುತ್ತಿದ್ದವರು ಇವತ್ತು ಅಚ್ಚೆ ದಿನ್‍ ಕಾಲದಲ್ಲಿ ಮೂವತ್ತೆರಡು ರೂಪಾಯಿ ಸುಂಕ ಕೊಟ್ಟೂ ನವರಂಧ್ರಗಳಲ್ಲಿ ಬೆಣೆ ಹಾಕಿ ಕುಳಿತುಕೊಂಡಿದ್ದಾರೆ. ನಮ್ಮಾಚೆ ಶೋಭಾ ಕರಂದ್ಲಾಜೆ ಪರ ಪ್ರಚಾರ ಮಾಡುತ್ತಿದ್ದ ಕೆಲವರು ಮೋದಿ ಅಧಿಕಾರಕ್ಕೆ ಬಂದರೆ ಪೆಟ್ರೋಲ್ ಹದಿನೈದು ರೂಪಾಯಿ ಪ್ರತೀ ಲೀಟರ್ ನಂತೆ ಸಿಗುತ್ತೆ ಎಂದವರು ಇವತ್ತು ತಮ್ಮ ಬೈಕು, ರಿಕ್ಷಾ ಮಾರಿ ಜೈ ಮೋದಿ, ಜೈ ಮೋದಿ ಎಂದು ಎರಡು ರೂಪಾಯಿಗಾಗಿ ಹತ್ತಾರು ವಾಲ್‍ಗಳಲ್ಲಿ ಕಕ್ಕ ಮಾಡಿ ಬಂದ ದುಡ್ಡಲ್ಲಿ ಸಂಜೆಯಾದೊಡನೆ ಪಿಂಟ್ ಹಾಗೂ ಬೀಫ್/ಪೋರ್ಕ್ ಚಿಲ್ಲಿ ಮೆಲ್ಲುತ್ತಿದ್ದಾರೆ” ಎಂದು ತಮ್ಮ ಆಕ್ರೋಷ ವ್ಯಕ್ತಪಡಿಸಿದ್ದಾರೆ.

ಇನ್ನು ಟ್ವಿಟರ್ ನಲ್ಲಿಯೂ ಪೆಟ್ರೋಲ್ ಬೆಲೆ ಏರಿಕೆಯ ವಿರುದ್ಧ ಖಂಡನೆ ವ್ಯಕ್ತವಾಗಿದ್ದು, #petrolprice ಎಂದು ಟ್ರೆಂಡಿಂಗ್ ಆಗುತ್ತಿದೆ. ನೂರಾರು ಟ್ವಿಟರ್ ಬಳಕೆದಾರರು ಈ ಹ್ಯಾಶ್ ಟ್ಯಾಗ್ ಬಳಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪೆಟ್ರೋಲ್ ಬೆಲೆ ಏರಿಕೆಯಾಗಿದ್ದಾಗ ಬಿಜೆಪಿಗರು ಪ್ರತಿಭಟನೆ ಮಾಡಿದ್ದ ಫೋಟೋಗಳನ್ನು ತೆಗೆದುಕೊಂಡು, ಈಗಿನ ಸಂದರ್ಭದಲ್ಲಿ ಸುಮ್ಮನಿರುವಂತೆ ಎಡಿಟ್ ಮಾಡಿ ಹಲವರು ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: ಸತತ 15 ನೇ ದಿನವೂ ಏರಿಕೆ, 2 ವರ್ಷಗಳಲ್ಲೇ ಪೆಟ್ರೋಲ್ ಬೆಲೆ ಅಧಿಕ: ಬೆಂಗಳೂರಿನಲ್ಲಿ 81.44 ರೂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

​ಚನ್ನರಾಯಪಟ್ಟಣ ರೈತರಿಗೆ ಅಂತಿಮ ವಿಜಯ; ​ಬೆಂಬಲಕ್ಕೆ ನಿಂತವರಿಗೆ ಧನ್ಯವಾದ ತಿಳಿಸಿದ ‘ಹೋರಾಟ ಸಮಿತಿ’

​ದೇವನಹಳ್ಳಿ ತಾಲೂಕಿನ ಚನ್ನರಾಯಪಟ್ಟಣ ಹೋಬಳಿಯ 13 ಹಳ್ಳಿಗಳ ರೈತರ ಭೂ ಹೋರಾಟ ಕೊನೆಗೂ ಸುಖಾಂತ್ಯವಾಗಿದೆ. ಚನ್ನರಾಯಪಟ್ಟಣ ಭೂಸ್ವಾಧೀನ ವಿರೋಧಿ ಹೋರಾಟ ಸಮಿತಿ ಜೊತೆಗೆ ರಾಜ್ಯದ ಹತ್ತಾರು ಜನಪರ ಸಂಘಟನೆಗಳು ನಡೆಸಿದ ಸುದೀರ್ಘ ಹೋರಾಟ...

ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಬಗ್ಗೆ ತುಟಿ ಬಿಚ್ಚದ ಸರ್ಕಾರ; ‘ಬೆಳಗಾವಿ ಚಲೋ’ ಹೋರಾಟಕ್ಕೆ ಕರೆ

ಗುರುವಾರ (ಡಿ.4) ನಡೆದ ಸಚಿವ ಸಂಪುಟ ಸಭೆಯಲ್ಲಿ ಅಲೆಮಾರಿಗಳ ಮೀಸಲಾತಿ ಬಗ್ಗೆ ತುಟಿ ಬಿಚ್ಚದ ರಾಜ್ಯ ಸರ್ಕಾರದ ವಿರುದ್ಧ ಅಸಮಾಧಾನ ವ್ಯಕ್ತವಾಗಿದ್ದು, 'ಕರ್ನಾಟಕ ಅಸ್ಪೃಶ್ಯ ಅಲೆಮಾರಿ ಸಮುದಾಯಗಳ ಮಹಾ ಒಕ್ಕೂಟ' 'ಬೆಳಗಾವಿ ಚಲೋ'...

ಅಖಂಡ ಕರ್ನಾಟಕದ ಪ್ರದೇಶಗಳನ್ನು ಸಾಂಸ್ಕೃತಿಕವಾಗಿ ವಿಲೀನಗೊಳಿಸಲು ಇದು ಸಕಾಲ: ಡಾ.ಪುರುಷೋತ್ತಮ ಬಿಳಿಮಲೆ

ಕರ್ನಾಟಕ ಮತ್ತು ನೆರೆ ರಾಜ್ಯಗಳ ಅಚ್ಚ ಕನ್ನಡ ಪ್ರದೇಶಗಳ ನಡುವಿನ ಭೌತಿಕ ಗಡಿಗಳು ಇದ್ದಂತೆ ಇದ್ದರೂ ಸಾಂಸ್ಕೃತಿಕವಾಗಿ ಹೇರಲಾಗುತ್ತಿರುವ ಗಡಿಗಳನ್ನು ಅಪ್ರಸ್ತುತವಾಗಿಸುವುದು ಸಾಧ್ಯವಿದೆ. ಇಂತಹ ಪ್ರದೇಶಗಳೊಂದಿಗೆ ಕರ್ನಾಟಕದ ಭಾವನಾತ್ಮಕ ಸಂಬಂಧದ ವಿಸ್ತರಣೆಗೆ ಇದು...

ಅರುಂಧತಿ ರಾಯ್ ಅವರ ಪುಸ್ತಕದ ಮುಖಪುಟ ವಿರೋಧಿಸಿದ್ದ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್

ಖ್ಯಾತ ಲೇಖಕಿ ಅರುಂಧತಿ ರಾಯ್ ಅವರ 'ಮದರ್ ಮೇರಿ ಕಮ್ಸ್ ಟು ಮಿ' ಪುಸ್ತಕದ ಮುಖಪುಟ ಚಿತ್ರದ ಪ್ರಸಾರದ ವಿರುದ್ಧ ಸಲ್ಲಿಸಲಾದ ಅರ್ಜಿಯನ್ನು ಸುಪ್ರಿಂ ಕೋರ್ಟ್‌ ಶುಕ್ರವಾರ ತಿರಸ್ಕರಿಸಿದೆ. ಏಕೆಂದರೆ, ಲೇಖಕರು ಧೂಮಪಾನವನ್ನು...

ರೋಹಿಂಗ್ಯಾ ಕುರಿತು ಆಕ್ಷೇಪಾರ್ಹ ಹೇಳಿಕೆ: ಸಿಐಜೆ ಸೂರ್ಯಕಾಂತ್ ಅವರಿಗೆ ಮಾಜಿ ನ್ಯಾಯಾದೀಶರು, ವಕೀಲರು, ಶಿಕ್ಷಣ ತಜ್ಞರಿಂದ ಮುಕ್ತ ಪತ್ರ

ರೋಹಿಂಗ್ಯಾಗಳ ವಿರುದ್ಧ ಭಾರತದ ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್ ಅವರು ನೀಡಿದ್ದ ಹೇಳಿಕೆಗೆ ಆಕ್ಷೇಪ ವ್ಯಕ್ತಪಡಿಸಿ ಮಾಜಿ ನ್ಯಾಯಾಧೀಶರು, ವಕೀಲರು ಮತ್ತು ಶಿಕ್ಷಣ ತಜ್ಞರು ಸೂರ್ಯಕಾಂತ್ ಅವರಿಗೆ ಮುಕ್ತ ಪತ್ರ ಬರೆದಿದ್ದಾರೆ.  ಕಿರುಕುಳದಿಂದ ಪಲಾಯನ ಮಾಡಿದ...

ಛತ್ತೀಸ್‌ಗಢ: ‘ಎಸ್‌ಇಸಿಎಲ್‌ ಅಮೇರಾ’ ಕಲ್ಲಿದ್ದಲು ಗಣಿ ವಿಸ್ತರಣೆ ವಿರೋಧಿಸಿ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ

ಛತ್ತೀಸ್‌ಗಢದ ಸೌತ್ ಈಸ್ಟರ್ನ್ ಕೋಲ್‌ಫೀಲ್ಡ್ಸ್ ಲಿಮಿಟೆಡ್‌ನ (ಎಸ್‌ಇಸಿಎಲ್‌) ಅಮೇರಾ ಕಲ್ಲಿದ್ದಲು ಗಣಿಗಾರಿಕೆ ವಿಸ್ತರಣೆ ವಿರೋಧಿಸಿ ಡಿ.3 ರಂದು ಅಂಬಿಕಾಪುರದ ಪರ್ಸೋಡಿ ಕಲಾನ್ ಗ್ರಾಮದಲ್ಲಿ ಪ್ರತಿಭಟನೆ ಭುಗಿಲೆದ್ದಿದೆ. ಪ್ರತಿಭಟನೆ ಸಂದರ್ಭದಲ್ಲಿ ಪೊಲೀಸರ ಮೇಲೆ ಗ್ರಾಮಸ್ಥರು...

ಗಂಟೆಗಟ್ಟಲೆ ಇಂಡಿಗೋ ವಿಮಾನ ವಿಳಂಬ: ‘ನನ್ನ ಮಗಳಿಗೆ ಸ್ಯಾನಿಟರಿ ಪ್ಯಾಡ್‌ ಕೊಡಿ..’ ಎಂದು ಬೇಡಿಕೊಂಡ ತಂದೆ

ದೇಶಾದ್ಯಂತ ಇಂಡಿಗೋ ಪ್ರಯಾಣಿಕರು ಭಾರಿ ಅನಾನುಕೂಲತೆಯನ್ನು ಎದುರಿಸುತ್ತಿದ್ದಾರೆ. ಏಕೆಂದರೆ, ವಿಮಾನಯಾನ ಸಂಸ್ಥೆಯ ವಿಳಂಬ ಮತ್ತು ರದ್ದತಿ ನಿರ್ಧಾರವು ಸತತ ನಾಲ್ಕನೇ ದಿನವೂ (ಡಿ. 5) ಮುಂದುವರೆದಿದೆ. ಅವ್ಯವಸ್ಥೆಯ ನಡುವೆಯೇ, ವಿಮಾನ ನಿಲ್ದಾಣದಿಂದ ಬಂದ...

ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ, ಶಾಂತಿಯ ಪರವಾಗಿದೆ: ಪುಟಿನ್‌ ಜೊತೆಗಿನ ದ್ವಿಪಕ್ಷೀಯ ಮಾತುಕತೆ ವೇಳೆ ಮೋದಿ ಹೇಳಿಕೆ

ನವದೆಹಲಿ: ರಷ್ಯಾ-ಉಕ್ರೇನ್ ಯುದ್ಧ ವಿಚಾರದಲ್ಲಿ ಭಾರತ ತಟಸ್ಥವಾಗಿಲ್ಲ. ಶಾಂತಿಯ ಪರವಾಗಿದೆ ಎಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಶುಕ್ರವಾರ ಹೇಳಿದ್ದಾರೆ. ರಷ್ಯಾ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಅವರು ಎರಡು ದಿನಗಳ ಭೇಟಿಗೆಂದು ಭಾರತಕ್ಕೆ ಆಗಮಿಸಿದ್ದು,...

ಮನೆ ಕಟ್ಟಲು, ವಾಹನ ಖರೀದಿಸಲು ಇದು ಸುಸಮಯ: ರೆಪೊ ದರ ಕಡಿತಗೊಳಿಸಿದ ಆರ್.ಬಿ.ಐ

ಡಿಸೆಂಬರ್ 05, ಶುಕ್ರವಾರದಂದು ನಡೆದ ಹಣಕಾಸು ನೀತಿ ಸಭೆಯಲ್ಲಿ (MPC) ಭಾರತೀಯ ರಿಸರ್ವ್ ಬ್ಯಾಂಕ್ (RBI) ರೆಪೊ ದರವನ್ನು 25 ಬೇಸಿಸ್ ಪಾಯಿಂಟ್‌ಗಳಷ್ಟು ಕಡಿತಗೊಳಿಸಿದೆ. ಇಂದಿನ ಕಡಿತದ ನಂತರ, ಕೇಂದ್ರ ಬ್ಯಾಂಕ್ ಈ...

ಉತ್ತರ ಪ್ರದೇಶ| ದಲಿತ ಯುವಕನ ಮೇಲೆ ಹಲ್ಲೆ; ಬಂದೂಕು ತೋರಿಸಿ ವಿವಸ್ತ್ರಗೊಳಿಸಿದ ಗುಂಪು

ಸಿಗರೇಟ್ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ಗುಂಪೊಂದು ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಉತ್ತರ ಪ್ರದೇಶದ ಝಾನ್ಸಿಯಲ್ಲಿ ವರದಿಯಾಗಿದೆ. ಗುಂಪು ದಲಿತ ಯುವಕನನ್ನು ಚಪ್ಪಲಿಯಿಂದ ಹೊಡೆದು, ಮುಷ್ಟಿ, ಕಾಲು ಮತ್ತು...