Homeಮುಖಪುಟಸತತ 10ನೇ ದಿನವೂ ಪೆಟ್ರೋಲ್ ಬೆಲೆ ಏರಿಕೆ: ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಖಂಡನೆ

ಸತತ 10ನೇ ದಿನವೂ ಪೆಟ್ರೋಲ್ ಬೆಲೆ ಏರಿಕೆ: ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಖಂಡನೆ

- Advertisement -
- Advertisement -

ಕಳೆದ ಹತ್ತು ದಿನಗಳಿಂದ ಪೆಟ್ರೋಲ್ ಬೆಲೆಯು ಒಂಭತ್ತು ಬಾರಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ಇದನ್ನು ವಿರೋಧಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ. ಟ್ವಿಟ್ಟರ್‌ನಲ್ಲಿ #petrolprice  ಟ್ರೆಂಡಿಂಗ್ ಆಗುತ್ತಿದೆ. ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ಲೀಟರಿಗೆ Rs 84.39 ರೂಗೆ ತಲುಪಿದೆ.

“ಯಾರಾದರೂ ಪೆಟ್ರೋಲ್ ಬೆಲೆ ಏರಿಕೆಯ ಕುರಿತು ಏನನ್ನಾದರೂ ಹೇಳುವುದು ಇದೆಯೇ? ಅಥವಾ ಅವರ ಮೇಲಿನ ಭಕ್ತಿಯಿಂದ ನಿಮ್ಮ ವಾಹನಗಳನ್ನು ಓಡಿಸುವುದನ್ನು ನಿಲ್ಲಿಸುತ್ತೀರೋ?” ಎಂದು ಗ್ರೀಷ್ಮಾ ಶುಕ್ಲಾ ಎಂಬುವವರು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಬೆಲೆ ಏರಿಕೆಯನ್ನು ಖಂಡಿಸಿ ಬೀದಿಗಿಳಿದು ತೀವ್ರ ಪ್ರತಿಭಟನೆ ಮಾಡಿದ್ದ ಬಿಜೆಪಿಗರು ಇಂದು ಸಮ್ಮುನಿರುವುದೇಕೆ ಎಂದು ಹಲವರು ಸಾಮಾಜಿಕ ಮಾದ್ಯಮಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫೆಸ್ ಬುಕ್ ನಲ್ಲಿ Gladson Almeida ಎನ್ನುವವರು ಪೆಟ್ರೋಲ್ ಬೆಲೆ ಏರಿಕೆಯ ಕುರಿತು ತಮ್ಮ ಬರಹವೊಂದನ್ನು ಹಂಚಿಕೊಂಡಿದ್ದರು. ಅದು ವೈರಲ್‌ ಆಗಿದ್ದು, ಹಲವರು ಅದನ್ನು ಹಂಚಿಕೊಂಡಿದ್ದಾರೆ.

“ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತೀ ಬ್ಯಾರೆಲಿಗೆ ಇವತ್ತು 45 ಡಾಲರ್. ಅಂದರೆ ಭಾರತಕ್ಕೆ ಪ್ರತೀ ಲೀಟರ್ ಪೆಟ್ರೋಲ್ Rs 21 ಕ್ಕೆ ಸಿಗುತ್ತೆ. ಅದಕ್ಕೆ ಸಂಸ್ಕರಣಾ ಹಾಗೂ ವಿತರಣಾ ವೆಚ್ಚ ಸೇರಿ ಪ್ರತೀ ಲೀಟರ್ ಪೆಟ್ರೋಲ್ ಗೆ Rs 29-30 ಆಗಬಹುದು. ಮಿಕ್ಕ ಐವತ್ತು ರೂಪಾಯಿಗಿಂತ ಹೆಚ್ಚಿನದ್ದು ತೆರಿಗೆ. ಈ ಐವತ್ತೊಂದು ರೂಪಾಯಿ ತೆರಿಗೆಯಲ್ಲಿ ಕೇಂದ್ರ ಸರಕಾರದ ಅಬಕಾರಿ ತೆರಿಗೆ ಪ್ರತೀ ಲೀಟರ್ ಪೆಟ್ರೋಲ್ ಮೇಲೆ Rs 32.98.” ಎಂದು ಫೇಸ್ ಬುಕ್ ಬರಹದಲ್ಲಿ ಹೇಳಿದ್ದಾರೆ.

‘ಯುಪಿಎ ಸರಕಾರದ ಆಡಳಿತವಿದ್ದ ಹತ್ತು ವರುಷಗಳಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಪ್ರತೀ ಬ್ಯಾರಲ್ ಕಚ್ಚಾ ತೈಲದ ಬೆಲೆ ಸರಾಸರಿಯಾಗಿ 80-90 ಡಾಲರ್ ಇತ್ತು. ಅಂದರೆ ಈಗಿನ ಬೆಲೆಯ ದುಪ್ಪಟ್ಟು. ಕೆಲವೊಮ್ಮೆ ಪ್ರತೀ ಬ್ಯಾರೆಲಿಗೆ 120 ಡಾಲರ್ ತನಕ ಹೋಗಿತ್ತು. ಆದರೆ ಈ ಇಡೀ ಅವಧಿಯಲ್ಲಿ ಕೇಂದ್ರ ಸರಕಾರ ವಿಧಿಸಿದ ಅತೀ ಹೆಚ್ಚಿನ ಅಬಕಾರಿ ಸುಂಕ Rs 9.50. ಮಾತ್ರ’ ಎಂದು ಹೇಳಿದ್ದಾರೆ.

“ಅದಾಗ್ಯೂ ಅಬ್ಬಾ ಏನ್ ಪ್ರತಿಭಟನೆ, ಎಂಥಾ ಉಗ್ರ ಗಲಾಟೆ. ಸ್ಮ್ರತಿ ಇರಾನಿ, ಮಾಳವಿಕಾ ಅವಿನಾಶ್, ಶೃತಿ, ತಾರಾ, ಕೆನಡಾದ ವಲಸೆ ಕಾರ್ಮಿಕ ಅಕ್ಷಯ್ ಕುಮಾರು, ಅನುಪಮ್ ಖೇರ್, ಜೂಹಿ ಚಾವ್ಲಾ, ಮುಖ್ಯಮಂತ್ರಿ ನರೇಂದ್ರ ಮೋದಿಯವರ ನೇತ್ರತ್ವದಲ್ಲಿ ಎಂಥಾ ವೈವಿಧ್ಯಮಯ ಪ್ರತಿಭಟನೆ, ಭಾರತ್ ಬಂದ್, ರಾಸ್ತಾ ರೋಕೋಗಳು!”

‘ಆದರೆ ಈ ಸರಕಾರ ಅಬಕಾರಿ ಸುಂಕವನ್ನು ಮುನ್ನೂರೈವತ್ತು ಪಟ್ಟು ಹೆಚ್ಚಿಸಿದರೂ ಒಬ್ಬನೇ ಒಬ್ಬ ಕಮಕ್-ಕಿಮಕ್ ಅನ್ನಲ್ಲ. ಬೇರೇ ದಿನಗಳಲ್ಲಿ ಹತ್ತು ರುಪಾಯಿ ಸುಂಕ ಕೊಡುತ್ತಿದ್ದವರು ಇವತ್ತು ಅಚ್ಚೆ ದಿನ್‍ ಕಾಲದಲ್ಲಿ ಮೂವತ್ತೆರಡು ರೂಪಾಯಿ ಸುಂಕ ಕೊಟ್ಟೂ ನವರಂಧ್ರಗಳಲ್ಲಿ ಬೆಣೆ ಹಾಕಿ ಕುಳಿತುಕೊಂಡಿದ್ದಾರೆ. ನಮ್ಮಾಚೆ ಶೋಭಾ ಕರಂದ್ಲಾಜೆ ಪರ ಪ್ರಚಾರ ಮಾಡುತ್ತಿದ್ದ ಕೆಲವರು ಮೋದಿ ಅಧಿಕಾರಕ್ಕೆ ಬಂದರೆ ಪೆಟ್ರೋಲ್ ಹದಿನೈದು ರೂಪಾಯಿ ಪ್ರತೀ ಲೀಟರ್ ನಂತೆ ಸಿಗುತ್ತೆ ಎಂದವರು ಇವತ್ತು ತಮ್ಮ ಬೈಕು, ರಿಕ್ಷಾ ಮಾರಿ ಜೈ ಮೋದಿ, ಜೈ ಮೋದಿ ಎಂದು ಎರಡು ರೂಪಾಯಿಗಾಗಿ ಹತ್ತಾರು ವಾಲ್‍ಗಳಲ್ಲಿ ಕಕ್ಕ ಮಾಡಿ ಬಂದ ದುಡ್ಡಲ್ಲಿ ಸಂಜೆಯಾದೊಡನೆ ಪಿಂಟ್ ಹಾಗೂ ಬೀಫ್/ಪೋರ್ಕ್ ಚಿಲ್ಲಿ ಮೆಲ್ಲುತ್ತಿದ್ದಾರೆ” ಎಂದು ತಮ್ಮ ಆಕ್ರೋಷ ವ್ಯಕ್ತಪಡಿಸಿದ್ದಾರೆ.

ಇನ್ನು ಟ್ವಿಟರ್ ನಲ್ಲಿಯೂ ಪೆಟ್ರೋಲ್ ಬೆಲೆ ಏರಿಕೆಯ ವಿರುದ್ಧ ಖಂಡನೆ ವ್ಯಕ್ತವಾಗಿದ್ದು, #petrolprice ಎಂದು ಟ್ರೆಂಡಿಂಗ್ ಆಗುತ್ತಿದೆ. ನೂರಾರು ಟ್ವಿಟರ್ ಬಳಕೆದಾರರು ಈ ಹ್ಯಾಶ್ ಟ್ಯಾಗ್ ಬಳಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪೆಟ್ರೋಲ್ ಬೆಲೆ ಏರಿಕೆಯಾಗಿದ್ದಾಗ ಬಿಜೆಪಿಗರು ಪ್ರತಿಭಟನೆ ಮಾಡಿದ್ದ ಫೋಟೋಗಳನ್ನು ತೆಗೆದುಕೊಂಡು, ಈಗಿನ ಸಂದರ್ಭದಲ್ಲಿ ಸುಮ್ಮನಿರುವಂತೆ ಎಡಿಟ್ ಮಾಡಿ ಹಲವರು ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: ಸತತ 15 ನೇ ದಿನವೂ ಏರಿಕೆ, 2 ವರ್ಷಗಳಲ್ಲೇ ಪೆಟ್ರೋಲ್ ಬೆಲೆ ಅಧಿಕ: ಬೆಂಗಳೂರಿನಲ್ಲಿ 81.44 ರೂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿಧಾನಸಭಾ ಚುನಾವಣೆಗೂ ಮುನ್ನ ಎಐಎಡಿಎಂಕೆಯಿಂದ ಉಚ್ಚಾಟನೆಗೊಂಡ ಮಾಜಿ ಸಿಎಂ ಪನ್ನೀರ್‌ಸೆಲ್ವಂ, ಪ್ರತಿಸ್ಪರ್ಧಿ ಡಿಎಂಕೆ ಪಕ್ಷಕ್ಕೆ ಸೇರ್ಪಡೆ

ಮೂರು ಬಾರಿ ತಮಿಳುನಾಡು ಮುಖ್ಯಮಂತ್ರಿ ಮತ್ತು ಜೆ ಜಯಲಲಿತಾ ಅವರ ದೀರ್ಘಕಾಲದ ಸಹಾಯಕರಾಗಿದ್ದ ಪನ್ನೀರ್‌ಸೆಲ್ವಂ ಅವರನ್ನು ಎಡಪ್ಪಾಡಿ ಕೆ ಪಳನಿಸ್ವಾಮಿ (ಇಪಿಎಸ್) ಅವರೊಂದಿಗಿನ ತೀವ್ರ ಅಧಿಕಾರ ಹೋರಾಟದ ನಂತರ 2022 ರಲ್ಲಿ ಎಐಎಡಿಎಂಕೆಯಿಂದ...

‘ನಾನು ಭ್ರಷ್ಟನಲ್ಲ’: ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯದಿಂದ ಕ್ಲೀನ್ ಚಿಟ್; ಮಾಧ್ಯಮಗಳೆದುರು ಭಾವುಕರಾದ ಕೇಜ್ರಿವಾಲ್

ದೆಹಲಿಯ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರನ್ನು ಮತ್ತು ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಅಬಕಾರಿ ನೀತಿ ಪ್ರಕರಣದಲ್ಲಿ ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದ ಕೆಲವೇ ಕ್ಷಣಗಳಲ್ಲಿ, ಫೆಬ್ರವರಿ 27, ಶುಕ್ರವಾರದಂದು ಮಾಧ್ಯಮಗಳ...

‘ಮುಸ್ಲಿಮರ ವಿರುದ್ಧ ದ್ವೇಷ ಭಾಷಣ’: ಅಸ್ಸಾಂ ಸಿಎಂ ಹಿಮಂತ ಶರ್ಮಾಗೆ ನೋಟಿಸ್ ಜಾರಿ ಮಾಡಿದ ಗುವಾಹಟಿ ಹೈಕೋರ್ಟ್

ಗುವಾಹಟಿ: ಮುಸ್ಲಿಮರನ್ನು ಗುರಿಯಾಗಿಸಿಕೊಂಡು "ದ್ವೇಷ ಭಾಷಣ" ಮಾಡಿದ್ದಾರೆ ಎಂಬ ಆರೋಪದ ಮೇಲೆ ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರಿಗೆ ಗುವಾಹಟಿ ಹೈಕೋರ್ಟ್ ಗುರುವಾರ ನೋಟಿಸ್ ಜಾರಿ ಮಾಡಿದೆ. ಬಂಗಾಳಿ ಮೂಲದ ಮುಸ್ಲಿಮರನ್ನು ಗುರಿಯಾಗಿಸಿಕೊಂಡು...

ಅಫ್ಘಾನಿಸ್ತಾನದೊಂದಿಗೆ ‘ಮುಕ್ತ ಯುದ್ಧ’ ಘೋಷಿಸಿದ ಪಾಕಿಸ್ತಾನ; ತಾಲಿಬಾನ್‌ ವಿರುದ್ಧ ಆಪರೇಷನ್‌ ಗಜಬ್-ಲಿಲ್‌-ಹಕ್‌ ಆರಂಭಿಸಿದ ಪಾಕ್‌ ಸೇನೆ!

ಅಫ್ಘಾನಿಸ್ತಾನದೊಂದಿಗಿನ ಉದ್ವಿಗ್ನತೆಯನ್ನು ಇಸ್ಲಾಮಾಬಾದ್ ಔಪಚಾರಿಕವಾಗಿ ಹೆಚ್ಚಿಸಿದೆ, ಹಂಚಿಕೆಯ ಗಡಿಯಲ್ಲಿ ಹೊಸ ಮತ್ತು ಮಾರಕ ಘರ್ಷಣೆಗಳ ನಂತರ ತಾಲಿಬಾನ್ ನೇತೃತ್ವದ ಸರ್ಕಾರದ ವಿರುದ್ಧ ಮುಕ್ತ ಯುದ್ಧ ಎಂದು ಘೋಷಿಸಿದೆ.  ಶುಕ್ರವಾರ ಮುಂಜಾನೆ ಕಾಬೂಲ್ ಮತ್ತು ಕಂದಹಾರ್‌ನಲ್ಲಿ...

ಎಬಿವಿಪಿ ದಾಂಧಲೆ : ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ ವಿದ್ಯಾರ್ಥಿಗಳ ವಿರುದ್ಧ ದೂರು ದಾಖಲಿಸಿದ ಅಜೀಂ ಪ್ರೇಮ್ ಜಿ ವಿವಿ

ಅಜೀಂ ಪ್ರೇಮ್‌ ಜಿ ವಿಶ್ವವಿದ್ಯಾಲಯಕ್ಕೆ (ಎಪಿಯು) ಎಬಿವಿಪಿ ಸದಸ್ಯರು ನುಗ್ಗಿ ದಾಂಧಲೆ ನಡೆಸಿದ ಬಳಿಕ, ಕ್ಯಾಂಪಸ್‌ನಲ್ಲಿ ಚರ್ಚಾ ಕಾರ್ಯಕ್ರಮ ಆಯೋಜಿಸಿದ್ದ 'ಸ್ಪಾರ್ಕ್ ರೀಡಿಂಗ್ ಸರ್ಕಲ್' ಎಂಬ ಸಾಮಾಜಿಕ ಮಾಧ್ಯಮ ಪುಟದ ವಿರುದ್ಧ ಕುಲಸಚಿವರು...

2019ರ ಈಸ್ಟರ್ ದಾಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಮಾಜಿ ಗುಪ್ತಚರ ಮುಖ್ಯಸ್ಥರ ಬಂಧನ

2019ರ ಈಸ್ಟರ್ ಭಾನುವಾರದ ಬಾಂಬ್ ಸ್ಫೋಟಗಳಿಗೆ ಸಂಬಂಧಿಸಿದಂತೆ ಶ್ರೀಲಂಕಾದ ಅಪರಾಧ ತನಿಖಾಧಿಕಾರಿಗಳು ಮಾಜಿ ರಾಜ್ಯ ಗುಪ್ತಚರ ಸೇವೆ (SIS) ಮುಖ್ಯಸ್ಥ ನಿವೃತ್ತ ಮೇಜರ್ ಜನರಲ್ ಸುರೇಶ್ ಸಲ್ಲೇ ಅವರನ್ನು ಬಂಧಿಸಿದ್ದಾರೆ ಎಂದು ಪೊಲೀಸ್...

ಹೈದರಾಬಾದ್| ವಿಡಿಯೋ ಗೇಮ್ ಆಡಬೇಡ ಎಂದಿದ್ದಕ್ಕೆ ನೇಣಿಗೆ ಶರಣಾದ 12 ವರ್ಷದ ಬಾಲಕ

ವಿಡಿಯೋ ಗೇಮ್ ಆಡಿದ್ದಕ್ಕಾಗಿ ತಂದೆ ನಿರಂತರವಾಗಿ ಬೈಯುತ್ತಿದ್ದ ಕಾರಣ 12 ವರ್ಷದ ಬಾಲಕ (ಫೆ.26) ಗುರುವಾರ ತನ್ನ ಮನೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ ಎಂದು 'ಸಿಯಾಸತ್' ವರದಿ ಮಾಡಿದೆ. ಬಂಜಾರಾ ಹಿಲ್ಸ್‌ನ...

‘ಕೋಮು ಸಾಮರಸ್ಯ ಕದಡುವ ಸಾಧ್ಯತೆ’: ‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ಕೇರಳ ಹೈಕೋರ್ಟ್ ತಡೆ

'ಕೇರಳ ಸ್ಟೋರಿ 2 : ಗೋಸ್ ಬಿಯಾಂಡ್' ಸಿನಿಮಾದ ಸೆನ್ಸಾರ್ ಪ್ರಮಾಣೀಕರಣವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಿದ ಕೇರಳ ಹೈಕೋರ್ಟ್, ಗುರುವಾರ (ಫೆ.26) ಸಿನಿಮಾದ ಬಿಡುಗಡೆಗೆ ತಡೆ ನೀಡಿದೆ. ಸಿನಿಮಾ ನಾಳೆ...

ಕೈದಿಗಳಿಗೆ ನಿಯತಕಾಲಿಕ ವೈದ್ಯಕೀಯ ತಪಾಸಣೆಯ ಹಕ್ಕಿದೆ: ಮದ್ರಾಸ್ ಹೈಕೋರ್ಟ್ 

ಮದ್ರಾಸ್ ಹೈಕೋರ್ಟ್‌ನ ಮಧುರೈ ಪೀಠವು, ಪ್ರತಿಯೊಬ್ಬ ಕೈದಿಯೂ ನಿಯತಕಾಲಿಕ ವೈದ್ಯಕೀಯ ತಪಾಸಣೆಗೆ ಅರ್ಹನಾಗಿದ್ದು, ಅಂತಹ ಆರೋಗ್ಯ ರಕ್ಷಣೆ ಸಂವಿಧಾನದ 21ನೇ ವಿಧಿಯ ಅಡಿಯಲ್ಲಿ ಖಾತರಿಪಡಿಸಲಾದ ಜೀವಿಸುವ ಹಕ್ಕು ಮತ್ತು ವೈಯಕ್ತಿಕ ಸ್ವಾತಂತ್ರ್ಯದ ವ್ಯಾಪ್ತಿಗೆ...

ಡಿಜೆ ಮ್ಯೂಸಿಕ್ ವಿವಾದ: ಅಲಿಗಢದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ಮೇಲೆ ದಾಳಿ

ಉತ್ತರ ಪ್ರದೇಶ ರಾಜ್ಯದ ಅಲಿಗಢ ಸಮೀಪದ ಸುನಾನಾ ಗ್ರಾಮದಲ್ಲಿ ಮಂಗಳವಾರ ರಾತ್ರಿ ನಡೆದ ಬಾರಾತ್ ಸಮಯದಲ್ಲಿ ಹಾಕಿದ್ದ ಡಿಜೆ ಮ್ಯೂಸಿಕ್‌ನಿಂದ ವಿವಾದ ಉಂಟಾಗಿದ್ದು, ದಲಿತ ಕುಟುಂಬದ ಮದುವೆ ಮೆರವಣಿಗೆಯ ಮೇಲೆ ದಾಳಿ ಮಾಡಲಾಗಿದೆ...