Homeಮುಖಪುಟಸತತ 10ನೇ ದಿನವೂ ಪೆಟ್ರೋಲ್ ಬೆಲೆ ಏರಿಕೆ: ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಖಂಡನೆ

ಸತತ 10ನೇ ದಿನವೂ ಪೆಟ್ರೋಲ್ ಬೆಲೆ ಏರಿಕೆ: ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಖಂಡನೆ

- Advertisement -
- Advertisement -

ಕಳೆದ ಹತ್ತು ದಿನಗಳಿಂದ ಪೆಟ್ರೋಲ್ ಬೆಲೆಯು ಒಂಭತ್ತು ಬಾರಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ಇದನ್ನು ವಿರೋಧಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ. ಟ್ವಿಟ್ಟರ್‌ನಲ್ಲಿ #petrolprice  ಟ್ರೆಂಡಿಂಗ್ ಆಗುತ್ತಿದೆ. ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ಲೀಟರಿಗೆ Rs 84.39 ರೂಗೆ ತಲುಪಿದೆ.

“ಯಾರಾದರೂ ಪೆಟ್ರೋಲ್ ಬೆಲೆ ಏರಿಕೆಯ ಕುರಿತು ಏನನ್ನಾದರೂ ಹೇಳುವುದು ಇದೆಯೇ? ಅಥವಾ ಅವರ ಮೇಲಿನ ಭಕ್ತಿಯಿಂದ ನಿಮ್ಮ ವಾಹನಗಳನ್ನು ಓಡಿಸುವುದನ್ನು ನಿಲ್ಲಿಸುತ್ತೀರೋ?” ಎಂದು ಗ್ರೀಷ್ಮಾ ಶುಕ್ಲಾ ಎಂಬುವವರು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಬೆಲೆ ಏರಿಕೆಯನ್ನು ಖಂಡಿಸಿ ಬೀದಿಗಿಳಿದು ತೀವ್ರ ಪ್ರತಿಭಟನೆ ಮಾಡಿದ್ದ ಬಿಜೆಪಿಗರು ಇಂದು ಸಮ್ಮುನಿರುವುದೇಕೆ ಎಂದು ಹಲವರು ಸಾಮಾಜಿಕ ಮಾದ್ಯಮಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫೆಸ್ ಬುಕ್ ನಲ್ಲಿ Gladson Almeida ಎನ್ನುವವರು ಪೆಟ್ರೋಲ್ ಬೆಲೆ ಏರಿಕೆಯ ಕುರಿತು ತಮ್ಮ ಬರಹವೊಂದನ್ನು ಹಂಚಿಕೊಂಡಿದ್ದರು. ಅದು ವೈರಲ್‌ ಆಗಿದ್ದು, ಹಲವರು ಅದನ್ನು ಹಂಚಿಕೊಂಡಿದ್ದಾರೆ.

“ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತೀ ಬ್ಯಾರೆಲಿಗೆ ಇವತ್ತು 45 ಡಾಲರ್. ಅಂದರೆ ಭಾರತಕ್ಕೆ ಪ್ರತೀ ಲೀಟರ್ ಪೆಟ್ರೋಲ್ Rs 21 ಕ್ಕೆ ಸಿಗುತ್ತೆ. ಅದಕ್ಕೆ ಸಂಸ್ಕರಣಾ ಹಾಗೂ ವಿತರಣಾ ವೆಚ್ಚ ಸೇರಿ ಪ್ರತೀ ಲೀಟರ್ ಪೆಟ್ರೋಲ್ ಗೆ Rs 29-30 ಆಗಬಹುದು. ಮಿಕ್ಕ ಐವತ್ತು ರೂಪಾಯಿಗಿಂತ ಹೆಚ್ಚಿನದ್ದು ತೆರಿಗೆ. ಈ ಐವತ್ತೊಂದು ರೂಪಾಯಿ ತೆರಿಗೆಯಲ್ಲಿ ಕೇಂದ್ರ ಸರಕಾರದ ಅಬಕಾರಿ ತೆರಿಗೆ ಪ್ರತೀ ಲೀಟರ್ ಪೆಟ್ರೋಲ್ ಮೇಲೆ Rs 32.98.” ಎಂದು ಫೇಸ್ ಬುಕ್ ಬರಹದಲ್ಲಿ ಹೇಳಿದ್ದಾರೆ.

‘ಯುಪಿಎ ಸರಕಾರದ ಆಡಳಿತವಿದ್ದ ಹತ್ತು ವರುಷಗಳಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಪ್ರತೀ ಬ್ಯಾರಲ್ ಕಚ್ಚಾ ತೈಲದ ಬೆಲೆ ಸರಾಸರಿಯಾಗಿ 80-90 ಡಾಲರ್ ಇತ್ತು. ಅಂದರೆ ಈಗಿನ ಬೆಲೆಯ ದುಪ್ಪಟ್ಟು. ಕೆಲವೊಮ್ಮೆ ಪ್ರತೀ ಬ್ಯಾರೆಲಿಗೆ 120 ಡಾಲರ್ ತನಕ ಹೋಗಿತ್ತು. ಆದರೆ ಈ ಇಡೀ ಅವಧಿಯಲ್ಲಿ ಕೇಂದ್ರ ಸರಕಾರ ವಿಧಿಸಿದ ಅತೀ ಹೆಚ್ಚಿನ ಅಬಕಾರಿ ಸುಂಕ Rs 9.50. ಮಾತ್ರ’ ಎಂದು ಹೇಳಿದ್ದಾರೆ.

“ಅದಾಗ್ಯೂ ಅಬ್ಬಾ ಏನ್ ಪ್ರತಿಭಟನೆ, ಎಂಥಾ ಉಗ್ರ ಗಲಾಟೆ. ಸ್ಮ್ರತಿ ಇರಾನಿ, ಮಾಳವಿಕಾ ಅವಿನಾಶ್, ಶೃತಿ, ತಾರಾ, ಕೆನಡಾದ ವಲಸೆ ಕಾರ್ಮಿಕ ಅಕ್ಷಯ್ ಕುಮಾರು, ಅನುಪಮ್ ಖೇರ್, ಜೂಹಿ ಚಾವ್ಲಾ, ಮುಖ್ಯಮಂತ್ರಿ ನರೇಂದ್ರ ಮೋದಿಯವರ ನೇತ್ರತ್ವದಲ್ಲಿ ಎಂಥಾ ವೈವಿಧ್ಯಮಯ ಪ್ರತಿಭಟನೆ, ಭಾರತ್ ಬಂದ್, ರಾಸ್ತಾ ರೋಕೋಗಳು!”

‘ಆದರೆ ಈ ಸರಕಾರ ಅಬಕಾರಿ ಸುಂಕವನ್ನು ಮುನ್ನೂರೈವತ್ತು ಪಟ್ಟು ಹೆಚ್ಚಿಸಿದರೂ ಒಬ್ಬನೇ ಒಬ್ಬ ಕಮಕ್-ಕಿಮಕ್ ಅನ್ನಲ್ಲ. ಬೇರೇ ದಿನಗಳಲ್ಲಿ ಹತ್ತು ರುಪಾಯಿ ಸುಂಕ ಕೊಡುತ್ತಿದ್ದವರು ಇವತ್ತು ಅಚ್ಚೆ ದಿನ್‍ ಕಾಲದಲ್ಲಿ ಮೂವತ್ತೆರಡು ರೂಪಾಯಿ ಸುಂಕ ಕೊಟ್ಟೂ ನವರಂಧ್ರಗಳಲ್ಲಿ ಬೆಣೆ ಹಾಕಿ ಕುಳಿತುಕೊಂಡಿದ್ದಾರೆ. ನಮ್ಮಾಚೆ ಶೋಭಾ ಕರಂದ್ಲಾಜೆ ಪರ ಪ್ರಚಾರ ಮಾಡುತ್ತಿದ್ದ ಕೆಲವರು ಮೋದಿ ಅಧಿಕಾರಕ್ಕೆ ಬಂದರೆ ಪೆಟ್ರೋಲ್ ಹದಿನೈದು ರೂಪಾಯಿ ಪ್ರತೀ ಲೀಟರ್ ನಂತೆ ಸಿಗುತ್ತೆ ಎಂದವರು ಇವತ್ತು ತಮ್ಮ ಬೈಕು, ರಿಕ್ಷಾ ಮಾರಿ ಜೈ ಮೋದಿ, ಜೈ ಮೋದಿ ಎಂದು ಎರಡು ರೂಪಾಯಿಗಾಗಿ ಹತ್ತಾರು ವಾಲ್‍ಗಳಲ್ಲಿ ಕಕ್ಕ ಮಾಡಿ ಬಂದ ದುಡ್ಡಲ್ಲಿ ಸಂಜೆಯಾದೊಡನೆ ಪಿಂಟ್ ಹಾಗೂ ಬೀಫ್/ಪೋರ್ಕ್ ಚಿಲ್ಲಿ ಮೆಲ್ಲುತ್ತಿದ್ದಾರೆ” ಎಂದು ತಮ್ಮ ಆಕ್ರೋಷ ವ್ಯಕ್ತಪಡಿಸಿದ್ದಾರೆ.

ಇನ್ನು ಟ್ವಿಟರ್ ನಲ್ಲಿಯೂ ಪೆಟ್ರೋಲ್ ಬೆಲೆ ಏರಿಕೆಯ ವಿರುದ್ಧ ಖಂಡನೆ ವ್ಯಕ್ತವಾಗಿದ್ದು, #petrolprice ಎಂದು ಟ್ರೆಂಡಿಂಗ್ ಆಗುತ್ತಿದೆ. ನೂರಾರು ಟ್ವಿಟರ್ ಬಳಕೆದಾರರು ಈ ಹ್ಯಾಶ್ ಟ್ಯಾಗ್ ಬಳಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪೆಟ್ರೋಲ್ ಬೆಲೆ ಏರಿಕೆಯಾಗಿದ್ದಾಗ ಬಿಜೆಪಿಗರು ಪ್ರತಿಭಟನೆ ಮಾಡಿದ್ದ ಫೋಟೋಗಳನ್ನು ತೆಗೆದುಕೊಂಡು, ಈಗಿನ ಸಂದರ್ಭದಲ್ಲಿ ಸುಮ್ಮನಿರುವಂತೆ ಎಡಿಟ್ ಮಾಡಿ ಹಲವರು ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: ಸತತ 15 ನೇ ದಿನವೂ ಏರಿಕೆ, 2 ವರ್ಷಗಳಲ್ಲೇ ಪೆಟ್ರೋಲ್ ಬೆಲೆ ಅಧಿಕ: ಬೆಂಗಳೂರಿನಲ್ಲಿ 81.44 ರೂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿವಾಸದಲ್ಲಿ ನಗದು ಪತ್ತೆ ಪ್ರಕರಣದಲ್ಲಿ ಸಿಲುಕಿದ್ದ ನ್ಯಾಯಮೂರ್ತಿ ಯಶವಂತ್ ವರ್ಮಾ ರಾಜೀನಾಮೆ

ತಮ್ಮ ನಿವಾಸದಲ್ಲಿ ನಗದು ಪತ್ತೆ ಆರೋಪದ ಕೇಂದ್ರಬಿಂದುವಾಗಿದ್ದ ಅಲಹಾಬಾದ್ ಹೈಕೋರ್ಟ್ ನ್ಯಾಯಾಧೀಶ ನ್ಯಾಯಮೂರ್ತಿ ಯಶವಂತ್ ವರ್ಮಾ ಅವರು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ತಮ್ಮ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಕಳೆದ ವರ್ಷ ಏಪ್ರಿಲ್ 5...

ಆಂಧ್ರಪ್ರದೇಶ: ಬೇಸಿಗೆ ವಿಹಾರಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಮುಳುಗಿ ಸಾವು 

ಅನಂತಗಿರಿ: ಬೇಸಿಗೆ ವಿಹಾಕ್ಕೆಂದು ತೆರಳಿದ್ದ ಮೂವರು ಅಪ್ರಾಪ್ತ ಬಾಲಕಿಯರು ಅನಂತಗಿರಿ ಜಲಪಾತದಲ್ಲಿ ಸೆಲ್ಫಿ ತೆಗೆದುಕೊಳ್ಳಲು ಜಲಪಾತಕ್ಕೆ ಇಳಿದು ನೀರಲ್ಲಿ ಮುಳುಗಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಅಲ್ಲೂರಿ ಸೀತಾರಾಮರಾಜು ಮೂಲಗುಮ್ಮಿ ಗ್ರಾಮದಲ್ಲಿ ನಾಲ್ವರು...

ಶಬರಿಮಲೆ ತುಪ್ಪ ಮಾರಾಟ ಹಗರಣ: ತನಿಖೆ ಪೂರ್ಣಗೊಳಿಸಲು ವಿಎಸಿಬಿಗೆ 30 ದಿನ ಕಾಲಾವಕಾಶ ನೀಡಿದ ಕೇರಳ ಹೈಕೋರ್ಟ್ 

ಕೊಚ್ಚಿ: ಶಬರಿಮಲೆಯ ಅಯ್ಯಪ್ಪ ದೇಗುಲದಲ್ಲಿ ಭಕ್ತರಿಗೆ ಮಾರಾಟವಾಗುವ ಪವಿತ್ರ ನೈವೇದ್ಯ 'ಆದಿಯ ಸಿಷ್ಟಂ ತುಪ್ಪ' ಮಾರಾಟಕ್ಕೆ ಸಂಬಂಧಿಸಿದಂತೆ ಟಿಡಿಬಿ ನೌಕರರು ಹಣ ದುರುಪಯೋಗಪಡಿಸಿಕೊಂಡಿದ್ದಾರೆ ಎಂಬ ಆರೋಪದ ತನಿಖೆಯನ್ನು ಪೂರ್ಣಗೊಳಿಸಲು ಕೇರಳ ಹೈಕೋರ್ಟ್ ಜಾಗೃತ...

ಧಾರ್ಮಿಕ ಆಚರಣೆ ಹೆಸರಿನಲ್ಲಿ ನರ್ಮದಾ ನದಿಗೆ 11,000 ಲೀಟರ್ ಹಾಲು ಸುರಿದ ಭಕ್ತರು

ಮಧ್ಯಪ್ರದೇಶದ ಅನುಪ್ಪುರ್ ಜಿಲ್ಲೆಯ ನರ್ಮದಾ ನದಿ ದಂಡೆಯಲ್ಲಿ ಬುಧವಾರ ನಡೆದ ಧಾರ್ಮಿಕ ಆಚರಣೆಯ ಸಂದರ್ಭದಲ್ಲಿ 11,000 ಲೀಟರ್ ಹಾಲು ನರ್ಮದಾ ನದಿಗೆ ಸುರಿಯಲಾಗಿದ್ದು, ಇದು ನಂಬಿಕೆ ಮತ್ತು ಪರಿಸರ ಹಾನಿಯ ಕುರಿತು ಚರ್ಚೆಗೆ...

ಪಶ್ಚಿಮ ಬಂಗಾಳ: ಹುಮಾಯೂನ್ ಕಬೀರ್ ಪಕ್ಷದೊಂದಿಗಿನ ಮೈತ್ರಿ ಹಿಂತೆಗೆದುಕೊಂಡ ಎಐಎಂಐಎಂ; ಸ್ವತಂತ್ರ ಸ್ಪರ್ಧೆ ಘೋಷಣೆ

ಮುಂಬರುವ ಪಶ್ಚಿಮ ಬಂಗಾಳ ಚುನಾವಣೆಯಲ್ಲಿ ಹುಮಾಯೂನ್ ಕಬೀರ್ ನೇತೃತ್ವದ ಪಕ್ಷದೊಂದಿಗಿನ ಮೈತ್ರಿಯಿಂದ ಹಿಂದೆ ಸರಿಯುತ್ತಿರುವುದಾಗಿ ಆಲ್ ಇಂಡಿಯಾ ಮಜ್ಲಿಸ್-ಎ-ಇತ್ತೆಹಾದುಲ್ ಮುಸ್ಲಿಮೀನ್ (ಎಐಎಂಐಎಂ) ಘೋಷಿಸಿದೆ. ಕಬೀರ್ ಅವರ ಹೇಳಿಕೆಗಳು ಮತ್ತು ಬಹಿರಂಗಪಡಿಸುವಿಕೆಗಳು "ಮುಸ್ಲಿಮರ ಸಮಗ್ರತೆ"ಯ ಬಗ್ಗೆ...

ಏಕನಾಥ್ ಶಿಂಧೆ ಕುರಿತ ಹೇಳಿಕೆ ವಿವಾದ; ‘ಕ್ಷಮೆಯಾಚಿಸುವುದಿಲ್ಲ’ ಎಂದ ಕುನಾಲ್ ಕಮ್ರಾ

ಕೋಮುವಾದಿ ರಾಜಕಾರಣವನ್ನು ವಿರೋಧಿಸುತ್ತಾ ಬಲಪಂಥೀಯ ರಾಜಕೀಯವನ್ನು ವಿಡಂಬನೆ ಮಾಡುವ ಭಾರತದ ಖ್ಯಾತ 'ಸ್ಟಾಂಡಪ್‌ ಕಾಮಿಡಿಯನ್' ಕುನಾಲ್ ಕಮ್ರಾ ಗುರುವಾರ ಮಹಾರಾಷ್ಟ್ರ ಶಾಸಕಾಂಗ ಸಮಿತಿಯ ಮುಂದೆ ಹಾಜರಾದರು. "ಮಹಾರಾಷ್ಟ್ರ ಉಪಮುಖ್ಯಮಂತ್ರಿ ಏಕನಾಥ್ ಶಿಂಧೆಯನ್ನು ಗುರಿಯಾಗಿಸಿಕೊಂಡು...

ಪಶ್ಚಿಮ ಏಷ್ಯಾ ಬಿಕ್ಕಟ್ಟು| ’10 ಅಂಶಗಳ ಪ್ರಸ್ತಾವನೆಯ ಮೂರು ಷರತ್ತುಗಳನ್ನು ಉಲ್ಲಂಘಿಸಲಾಗಿದೆ’: ‘ಕದನ ವಿರಾಮ’ದ ಮರುದಿನ ಇರಾನ್ ಹೇಳಿಕೆ

ಮಂಗಳವಾರ ಒಪ್ಪಿಕೊಂಡ ಕದನ ವಿರಾಮದ ನಿಯಮಗಳನ್ನು ಅಮೆರಿಕ ಉಲ್ಲಂಘಿಸಿದೆ ಎಂದು ಇರಾನ್ ಸಂಸತ್ತಿನ ಸ್ಪೀಕರ್ ಎಂ.ಬಿ ಗಾಲಿಬಾಫ್ ಬುಧವಾರ ಆರೋಪಿಸಿದ್ದಾರೆ. ತಮ್ಮ ಅಧಿಕೃತ ಸಾಮಾಜಿಕ ಮಾಧ್ಯಮ  X ನಲ್ಲಿ ಈಬರೆದಿರುವ ಗಾಲಿಬಾಫ್, ಅಮೆರಿಕದ ಬಗ್ಗೆ...

ಬಂಗಾಳ ಚುನಾವಣೆ: ಬಿಜೆಪಿ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ ಆರ್‌ಜಿ-ಕರ್ ಸಂತ್ರಸ್ತೆ ತಾಯಿ

ಕರ್ತವ್ಯದಲ್ಲಿರುವಾಗಲೇ ಅತ್ಯಾಚಾರಕ್ಕೊಳಗಾಗಿ ಸಾವನ್ನಪ್ಪಿದ ಆರ್‌ಜಿಕರ್ ಆಸ್ಪತ್ರೆಯ ವೈದ್ಯೆಯ ತಾಯಿ ರತ್ನಾ ದೇಬ್ನಾಥ್ ಅವರು ಪಾಣಿಹತಿಯ ಬಿಜೆಪಿ ಅಭ್ಯರ್ಥಿಯಾಗಿ ಗುರುವಾರ ತಮ್ಮ ನಾಮಪತ್ರ ಸಲ್ಲಿಸಿದ್ದಾರೆ. ಅವರೊಂದಿಗೆ ಬಿಜೆಪಿಯ ಹಿರಿಯ ನಾಯಕಿ ಮತ್ತು ಮಾಜಿ ಕೇಂದ್ರ ಸಚಿವೆ...

‘ಮುಸ್ಲಿಮರನ್ನು ಮರುಳು ಮಾಡುವುದು ಸುಲಭ’: ಹುಮಾಯೂನ್ ಕಬೀರ್ ವಿಡಿಯೋ ವಿವಾದ: ತನಿಖೆಗೆ ಟಿಎಂಸಿ ಒತ್ತಾಯ

ಪಶ್ಚಿಮ ಬಂಗಾಳದಲ್ಲಿ ಗುರುವಾರ ರಾಜಕೀಯ ವಿವಾದ ಭುಗಿಲೆದ್ದಿದ್ದು, ಹುಮಾಯೂನ್ ಕಬೀರ್ ಅವರ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ಕಾಣಿಸಿಕೊಂಡಿದ್ದು, ಇದರಲ್ಲಿ ಅವರು ಹಿರಿಯ ಬಿಜೆಪಿ ನಾಯಕರೊಂದಿಗೆ ಸಂಪರ್ಕ ಹೊಂದಿದ್ದಾರೆ ಮತ್ತು ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ...

ಲೆಬನಾನ್ ಮೇಲೆ ‘ಅಗತ್ಯವಿರುವಲ್ಲೆಲ್ಲಾ’ ದಾಳಿ ಮುಂದುವರಿಸುವುದಾಗಿ ಘೋಷಿಸಿದ ನೆತನ್ಯಾಹು; ಹಿಜ್ಬೊಲ್ಲಾದ ಉನ್ನತ ಅಧಿಕಾರಿ ಹತ್ಯೆ 

ಇಸ್ರೇಲ್, ಲೆಬನಾನ್ ಮೇಲೆ ದಾಳಿ ಮಾಡಿದ ಮರುದಿನ, ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಗುರುವಾರ, ಇರಾನ್ ಬೆಂಬಲಿತ ಹೆಜ್ಬೊಲ್ಲಾ ಮೇಲೆ "ಅಗತ್ಯವಿರುವಲ್ಲೆಲ್ಲಾ" ದಾಳಿ ಮುಂದುವರಿಸುವುದಾಗಿ ಘೋಷಿಸಿದ್ದಾರೆ. ಇಸ್ರೇಲಿ ಸೇನೆಯು ಗುರುವಾರ ದಕ್ಷಿಣ ಲೆಬನಾನ್‌ನಲ್ಲಿ ಮತ್ತಷ್ಟು...