Homeಮುಖಪುಟಸತತ 10ನೇ ದಿನವೂ ಪೆಟ್ರೋಲ್ ಬೆಲೆ ಏರಿಕೆ: ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಖಂಡನೆ

ಸತತ 10ನೇ ದಿನವೂ ಪೆಟ್ರೋಲ್ ಬೆಲೆ ಏರಿಕೆ: ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಖಂಡನೆ

- Advertisement -
- Advertisement -

ಕಳೆದ ಹತ್ತು ದಿನಗಳಿಂದ ಪೆಟ್ರೋಲ್ ಬೆಲೆಯು ಒಂಭತ್ತು ಬಾರಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ಇದನ್ನು ವಿರೋಧಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ. ಟ್ವಿಟ್ಟರ್‌ನಲ್ಲಿ #petrolprice  ಟ್ರೆಂಡಿಂಗ್ ಆಗುತ್ತಿದೆ. ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ಲೀಟರಿಗೆ Rs 84.39 ರೂಗೆ ತಲುಪಿದೆ.

“ಯಾರಾದರೂ ಪೆಟ್ರೋಲ್ ಬೆಲೆ ಏರಿಕೆಯ ಕುರಿತು ಏನನ್ನಾದರೂ ಹೇಳುವುದು ಇದೆಯೇ? ಅಥವಾ ಅವರ ಮೇಲಿನ ಭಕ್ತಿಯಿಂದ ನಿಮ್ಮ ವಾಹನಗಳನ್ನು ಓಡಿಸುವುದನ್ನು ನಿಲ್ಲಿಸುತ್ತೀರೋ?” ಎಂದು ಗ್ರೀಷ್ಮಾ ಶುಕ್ಲಾ ಎಂಬುವವರು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಬೆಲೆ ಏರಿಕೆಯನ್ನು ಖಂಡಿಸಿ ಬೀದಿಗಿಳಿದು ತೀವ್ರ ಪ್ರತಿಭಟನೆ ಮಾಡಿದ್ದ ಬಿಜೆಪಿಗರು ಇಂದು ಸಮ್ಮುನಿರುವುದೇಕೆ ಎಂದು ಹಲವರು ಸಾಮಾಜಿಕ ಮಾದ್ಯಮಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫೆಸ್ ಬುಕ್ ನಲ್ಲಿ Gladson Almeida ಎನ್ನುವವರು ಪೆಟ್ರೋಲ್ ಬೆಲೆ ಏರಿಕೆಯ ಕುರಿತು ತಮ್ಮ ಬರಹವೊಂದನ್ನು ಹಂಚಿಕೊಂಡಿದ್ದರು. ಅದು ವೈರಲ್‌ ಆಗಿದ್ದು, ಹಲವರು ಅದನ್ನು ಹಂಚಿಕೊಂಡಿದ್ದಾರೆ.

“ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತೀ ಬ್ಯಾರೆಲಿಗೆ ಇವತ್ತು 45 ಡಾಲರ್. ಅಂದರೆ ಭಾರತಕ್ಕೆ ಪ್ರತೀ ಲೀಟರ್ ಪೆಟ್ರೋಲ್ Rs 21 ಕ್ಕೆ ಸಿಗುತ್ತೆ. ಅದಕ್ಕೆ ಸಂಸ್ಕರಣಾ ಹಾಗೂ ವಿತರಣಾ ವೆಚ್ಚ ಸೇರಿ ಪ್ರತೀ ಲೀಟರ್ ಪೆಟ್ರೋಲ್ ಗೆ Rs 29-30 ಆಗಬಹುದು. ಮಿಕ್ಕ ಐವತ್ತು ರೂಪಾಯಿಗಿಂತ ಹೆಚ್ಚಿನದ್ದು ತೆರಿಗೆ. ಈ ಐವತ್ತೊಂದು ರೂಪಾಯಿ ತೆರಿಗೆಯಲ್ಲಿ ಕೇಂದ್ರ ಸರಕಾರದ ಅಬಕಾರಿ ತೆರಿಗೆ ಪ್ರತೀ ಲೀಟರ್ ಪೆಟ್ರೋಲ್ ಮೇಲೆ Rs 32.98.” ಎಂದು ಫೇಸ್ ಬುಕ್ ಬರಹದಲ್ಲಿ ಹೇಳಿದ್ದಾರೆ.

‘ಯುಪಿಎ ಸರಕಾರದ ಆಡಳಿತವಿದ್ದ ಹತ್ತು ವರುಷಗಳಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಪ್ರತೀ ಬ್ಯಾರಲ್ ಕಚ್ಚಾ ತೈಲದ ಬೆಲೆ ಸರಾಸರಿಯಾಗಿ 80-90 ಡಾಲರ್ ಇತ್ತು. ಅಂದರೆ ಈಗಿನ ಬೆಲೆಯ ದುಪ್ಪಟ್ಟು. ಕೆಲವೊಮ್ಮೆ ಪ್ರತೀ ಬ್ಯಾರೆಲಿಗೆ 120 ಡಾಲರ್ ತನಕ ಹೋಗಿತ್ತು. ಆದರೆ ಈ ಇಡೀ ಅವಧಿಯಲ್ಲಿ ಕೇಂದ್ರ ಸರಕಾರ ವಿಧಿಸಿದ ಅತೀ ಹೆಚ್ಚಿನ ಅಬಕಾರಿ ಸುಂಕ Rs 9.50. ಮಾತ್ರ’ ಎಂದು ಹೇಳಿದ್ದಾರೆ.

“ಅದಾಗ್ಯೂ ಅಬ್ಬಾ ಏನ್ ಪ್ರತಿಭಟನೆ, ಎಂಥಾ ಉಗ್ರ ಗಲಾಟೆ. ಸ್ಮ್ರತಿ ಇರಾನಿ, ಮಾಳವಿಕಾ ಅವಿನಾಶ್, ಶೃತಿ, ತಾರಾ, ಕೆನಡಾದ ವಲಸೆ ಕಾರ್ಮಿಕ ಅಕ್ಷಯ್ ಕುಮಾರು, ಅನುಪಮ್ ಖೇರ್, ಜೂಹಿ ಚಾವ್ಲಾ, ಮುಖ್ಯಮಂತ್ರಿ ನರೇಂದ್ರ ಮೋದಿಯವರ ನೇತ್ರತ್ವದಲ್ಲಿ ಎಂಥಾ ವೈವಿಧ್ಯಮಯ ಪ್ರತಿಭಟನೆ, ಭಾರತ್ ಬಂದ್, ರಾಸ್ತಾ ರೋಕೋಗಳು!”

‘ಆದರೆ ಈ ಸರಕಾರ ಅಬಕಾರಿ ಸುಂಕವನ್ನು ಮುನ್ನೂರೈವತ್ತು ಪಟ್ಟು ಹೆಚ್ಚಿಸಿದರೂ ಒಬ್ಬನೇ ಒಬ್ಬ ಕಮಕ್-ಕಿಮಕ್ ಅನ್ನಲ್ಲ. ಬೇರೇ ದಿನಗಳಲ್ಲಿ ಹತ್ತು ರುಪಾಯಿ ಸುಂಕ ಕೊಡುತ್ತಿದ್ದವರು ಇವತ್ತು ಅಚ್ಚೆ ದಿನ್‍ ಕಾಲದಲ್ಲಿ ಮೂವತ್ತೆರಡು ರೂಪಾಯಿ ಸುಂಕ ಕೊಟ್ಟೂ ನವರಂಧ್ರಗಳಲ್ಲಿ ಬೆಣೆ ಹಾಕಿ ಕುಳಿತುಕೊಂಡಿದ್ದಾರೆ. ನಮ್ಮಾಚೆ ಶೋಭಾ ಕರಂದ್ಲಾಜೆ ಪರ ಪ್ರಚಾರ ಮಾಡುತ್ತಿದ್ದ ಕೆಲವರು ಮೋದಿ ಅಧಿಕಾರಕ್ಕೆ ಬಂದರೆ ಪೆಟ್ರೋಲ್ ಹದಿನೈದು ರೂಪಾಯಿ ಪ್ರತೀ ಲೀಟರ್ ನಂತೆ ಸಿಗುತ್ತೆ ಎಂದವರು ಇವತ್ತು ತಮ್ಮ ಬೈಕು, ರಿಕ್ಷಾ ಮಾರಿ ಜೈ ಮೋದಿ, ಜೈ ಮೋದಿ ಎಂದು ಎರಡು ರೂಪಾಯಿಗಾಗಿ ಹತ್ತಾರು ವಾಲ್‍ಗಳಲ್ಲಿ ಕಕ್ಕ ಮಾಡಿ ಬಂದ ದುಡ್ಡಲ್ಲಿ ಸಂಜೆಯಾದೊಡನೆ ಪಿಂಟ್ ಹಾಗೂ ಬೀಫ್/ಪೋರ್ಕ್ ಚಿಲ್ಲಿ ಮೆಲ್ಲುತ್ತಿದ್ದಾರೆ” ಎಂದು ತಮ್ಮ ಆಕ್ರೋಷ ವ್ಯಕ್ತಪಡಿಸಿದ್ದಾರೆ.

ಇನ್ನು ಟ್ವಿಟರ್ ನಲ್ಲಿಯೂ ಪೆಟ್ರೋಲ್ ಬೆಲೆ ಏರಿಕೆಯ ವಿರುದ್ಧ ಖಂಡನೆ ವ್ಯಕ್ತವಾಗಿದ್ದು, #petrolprice ಎಂದು ಟ್ರೆಂಡಿಂಗ್ ಆಗುತ್ತಿದೆ. ನೂರಾರು ಟ್ವಿಟರ್ ಬಳಕೆದಾರರು ಈ ಹ್ಯಾಶ್ ಟ್ಯಾಗ್ ಬಳಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪೆಟ್ರೋಲ್ ಬೆಲೆ ಏರಿಕೆಯಾಗಿದ್ದಾಗ ಬಿಜೆಪಿಗರು ಪ್ರತಿಭಟನೆ ಮಾಡಿದ್ದ ಫೋಟೋಗಳನ್ನು ತೆಗೆದುಕೊಂಡು, ಈಗಿನ ಸಂದರ್ಭದಲ್ಲಿ ಸುಮ್ಮನಿರುವಂತೆ ಎಡಿಟ್ ಮಾಡಿ ಹಲವರು ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: ಸತತ 15 ನೇ ದಿನವೂ ಏರಿಕೆ, 2 ವರ್ಷಗಳಲ್ಲೇ ಪೆಟ್ರೋಲ್ ಬೆಲೆ ಅಧಿಕ: ಬೆಂಗಳೂರಿನಲ್ಲಿ 81.44 ರೂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಖ್ಯಾತ ಪತ್ರಕರ್ತ ಪಿ. ಲಂಕೇಶ್ ಪತ್ನಿ ಇಂದಿರಾ ಲಂಕೇಶ್ ಇನ್ನಿಲ್ಲ

ಕನ್ನಡ ಪತ್ರಿಕೋದ್ಯಮದ ಧ್ರುವತಾರೆ, ದಿವಂಗತ ಪಿ. ಲಂಕೇಶ್ ಅವರ ಧರ್ಮಪತ್ನಿ ಹಾಗೂ ದಿವಂಗತ ಪತ್ರಕರ್ತೆ ಗೌರಿ ಲಂಕೇಶ್ ಅವರ ತಾಯಿಯಾದ ಇಂದಿರಾ ಲಂಕೇಶ್ (84) ಅವರು ಸೋಮವಾರ ಬೆಳಗ್ಗೆ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದ...

ಬಾಗಲಕೋಟೆಯ ವಿವಿಧ ಪ್ರದೇಶಗಳಲ್ಲಿ ಎಸ್‌ಐಆರ್‌ ವಿರುದ್ಧ ಜನಜಾಗೃತಿ ಜಾಥಾ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧ ಬಾಗಲಕೋಟೆ ನಗರದ ವಿವಿಧ ಭಾಗಗಳಲ್ಲಿ ಭಾನುವಾರ (ಜೂ.14) ಜಾಗೃತಿ ಜಾಥಾ ನಡೆಯಿತು. ನವನಗರದ ವಿದ್ಯಾಗಿರಿ ಬಸವೇಶ್ವರ ಇಂಜಿನಿಯರಿಂಗ್ ಕಾಲೇಜು ಸರ್ಕಲ್‌ನಿಂದ ಪ್ರಾರಂಭವಾದ ಜಾಥಾ...

SIR ವಿರೋಧಿ ಜನಜಾಗೃತಿ ಜಾಥಾ: ಕಾಫಿ ನಾಡು ಚಿಕ್ಕಮಗಳೂರಲ್ಲಿ ಅದ್ದೂರಿ ಸ್ವಾಗತ

ಚಿಕ್ಕಮಗಳೂರು: ರಾಜ್ಯಾದ್ಯಂತ ಐದು ವಿಭಾಗಗಳಲ್ಲಿ ಸಂಚರಿಸುತ್ತಿರುವ 'SIR ವಿರೋಧಿ ಜನಜಾಗೃತಿ ಜಾಥಾ'ದ 3ನೇ ಮಾರ್ಗದ ತಂಡಕ್ಕೆ ಕಾಫಿ ನಾಡು ಚಿಕ್ಕಮಗಳೂರಿನಲ್ಲಿ ಅದ್ದೂರಿ ಸ್ವಾಗತ ದೊರೆಯಿತು. ಭಾನುವಾರ ಬೆಳಗ್ಗೆ ಜಿಲ್ಲೆಯ ಕೊಪ್ಪ ತಾಲ್ಲೂಕಿಗೆ ಆಗಮಿಸಿದ ಜಾಥಾ...

ಚಿಕ್ಕಮಗಳೂರಿನಲ್ಲಿ ಎಸ್‌ಐಆರ್ (SIR) ವಿರೋಧಿ ಜಾಥಾ: ಮತದಾರರ ಹಕ್ಕು ಕಸಿಯುವ ಹುನ್ನಾರದ ವಿರುದ್ಧ ಆಕ್ರೋಶ

ಭಾರತ ಚುನಾವಣಾ ಆಯೋಗವು ಜಾರಿಗೆ ತಂದಿರುವ ವಿಶೇಷ ತೀವ್ರ ಪರಿಷ್ಕರಣೆ (SIR - Special Intensive Revision) ಪ್ರಕ್ರಿಯೆಯಲ್ಲಿ ಯಾವುದೇ ಅರ್ಹ ಮತದಾರರು ಪಟ್ಟಿಯಿಂದ ಹೊರಗುಳಿಯದಂತೆ ಜಾಗ್ರತೆ ವಹಿಸಬೇಕಾದ ಜವಾಬ್ದಾರಿ ನಮ್ಮೆಲ್ಲರ ಮೇಲಿದೆ....

ಮಂಗಳೂರು: ಚುನಾವಣಾ ಆಯೋಗ ಕೇಂದ್ರ ಸರ್ಕಾರದ ಮುಖವಾಣಿಯಾಗಿ ಕಾರ್ಯನಿರ್ವಹಿಸುತ್ತಿದೆ: ವಿ.ಎಸ್. ಶ್ರೀಧರ್ 

ರಾಜ್ಯದ ಆರು ಜಿಲ್ಲೆಗಳಲ್ಲಿ ಪ್ರಗತಿಪರ ಸಂಘಟನೆಗಳು, ಎದ್ದೇಳು ಕರ್ನಾಟಕ ಹಾಗೂ ಜಾತ್ಯತೀತ ಪಕ್ಷಗಳ ಒಕ್ಕೂಟವಾದ ‘ಎಸ್‌ಐಆರ್ ವಿರೋಧಿ ಕರ್ನಾಟಕ’ ನೇತೃತ್ವದಲ್ಲಿ ಹಮ್ಮಿಕೊಳ್ಳಲಾಗಿರುವ ಎಸ್‌ಐಆರ್ ಜನಜಾಗೃತಿ ಜಾಥಾದ ಭಾಗವಾಗಿ ಇಂದು (ಜೂನ್-14) ಮಂಗಳೂರಿನಲ್ಲಿ ಸಭೆ...

ಬಿಸಿಲ ನಾಡು ಕಲಬುರಗಿಯಲ್ಲಿ ಮೊಳಗಿದ SIR ವಿರೋಧಿ ಘೋಷಣೆ.

ಕೇಂದ್ರ ಚುನಾವಣಾ ಆಯೋಗ ಜಾರಿಗೆ ತಂದಿರುವ ವಿಶೇಷ ತೀವ್ರ ಮತ ಪರಿಷ್ಕರಣೆ SIR ಅನ್ನು ಕರ್ನಾಟಕದಲ್ಲಿ ಜಾರಿ ಮಾಡಬಾರದು ಎಂದು ಆಗ್ರಹಿಸಿ ಕರ್ನಾಟಕದಾದ್ಯಂತ ಎದ್ದೇಳು ಕರ್ನಾಟಕ ಹಾಗಾ SIR ವಿರೋಧಿ ಕರ್ನಾಟಕ ವೇದಿಕೆಯು...

ವಿಜಯಪುರ : ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾಗೆ ಚಾಲನೆ

ರಾಜ್ಯದ ಆರು ಜಿಲ್ಲೆಗಳಲ್ಲಿ ನಡೆಯಲಿರುವ ಎಸ್‌ಐಆರ್‌ ವಿರೋಧಿ ಜನಜಾಗೃತಿ ಜಾಥಾಗೆ ವಿಜಯಪುರದ ಅಂಬೇಡ್ಕರ್ ವೃತ್ತದಲ್ಲಿ ಶನಿವಾರ (ಜೂ.13) ಸಂಜೆ ಚಾಲನೆ ದೊರೆಯಿತು. ಜಾಥಾವನ್ನು ಉದ್ಘಾಟಿಸಿ ಮಾತನಾಡಿದ ಅಹಿಂದ ಮುಖಂಡ ಎಸ್ ಎಂ ಪಾಟೀಲ...

ಬಸವಣ್ಣನ ಕಲ್ಯಾಣದಲ್ಲಿ SIR ವಿರೋಧಿ ಜಾಥಾ.

ಬಸವಕಲ್ಯಾಣSIR ವಿರೋಧಿಸಿ ಕರ್ನಾಟಕದಾದ್ಯಂತ ನಡೆಯುತ್ತಿರುವ ಜಾಗೃತಿ ಜಾತಾವು ಬಸವಕಲ್ಯಾಣಕ್ಕೆ ತಲುಪಿತು. ಬಸವಕಲ್ಯಾಣದ ಅಂಬೇಡ್ಕರ್ ವೃತ್ತದಲ್ಲಿ ನೂರಾರು ಸಂಖ್ಯೆಯಲ್ಲಿ ಸೇರಿದ ಜನರು ಜನವಿರೋಧಿ SIR ನ್ನೂ ವಿರೋಧಿಸಿ ನಿರ್ಣಯ ಕೈಗೊಂಡರು. ಸಭೆಯಲ್ಲಿ ಮಾತನಾಡಿದ ಜಾಥಾದ ಮುಖ್ಯಸ್ಥ...

ಸಂಸದ ಬಿ.ವೈ ರಾಘವೇಂದ್ರ ನಡೆಸುತ್ತಿದ್ದ ಸಾರ್ವಜನಿಕ ಕುಂದುಕೊರತೆ ಸಭೆಯಲ್ಲಿ SIR ವಿರೋಧಿ ಜನಜಾಗೃತಿ ಜಾಥಾ ಕರಪತ್ರ ಹಂಚಿದ ಕಾರ್ಯಕರ್ತರು

ಶಿವಮೊಗ್ಗ : ಬಿಜೆಪಿ ಸಂಸದ ಬಿ.ವೈ.ರಾಘವೇಂದ್ರ ಅವರು ಜಿಲ್ಲೆಯ ಸಾಗರ ತಾಲ್ಲೂಕಿನ ರೈಲು ನಿಲ್ದಾಣದಲ್ಲಿ ಕುಂದುಕೊರತೆಗಳ ಸಭೆ ನಡೆಸುತ್ತಿದ್ದ ವೇಳೆ ಎಸ್‌ಐಆರ್ ವಿರುದ್ಧ ’ಎದ್ದೇಳು ಕರ್ನಾಟಕ’ ಮತ್ತು ’ಎಸ್‌ಐಆರ್ ವಿರೋಧಿ ಒಕ್ಕೂಟ’ದ ಮುಖಂಡರು...