Homeಮುಖಪುಟಸತತ 10ನೇ ದಿನವೂ ಪೆಟ್ರೋಲ್ ಬೆಲೆ ಏರಿಕೆ: ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಖಂಡನೆ

ಸತತ 10ನೇ ದಿನವೂ ಪೆಟ್ರೋಲ್ ಬೆಲೆ ಏರಿಕೆ: ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಖಂಡನೆ

- Advertisement -
- Advertisement -

ಕಳೆದ ಹತ್ತು ದಿನಗಳಿಂದ ಪೆಟ್ರೋಲ್ ಬೆಲೆಯು ಒಂಭತ್ತು ಬಾರಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ಇದನ್ನು ವಿರೋಧಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ. ಟ್ವಿಟ್ಟರ್‌ನಲ್ಲಿ #petrolprice  ಟ್ರೆಂಡಿಂಗ್ ಆಗುತ್ತಿದೆ. ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ಲೀಟರಿಗೆ Rs 84.39 ರೂಗೆ ತಲುಪಿದೆ.

“ಯಾರಾದರೂ ಪೆಟ್ರೋಲ್ ಬೆಲೆ ಏರಿಕೆಯ ಕುರಿತು ಏನನ್ನಾದರೂ ಹೇಳುವುದು ಇದೆಯೇ? ಅಥವಾ ಅವರ ಮೇಲಿನ ಭಕ್ತಿಯಿಂದ ನಿಮ್ಮ ವಾಹನಗಳನ್ನು ಓಡಿಸುವುದನ್ನು ನಿಲ್ಲಿಸುತ್ತೀರೋ?” ಎಂದು ಗ್ರೀಷ್ಮಾ ಶುಕ್ಲಾ ಎಂಬುವವರು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಬೆಲೆ ಏರಿಕೆಯನ್ನು ಖಂಡಿಸಿ ಬೀದಿಗಿಳಿದು ತೀವ್ರ ಪ್ರತಿಭಟನೆ ಮಾಡಿದ್ದ ಬಿಜೆಪಿಗರು ಇಂದು ಸಮ್ಮುನಿರುವುದೇಕೆ ಎಂದು ಹಲವರು ಸಾಮಾಜಿಕ ಮಾದ್ಯಮಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫೆಸ್ ಬುಕ್ ನಲ್ಲಿ Gladson Almeida ಎನ್ನುವವರು ಪೆಟ್ರೋಲ್ ಬೆಲೆ ಏರಿಕೆಯ ಕುರಿತು ತಮ್ಮ ಬರಹವೊಂದನ್ನು ಹಂಚಿಕೊಂಡಿದ್ದರು. ಅದು ವೈರಲ್‌ ಆಗಿದ್ದು, ಹಲವರು ಅದನ್ನು ಹಂಚಿಕೊಂಡಿದ್ದಾರೆ.

“ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತೀ ಬ್ಯಾರೆಲಿಗೆ ಇವತ್ತು 45 ಡಾಲರ್. ಅಂದರೆ ಭಾರತಕ್ಕೆ ಪ್ರತೀ ಲೀಟರ್ ಪೆಟ್ರೋಲ್ Rs 21 ಕ್ಕೆ ಸಿಗುತ್ತೆ. ಅದಕ್ಕೆ ಸಂಸ್ಕರಣಾ ಹಾಗೂ ವಿತರಣಾ ವೆಚ್ಚ ಸೇರಿ ಪ್ರತೀ ಲೀಟರ್ ಪೆಟ್ರೋಲ್ ಗೆ Rs 29-30 ಆಗಬಹುದು. ಮಿಕ್ಕ ಐವತ್ತು ರೂಪಾಯಿಗಿಂತ ಹೆಚ್ಚಿನದ್ದು ತೆರಿಗೆ. ಈ ಐವತ್ತೊಂದು ರೂಪಾಯಿ ತೆರಿಗೆಯಲ್ಲಿ ಕೇಂದ್ರ ಸರಕಾರದ ಅಬಕಾರಿ ತೆರಿಗೆ ಪ್ರತೀ ಲೀಟರ್ ಪೆಟ್ರೋಲ್ ಮೇಲೆ Rs 32.98.” ಎಂದು ಫೇಸ್ ಬುಕ್ ಬರಹದಲ್ಲಿ ಹೇಳಿದ್ದಾರೆ.

‘ಯುಪಿಎ ಸರಕಾರದ ಆಡಳಿತವಿದ್ದ ಹತ್ತು ವರುಷಗಳಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಪ್ರತೀ ಬ್ಯಾರಲ್ ಕಚ್ಚಾ ತೈಲದ ಬೆಲೆ ಸರಾಸರಿಯಾಗಿ 80-90 ಡಾಲರ್ ಇತ್ತು. ಅಂದರೆ ಈಗಿನ ಬೆಲೆಯ ದುಪ್ಪಟ್ಟು. ಕೆಲವೊಮ್ಮೆ ಪ್ರತೀ ಬ್ಯಾರೆಲಿಗೆ 120 ಡಾಲರ್ ತನಕ ಹೋಗಿತ್ತು. ಆದರೆ ಈ ಇಡೀ ಅವಧಿಯಲ್ಲಿ ಕೇಂದ್ರ ಸರಕಾರ ವಿಧಿಸಿದ ಅತೀ ಹೆಚ್ಚಿನ ಅಬಕಾರಿ ಸುಂಕ Rs 9.50. ಮಾತ್ರ’ ಎಂದು ಹೇಳಿದ್ದಾರೆ.

“ಅದಾಗ್ಯೂ ಅಬ್ಬಾ ಏನ್ ಪ್ರತಿಭಟನೆ, ಎಂಥಾ ಉಗ್ರ ಗಲಾಟೆ. ಸ್ಮ್ರತಿ ಇರಾನಿ, ಮಾಳವಿಕಾ ಅವಿನಾಶ್, ಶೃತಿ, ತಾರಾ, ಕೆನಡಾದ ವಲಸೆ ಕಾರ್ಮಿಕ ಅಕ್ಷಯ್ ಕುಮಾರು, ಅನುಪಮ್ ಖೇರ್, ಜೂಹಿ ಚಾವ್ಲಾ, ಮುಖ್ಯಮಂತ್ರಿ ನರೇಂದ್ರ ಮೋದಿಯವರ ನೇತ್ರತ್ವದಲ್ಲಿ ಎಂಥಾ ವೈವಿಧ್ಯಮಯ ಪ್ರತಿಭಟನೆ, ಭಾರತ್ ಬಂದ್, ರಾಸ್ತಾ ರೋಕೋಗಳು!”

‘ಆದರೆ ಈ ಸರಕಾರ ಅಬಕಾರಿ ಸುಂಕವನ್ನು ಮುನ್ನೂರೈವತ್ತು ಪಟ್ಟು ಹೆಚ್ಚಿಸಿದರೂ ಒಬ್ಬನೇ ಒಬ್ಬ ಕಮಕ್-ಕಿಮಕ್ ಅನ್ನಲ್ಲ. ಬೇರೇ ದಿನಗಳಲ್ಲಿ ಹತ್ತು ರುಪಾಯಿ ಸುಂಕ ಕೊಡುತ್ತಿದ್ದವರು ಇವತ್ತು ಅಚ್ಚೆ ದಿನ್‍ ಕಾಲದಲ್ಲಿ ಮೂವತ್ತೆರಡು ರೂಪಾಯಿ ಸುಂಕ ಕೊಟ್ಟೂ ನವರಂಧ್ರಗಳಲ್ಲಿ ಬೆಣೆ ಹಾಕಿ ಕುಳಿತುಕೊಂಡಿದ್ದಾರೆ. ನಮ್ಮಾಚೆ ಶೋಭಾ ಕರಂದ್ಲಾಜೆ ಪರ ಪ್ರಚಾರ ಮಾಡುತ್ತಿದ್ದ ಕೆಲವರು ಮೋದಿ ಅಧಿಕಾರಕ್ಕೆ ಬಂದರೆ ಪೆಟ್ರೋಲ್ ಹದಿನೈದು ರೂಪಾಯಿ ಪ್ರತೀ ಲೀಟರ್ ನಂತೆ ಸಿಗುತ್ತೆ ಎಂದವರು ಇವತ್ತು ತಮ್ಮ ಬೈಕು, ರಿಕ್ಷಾ ಮಾರಿ ಜೈ ಮೋದಿ, ಜೈ ಮೋದಿ ಎಂದು ಎರಡು ರೂಪಾಯಿಗಾಗಿ ಹತ್ತಾರು ವಾಲ್‍ಗಳಲ್ಲಿ ಕಕ್ಕ ಮಾಡಿ ಬಂದ ದುಡ್ಡಲ್ಲಿ ಸಂಜೆಯಾದೊಡನೆ ಪಿಂಟ್ ಹಾಗೂ ಬೀಫ್/ಪೋರ್ಕ್ ಚಿಲ್ಲಿ ಮೆಲ್ಲುತ್ತಿದ್ದಾರೆ” ಎಂದು ತಮ್ಮ ಆಕ್ರೋಷ ವ್ಯಕ್ತಪಡಿಸಿದ್ದಾರೆ.

ಇನ್ನು ಟ್ವಿಟರ್ ನಲ್ಲಿಯೂ ಪೆಟ್ರೋಲ್ ಬೆಲೆ ಏರಿಕೆಯ ವಿರುದ್ಧ ಖಂಡನೆ ವ್ಯಕ್ತವಾಗಿದ್ದು, #petrolprice ಎಂದು ಟ್ರೆಂಡಿಂಗ್ ಆಗುತ್ತಿದೆ. ನೂರಾರು ಟ್ವಿಟರ್ ಬಳಕೆದಾರರು ಈ ಹ್ಯಾಶ್ ಟ್ಯಾಗ್ ಬಳಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪೆಟ್ರೋಲ್ ಬೆಲೆ ಏರಿಕೆಯಾಗಿದ್ದಾಗ ಬಿಜೆಪಿಗರು ಪ್ರತಿಭಟನೆ ಮಾಡಿದ್ದ ಫೋಟೋಗಳನ್ನು ತೆಗೆದುಕೊಂಡು, ಈಗಿನ ಸಂದರ್ಭದಲ್ಲಿ ಸುಮ್ಮನಿರುವಂತೆ ಎಡಿಟ್ ಮಾಡಿ ಹಲವರು ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: ಸತತ 15 ನೇ ದಿನವೂ ಏರಿಕೆ, 2 ವರ್ಷಗಳಲ್ಲೇ ಪೆಟ್ರೋಲ್ ಬೆಲೆ ಅಧಿಕ: ಬೆಂಗಳೂರಿನಲ್ಲಿ 81.44 ರೂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...