Homeಮುಖಪುಟಸತತ 10ನೇ ದಿನವೂ ಪೆಟ್ರೋಲ್ ಬೆಲೆ ಏರಿಕೆ: ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಖಂಡನೆ

ಸತತ 10ನೇ ದಿನವೂ ಪೆಟ್ರೋಲ್ ಬೆಲೆ ಏರಿಕೆ: ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಖಂಡನೆ

- Advertisement -
- Advertisement -

ಕಳೆದ ಹತ್ತು ದಿನಗಳಿಂದ ಪೆಟ್ರೋಲ್ ಬೆಲೆಯು ಒಂಭತ್ತು ಬಾರಿ ಏರಿಕೆಯಾಗಿರುವ ಹಿನ್ನೆಲೆಯಲ್ಲಿ, ಇದನ್ನು ವಿರೋಧಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ತೀವ್ರ ಖಂಡನೆ ವ್ಯಕ್ತವಾಗಿದೆ. ಟ್ವಿಟ್ಟರ್‌ನಲ್ಲಿ #petrolprice  ಟ್ರೆಂಡಿಂಗ್ ಆಗುತ್ತಿದೆ. ಬೆಂಗಳೂರಿನಲ್ಲಿ ಇಂದು ಪೆಟ್ರೋಲ್ ಲೀಟರಿಗೆ Rs 84.39 ರೂಗೆ ತಲುಪಿದೆ.

“ಯಾರಾದರೂ ಪೆಟ್ರೋಲ್ ಬೆಲೆ ಏರಿಕೆಯ ಕುರಿತು ಏನನ್ನಾದರೂ ಹೇಳುವುದು ಇದೆಯೇ? ಅಥವಾ ಅವರ ಮೇಲಿನ ಭಕ್ತಿಯಿಂದ ನಿಮ್ಮ ವಾಹನಗಳನ್ನು ಓಡಿಸುವುದನ್ನು ನಿಲ್ಲಿಸುತ್ತೀರೋ?” ಎಂದು ಗ್ರೀಷ್ಮಾ ಶುಕ್ಲಾ ಎಂಬುವವರು ಟ್ವೀಟ್ ಮಾಡಿದ್ದಾರೆ.

ಕಾಂಗ್ರೆಸ್ ಸರ್ಕಾರ ಅಧಿಕಾರದಲ್ಲಿದ್ದಾಗ ಬೆಲೆ ಏರಿಕೆಯನ್ನು ಖಂಡಿಸಿ ಬೀದಿಗಿಳಿದು ತೀವ್ರ ಪ್ರತಿಭಟನೆ ಮಾಡಿದ್ದ ಬಿಜೆಪಿಗರು ಇಂದು ಸಮ್ಮುನಿರುವುದೇಕೆ ಎಂದು ಹಲವರು ಸಾಮಾಜಿಕ ಮಾದ್ಯಮಗಳಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಫೆಸ್ ಬುಕ್ ನಲ್ಲಿ Gladson Almeida ಎನ್ನುವವರು ಪೆಟ್ರೋಲ್ ಬೆಲೆ ಏರಿಕೆಯ ಕುರಿತು ತಮ್ಮ ಬರಹವೊಂದನ್ನು ಹಂಚಿಕೊಂಡಿದ್ದರು. ಅದು ವೈರಲ್‌ ಆಗಿದ್ದು, ಹಲವರು ಅದನ್ನು ಹಂಚಿಕೊಂಡಿದ್ದಾರೆ.

“ಅಂತರಾಷ್ಟ್ರೀಯ ಮಾರುಕಟ್ಟೆಯಲ್ಲಿ ಪ್ರತೀ ಬ್ಯಾರೆಲಿಗೆ ಇವತ್ತು 45 ಡಾಲರ್. ಅಂದರೆ ಭಾರತಕ್ಕೆ ಪ್ರತೀ ಲೀಟರ್ ಪೆಟ್ರೋಲ್ Rs 21 ಕ್ಕೆ ಸಿಗುತ್ತೆ. ಅದಕ್ಕೆ ಸಂಸ್ಕರಣಾ ಹಾಗೂ ವಿತರಣಾ ವೆಚ್ಚ ಸೇರಿ ಪ್ರತೀ ಲೀಟರ್ ಪೆಟ್ರೋಲ್ ಗೆ Rs 29-30 ಆಗಬಹುದು. ಮಿಕ್ಕ ಐವತ್ತು ರೂಪಾಯಿಗಿಂತ ಹೆಚ್ಚಿನದ್ದು ತೆರಿಗೆ. ಈ ಐವತ್ತೊಂದು ರೂಪಾಯಿ ತೆರಿಗೆಯಲ್ಲಿ ಕೇಂದ್ರ ಸರಕಾರದ ಅಬಕಾರಿ ತೆರಿಗೆ ಪ್ರತೀ ಲೀಟರ್ ಪೆಟ್ರೋಲ್ ಮೇಲೆ Rs 32.98.” ಎಂದು ಫೇಸ್ ಬುಕ್ ಬರಹದಲ್ಲಿ ಹೇಳಿದ್ದಾರೆ.

‘ಯುಪಿಎ ಸರಕಾರದ ಆಡಳಿತವಿದ್ದ ಹತ್ತು ವರುಷಗಳಲ್ಲಿ ಜಾಗತಿಕ ಮಾರುಕಟ್ಟೆಯಲ್ಲಿ ಪ್ರತೀ ಬ್ಯಾರಲ್ ಕಚ್ಚಾ ತೈಲದ ಬೆಲೆ ಸರಾಸರಿಯಾಗಿ 80-90 ಡಾಲರ್ ಇತ್ತು. ಅಂದರೆ ಈಗಿನ ಬೆಲೆಯ ದುಪ್ಪಟ್ಟು. ಕೆಲವೊಮ್ಮೆ ಪ್ರತೀ ಬ್ಯಾರೆಲಿಗೆ 120 ಡಾಲರ್ ತನಕ ಹೋಗಿತ್ತು. ಆದರೆ ಈ ಇಡೀ ಅವಧಿಯಲ್ಲಿ ಕೇಂದ್ರ ಸರಕಾರ ವಿಧಿಸಿದ ಅತೀ ಹೆಚ್ಚಿನ ಅಬಕಾರಿ ಸುಂಕ Rs 9.50. ಮಾತ್ರ’ ಎಂದು ಹೇಳಿದ್ದಾರೆ.

“ಅದಾಗ್ಯೂ ಅಬ್ಬಾ ಏನ್ ಪ್ರತಿಭಟನೆ, ಎಂಥಾ ಉಗ್ರ ಗಲಾಟೆ. ಸ್ಮ್ರತಿ ಇರಾನಿ, ಮಾಳವಿಕಾ ಅವಿನಾಶ್, ಶೃತಿ, ತಾರಾ, ಕೆನಡಾದ ವಲಸೆ ಕಾರ್ಮಿಕ ಅಕ್ಷಯ್ ಕುಮಾರು, ಅನುಪಮ್ ಖೇರ್, ಜೂಹಿ ಚಾವ್ಲಾ, ಮುಖ್ಯಮಂತ್ರಿ ನರೇಂದ್ರ ಮೋದಿಯವರ ನೇತ್ರತ್ವದಲ್ಲಿ ಎಂಥಾ ವೈವಿಧ್ಯಮಯ ಪ್ರತಿಭಟನೆ, ಭಾರತ್ ಬಂದ್, ರಾಸ್ತಾ ರೋಕೋಗಳು!”

‘ಆದರೆ ಈ ಸರಕಾರ ಅಬಕಾರಿ ಸುಂಕವನ್ನು ಮುನ್ನೂರೈವತ್ತು ಪಟ್ಟು ಹೆಚ್ಚಿಸಿದರೂ ಒಬ್ಬನೇ ಒಬ್ಬ ಕಮಕ್-ಕಿಮಕ್ ಅನ್ನಲ್ಲ. ಬೇರೇ ದಿನಗಳಲ್ಲಿ ಹತ್ತು ರುಪಾಯಿ ಸುಂಕ ಕೊಡುತ್ತಿದ್ದವರು ಇವತ್ತು ಅಚ್ಚೆ ದಿನ್‍ ಕಾಲದಲ್ಲಿ ಮೂವತ್ತೆರಡು ರೂಪಾಯಿ ಸುಂಕ ಕೊಟ್ಟೂ ನವರಂಧ್ರಗಳಲ್ಲಿ ಬೆಣೆ ಹಾಕಿ ಕುಳಿತುಕೊಂಡಿದ್ದಾರೆ. ನಮ್ಮಾಚೆ ಶೋಭಾ ಕರಂದ್ಲಾಜೆ ಪರ ಪ್ರಚಾರ ಮಾಡುತ್ತಿದ್ದ ಕೆಲವರು ಮೋದಿ ಅಧಿಕಾರಕ್ಕೆ ಬಂದರೆ ಪೆಟ್ರೋಲ್ ಹದಿನೈದು ರೂಪಾಯಿ ಪ್ರತೀ ಲೀಟರ್ ನಂತೆ ಸಿಗುತ್ತೆ ಎಂದವರು ಇವತ್ತು ತಮ್ಮ ಬೈಕು, ರಿಕ್ಷಾ ಮಾರಿ ಜೈ ಮೋದಿ, ಜೈ ಮೋದಿ ಎಂದು ಎರಡು ರೂಪಾಯಿಗಾಗಿ ಹತ್ತಾರು ವಾಲ್‍ಗಳಲ್ಲಿ ಕಕ್ಕ ಮಾಡಿ ಬಂದ ದುಡ್ಡಲ್ಲಿ ಸಂಜೆಯಾದೊಡನೆ ಪಿಂಟ್ ಹಾಗೂ ಬೀಫ್/ಪೋರ್ಕ್ ಚಿಲ್ಲಿ ಮೆಲ್ಲುತ್ತಿದ್ದಾರೆ” ಎಂದು ತಮ್ಮ ಆಕ್ರೋಷ ವ್ಯಕ್ತಪಡಿಸಿದ್ದಾರೆ.

ಇನ್ನು ಟ್ವಿಟರ್ ನಲ್ಲಿಯೂ ಪೆಟ್ರೋಲ್ ಬೆಲೆ ಏರಿಕೆಯ ವಿರುದ್ಧ ಖಂಡನೆ ವ್ಯಕ್ತವಾಗಿದ್ದು, #petrolprice ಎಂದು ಟ್ರೆಂಡಿಂಗ್ ಆಗುತ್ತಿದೆ. ನೂರಾರು ಟ್ವಿಟರ್ ಬಳಕೆದಾರರು ಈ ಹ್ಯಾಶ್ ಟ್ಯಾಗ್ ಬಳಸಿ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಪೆಟ್ರೋಲ್ ಬೆಲೆ ಏರಿಕೆಯಾಗಿದ್ದಾಗ ಬಿಜೆಪಿಗರು ಪ್ರತಿಭಟನೆ ಮಾಡಿದ್ದ ಫೋಟೋಗಳನ್ನು ತೆಗೆದುಕೊಂಡು, ಈಗಿನ ಸಂದರ್ಭದಲ್ಲಿ ಸುಮ್ಮನಿರುವಂತೆ ಎಡಿಟ್ ಮಾಡಿ ಹಲವರು ಹಂಚಿಕೊಂಡಿದ್ದಾರೆ.


ಇದನ್ನೂ ಓದಿ: ಸತತ 15 ನೇ ದಿನವೂ ಏರಿಕೆ, 2 ವರ್ಷಗಳಲ್ಲೇ ಪೆಟ್ರೋಲ್ ಬೆಲೆ ಅಧಿಕ: ಬೆಂಗಳೂರಿನಲ್ಲಿ 81.44 ರೂ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...

ಅಮೆರಿಕ ಓದಿಗೆ ಎಲ್ಲಿಂದ ಬಂತು ಹಣ? CJP ಸ್ಥಾಪಕ ಅಭಿಜೀತ್ ದೀಪ್ಕೆ ತಂದೆಯ ಆಸ್ತಿ ತನಿಖೆಗೆ RTI ಕಾರ್ಯಕರ್ತ ಆಗ್ರಹ

ಕಾಕ್ರೋಚ್ ಜನತಾ ಪಾರ್ಟಿ (CJP) ಸ್ಥಾಪಕ ಅಭಿಜೀತ್ ದೀಪ್ಕೆ ಅವರ ತಂದೆ, ಮಹಾರಾಷ್ಟ್ರ ಸರ್ಕಾರದ ನಿವೃತ್ತ ಉದ್ಯೋಗಿ ಭಗವಾನ್‌ರಾವ್ ದೀಪ್ಕೆ ಅವರ ಆದಾಯ ಮತ್ತು ಅಕ್ರಮ ಆಸ್ತಿ ಗಳಿಕೆ ಕುರಿತು ಸಮಗ್ರ ತನಿಖೆ...

ಕಾವೇರಿ ವಿಚಾರದಲ್ಲಿ ರಾಜಕೀಯ ಪಕ್ಕಕ್ಕಿಟ್ಟು ರಾಜ್ಯದ ಹಿತ ಕಾಯೋಣ: ಸರ್ವಪಕ್ಷ ಸಭೆಯಲ್ಲಿ ಸಿಎಂ ಡಿ.ಕೆ. ಶಿವಕುಮಾರ್ ಕರೆ

ಕಾವೇರಿ ನದಿ ನೀರು ಹಂಚಿಕೆ ವಿಚಾರವಾಗಿ ಪರಿಸ್ಥಿತಿ ಸುಧಾರಿಸುವ ಲಕ್ಷಣಗಳು ಕಂಡುಬರುತ್ತಿದ್ದು, ನದಿ ನೀರಿನ ಹಂಚಿಕೆಯಲ್ಲಿ ಸೌಹಾರ್ದಯುತವಾಗಿ ಸಮಸ್ಯೆ ನಿವಾರಿಸುವುದೇ ಸರ್ಕಾರದ ಮೊದಲ ಆದ್ಯತೆಯಾಗಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ತಿಳಿಸಿದ್ದಾರೆ. ಕಾವೇರಿ...

ಉತ್ತರ ಪ್ರದೇಶ : 33 ವರ್ಷಗಳ ಬಳಿಕ ದೇಶದ್ರೋಹ ಪ್ರಕರಣದಿಂದ ಮುಸ್ಲಿಂ ವ್ಯಕ್ತಿ ಖುಲಾಸೆ

ಪ್ರಾಸಿಕ್ಯೂಷನ್ ಆರೋಪಗಳನ್ನು ಸಾಂದರ್ಭಿಕ ಪುರಾವೆಗಳೊಂದಿಗೆ ಸಾಬೀತುಪಡಿಸಲು ವಿಫಲವಾಗಿದೆ ಮತ್ತು ಆರೋಪಿಯನ್ನು ಕೃತ್ಯಕ್ಕೆ ಲಿಂಕ್ ಮಾಡುವ ಪ್ರಮುಖ ಪುರಾವೆಗಳು ಕಾಣೆಯಾಗಿವೆ ಎಂದು ಅಭಿಪ್ರಾಯಪಟ್ಟ ಲಕ್ನೋದ ವಿಶೇಷ ರಾಷ್ಟ್ರೀಯ ತನಿಖಾ ದಳ (ಎನ್ಐಎ) ನ್ಯಾಯಾಲಯ, ದೇಶದ್ರೋಹ...

‘ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು’ ಎಂಬಂತೆ NTA ಯಿಂದ ₹7.5 ಕೋಟಿಯ ಬೃಹತ್ ಸೆಕ್ಯೂರಿಟಿ ಟೆಂಡರ್

ನೀಟ್ ಪ್ರಶ್ನೆಪತ್ರಿಕೆ ಸೋರಿಕೆಯಾಗಿ, ಅಮಾಯಕ ವಿದ್ಯಾರ್ಥಿಗಳ ಜೀವ-ಭವಿಷ್ಯ ಹಾಳಾದ ಮೇಲೆ, ಊರು ಕೊಳ್ಳೆ ಹೊಡೆದ ಮೇಲೆ ದಿಡ್ಡಿ ಬಾಗಿಲು ಹಾಕಿದರು ಎಂಬಂತೆ ಈಗ ಎನ್‌ಟಿಎ (NTA) ₹7.5 ಕೋಟಿ ವೆಚ್ಚದ ಭದ್ರತಾ ಟೆಂಡರ್...

SIR: ನಮೂನೆಯೂ ಇಲ್ಲ, ನೋಟಿಸ್‌ ಇಲ್ಲ ಸ್ವಂತ ಮನೆಯಲ್ಲಿದ್ದವರ ಹೆಸರನ್ನೇ ಅಳಿಸಿಹಾಕಿದ ಚುನಾವಣಾ ಆಯೋಗ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಒಂದಾದ ಮೇಲೊಂದರಂತೆ ಆತಂಕಕಾರಿ ಪ್ರಕರಣಗಳು ಬೆಳಕಿಗೆ ಬರುತ್ತಿವೆ. ಮನೆಮನೆಗೆ ತೆರಳಿ ಎನ್ಯುಮರೇಷನ್ ನಮೂನೆ ವಿತರಿಸುವ ಮೊದಲ ಹಂತದ ಪ್ರಕ್ರಿಯೆ...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಅಮಾನತುಗೊಂಡಿದ್ದ ಯುಪಿ ಪೊಲೀಸ್ ಕಾನ್‌ಸ್ಟೇಬಲ್; ಮರುನೇಮಕದ ಬೆನ್ನಲ್ಲೇ ಬಾಲಕಿಯ ಅತ್ಯಾಚಾರ, ಕೊಲೆ!

ಹತ್ತು ವರ್ಷದ ಬಾಲಕಿಯ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಆಕೆಯ ಸಾವಿಗೆ ಕಾರಣನಾದ ಆರೋಪದ ಮೇಲೆ ಬಂಧಿತನಾದ ಉತ್ತರ ಪ್ರದೇಶದ ಪೊಲೀಸ್ ಕಾನ್‌ಸ್ಟೇಬಲ್ ಅಭಿಷೇಕ್ ಯಾದವ್‌ನನ್ನು ವೈದ್ಯಕೀಯ ತಪಾಸಣೆಗಾಗಿ ಗೋರಖ್‌ಪುರದ ಜಿಲ್ಲಾಸ್ಪತ್ರೆಗೆ ಕರೆತಂದಾಗ, ಅಲ್ಲಿನ...

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...